Homeಕರ್ನಾಟಕಕಲಬುರಗಿ: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಆರೋಪ; ಪ್ರಾಂಶುಪಾಲೆ ವಿರುದ್ಧ ದೂರು

ಕಲಬುರಗಿ: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಆರೋಪ; ಪ್ರಾಂಶುಪಾಲೆ ವಿರುದ್ಧ ದೂರು

- Advertisement -
- Advertisement -

ಕಲಬುರಗಿಯ ಸರ್ಕಾರಿ ಶಾಲೆಯೊಂದರ ವಿದ್ಯಾರ್ಥಿಗಳನ್ನು ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಮತ್ತು ಪ್ರಾಂಶುಪಾಲರ ನಿವಾಸದಲ್ಲಿ ತೋಟಗಾರಿಕೆ ಕೆಲಸವವನ್ನು ಮಾಡಲು ಬಳಸಿಕೊಳ್ಳಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರು ಕಳೆದ 1 ವರ್ಷದಿಂದ ವಿದ್ಯಾರ್ಥಿಗಳನ್ನು ಈ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಅಲ್ಪಸಂಖ್ಯಾತರ ಇಲಾಖೆ ಅಡಿಯಲ್ಲಿ ಬರುವ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಬಾಲಕನ ತಂದೆ ಎಂ.ಡಿ.ಜಮೀರ್ ಪೊಲೀಸರಿಗೆ ಪತ್ರ ಬರೆದ ಬಳಿಕ ವಿಷಯ ಬೆಳಕಿಗೆ ಬಂದಿದೆ.

ವಿದ್ಯಾರ್ಥಿಗಳ ಪೋಷಕರು, ಶಾಲೆಯ ಶೌಚಾಲಯ ಸ್ವಚ್ಛತೆಗೆ ಮಕ್ಕಳ ಬಳಕೆಯ ಕುರಿತು ಪ್ರಾಂಶುಪಾಲರಾದ ಝಹೋರಾ ಜಬೀನ್‍ರಿಗೆ ಭೇಟಿ ಮಾಡಿ ವಿಚಾರಿಸಿದಾಗ, ಶಾಲಾ ಶೌಚಾಲಯ ಸ್ವಚ್ಛತೆ ಮಾಡಲು ಸಿಬ್ಬಂದಿಗಳು ಇಲ್ಲ ಎಂದು ಅವರು ಹೇಳಿದ್ದಾರೆ ಎಂದು ಎಂಡಿ ಜಮೀರ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಶಾಲೆಯ ಪ್ರಾಂಶುಪಾಲರ ವಿರುದ್ಧ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಕುರಿತು ಸಮಗ್ರ ತನಿಖೆಯ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಾವಿದ್ ಕರಂಗಿ, ಮಕ್ಕಳನ್ನು ಗಾರ್ಡನ್‍ಗೆ ನೀರು ಹಾಕಲು ಬಳಸಿಕೊಂಡ ಸಂಬಂಧ ಪ್ರಾಂಶುಪಾಲೆ ವಿರುದ್ಧ ಪೋಷಕರು ದೂರು ನೀಡಿದ್ದಾರೆ. ಶಾಲೆಗೆ ಭೇಟಿ ಪರಿಶೀಲನೆ ನಡೆಸಿ ವರದಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ಕಳುಹಿಸಿದ್ದು, ಅವರ ಆದೇಶದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಕೋಲಾರದ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ಈ ಮೊದಲು ಶಾಲಾ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಲಾಗಿತ್ತು. ಘಟನೆಯ ಪೋಟೋ ವೈರಲ್‌ ಆಗುತ್ತಿದ್ದಂತೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಅವರನ್ನು ಕೋಲಾರ ಪೊಲೀಸರು ಬಂಧಿಸಿದ್ದರು.

ಇದರ ಬೆನ್ನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಮುಖ್ಯ ಶಿಕ್ಷಕ ಶಂಕರಪ್ಪ ಹಾಗೂ ಇತರ ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯಗಳನ್ನು ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಇದಲ್ಲದೆ ಬೆಂಗಳೂರು ಉತ್ತರದ ಅಂದ್ರಹಳ್ಳಿಯ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛತೆ ಮಾಡುವ ವಿಡಿಯೋ ವೈರಲ್‌ ಆಗಿತ್ತು. ಘಟನೆಗೆ ಸಂಬಂಧಿಸಿ ಬಿಇಓ ಆಂಜನಪ್ಪ ಅವರ ದೂರಿನ ಮೇರೆಗೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿದ್ದರು.

ಇದರ ಬೆನ್ನಲ್ಲಿ ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ಬಿ.ಕಾವೇರಿ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯ ಸ್ವಚ್ಛತೆಗೆ ಬಳಸಿಕೊಳ್ಳುವಂತಿಲ್ಲ. ಶೌಚಾಲಯ ಸ್ವಚ್ಛತೆಗೆ ಬಳಸಿದರೆ ಎಫ್‍ಐಆರ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದರು.

ಇದನ್ನು ಓದಿ: 100ನೇ ದಿನಕ್ಕೆ ಕಾಲಿಟ್ಟ ಯುದ್ಧ: ನೆತನ್ಯಾಹು ಪ್ರತಿಜ್ಞೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

0
ಭಾರತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ, ಈ ಮಧ್ಯೆ ತಪ್ಪು ಮಾಹಿತಿಯನ್ನು ಹರಡುವ ಸುದ್ದಿಗಳು,  ವೀಡಿಯೊಗಳು ದೇಶದ ಸಾಮರಸ್ಯಕ್ಕೆ ಪ್ರಮುಖ ಬೆದರಿಕೆಯಾಗಿ ಹೊರಹೊಮ್ಮಿವೆ. 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ತಪ್ಪು ಮಾಹಿತಿಯನ್ನು ಹರಡುವ ಹಲವಾರು...