Homeಕರೋನಾ ತಲ್ಲಣಸರ್ಕಾರೀ ಆದೇಶಕ್ಕೆ ಕಿಮ್ಮತ್ತಿಲ್ಲ: ಕೊರೊನಾ ರೋಗಿಗೆ 11.5 ಲಕ್ಷ ರೂ ಶುಲ್ಕ ವಿಧಿಸಿದ ಖಾಸಗೀ ಆಸ್ಪತ್ರೆ!

ಸರ್ಕಾರೀ ಆದೇಶಕ್ಕೆ ಕಿಮ್ಮತ್ತಿಲ್ಲ: ಕೊರೊನಾ ರೋಗಿಗೆ 11.5 ಲಕ್ಷ ರೂ ಶುಲ್ಕ ವಿಧಿಸಿದ ಖಾಸಗೀ ಆಸ್ಪತ್ರೆ!

ಮನಬಂದಂತೆ ದರ ವಿದಿಸುತ್ತಿರುವ ಖಾಸಗೀ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತೆಲಂಗಾಣ ಕಿರಿಯ ವೈದ್ಯರ ಸಂಘ (ಟಿಜೆಯುಡಿಎ) ಮತ್ತು ತೆಲಂಗಾಣ ಸರ್ಕಾರಿ ವೈದ್ಯರ ಸಂಘ ಒತ್ತಾಯಿಸಿದೆ.

- Advertisement -
- Advertisement -

ಕಳೆದ ಮಂಗಳವಾರ ಬೆಳಿಗ್ಗೆ 28 ವರ್ಷದ ನವೀನ್ ಕುಮಾರ್ ಎಂಬುವವರು ಸಿಕಂದರಾಬಾದ್‌ನ ಖಾಸಗೀ ಕಾರ್ಪೊರೇಟ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವಾಗ ನಿಧನರಾದರು. ಚಿಕಿತ್ಸೆಗೆ ಆಸ್ಪತ್ರೆಯು 11.5 ಲಕ್ಷ ರೂ.ಗಳನ್ನು ಶುಲ್ಕ ವಿಧಿಸಿದೆ. ಈ ಮೊದಲೇ 6.5 ಲಕ್ಷ ರೂ. ಪಾವತಿಸಿದ ರೋಗಿಯ ಕುಟುಂಬಕ್ಕೆ ಉಳಿದ ಮೊತ್ತ ಪಾವತಿಸದಿದ್ದರೆ ಮೃತ ದೇಹ ಕೊಡದಂತೆ ಆಸ್ಪತ್ರೆ ಬೆದರಿಕೆ ಹಾಕಿದೆಯೆಂದು ತೆಲುಗು ದೈನಿಕ ಸಾಕ್ಷಿ ವರದಿ ಮಾಡಿದೆ.

ಇದರಿಂದ ನೊಂದ ರೋಗಿಯ ಕುಟುಂಬವು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದ ನಂತರ ಆಸ್ಪತ್ರೆಯು 20,000 ರೂ ಕಟ್ಟಿಸಿಕೊಂಡು ನವೀನ್ ಕುಮಾರ್ ಅವರ ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದೆ.

ತೆಲಂಗಾಣದ ರಾಜಧಾನಿಯಲ್ಲಿ ಕಳೆದ ಕೆಲವು ದಿನಗಳಿಂದ ಖಾಸಗೀ ಆಸ್ಪತ್ರೆಗಳು ನಡೆದುಕೊಳ್ಳುತ್ತಿರುವ ರೀತಿಗೆ ಇದೊಂದು ಉದಾಹರಣೆಯಾಗಿದೆ.

ಮತ್ತೊಂದೆಡೆ, ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ (GHMC) ಸುಮಾರು 90% ಪ್ರಕರಣಗಳು ವರದಿಯಾಗಿವೆ.

ಜುಲೈ 7 ರಂದು ರಾಜ್ಯವು 1879 ಹೊಸ ಪ್ರಕರಣಗಳನ್ನು ವರದಿ ಮಾಡಿದೆ. ಇದರಿಂದ ರಾಜ್ಯದಲ್ಲಿ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 27,612 ಕ್ಕೆ ಏರಿದೆ. ಒಟ್ಟು ಸಾವಿನ ಸಂಖ್ಯೆ 313 ಕ್ಕೆ ತಲುಪಿದೆ. ಒಟ್ಟು 16,287 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ.

ಖಾಸಗಿ ಆಸ್ಪತ್ರೆಗಳು ಸರ್ಕಾರವು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಶುಲ್ಕವನ್ನು ಕೊರೊನಾ ರೋಗಿಗಳಿಗೆ ವಿಧಿಸುತ್ತಿವೆ ಎಂದು ತೆಲಂಗಾಣ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕುರಿತು ಪರಿಶೀಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

ವಕೀಲ ಶ್ರೀಕಿಶನ್ ಶರ್ಮಾ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ  ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಾಘವೇಂದ್ರ ಸಿಂಗ್ ಚೌಹಾನ್ ಮತ್ತು ನ್ಯಾಯಮೂರ್ತಿ ಬಿ. ವಿಜಯ್ಸೆನ್ ರೆಡ್ಡಿ ಅವರನ್ನೊಳಗೊಂಡ ವಿಭಾಗೀಯ ಪೀಠವು “ಅತಿಯಾದ ಶುಲ್ಕ ವಿಧಿಸಿದ್ದಕ್ಕಾಗಿ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮಕೈಗೊಳ್ಳಲು ಮತ್ತು ಎಲ್ಲಾ ರೋಗಿಗಳಿಗೆ ಚಿಕಿತ್ಸೆ, ಬಿಲ್ ವಿಷಯದಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು ಮಾರ್ಗಸೂಚಿಗಳನ್ನು ಜಾರಿಗೊಳಿಸಲು” ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ನೀಡಿದೆ.

ಅಲ್ಲದೆ ಈ ಕುರಿತು ವಿವರಣೆ ನೀಡುವಂತೆ ಮೆಡಿಕೋವರ್ ಆಸ್ಪತ್ರೆ, ಯಶೋದಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಸನ್ ಶೈನ್ ಆಸ್ಪತ್ರೆ ಮತ್ತು ಹೈದರಾಬಾದ್‌ನ ಕೇರ್ ಆಸ್ಪತ್ರೆ ಸೇರಿದಂತೆ ನಾಲ್ಕು ಖಾಸಗಿ ಕಾರ್ಪೊರೇಟ್ ಆಸ್ಪತ್ರೆಗಳಿಗೆ ಕೋರ್ಟ್‌ ನೋಟಿಸ್ ನೀಡಿದೆ. ಈ ಪ್ರಕರಣದ ವಿಚಾರನೆಯನ್ನು ಜುಲೈ 14 ಕ್ಕೆ ಮುಂದೂಡಲಾಗಿದೆ.

ಜೂನ್ 15 ರಂದು ಹೊರಡಿಸಲಾದ ರಾಜ್ಯ ಸರ್ಕಾರದ ಆದೇಶದ ಪ್ರಕಾರ (ಜಿಒ 248), ಖಾಸಗಿ ಆಸ್ಪತ್ರೆಗಳು ಕೋವಿಡ್ -19 ಚಿಕಿತ್ಸೆಗೆ ವಿಧಿಸಬಹುದಾದ ಬೆಲೆಗಳ ಕುರಿತು ರಾಜ್ಯ ಸರ್ಕಾರ ಒಂದು ದರ ನಿಗದಿಪಡಿಸಿದೆ. ಅದರಂತೆ, ದಿನನಿತ್ಯದ ವಾರ್ಡ್ ಮತ್ತು ಐಸೋಲೇಷನ್ ಗೆ ಶುಲ್ಕವನ್ನು ದಿನಕ್ಕೆ 4,000 ರೂ.ಗಳು. ಹಾಗೆಯೇ ವೆಂಟಿಲೇಟರ್ ಮತ್ತು ಐಸೊಲೇಷನ್ ಐಸಿಯುಗೆ ದಿನಕ್ಕೆ 9,000 ರೂ. ನಿಗದಿಪಡಿಸಿದೆ.

ಸಾಮಾನ್ಯ ಜನರು ಕೊರೊನಾ ವೈರಸ್ ಪರೀಕ್ಷೆಗೆ ಒಳಗಾಗಲು, ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗಳನ್ನು ತಲುಪಲು ಆಂಬ್ಯುಲೆನ್ಸ್‌ಗಾಗಿ ಹೆಣಗಾಡುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸಿದ ಕಾರಣಕ್ಕೆ ಅನೇಕ ರೋಗಿಗಳು ಸಾವನ್ನಪ್ಪಿದ್ದಾರೆ.  ಕೊರೊನಾ ವೈರಸ್ ನಿರ್ವಹಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹಲವಾರು ಜನ ಅಭಿಪ್ರಾಯಪಟ್ಟಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ, ಹೈದರಾಬಾದ್‌ನ ಸರ್ಕಾರಿ ವೈದ್ಯರೊಬ್ಬರಿಗೆ ಕೊರೊನಾ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಯು ಒಂದು ದಿನಕ್ಕೆ 1.19 ಲಕ್ಷ ರೂ. ದರ ವಿಧಿಸಿದೆ. ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಡಾಕ್ಟರ್ ಸುಲ್ತಾನಾ ಇದರ ಬಗ್ಗೆ ವಿವರಿಸುವ ವಿಡಿಯೋ ವೈರಲ್ ಆಗಿದೆ.

ಮನಬಂದಂತೆ ದರ ವಿದಿಸುತ್ತಿರುವ ಖಾಸಗೀ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತೆಲಂಗಾಣ ಕಿರಿಯ ವೈದ್ಯರ ಸಂಘ (ಟಿಜೆಯುಡಿಎ) ಮತ್ತು ತೆಲಂಗಾಣ ಸರ್ಕಾರಿ ವೈದ್ಯರ ಸಂಘ ಒತ್ತಾಯಿಸಿದೆ.


ಇದನ್ನೂ ಓದಿ : ಕೋವಿಡ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು: ರೋಗಿಗಳ ಮೇಲೆ ದುಬಾರಿ ಚಿಕಿತ್ಸೆಯ ಬರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...