Homeಕರೋನಾ ತಲ್ಲಣಕೋವಿಡ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು: ರೋಗಿಗಳ ಮೇಲೆ ದುಬಾರಿ ಚಿಕಿತ್ಸೆಯ ಬರೆ

ಕೋವಿಡ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು: ರೋಗಿಗಳ ಮೇಲೆ ದುಬಾರಿ ಚಿಕಿತ್ಸೆಯ ಬರೆ

25 ಜೂನ್ 2020ರಂದು ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಸುಮಾರು 28 ಸಂಘಸಂಸ್ಥೆಗಳು ಕರ್ನಾಟಕ ಸರ್ಕಾರ ನಿಗದಿಪಡಿಸಿದ ಪ್ರಾಕೇಜ್‍ನ ಮೊತ್ತಕ್ಕೆ ಸಂಬಂಧಿಸಿದಂತೆ ಬೇರೆ ಬೇರೆ ಕಾರಣಗಳಿಗಾಗಿ ಪ್ರಶ್ನೆಗಳನ್ನು ಎತ್ತಿವೆ.

- Advertisement -
- Advertisement -

ಕೋವಿಡ್-19 ಸೋಂಕು ಹಾಗೂ ದೀರ್ಘಕಾಲದ ಲಾಕ್‍ಡೌನ್, ಕೋವಿಡ್ ಸೋಂಕಿತ ರೋಗಿಗಳ ಮೇಲೆ ಹಾಗೂ ಕೋವಿಡ್ ಸೋಂಕು ಹೊಂದಿರದ ಇತರ ರೋಗಿಗಳ ಮೇಲೆ ಕೆಟ್ಟ ಪರಿಣಾಮವನ್ನುಂಟುಮಾಡಿದೆ ಎಂಬುದು ನಮಗೆಲ್ಲರಿಗೂ ತಿಳಿದ ಸಂಗತಿ. ನಂಬಲರ್ಹವಾದ ಸಾರ್ವಜನಿಕ ಆರೋಗ್ಯಕ್ಕೆ ಸಂಬಂಧಿಸಿದ ಸಂದೇಶಗಳಿಗಿಂತ ಸುಳ್ಳುಸುದ್ದಿಗಳೇ ಎಲ್ಲೆಡೆ ಹರಿದಾಡುತ್ತಿವೆ. ರೋಗ ಪತ್ತೆಹಚ್ಚುವ ಸಾಧನಗಳು ಮತ್ತು ಚಿಕಿತ್ಸಾ ಲಭ್ಯತೆಯ ಪ್ರಮಾಣ ಅವಶ್ಯಕತೆಗೆ ಅನುಗುಣವಾಗಿಲ್ಲ. ಲಾಕ್‍ಡೌನ್‍ನಿಂದಾಗಿ ಜೀವನೋಪಾಯ ಕಳೆದುಕೊಂಡ ಕಾರಣ ಹಾಗೂ ಪೌಷ್ಟಿಕಾಂಶಯುಕ್ತ ಆಹಾರಗಳನ್ನು ಸೇವಿಸಲು ಸಾಧ್ಯವಾಗದ ಕಾರಣ ಈ ಸಾಂಕ್ರಾಮಿಕ ರೋಗ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟಾಗಿ ಪರಿಣಮಿಸಿದೆ. ಇದನ್ನು ಕೇವಲ ವೈದ್ಯಕೀಯ ಚಿಕಿತ್ಸೆ ಹಾಗೂ ಔಷಧಿಗಳಿಂದಷ್ಟೇ ನಿಭಾಯಿಸುವುದು ಸಾಧ್ಯವಿಲ್ಲ.

ಈ ಬಿಕ್ಕಟ್ಟಿನಲ್ಲಿ ಸಾರ್ವಜನಿಕ ಆರೋಗ್ಯ ಸೌಲಭ್ಯಗಳು ಸಾಕಷ್ಟು ಪ್ರಮಾಣದಲ್ಲಿ ಇಲ್ಲ, ಒಂದು ಸಣ್ಣ ಲ್ಯಾಬ್ ಪರೀಕ್ಷೆಗೂ ಜನರು ಕರ್ನಾಟಕದ ಮೂಲೆಮೂಲೆಗಳಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಬೇಕಾಗಿರುವುದನ್ನು ನಾವು ನೋಡಿದ್ದೇವೆ. ಅದೂ ಲಾಕ್‍ಡೌನ್ ಸಂದರ್ಭದಲ್ಲಿ ಸಾರಿಗೆ ಕೊರತೆಯಿಂದ ಇದು ಇನ್ನೂ ಕಷ್ಟಕರ. ಹಲವು ಖಾಸಗಿ ಆಸ್ಪತ್ರೆಗಳು ಲಾಕ್‍ಡೌನಿನ ಆರಂಭದ ಹಂತದಲ್ಲೇ ಮುಚ್ಚಿದ್ದವು. ಈಗ ಸರ್ಕಾರ ರಾಜ್ಯದ ಆರೋಗ್ಯ ಸೇವೆಗೆ ಖಾಸಗಿ ಆಸ್ಪತ್ರೆಗಳು ಕೈಜೋಡಿಸಬೇಕೆಂದು ಆದೇಶ, ಸೂಚನೆಗಳನ್ನು ಹೊರಡಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಜೂನ್ 20, 2020ರಂದು ಕರ್ನಾಟಕ ಸರ್ಕಾರ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳನ್ನೂ ಸೇರಿಸಿಕೊಳ್ಳಲಾಗುವುದು ಎಂದು ಆದೇಶ ಹೊರಡಿಸಿತು. ಜೂನ್ 23, 2020ರಂದು ಚಿಕಿತ್ಸಾ ಪ್ಯಾಕೇಜ್‍ಗೆ ತಗಲುವ ವೆಚ್ಚವನ್ನು ನಿಗದಿಪಡಿಸಿ ಅಧಿಸೂಚನೆ ಹೊರಡಿಸಿತು. ಈ ನಿರ್ಧಾರಗಳನ್ನು ಕೈಗೊಂಡದ್ದು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‍ನ ಕಾರ್ಯನಿರ್ವಾಹಕ ನಿರ್ದೇಶಕರ ನೇತೃತ್ವದ ಸಮಿತಿ. ಈ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಅಸೋಸಿಯೇಷನ್ ಆಫ್ ಪ್ರೈವೇಟ್ ಹಾಸ್ಪಿಟಲ್ಸ್ (ಎಹೆಚ್‍ಪಿಐ), ಪ್ರೈವೇಟ್ ಹಾಸ್ಪಿಟಲ್ಸ್ ಅಂಡ್ ನರ್ಸಿಂಗ್ ಹೋಮ್ ಅಸೋಸಿಯೇಷನ್ ಹಾಗೂ ಇನ್ನಿತರ ಖಾಸಗಿ ಆಸ್ಪತ್ರೆಗಳ ಜೊತೆಗೆ ಸಮಾಲೋಚಿಸಿ ರಾಜ್ಯದ ಆರೋಗ್ಯ ವಿಮಾ ಯೋಜನೆಗಳನ್ನು ನಿರ್ವಹಿಸುವ ಸಂಸ್ಥೆ.

25 ಜೂನ್ 2020ರಂದು ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಸುಮಾರು 28 ಸಂಘಸಂಸ್ಥೆಗಳು ಕರ್ನಾಟಕ ಸರ್ಕಾರ ನಿಗದಿಪಡಿಸಿದ ಪ್ರಾಕೇಜ್‍ನ ಮೊತ್ತಕ್ಕೆ ಸಂಬಂಧಿಸಿದಂತೆ ಬೇರೆ ಬೇರೆ ಕಾರಣಗಳಿಗಾಗಿ ಪ್ರಶ್ನೆಗಳನ್ನು ಎತ್ತಿವೆ.

ಮೊದಲನೆಯದಾಗಿ, ಎಹೆಚ್‍ಪಿಐ, ಕಾರ್ಪೊರೇಟ್ ಆಸ್ಪತ್ರೆಗಳ ಪರವಾಗಿ ದೊಡ್ಡ ಮಟ್ಟದ ಲಾಬಿ ನಡೆಸುತ್ತಾ ಬಂದಿದ್ದು, ಕರ್ನಾಟಕದ ಆರೋಗ್ಯ ಸೇವಾ ಯೋಜನೆ ಮತ್ತು ಬೆಲೆನಿಗದಿ ವಿಷಯದಲ್ಲಿ ಪ್ರಭಾವ ಬೀರುತ್ತಾ ಬಂದಿದೆ. ಆರೋಗ್ಯ ಸೇವಾ ಯೋಜನೆಗಳನ್ನು ರೂಪಿಸುವಲ್ಲಿ ಮತ್ತು ತೆರಿಗೆ ಪಾವತಿಸುವವರ ಹಣ ಹೇಗೆ ವಿನಿಯೋಗವಾಗಬೇಕು ಎಂಬ ವಿಚಾರದಲ್ಲಿ ಖಾಸಗಿ ಆರೋಗ್ಯ ಸೇವಾ ಕ್ಷೇತ್ರ, ಪ್ರಮುಖ ನಿರ್ಧಾರ ತೆಗೆದುಕೊಳ್ಳುವಂತಿರಬಾರದು. ಸರ್ಕಾರವೇ ಹೆಚ್ಚು ಪಾರದರ್ಶಕವಾಗಿ, ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಿ, ಸಾರ್ವಜನಿಕರಿಗೆ ಉಪಯೋಗವಾಗುವ ರೀತಿಯಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು.

ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುವ ಸೌಲಭ್ಯವಿರುವ ಖಾಸಗಿ ಆಸ್ಪತ್ರೆಗಳಲ್ಲಿ 50% ಬೆಡ್ಡುಗಳು ಸಾರ್ವಜನಿಕ ಆರೋಗ್ಯ ವಲಯದಿಂದ ಸೂಚಿಸಲಾದ ರೋಗಿಗಳಿಗೆ ಮೀಸಲಾಗಿರಬೇಕು ಎಂದು ಅಧಿಸೂಚನೆಯ ಒಂದು ಅಂಶ ತಿಳಿಸುತ್ತದೆ. ಇದು ವೆಂಟಿಲೇಟರ್ ಹೊಂದಿರುವ ಹೊಂದಿರದ, ಹೈ ಡಿಪೆಂಡೆನ್ಸಿ ಯೂನಿಟ್ಸ್ (ಹೆಚ್ಚಿನ ನಿಗಾ ಘಟಕ), ಐಸಿಯುಗಳನ್ನು (ತೀವ್ರ ನಿಗಾ ಘಟಕ) ಒಳಗೊಂಡಿರುತ್ತದೆ. ಉಳಿದ 50ಶೇಕಡಾ ಸೌಲಭ್ಯವನ್ನು ಕೋವಿಡ್-19 ರೋಗಿಗಳಿಗಾಗಿ ಖಾಸಗಿಯಾಗಿ ಬಳಸಿಕೊಳ್ಳಬಹುದು. ಪ್ರತಿ ವಿಭಾಗದಲ್ಲೂ ಎಷ್ಟು ಬೆಡ್‍ಗಳು ದೊರೆಯುವಂತಿರಬೇಕು ಎಂಬ ಬಗ್ಗೆ ಈ ಸೂಚನೆ ತಿಳಿಸುವುದಿಲ್ಲ. ಇದು ಸಾರ್ವಜನಿಕ ಆಸ್ಪತ್ರೆಗಳಿಂದ ಸೂಚಿಸಿದ ರೋಗಿಗಳಿಗೆ ಯಾವ ಪ್ರಮಾಣದಲ್ಲಿ ಸೌಲಭ್ಯಗಳನ್ನು ನೀಡಬೇಕು ಹಾಗೂ ಶುಲ್ಕ ಪಾವತಿಸುವ ರೋಗಿಗಳಿಗೆ ಯಾವ ಸೌಲಭ್ಯ ನೀಡಬೇಕು ಎಂಬುದನ್ನು ಇದು ಖಾಸಗಿ ಆಸ್ಪತ್ರೆಗಳ ನಿರ್ಣಯಕ್ಕೆ ಬಿಡುತ್ತದೆ.

ಸರ್ಕಾರಿ ಆಸ್ಪತ್ರೆಗಳಿಂದ ಸೂಚಿಸಲ್ಪಟ್ಟ ರೋಗಿಗಳ ವೆಚ್ಚವನ್ನು ಸರ್ಕಾರ ಭರಿಸುತ್ತದೆ, ಆದರೆ ಖಾಸಗಿಯಾಗಿ ಚಿಕಿತ್ಸೆಗೆ ದಾಖಲಾದ ರೋಗಿಗಳ ವೆಚ್ಚವನ್ನು ಸರ್ಕಾರ ಭರಿಸುವುದಿಲ್ಲ. ಇವೆರಡಕ್ಕೂ ತಗಲುವ ವೆಚ್ಚವನ್ನು ಸರ್ಕಾರವೇ ನಿಗದಿಪಡಿಸಿದ್ದಾದರೂ. ಸಾರ್ವಜನಿಕ ಆಸ್ಪತ್ರೆಯಿಂದ ಕೋವಿಡ್ ರೋಗಿ ಶಿಫಾರಸಿನ ಮೇರೆಗೆ ಖಾಸಗಿ ಆಸ್ಪತ್ರೆಯಲ್ಲಿ ಐಸಿಯು ವಿದ್ ವೆಂಟಿಲೇಟರ್ ಸೇವೆ ಪಡೆದರೆ ಸರ್ಕಾರ ಆಸ್ಪತ್ರೆಗೆ ದಿನಕ್ಕೆ 10,000ರೂಗಳನ್ನು ಪಾವತಿ ಮಾಡುತ್ತದೆ. ರೋಗಿ ನೇರವಾಗಿ ಖಾಸಗಿ ಆಸ್ಪತ್ರೆಗೆ ಪ್ರವೇಶ ಪಡೆದರೆ ಅವರು ಜನರಲ್ ಅಥವಾ ಒಬ್ಬರಿಗಿಂತ ಹೆಚ್ಚು ಮಂದಿಯಿರುವ ವಾರ್ಡ್‍ನಲ್ಲಿದ್ದರೆ ದಿನಕ್ಕೆ 25,000ರೂ ಪಾವತಿಸಬೇಕಾಗುತ್ತದೆ. ಇಬ್ಬರಿರುವ ವಾರ್ಡ್‍ನಲ್ಲಿದ್ದರೆ ಈ ವೆಚ್ಚ 10% ಹೆಚ್ಚಾಗುತ್ತದೆ. ಒಬ್ಬರೇ ಇರುವ ಕೋಣೆಯಲ್ಲಿದ್ದರೆ ವೆಚ್ಚ 25% ಹೆಚ್ಚಾಗುತ್ತದೆ. ಈ ಬಗೆಯ ನಿಯಮಗಳು ರೋಗಿಗಳಲ್ಲಿ ಭಿನ್ನ ವರ್ಗಗಳನ್ನು ಸೃಷ್ಟಿಸುತ್ತವೆ. ಹೀಗಿರುವಾಗ ಸಹಜವಾಗಿಯೇ ಕೆಲವು ರೋಗಿಗಳಿಗೆ(ಹೆಚ್ಚು ದುಡ್ಡು ಕೊಡುವವರು) ಹೆಚ್ಚಿನ ಕಾಳಜಿ ಸಿಗುತ್ತದೆ. ವ್ಯಕ್ತಿಗಳು ಅಸ್ವಸ್ಥರಾದಾಗ ಈ ಬಗೆಯ ವಿಚಿತ್ರ ಆಯ್ಕೆಗಳನ್ನು ಇಡುವುದು ಸರಿಯಲ್ಲ.

ಈ ನಿಗದಿತ ಪ್ಯಾಕೇಜ್ ದರಗಳೂ ಅನಿರೀಕ್ಷಿತ ಸಮಸ್ಯೆಗಳು, ಶಸ್ತ್ರಚಿಕಿತ್ಸೆಗಳು, ಇತರ ಆರೋಗ್ಯ ಸಮಸ್ಯೆಗಳು, ಗರ್ಭಿಣಿಯರಿಗೆ ಎದುರಾಗುವ ಸಮಸ್ಯೆಗಳು ಮುಂತಾದವುಗಳನ್ನು ಒಳಗೊಳ್ಳುವುದಿಲ್ಲ. ಇದು ತುಂಬಾ ಸಮಸ್ಯಾತ್ಮಕವಾದುದು. ಏಕೆಂದರೆ, ಯಾರು ಈಗಾಗಲೇ ಬೇರೆ ಬೇರೆ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದಾರೋ ಅವರೇ ಕೋವಿಡ್-19 ಕಾರಣಕ್ಕೆ ಹೆಚ್ಚು ತೊಂದರೆಗೊಳಗಾಗುತ್ತಿರುವವರು. ಇವರಿಗೆ ಆಕ್ಸಿಜನ್, ವೆಂಟಿಲೇಟರ್ ಸಪೋರ್ಟ್, ದುಬಾರಿ ಔಷಧಗಳು ಹಾಗೂ ಆಸ್ಪತ್ರೆಯಲ್ಲಿ ಹೆಚ್ಚಿನ ದಿನ ಚಿಕಿತ್ಸೆ ಪಡೆಯುವ ಅಗತ್ಯವಿರುತ್ತದೆ. ಖಾಸಗಿ ರೋಗಿಗಳಿಗೆ ಸಂಬಂಧಿಸಿದ ಈ ಇನ್ನಿತರ ಆರೋಗ್ಯ ಸಮಸ್ಯೆಗಳನ್ನೂ ಪ್ಯಾಕೇಜ್‍ನ ಭಾಗವಾಗಿ ಸೇರಿಸಿಕೊಳ್ಳಬೇಕಾಗುತ್ತದೆ. ಜೊತೆಗೆ ಚಿಕಿತ್ಸೆ ನೀಡಲು ಏನು ಕಾರಣ ಎಂಬುದನ್ನೂ ವಿವರವಾಗಿ ನಮೂದಿಸಬೇಕಾಗುತ್ತದೆ.

ಖಾಸಗಿ ವಿಮೆ ಮತ್ತು ಆಸ್ಪತ್ರೆ ಹಾಗೂ ಕಾರ್ಪೊರೇಟ್ ಒಪ್ಪಂದಕ್ಕೊಳಪಡುವ ರೋಗಿಗಳಿಗೆ ಈ ಪ್ಯಾಕೇಜ್ ಅನ್ವಯಿಸುವುದಿಲ್ಲ ಎಂದು ಈ ಅಧಿಸೂಚನೆ ಹೇಳುತ್ತದೆ. ಆಸ್ಪತ್ರೆಗಳು ದುಬಾರಿ ವೆಚ್ಚ ವಿಧಿಸುವ ಬಗ್ಗೆ ವಿಮಾ ಕಂಪೆನಿಗಳು ಆತಂಕ ವ್ಯಕ್ತಪಡಿಸಿವೆ. ಪಿಪಿಇ ಹಾಗು ಹೊಸ ಬಗೆಯ ಚಿಕಿತ್ಸೆಗಳು ವಿಮೆಯ ಅಡಿಯಲ್ಲಿ ಬರುವುದಿಲ್ಲ. ಇವುಗಳನ್ನು ರೋಗಿಗಳು ಕೈಯಿಂದ ಭರಿಸಬೇಕಾಗುತ್ತದೆ. ಪ್ಯಾಕೇಜ್‍ಅನ್ನು ಆಧಾರವಾಗಿರಿಸಿಕೊಳ್ಳದೇ ಎಲ್ಲ ರೋಗಿಗಳಿಗೂ ಅನ್ವಯವಾಗುವಂತೆ ಚಿಕಿತ್ಸೆಗೆ ಸಂಬಂಧಿಸಿದ ಸಾಮಾನ್ಯ ಮಾರ್ಗಸೂಚಿಗಳು ಹಾಗೂ ಶುಲ್ಕಗಳನ್ನು ರೂಪಿಸಬೇಕಾಗಿದೆ.

ಎಹೆಚ್‍ಪಿಐ, ‘ಕೋವಿಡ್-19 ರೋಗಿಗಳ ಚಿಕಿತ್ಸೆಗೆ ತಗಲುವ ಸಾಮಾನ್ಯ ವೆಚ್ಚ’ವನ್ನು ಸಲಹಾರೂಪದಲ್ಲಿ ಸರ್ಕಾರದ ಮುಂದಿಟ್ಟಿದೆ. ಇದರಲ್ಲಿ ದುಬಾರಿ ಔಷಧಿಗಳು ಹಾಗೂ ಕೋವಿಡ್ ಸೋಂಕಿನಿಂದ ಬಿಗಡಾಯಿಸಿದ ಇನ್ನಿತರ ಆರೋಗ್ಯ ಸಮಸ್ಯೆಗಳ ಚಿಕಿತ್ಸಾ ವೆಚ್ಚ ಸೇರಿಕೊಂಡಿಲ್ಲ. ಇದು ರೋಗಿಗಳಿಂದ ಅತಾರ್ಕಿಕವಾಗಿ, ದೊಡ್ಡ ಮೊತ್ತದ ಹಣ ಕೀಳಲು ಅನುವು ಮಾಡಿಕೊಡುತ್ತದೆ.

ನಾಲ್ಕು ವಿಭಾಗಗಳಲ್ಲಿ ತಗಲುವ ವೆಚ್ಚ

ಎಹೆಚ್‍ಪಿಐ, ಪ್ರತಿ ಕೋವಿಡ್-19 ರೋಗಿಗೆ ಜನರಲ್ ವಾರ್ಡ್‍ನಲ್ಲಿ ತಗಲುವ ಅಂದಾಜು ವೆಚ್ಚವನ್ನೂ ಸೂಚಿಸಿದೆ. ಇದು ಹೊದಿಕೆ, ನೀರು, ವಿದ್ಯುತ್ ಬಿಲ್‍ಗಳನ್ನೂ ಗಮನಕ್ಕೆ ತೆಗೆದುಕೊಂಡು ಪ್ರತಿ ರೋಗಿಗೆ ದಿನವೊಂದಕ್ಕೆ ರೂ.500 ಅನ್ನು ನಿಗದಿಪಡಿಸಿದೆ. ಇದು ಇಡೀ ಕುಟುಂಬಕ್ಕೆ ಒಂದು ತಿಂಗಳಿಗೆ ತಗಲುವ ಒಟ್ಟು ನೀರು, ವಿದ್ಯುತ್ ಬಿಲ್ಲಿಗಿಂತಲೂ ಹೆಚ್ಚಿನ ಮೊತ್ತ. ಐವಿ ಫ್ಲೂಯಿಡ್ ಸೇರಿದಂತೆ ಔಷಧಿಯ ಶುಲ್ಕ ಪ್ರತಿ ರೋಗಿಗೆ ಪ್ರತಿ ದಿನಕ್ಕೆ ರೂ.700 ಎಂದು ಸೂಚಿಸಲಾಗಿದೆ. ರೋಗಿಗೆ ಔಷಧದ ಅಗತ್ಯವೇ ಇಲ್ಲದೇ ಕೇವಲ ಮುನ್ನೆಚ್ಚರಿಕೆಗಾಗಿ ಆಸ್ಪತ್ರೆಗೆ ಸೇರಿಸಿಕೊಂಡಾಗ ಇದು ಹೇಗಾಗುತ್ತದೆ? ದ್ರವಗಳನ್ನು ರೋಗಿ ಬಾಯಿಯಲ್ಲೇ ಸ್ವೀಕರಿಸಲು ಶಕ್ತನಿದ್ದಾಗಲೂ ಈ ಶುಲ್ಕ ಭರಿಸಬೇಕಾಗುವುದರ ಅರ್ಥವೇನು? ಅವರಿಗೆ ಐವಿ ಫ್ಯೂಯಿಡ್ ಹಾಕುವುದು ಕಡ್ಡಾಯವೇ?

ಪ್ರತಿದಿನಕ್ಕೆ ಹೆಮಟಾಲಜಿ, ಮೈಕ್ರೋಬಯಾಲಜಿ ಹಾಗೂ ರೇಡಿಯಾಲಜಿ ಪರೀಕ್ಷೆಗಳ ಅಂದಾಜು ಮೊತ್ತ ರೂ.1400 ಎಂದು ಸೂಚಿಸಲಾಗಿದೆ. ಇದು ಅನೈತಿಕ ಮತ್ತು ಅವೈಜ್ಞಾನಿಕ. ಏಕೆಂದರೆ ಇದು ರೋಗಿಗಳು ಅನಗತ್ಯವಾಗಿ ಪರೀಕ್ಷೆಗೊಳಪಡುವಂತೆ ಮಾಡುತ್ತದೆ. ಇವುಗಳಲ್ಲಿ ಅನೇಕ ಪರೀಕ್ಷೆಗಳು ತುಂಬಾ ಪ್ರಾಥಮಿಕವಾದವು ಹಾಗೂ ರೋಗದ ತೀವ್ರತೆ ಹಾಗೂ ಚಿಕಿತ್ಸೆಗೆ ಹೇಗೆ ಸ್ಪಂದಿಸುತ್ತಿದ್ದಾರೆಂದು ತಿಳಿಯಲು ನಡುನಡುವೆ ಇವುಗಳನ್ನು ನಡೆಸಬೇಕಾಗುತ್ತದೆ. ರೋಗಿಗೆ ಉಸಿರಾಟದ ಸಮಸ್ಯೆ ಇಲ್ಲದಿದ್ದಲ್ಲಿ ಪ್ರತಿದಿನ ಎದೆಯ ಎಕ್ಸ್‍ರೇ ಹಾಗೂ ಸಿಟಿ ಸ್ಕ್ಯಾನ್ ಮಾಡುವ ಅಗತ್ಯವೇನಿದೆ? ರೋಗಿಗೆ ಯಾವುದೇ ಲಿವರ್ ಸಮಸ್ಯೆ ಇಲ್ಲದಿರುವಾಗಲೂ ಪ್ರತಿದಿನ ಲಿವರ್ ಫಂಕ್ಷನ್ ಟೆಸ್ಟ್ ಮಾಡುವ ಅವಶ್ಯಕತೆ ಏನಿದೆ? ಏನೇ ಇದ್ದರೂ ಈ ಪರೀಕ್ಷೆಗಳು ಗಂಟೆಗಳ ಅಂತರದಲ್ಲಿ ಬದಲಾವಣೆಯನ್ನು ತೋರುವುದಿಲ್ಲ, ದಿನಗಳು, ವಾರಗಳಲ್ಲಿ ಬದಲಾವಣೆ ತೋರಿಸುತ್ತವೆ.

ಸರ್ಕಾರ ಆರೋಗ್ಯ ಸೇವೆಯ ಖಾಸಗೀಕರಣವನ್ನು ನಿಲ್ಲಿಸಬೇಕು. ಬದಲಾಗಿ ಸಾರ್ವಜನಿಕ ಆರೋಗ್ಯ ಸೇವೆಯನ್ನು ಬಲಪಡಿಸುವತ್ತ ಗಮನ ಹರಿಸಬೇಕು. ಭಾರತದ ಆರೋಗ್ಯ ಸಂಬಂಧಿ ನೀತಿಗಳ ರೂಪಣೆಯಲ್ಲಿ ಈ ಆರೋಗ್ಯ ಬಿಕ್ಕಟ್ಟು ಒಂದು ಮಹತ್ತರ ತಿರುವಾಗಿ ಪರಿಣಮಿಸಬೇಕಾಗಿದೆ. ಎಲ್ಲರ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮಹತ್ವವನ್ನು ಮತ್ತೆ ಮುನ್ನೆಲೆಗೆ ತರಬೇಕಾಗಿದೆ.

ಡಾ. ಸಿಲ್ವಿಯಾ ಕರ್ಪಗಂ, ಸಾರ್ವಜನಿಕ ಆರೋಗ್ಯ ವೈದ್ಯರು ಮತ್ತು ಸಂಶೋಧಕರು

(ಕನ್ನಡಕ್ಕೆ): ಪಿ.ಭಾರತಿ ದೇವಿ


ಇದನ್ನೂ ಓದಿ: ಕರ್ನಾಟಕ ಸರ್ಕಾರದ ಕೋವಿಡ್ ನಿಜಪರೀಕ್ಷೆ: ಖಾಸಗಿ ಆಸ್ಪತ್ರೆಗಳು ಖಳನಾಯಕರಾಗುವರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...