Homeಕರ್ನಾಟಕ6 ವರ್ಷದ UKG ಮಗುವನ್ನು ಫೇಲ್ ಎಂದು ಘೋಷಿಸಿದ ಖಾಸಗಿ ಶಾಲೆ: ಪೋಷಕರ ಆಕ್ರೋಶ

6 ವರ್ಷದ UKG ಮಗುವನ್ನು ಫೇಲ್ ಎಂದು ಘೋಷಿಸಿದ ಖಾಸಗಿ ಶಾಲೆ: ಪೋಷಕರ ಆಕ್ರೋಶ

ಸೇಂಟ್ ಜೋಸೆಫ್ ಚಾಮಿನೇಡ್ ಅಕಾಡೆಮಿ ಶಾಲೆಯು 6 ವರ್ಷದ UKG ಮಗು ಶಿಶುಗೀತೆ (ರೈಮ್ಸ್) ಹೇಳಲಿಲ್ಲ ಎಂಬ ಕಾರಣಕ್ಕೆ ಫೇಲ್ ಎಂದು ಘೋಷಿಸಿ ವಿವಾದಕ್ಕೆ ಕಾರಣವಾಗಿದೆ.

- Advertisement -
- Advertisement -

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೇಂಟ್ ಜೋಸೆಫ್ ಚಾಮಿನೇಡ್ ಅಕಾಡೆಮಿ ಶಾಲೆಯು 6 ವರ್ಷದ UKG ಮಗು ಶಿಶುಗೀತೆ (ರೈಮ್ಸ್) ಹೇಳಲಿಲ್ಲ ಎಂಬ ಕಾರಣಕ್ಕೆ ಫೇಲ್ ಎಂದು ಘೋಷಿಸಿ ವಿವಾದಕ್ಕೆ ಕಾರಣವಾಗಿದೆ. ಇದರಿಂದ ಆಕ್ರೋಶಗೊಂಡ ಪೋಷಕರು ಶಾಲೆಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

“ನಮ್ಮ ಒಬ್ಬಳೆ ಮಗಳು ಕಲಿಕೆಯಲ್ಲಿ ಮುಂದಿದ್ದಾಳೆ. ಇಂಗ್ಲಿಷ್‌ನಲ್ಲಿ 40ಕ್ಕೆ 31 ಅಂಕ, ಗಣಿತದಲ್ಲಿ 40ಕ್ಕೆ 35 ಅಂಕ ಮತ್ತು ಪರಿಸರ ವಿಜ್ಞಾನದಲ್ಲಿ 40ಕ್ಕೆ 28 ಅಂಕ ಗಳಿಸಿದ್ದಾಳೆ. ಆದರೆ ಶಾಲೆಯ ಮೌಖಿಕ ಪರೀಕ್ಷೆಯಲ್ಲಿ ಶಿಶುಗೀತೆ ಹೇಳಲಿಲ್ಲ ಎಂಬ ಕಾರಣಕ್ಕೆ ಶಾಲೆಯ ಪ್ರಗತಿ ಪತ್ರದಲ್ಲಿ ಫೇಲ್ ಎಂದು ನಮೂದಿಸಲಾಗಿದೆ” ಎಂದು ಪೋಷಕರಾದ ಮನೋಜ್ ಬಾದಲ್ ಆರೋಪಿಸಿದ್ದಾರೆ.

ಮಗುವಿನ ಅಂಕಪಟ್ಟಿ ನೋಡಿ ನಮಗೆ ಘಾಸಿಯಾಗಿದೆ. ಅಧಿಕೃತವಾಗಿ ಅನುತ್ತೀರ್ಣ ಎಂದು ಬರೆದಿರುವುದರಿಂದ ಮಗುವಿಗೆ ಮಾನಸಿಕ ಹಿಂಸೆಯಾಗುತ್ತದೆ. ಹಾಗಾಗಿ ಅಂಕಪಟ್ಟಿಯನ್ನು ಮಗುವಿಗೆ ತೋರಿಸಿಲ್ಲ. ದಯವಿಟ್ಟು ಈ ಕುರಿತು ಗಮನವಹಿಸಿ ಸರಿಪಡಿಸಿ ಎಂದು ಅವರು ಶಾಲೆಗೆ ಇಮೇಲ್ ಮೂಲಕ ಮನವಿ ಮಾಡಿದ್ದಾರೆ. ಆದರೆ ಶಾಲೆಯ ಪ್ರಾಂಶುಪಾಲರು ಅಸೂಕ್ಷ್ಮವಾಗಿ ವರ್ತಿಸಿದ್ದಾರೆ ಎಂದು ವರದಿಯಾಗಿದೆ.

“ರೈಮ್ಸ್ ಕಲಿಸುವ ಶಿಕ್ಷಕರ ಪ್ರಕಾರ, ವಿದ್ಯಾರ್ಥಿಯು ಪರೀಕ್ಷೆಯ ಸಮಯದಲ್ಲಿ ಶಿಶುಗೀತೆಗಳನ್ನು ಹೇಳಲಿಲ್ಲ.  ಶಿಕ್ಷಕರು 2 ಅವಕಾಶ ನೀಡಿದರೂ ಮಗು ಎರಡೂ ಬಾರಿಯೂ ಓದಲಿಲ್ಲ. ಆದ್ದರಿಂದ ಶಿಕ್ಷಕರು ಕನಿಷ್ಠ 05 ಅಂಕವನ್ನು ನೀಡಿದ್ದಾರೆ. ಮೊಬೈಲ್ ಅಪ್ಲಿಕೇಶನ್‌ನಲ್ಲಿನ ನಮ್ಮ ಪರೀಕ್ಷೆಯ ಫಲಿತಾಂಶವು ಯಾವುದೇ ವಿದ್ಯಾರ್ಥಿ ಒಂದು ವಿಷಯದಲ್ಲಿ ಅನುತ್ತೀರ್ಣರಾಗಿದ್ದರೂ ಸಹ “ಫೇಲ್” ಎಂದು ತೋರಿಸುವಂತೆ ಹೊಂದಿಸಲಾಗಿದೆ. ಮಗುವು ಎಲ್ಲಾ ವಿಷಯಗಳಿಗೆ 35% ಅಥವಾ ಅದಕ್ಕಿಂತ ಹೆಚ್ಚಿನ ಅಂಕ ಗಳಿಸಿದರೆ ಮಾತ್ರ “ಪಾಸ್” ಆಗುತ್ತದೆ. ಒಂದು ವಿಷಯದಲ್ಲಿ ಅನುತ್ತೀರ್ಣರಾದರು ನಾವು ಆ ಮಗುವನ್ನು ಮುಂದಿನ ತರಗತಿಗೆ ಕಳಿಸುತ್ತೇವೆ. ನಾವು ಉತ್ತಮ ಉದ್ದೇಶದಿಂದ ಅಂಕ ಪಟ್ಟಿ ರಚಿಸಿದ್ದೇವೆ ಮತ್ತು ನಿಮ್ಮ ವೈಯಕ್ತಿಕ ಅಗತ್ಯಕ್ಕೆ ತಕ್ಕಂತೆ ಅದನ್ನು ಬದಲಾಯಿಸಲು ಸಾಧ್ಯವಿಲ್ಲ. ಆದರೂ ಮುದ್ರಿತ ಪ್ರಗತಿ ವರದಿ ಕಾರ್ಡ್‌ನಲ್ಲಿ ನಿಮ್ಮ ಮಗುವನ್ನು “ಫೇಲ್” ಎಂದು ಸೂಚಿಸುವುದಿಲ್ಲ. ಆದ್ದರಿಂದ, ನಿಮ್ಮ ಮಗು ಫೇಲ್ ಎಂದು ತೋರಿಸಲು ನೀವು ಬಯಸದಿದ್ದರೆ, ನೀವು ಅವಳ ಮುದ್ರಿತ ಪ್ರಗತಿ ವರದಿಯನ್ನು ತೋರಿಸಬಹುದು. ಆದರೆ ನೀವು ಮೊಬೈಲ್ ಅಪ್ಲಿಕೇಶನ್‌ನಲ್ಲಿನ ಅಂಕಪಟ್ಟಿಯಲ್ಲಿನ ಪರೀಕ್ಷೆಯಲ್ಲಿ ಶಿಶುಗೀತೆ ಹೇಳಲಿಲ್ಲದ್ದಾರಿಂದ ಆ ವಿಷಯದಲ್ಲಿ ಫೇಲ್ ಆಗಿದ್ದಾರೆ ಎಂದು ಮಗುವಿಗೆ ವಿವರಿಸಿದರೆ ಉತ್ತಮ ಎಂದು ನಾವು ಶಿಫಾರಸು ಮಾಡುತ್ತೇವೆ” ಎಂದು ಶಾಲೆಯು ಇಮೇಲ್ ಮೂಲಕ ಸ್ಪಷ್ಟೀಕರಣ ನೀಡಿದೆ ಎಂದು ಮನೋಜ್ ಬಾದಲ್ ತಿಳಿಸಿದ್ದಾರೆ.

ಶಾಲೆಯ ಸ್ಪಷ್ಟೀಕರಣದಿಂದ ಮತ್ತಷ್ಟು ಆಕ್ರೋಶಗೊಂಡ ಬಾದಲ್, “06 ವರ್ಷದ ಮಗುವಿನ ಅರ್ಥಕ್ಕೆ ನಿಲುಕದ ಫೇಲ್ ಎಂಬ ವಿಚಾರವನ್ನು ತಿಳಿಸಿದರೆ ಮಾನಸಿಕ ಹಿಂಸೆಯಾಗುತ್ತದೆ. ಇದು ಸರ್ಕಾರಿ ಅದೇಶಗಳಿಗೆ ವಿರುದ್ಧವಾಗಿದೆ ಎಂದು ನಂಬುತ್ತೇವೆ. ಹಾಗಾಗಿ ನಮ್ಮ ಮಗುವನ್ನು ಫೇಲ್ ಎಂದು ಘೋಷಿಸಿದ ಶಾಲೆಯ ವಿರುದ್ಧ ಶಿಕ್ಷಣ ಸಚಿವಾಲಯ ಮತ್ತು ಐಸಿಎಸ್‌ಸಿ ಕೇಂದ್ರವನ್ನು ಸಂಪರ್ಕಿಸಿ ಇಂತಹ ಕಾನೂನುಬಾಹಿರ ಕೆಲಸಗಳನ್ನು ನಿಲ್ಲಿಸುವಂತೆ ಮತ್ತು ನಮ್ಮ ಮಗುವಿನ ಫಲಿತಾಂಶವನ್ನು ಸರಿಪಡಿಸುವಂತೆ ಒತ್ತಾಯಿಸಿಸುತ್ತೇವೆ” ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಶಾಲೆಯ ಮಾನ್ಯತೆ ರದ್ದುಗೊಳಿಸಬೇಕು: ಡಾ.ವಿ.ಪಿ ನಿರಂಜನಾರಾಧ್ಯ

5ನೇ ಮತ್ತು 8ನೇ ತರಗತಿಯ ಪರೀಕ್ಷೆಗಳಲ್ಲಿಯೇ ನಾವು ಫೇಲ್ ಮಾಡುವುದಿಲ್ಲ ಎಂದು ಸರ್ಕಾರ ಹೇಳುತ್ತಿದೆ. ಪಬ್ಲಿಕ್ ಪರೀಕ್ಷೆಯಲ್ಲಿಯೇ ಫೇಲ್-ಪಾಸ್ ಮುಖ್ಯವಲ್ಲವೆಂದ ಮೇಲೆ ಯುಕೆಜಿ ಮಗುವನ್ನು ಫೇಲ್ ಮಾಡುವುದರಲ್ಲಿ ಯಾವ ಅರ್ಥವಿದೆ? ಇದು RTE ಕಾಯಿದೆಯ ಸೆಕ್ಷನ್ 16, 17 ಮತ್ತು 29 ರ ಉಲ್ಲಂಘನೆಯಾಗಿದೆ ಎನ್ನುತ್ತಾರೆ ಶಿಕ್ಷಣ ತಜ್ಞರಾದ ಡಾ.ವಿ.ಪಿ ನಿರಂಜನಾರಾಧ್ಯರವರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಮಕ್ಕಳಲ್ಲಿ ಭಯ, ಆತಂಕ ಉಂಟು ಮಾಡಬಾರದು, ಮಾನಸಿದ ಹಿಂಸೆ ನೀಡಬಾರದು ಮತ್ತು 8ನೇ ತರಗತಿಯವರೆಗೆ ಫೇಲ್ ಮಾಡಬಾರದು, ತಡೆ ಹಿಡಿಯಬಾರದು ಮತ್ತು ಶಾಲೆಯಿಂದ ಹೊರಹಾಕಬಾರದು ಎಂದು ಆರ್‌ಟಿಇ ಕಾಯ್ದೆ ಹೇಳುತ್ತದೆ. ಸಣ್ಣ ಮಕ್ಕಳು ಆಗ ತಾನೇ ಸಮಾಜಕ್ಕೆ ತೆರೆದುಕೊಳ್ಳುತ್ತ, ಕಲಿಕೆಯಲ್ಲಿ ತೊಡಗಿರುತ್ತಾರೆ. ಆ ಸಮಯದಲ್ಲಿ ಅವರಿಗೆ ಆಟ-ಪಾಠದ ಮೂಲಕ ಕಲಿಕೆ ನಡೆಯಬೇಕೆ ಹೊರತು ಆ ಹಂತದಲ್ಲಿ ಪಾಸ್-ಫೇಲ್ ಎನ್ನುವುದೇ ಅರ್ಥಹೀನ. ಈ ಮಗವಿನ ವಿಚಾರದಲ್ಲಿ ಆ ಶಾಲೆ ನಡೆಸುವವರಿಗೆ ಮತ್ತು ಮುಖ್ಯೋಪಾಧ್ಯಯರಿಗೆ ಶಿಕ್ಷಣದ ಬಗ್ಗೆಯಾಗಲಿ, ಶಿಕ್ಷಣದ ಶಾಸ್ತ್ರದ ಎಷ್ಟು ಕಳಪೆ ಜ್ಞಾನವಿದೆ ಎಂಬುದುನ್ನು ತೋರಿಸುತ್ತದೆ. ಆ ಶಾಲೆಯ ವಿರುದ್ಧ ಆರ್‌ಟಿಇ ಕಾಯ್ದೆ ನಿಯಮಗಳ ಪ್ರಕಾರ ಪ್ರಕರಣ ದಾಖಲಿಸಬೇಕು” ಎಂದರು.

“ಏನು ಸಾಧಿಸಬೇಕೆಂದು ಈ ರೀತಿ ಫೇಲ್ ಮಾಡಲಾಗಿದೆ. ಅಂದುಕೊಂಡಿದ್ದನ್ನು ಮಗು ಕಲಿತಿಲ್ಲ ಎಂದರೆ ಮಗುವಿನಲ್ಲಿನ ಯಾವುದೇ ಅಂತರ್ಗತ ನ್ಯೂನತೆಯಿಂದಾಗಿ ಕಲಿತಿಲ್ಲ ಎಂದಲ್ಲ. ಕಲಿಕೆಯ ವಾತಾವರಣ ಮತ್ತು ನಿಮ್ಮ ಬೋಧನಾ ಕ್ರಮ ಸರಿಯಿಲ್ಲ ಎಂದರ್ಥ. ಅದಕ್ಕೆ ಶಿಕ್ಷಕರು ಮತ್ತು ಶಾಲೆ ಜವಾಬ್ದಾರಿಯೇ ಹೊರತು ಮಗು ಅಲ್ಲ. ನಿಮ್ಮ ವೈಫಲ್ಯ ಎದ್ದು ಕಾಣುತ್ತಿರುವುದರಿಂದ ಮಗುವಿಗೆ ಕಟ್ಟಿಸಿಕೊಂಡಿದ್ದ ಶುಲ್ಕವನ್ನು ಮರುಪಾವತಿ ಮಾಡಬೇಕು” ಎಂದು ಒತ್ತಾಯಿಸಿದರು.

ಮಾಜಿ ಶಿಕ್ಷಣ ಸಚಿವರ ಕಿಡಿ

UKG ತರಗತಿಯಲ್ಲಿ ಓದುತ್ತಿರುವ ಈ ಎಳೆಯ ಮಗುವನ್ನು “ಫೇಲ್” ಮಾಡಿರುವ ಶಿಕ್ಷಣ ಸಂಸ್ಥೆಗೆ ತಲೆಯೂ ಇಲ್ಲ, ಹೃದಯ ಮೊದಲೇ ಇಲ್ಲ. ಆ ಮಗುವನ್ನು ಏನು ಮಾಡಲು ಹೊರಟಿದೆ ಈ ಮಹಾ ಶಿಕ್ಷಣ ಸಂಸ್ಥೆ!
ನನ್ನ ಗಮನಕ್ಕೆ ಈ “ಮಹಾಕೃತ್ಯ” ಬಂದ ಕೂಡಲೇ ಶಿಕ್ಷಣ ಇಲಾಖೆಯ ಆ ತಾಲೂಕಿನ ಪ್ರಮುಖರಿಗೆ ತಲುಪಿಸಿ ಈ ಶಾಲೆಯ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕಾಗಿ ಮನವಿ ಮಾಡಿದ್ದೇನೆ. ನಾನು ಕೂಡ ಈ ಮಹಾ ಶಾಲೆಗೆ ಸದ್ಯದಲ್ಲಿಯೇ ಒಮ್ಮೆ ಭೇಟಿ ನೀಡಿ “ಪಾವನ” ನಾಗಲು ಬಯಸಿದ್ದೇನೆ ಎಂದು ಮಾಜಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಕಿಡಿಕಾರಿದ್ದಾರೆ.

ಎಚ್ಚೆತ್ತುಕೊಂಡ ಶಾಲೆ; ಕ್ಷಮೆಯಾಚನೆ

ಶಾಲೆ ಬಳಸುತ್ತಿರುವ ಸಾಫ್ಟ್‌ವೇರ್‌ನಲ್ಲಿ ‘ಫೇಲ್’ ಎಂಬ ಪದವನ್ನು ನಮೂದಿಸಲಾಗಿದೆ. ಒಮ್ಮೆ ಪೋಷಕರು ಈ ಸಮಸ್ಯೆಯನ್ನು ನಮಗೆ ತಿಳಿಸಿದ ನಂತರ, ಆಪ್‌ನ ಅಂಕಪಟ್ಟಿಯಿಂದ ‘ಫೇಲ್’ ಪದವನ್ನು ತೆಗೆದುಹಾಕಲು ನಾವು ಸಾಫ್ಟ್‌ವೇರ್ ಕಂಪನಿಯನ್ನು ಕೇಳಿದ್ದೇವೆ ಮತ್ತು ಆದ್ಯತೆಯ ಮೇರೆಗೆ ಮಾಡುವಂತೆ ನೆನಪಿಸಿದ್ದೇನೆ. ಇದರಿಂದ ಉಂಟಾದ ಯಾವುದೇ ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ ಎಂದು ಶಾಲೆಯ ಪ್ರಾಂಶುಪಾಲರು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಸಂಯುಕ್ತ ಹೋರಾಟ ಸಂಘಟನೆಯಿಂದ ಬೃಹತ್ ರ್‍ಯಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...