Homeಕರೋನಾ ತಲ್ಲಣಸರ್ಕಾರೀ ಆದೇಶಕ್ಕೆ ಕಿಮ್ಮತ್ತಿಲ್ಲ: ಕೊರೊನಾ ರೋಗಿಗೆ 11.5 ಲಕ್ಷ ರೂ ಶುಲ್ಕ ವಿಧಿಸಿದ ಖಾಸಗೀ ಆಸ್ಪತ್ರೆ!

ಸರ್ಕಾರೀ ಆದೇಶಕ್ಕೆ ಕಿಮ್ಮತ್ತಿಲ್ಲ: ಕೊರೊನಾ ರೋಗಿಗೆ 11.5 ಲಕ್ಷ ರೂ ಶುಲ್ಕ ವಿಧಿಸಿದ ಖಾಸಗೀ ಆಸ್ಪತ್ರೆ!

ಮನಬಂದಂತೆ ದರ ವಿದಿಸುತ್ತಿರುವ ಖಾಸಗೀ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತೆಲಂಗಾಣ ಕಿರಿಯ ವೈದ್ಯರ ಸಂಘ (ಟಿಜೆಯುಡಿಎ) ಮತ್ತು ತೆಲಂಗಾಣ ಸರ್ಕಾರಿ ವೈದ್ಯರ ಸಂಘ ಒತ್ತಾಯಿಸಿದೆ.

- Advertisement -
- Advertisement -

ಕಳೆದ ಮಂಗಳವಾರ ಬೆಳಿಗ್ಗೆ 28 ವರ್ಷದ ನವೀನ್ ಕುಮಾರ್ ಎಂಬುವವರು ಸಿಕಂದರಾಬಾದ್‌ನ ಖಾಸಗೀ ಕಾರ್ಪೊರೇಟ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವಾಗ ನಿಧನರಾದರು. ಚಿಕಿತ್ಸೆಗೆ ಆಸ್ಪತ್ರೆಯು 11.5 ಲಕ್ಷ ರೂ.ಗಳನ್ನು ಶುಲ್ಕ ವಿಧಿಸಿದೆ. ಈ ಮೊದಲೇ 6.5 ಲಕ್ಷ ರೂ. ಪಾವತಿಸಿದ ರೋಗಿಯ ಕುಟುಂಬಕ್ಕೆ ಉಳಿದ ಮೊತ್ತ ಪಾವತಿಸದಿದ್ದರೆ ಮೃತ ದೇಹ ಕೊಡದಂತೆ ಆಸ್ಪತ್ರೆ ಬೆದರಿಕೆ ಹಾಕಿದೆಯೆಂದು ತೆಲುಗು ದೈನಿಕ ಸಾಕ್ಷಿ ವರದಿ ಮಾಡಿದೆ.

ಇದರಿಂದ ನೊಂದ ರೋಗಿಯ ಕುಟುಂಬವು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದ ನಂತರ ಆಸ್ಪತ್ರೆಯು 20,000 ರೂ ಕಟ್ಟಿಸಿಕೊಂಡು ನವೀನ್ ಕುಮಾರ್ ಅವರ ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದೆ.

ತೆಲಂಗಾಣದ ರಾಜಧಾನಿಯಲ್ಲಿ ಕಳೆದ ಕೆಲವು ದಿನಗಳಿಂದ ಖಾಸಗೀ ಆಸ್ಪತ್ರೆಗಳು ನಡೆದುಕೊಳ್ಳುತ್ತಿರುವ ರೀತಿಗೆ ಇದೊಂದು ಉದಾಹರಣೆಯಾಗಿದೆ.

ಮತ್ತೊಂದೆಡೆ, ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ (GHMC) ಸುಮಾರು 90% ಪ್ರಕರಣಗಳು ವರದಿಯಾಗಿವೆ.

ಜುಲೈ 7 ರಂದು ರಾಜ್ಯವು 1879 ಹೊಸ ಪ್ರಕರಣಗಳನ್ನು ವರದಿ ಮಾಡಿದೆ. ಇದರಿಂದ ರಾಜ್ಯದಲ್ಲಿ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 27,612 ಕ್ಕೆ ಏರಿದೆ. ಒಟ್ಟು ಸಾವಿನ ಸಂಖ್ಯೆ 313 ಕ್ಕೆ ತಲುಪಿದೆ. ಒಟ್ಟು 16,287 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ  ಬಿಡುಗಡೆಯಾಗಿದ್ದಾರೆ.

ಖಾಸಗಿ ಆಸ್ಪತ್ರೆಗಳು ಸರ್ಕಾರವು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಶುಲ್ಕವನ್ನು ಕೊರೊನಾ ರೋಗಿಗಳಿಗೆ ವಿಧಿಸುತ್ತಿವೆ ಎಂದು ತೆಲಂಗಾಣ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕುರಿತು ಪರಿಶೀಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

ವಕೀಲ ಶ್ರೀಕಿಶನ್ ಶರ್ಮಾ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯ  ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಾಘವೇಂದ್ರ ಸಿಂಗ್ ಚೌಹಾನ್ ಮತ್ತು ನ್ಯಾಯಮೂರ್ತಿ ಬಿ. ವಿಜಯ್ಸೆನ್ ರೆಡ್ಡಿ ಅವರನ್ನೊಳಗೊಂಡ ವಿಭಾಗೀಯ ಪೀಠವು “ಅತಿಯಾದ ಶುಲ್ಕ ವಿಧಿಸಿದ್ದಕ್ಕಾಗಿ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮಕೈಗೊಳ್ಳಲು ಮತ್ತು ಎಲ್ಲಾ ರೋಗಿಗಳಿಗೆ ಚಿಕಿತ್ಸೆ, ಬಿಲ್ ವಿಷಯದಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು ಮಾರ್ಗಸೂಚಿಗಳನ್ನು ಜಾರಿಗೊಳಿಸಲು” ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನೋಟಿಸ್ ನೀಡಿದೆ.

ಅಲ್ಲದೆ ಈ ಕುರಿತು ವಿವರಣೆ ನೀಡುವಂತೆ ಮೆಡಿಕೋವರ್ ಆಸ್ಪತ್ರೆ, ಯಶೋದಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಸನ್ ಶೈನ್ ಆಸ್ಪತ್ರೆ ಮತ್ತು ಹೈದರಾಬಾದ್‌ನ ಕೇರ್ ಆಸ್ಪತ್ರೆ ಸೇರಿದಂತೆ ನಾಲ್ಕು ಖಾಸಗಿ ಕಾರ್ಪೊರೇಟ್ ಆಸ್ಪತ್ರೆಗಳಿಗೆ ಕೋರ್ಟ್‌ ನೋಟಿಸ್ ನೀಡಿದೆ. ಈ ಪ್ರಕರಣದ ವಿಚಾರನೆಯನ್ನು ಜುಲೈ 14 ಕ್ಕೆ ಮುಂದೂಡಲಾಗಿದೆ.

ಜೂನ್ 15 ರಂದು ಹೊರಡಿಸಲಾದ ರಾಜ್ಯ ಸರ್ಕಾರದ ಆದೇಶದ ಪ್ರಕಾರ (ಜಿಒ 248), ಖಾಸಗಿ ಆಸ್ಪತ್ರೆಗಳು ಕೋವಿಡ್ -19 ಚಿಕಿತ್ಸೆಗೆ ವಿಧಿಸಬಹುದಾದ ಬೆಲೆಗಳ ಕುರಿತು ರಾಜ್ಯ ಸರ್ಕಾರ ಒಂದು ದರ ನಿಗದಿಪಡಿಸಿದೆ. ಅದರಂತೆ, ದಿನನಿತ್ಯದ ವಾರ್ಡ್ ಮತ್ತು ಐಸೋಲೇಷನ್ ಗೆ ಶುಲ್ಕವನ್ನು ದಿನಕ್ಕೆ 4,000 ರೂ.ಗಳು. ಹಾಗೆಯೇ ವೆಂಟಿಲೇಟರ್ ಮತ್ತು ಐಸೊಲೇಷನ್ ಐಸಿಯುಗೆ ದಿನಕ್ಕೆ 9,000 ರೂ. ನಿಗದಿಪಡಿಸಿದೆ.

ಸಾಮಾನ್ಯ ಜನರು ಕೊರೊನಾ ವೈರಸ್ ಪರೀಕ್ಷೆಗೆ ಒಳಗಾಗಲು, ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗಳನ್ನು ತಲುಪಲು ಆಂಬ್ಯುಲೆನ್ಸ್‌ಗಾಗಿ ಹೆಣಗಾಡುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸಿದ ಕಾರಣಕ್ಕೆ ಅನೇಕ ರೋಗಿಗಳು ಸಾವನ್ನಪ್ಪಿದ್ದಾರೆ.  ಕೊರೊನಾ ವೈರಸ್ ನಿರ್ವಹಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹಲವಾರು ಜನ ಅಭಿಪ್ರಾಯಪಟ್ಟಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ, ಹೈದರಾಬಾದ್‌ನ ಸರ್ಕಾರಿ ವೈದ್ಯರೊಬ್ಬರಿಗೆ ಕೊರೊನಾ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಯು ಒಂದು ದಿನಕ್ಕೆ 1.19 ಲಕ್ಷ ರೂ. ದರ ವಿಧಿಸಿದೆ. ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಡಾಕ್ಟರ್ ಸುಲ್ತಾನಾ ಇದರ ಬಗ್ಗೆ ವಿವರಿಸುವ ವಿಡಿಯೋ ವೈರಲ್ ಆಗಿದೆ.

ಮನಬಂದಂತೆ ದರ ವಿದಿಸುತ್ತಿರುವ ಖಾಸಗೀ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತೆಲಂಗಾಣ ಕಿರಿಯ ವೈದ್ಯರ ಸಂಘ (ಟಿಜೆಯುಡಿಎ) ಮತ್ತು ತೆಲಂಗಾಣ ಸರ್ಕಾರಿ ವೈದ್ಯರ ಸಂಘ ಒತ್ತಾಯಿಸಿದೆ.


ಇದನ್ನೂ ಓದಿ : ಕೋವಿಡ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು: ರೋಗಿಗಳ ಮೇಲೆ ದುಬಾರಿ ಚಿಕಿತ್ಸೆಯ ಬರೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...