Homeಕರ್ನಾಟಕ6 ವರ್ಷದ UKG ಮಗುವನ್ನು ಫೇಲ್ ಎಂದು ಘೋಷಿಸಿದ ಖಾಸಗಿ ಶಾಲೆ: ಪೋಷಕರ ಆಕ್ರೋಶ

6 ವರ್ಷದ UKG ಮಗುವನ್ನು ಫೇಲ್ ಎಂದು ಘೋಷಿಸಿದ ಖಾಸಗಿ ಶಾಲೆ: ಪೋಷಕರ ಆಕ್ರೋಶ

ಸೇಂಟ್ ಜೋಸೆಫ್ ಚಾಮಿನೇಡ್ ಅಕಾಡೆಮಿ ಶಾಲೆಯು 6 ವರ್ಷದ UKG ಮಗು ಶಿಶುಗೀತೆ (ರೈಮ್ಸ್) ಹೇಳಲಿಲ್ಲ ಎಂಬ ಕಾರಣಕ್ಕೆ ಫೇಲ್ ಎಂದು ಘೋಷಿಸಿ ವಿವಾದಕ್ಕೆ ಕಾರಣವಾಗಿದೆ.

- Advertisement -
- Advertisement -

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೇಂಟ್ ಜೋಸೆಫ್ ಚಾಮಿನೇಡ್ ಅಕಾಡೆಮಿ ಶಾಲೆಯು 6 ವರ್ಷದ UKG ಮಗು ಶಿಶುಗೀತೆ (ರೈಮ್ಸ್) ಹೇಳಲಿಲ್ಲ ಎಂಬ ಕಾರಣಕ್ಕೆ ಫೇಲ್ ಎಂದು ಘೋಷಿಸಿ ವಿವಾದಕ್ಕೆ ಕಾರಣವಾಗಿದೆ. ಇದರಿಂದ ಆಕ್ರೋಶಗೊಂಡ ಪೋಷಕರು ಶಾಲೆಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

“ನಮ್ಮ ಒಬ್ಬಳೆ ಮಗಳು ಕಲಿಕೆಯಲ್ಲಿ ಮುಂದಿದ್ದಾಳೆ. ಇಂಗ್ಲಿಷ್‌ನಲ್ಲಿ 40ಕ್ಕೆ 31 ಅಂಕ, ಗಣಿತದಲ್ಲಿ 40ಕ್ಕೆ 35 ಅಂಕ ಮತ್ತು ಪರಿಸರ ವಿಜ್ಞಾನದಲ್ಲಿ 40ಕ್ಕೆ 28 ಅಂಕ ಗಳಿಸಿದ್ದಾಳೆ. ಆದರೆ ಶಾಲೆಯ ಮೌಖಿಕ ಪರೀಕ್ಷೆಯಲ್ಲಿ ಶಿಶುಗೀತೆ ಹೇಳಲಿಲ್ಲ ಎಂಬ ಕಾರಣಕ್ಕೆ ಶಾಲೆಯ ಪ್ರಗತಿ ಪತ್ರದಲ್ಲಿ ಫೇಲ್ ಎಂದು ನಮೂದಿಸಲಾಗಿದೆ” ಎಂದು ಪೋಷಕರಾದ ಮನೋಜ್ ಬಾದಲ್ ಆರೋಪಿಸಿದ್ದಾರೆ.

ಮಗುವಿನ ಅಂಕಪಟ್ಟಿ ನೋಡಿ ನಮಗೆ ಘಾಸಿಯಾಗಿದೆ. ಅಧಿಕೃತವಾಗಿ ಅನುತ್ತೀರ್ಣ ಎಂದು ಬರೆದಿರುವುದರಿಂದ ಮಗುವಿಗೆ ಮಾನಸಿಕ ಹಿಂಸೆಯಾಗುತ್ತದೆ. ಹಾಗಾಗಿ ಅಂಕಪಟ್ಟಿಯನ್ನು ಮಗುವಿಗೆ ತೋರಿಸಿಲ್ಲ. ದಯವಿಟ್ಟು ಈ ಕುರಿತು ಗಮನವಹಿಸಿ ಸರಿಪಡಿಸಿ ಎಂದು ಅವರು ಶಾಲೆಗೆ ಇಮೇಲ್ ಮೂಲಕ ಮನವಿ ಮಾಡಿದ್ದಾರೆ. ಆದರೆ ಶಾಲೆಯ ಪ್ರಾಂಶುಪಾಲರು ಅಸೂಕ್ಷ್ಮವಾಗಿ ವರ್ತಿಸಿದ್ದಾರೆ ಎಂದು ವರದಿಯಾಗಿದೆ.

“ರೈಮ್ಸ್ ಕಲಿಸುವ ಶಿಕ್ಷಕರ ಪ್ರಕಾರ, ವಿದ್ಯಾರ್ಥಿಯು ಪರೀಕ್ಷೆಯ ಸಮಯದಲ್ಲಿ ಶಿಶುಗೀತೆಗಳನ್ನು ಹೇಳಲಿಲ್ಲ.  ಶಿಕ್ಷಕರು 2 ಅವಕಾಶ ನೀಡಿದರೂ ಮಗು ಎರಡೂ ಬಾರಿಯೂ ಓದಲಿಲ್ಲ. ಆದ್ದರಿಂದ ಶಿಕ್ಷಕರು ಕನಿಷ್ಠ 05 ಅಂಕವನ್ನು ನೀಡಿದ್ದಾರೆ. ಮೊಬೈಲ್ ಅಪ್ಲಿಕೇಶನ್‌ನಲ್ಲಿನ ನಮ್ಮ ಪರೀಕ್ಷೆಯ ಫಲಿತಾಂಶವು ಯಾವುದೇ ವಿದ್ಯಾರ್ಥಿ ಒಂದು ವಿಷಯದಲ್ಲಿ ಅನುತ್ತೀರ್ಣರಾಗಿದ್ದರೂ ಸಹ “ಫೇಲ್” ಎಂದು ತೋರಿಸುವಂತೆ ಹೊಂದಿಸಲಾಗಿದೆ. ಮಗುವು ಎಲ್ಲಾ ವಿಷಯಗಳಿಗೆ 35% ಅಥವಾ ಅದಕ್ಕಿಂತ ಹೆಚ್ಚಿನ ಅಂಕ ಗಳಿಸಿದರೆ ಮಾತ್ರ “ಪಾಸ್” ಆಗುತ್ತದೆ. ಒಂದು ವಿಷಯದಲ್ಲಿ ಅನುತ್ತೀರ್ಣರಾದರು ನಾವು ಆ ಮಗುವನ್ನು ಮುಂದಿನ ತರಗತಿಗೆ ಕಳಿಸುತ್ತೇವೆ. ನಾವು ಉತ್ತಮ ಉದ್ದೇಶದಿಂದ ಅಂಕ ಪಟ್ಟಿ ರಚಿಸಿದ್ದೇವೆ ಮತ್ತು ನಿಮ್ಮ ವೈಯಕ್ತಿಕ ಅಗತ್ಯಕ್ಕೆ ತಕ್ಕಂತೆ ಅದನ್ನು ಬದಲಾಯಿಸಲು ಸಾಧ್ಯವಿಲ್ಲ. ಆದರೂ ಮುದ್ರಿತ ಪ್ರಗತಿ ವರದಿ ಕಾರ್ಡ್‌ನಲ್ಲಿ ನಿಮ್ಮ ಮಗುವನ್ನು “ಫೇಲ್” ಎಂದು ಸೂಚಿಸುವುದಿಲ್ಲ. ಆದ್ದರಿಂದ, ನಿಮ್ಮ ಮಗು ಫೇಲ್ ಎಂದು ತೋರಿಸಲು ನೀವು ಬಯಸದಿದ್ದರೆ, ನೀವು ಅವಳ ಮುದ್ರಿತ ಪ್ರಗತಿ ವರದಿಯನ್ನು ತೋರಿಸಬಹುದು. ಆದರೆ ನೀವು ಮೊಬೈಲ್ ಅಪ್ಲಿಕೇಶನ್‌ನಲ್ಲಿನ ಅಂಕಪಟ್ಟಿಯಲ್ಲಿನ ಪರೀಕ್ಷೆಯಲ್ಲಿ ಶಿಶುಗೀತೆ ಹೇಳಲಿಲ್ಲದ್ದಾರಿಂದ ಆ ವಿಷಯದಲ್ಲಿ ಫೇಲ್ ಆಗಿದ್ದಾರೆ ಎಂದು ಮಗುವಿಗೆ ವಿವರಿಸಿದರೆ ಉತ್ತಮ ಎಂದು ನಾವು ಶಿಫಾರಸು ಮಾಡುತ್ತೇವೆ” ಎಂದು ಶಾಲೆಯು ಇಮೇಲ್ ಮೂಲಕ ಸ್ಪಷ್ಟೀಕರಣ ನೀಡಿದೆ ಎಂದು ಮನೋಜ್ ಬಾದಲ್ ತಿಳಿಸಿದ್ದಾರೆ.

ಶಾಲೆಯ ಸ್ಪಷ್ಟೀಕರಣದಿಂದ ಮತ್ತಷ್ಟು ಆಕ್ರೋಶಗೊಂಡ ಬಾದಲ್, “06 ವರ್ಷದ ಮಗುವಿನ ಅರ್ಥಕ್ಕೆ ನಿಲುಕದ ಫೇಲ್ ಎಂಬ ವಿಚಾರವನ್ನು ತಿಳಿಸಿದರೆ ಮಾನಸಿಕ ಹಿಂಸೆಯಾಗುತ್ತದೆ. ಇದು ಸರ್ಕಾರಿ ಅದೇಶಗಳಿಗೆ ವಿರುದ್ಧವಾಗಿದೆ ಎಂದು ನಂಬುತ್ತೇವೆ. ಹಾಗಾಗಿ ನಮ್ಮ ಮಗುವನ್ನು ಫೇಲ್ ಎಂದು ಘೋಷಿಸಿದ ಶಾಲೆಯ ವಿರುದ್ಧ ಶಿಕ್ಷಣ ಸಚಿವಾಲಯ ಮತ್ತು ಐಸಿಎಸ್‌ಸಿ ಕೇಂದ್ರವನ್ನು ಸಂಪರ್ಕಿಸಿ ಇಂತಹ ಕಾನೂನುಬಾಹಿರ ಕೆಲಸಗಳನ್ನು ನಿಲ್ಲಿಸುವಂತೆ ಮತ್ತು ನಮ್ಮ ಮಗುವಿನ ಫಲಿತಾಂಶವನ್ನು ಸರಿಪಡಿಸುವಂತೆ ಒತ್ತಾಯಿಸಿಸುತ್ತೇವೆ” ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಶಾಲೆಯ ಮಾನ್ಯತೆ ರದ್ದುಗೊಳಿಸಬೇಕು: ಡಾ.ವಿ.ಪಿ ನಿರಂಜನಾರಾಧ್ಯ

5ನೇ ಮತ್ತು 8ನೇ ತರಗತಿಯ ಪರೀಕ್ಷೆಗಳಲ್ಲಿಯೇ ನಾವು ಫೇಲ್ ಮಾಡುವುದಿಲ್ಲ ಎಂದು ಸರ್ಕಾರ ಹೇಳುತ್ತಿದೆ. ಪಬ್ಲಿಕ್ ಪರೀಕ್ಷೆಯಲ್ಲಿಯೇ ಫೇಲ್-ಪಾಸ್ ಮುಖ್ಯವಲ್ಲವೆಂದ ಮೇಲೆ ಯುಕೆಜಿ ಮಗುವನ್ನು ಫೇಲ್ ಮಾಡುವುದರಲ್ಲಿ ಯಾವ ಅರ್ಥವಿದೆ? ಇದು RTE ಕಾಯಿದೆಯ ಸೆಕ್ಷನ್ 16, 17 ಮತ್ತು 29 ರ ಉಲ್ಲಂಘನೆಯಾಗಿದೆ ಎನ್ನುತ್ತಾರೆ ಶಿಕ್ಷಣ ತಜ್ಞರಾದ ಡಾ.ವಿ.ಪಿ ನಿರಂಜನಾರಾಧ್ಯರವರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಮಕ್ಕಳಲ್ಲಿ ಭಯ, ಆತಂಕ ಉಂಟು ಮಾಡಬಾರದು, ಮಾನಸಿದ ಹಿಂಸೆ ನೀಡಬಾರದು ಮತ್ತು 8ನೇ ತರಗತಿಯವರೆಗೆ ಫೇಲ್ ಮಾಡಬಾರದು, ತಡೆ ಹಿಡಿಯಬಾರದು ಮತ್ತು ಶಾಲೆಯಿಂದ ಹೊರಹಾಕಬಾರದು ಎಂದು ಆರ್‌ಟಿಇ ಕಾಯ್ದೆ ಹೇಳುತ್ತದೆ. ಸಣ್ಣ ಮಕ್ಕಳು ಆಗ ತಾನೇ ಸಮಾಜಕ್ಕೆ ತೆರೆದುಕೊಳ್ಳುತ್ತ, ಕಲಿಕೆಯಲ್ಲಿ ತೊಡಗಿರುತ್ತಾರೆ. ಆ ಸಮಯದಲ್ಲಿ ಅವರಿಗೆ ಆಟ-ಪಾಠದ ಮೂಲಕ ಕಲಿಕೆ ನಡೆಯಬೇಕೆ ಹೊರತು ಆ ಹಂತದಲ್ಲಿ ಪಾಸ್-ಫೇಲ್ ಎನ್ನುವುದೇ ಅರ್ಥಹೀನ. ಈ ಮಗವಿನ ವಿಚಾರದಲ್ಲಿ ಆ ಶಾಲೆ ನಡೆಸುವವರಿಗೆ ಮತ್ತು ಮುಖ್ಯೋಪಾಧ್ಯಯರಿಗೆ ಶಿಕ್ಷಣದ ಬಗ್ಗೆಯಾಗಲಿ, ಶಿಕ್ಷಣದ ಶಾಸ್ತ್ರದ ಎಷ್ಟು ಕಳಪೆ ಜ್ಞಾನವಿದೆ ಎಂಬುದುನ್ನು ತೋರಿಸುತ್ತದೆ. ಆ ಶಾಲೆಯ ವಿರುದ್ಧ ಆರ್‌ಟಿಇ ಕಾಯ್ದೆ ನಿಯಮಗಳ ಪ್ರಕಾರ ಪ್ರಕರಣ ದಾಖಲಿಸಬೇಕು” ಎಂದರು.

“ಏನು ಸಾಧಿಸಬೇಕೆಂದು ಈ ರೀತಿ ಫೇಲ್ ಮಾಡಲಾಗಿದೆ. ಅಂದುಕೊಂಡಿದ್ದನ್ನು ಮಗು ಕಲಿತಿಲ್ಲ ಎಂದರೆ ಮಗುವಿನಲ್ಲಿನ ಯಾವುದೇ ಅಂತರ್ಗತ ನ್ಯೂನತೆಯಿಂದಾಗಿ ಕಲಿತಿಲ್ಲ ಎಂದಲ್ಲ. ಕಲಿಕೆಯ ವಾತಾವರಣ ಮತ್ತು ನಿಮ್ಮ ಬೋಧನಾ ಕ್ರಮ ಸರಿಯಿಲ್ಲ ಎಂದರ್ಥ. ಅದಕ್ಕೆ ಶಿಕ್ಷಕರು ಮತ್ತು ಶಾಲೆ ಜವಾಬ್ದಾರಿಯೇ ಹೊರತು ಮಗು ಅಲ್ಲ. ನಿಮ್ಮ ವೈಫಲ್ಯ ಎದ್ದು ಕಾಣುತ್ತಿರುವುದರಿಂದ ಮಗುವಿಗೆ ಕಟ್ಟಿಸಿಕೊಂಡಿದ್ದ ಶುಲ್ಕವನ್ನು ಮರುಪಾವತಿ ಮಾಡಬೇಕು” ಎಂದು ಒತ್ತಾಯಿಸಿದರು.

ಮಾಜಿ ಶಿಕ್ಷಣ ಸಚಿವರ ಕಿಡಿ

UKG ತರಗತಿಯಲ್ಲಿ ಓದುತ್ತಿರುವ ಈ ಎಳೆಯ ಮಗುವನ್ನು “ಫೇಲ್” ಮಾಡಿರುವ ಶಿಕ್ಷಣ ಸಂಸ್ಥೆಗೆ ತಲೆಯೂ ಇಲ್ಲ, ಹೃದಯ ಮೊದಲೇ ಇಲ್ಲ. ಆ ಮಗುವನ್ನು ಏನು ಮಾಡಲು ಹೊರಟಿದೆ ಈ ಮಹಾ ಶಿಕ್ಷಣ ಸಂಸ್ಥೆ!
ನನ್ನ ಗಮನಕ್ಕೆ ಈ “ಮಹಾಕೃತ್ಯ” ಬಂದ ಕೂಡಲೇ ಶಿಕ್ಷಣ ಇಲಾಖೆಯ ಆ ತಾಲೂಕಿನ ಪ್ರಮುಖರಿಗೆ ತಲುಪಿಸಿ ಈ ಶಾಲೆಯ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕಾಗಿ ಮನವಿ ಮಾಡಿದ್ದೇನೆ. ನಾನು ಕೂಡ ಈ ಮಹಾ ಶಾಲೆಗೆ ಸದ್ಯದಲ್ಲಿಯೇ ಒಮ್ಮೆ ಭೇಟಿ ನೀಡಿ “ಪಾವನ” ನಾಗಲು ಬಯಸಿದ್ದೇನೆ ಎಂದು ಮಾಜಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಕಿಡಿಕಾರಿದ್ದಾರೆ.

ಎಚ್ಚೆತ್ತುಕೊಂಡ ಶಾಲೆ; ಕ್ಷಮೆಯಾಚನೆ

ಶಾಲೆ ಬಳಸುತ್ತಿರುವ ಸಾಫ್ಟ್‌ವೇರ್‌ನಲ್ಲಿ ‘ಫೇಲ್’ ಎಂಬ ಪದವನ್ನು ನಮೂದಿಸಲಾಗಿದೆ. ಒಮ್ಮೆ ಪೋಷಕರು ಈ ಸಮಸ್ಯೆಯನ್ನು ನಮಗೆ ತಿಳಿಸಿದ ನಂತರ, ಆಪ್‌ನ ಅಂಕಪಟ್ಟಿಯಿಂದ ‘ಫೇಲ್’ ಪದವನ್ನು ತೆಗೆದುಹಾಕಲು ನಾವು ಸಾಫ್ಟ್‌ವೇರ್ ಕಂಪನಿಯನ್ನು ಕೇಳಿದ್ದೇವೆ ಮತ್ತು ಆದ್ಯತೆಯ ಮೇರೆಗೆ ಮಾಡುವಂತೆ ನೆನಪಿಸಿದ್ದೇನೆ. ಇದರಿಂದ ಉಂಟಾದ ಯಾವುದೇ ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ ಎಂದು ಶಾಲೆಯ ಪ್ರಾಂಶುಪಾಲರು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಸಂಯುಕ್ತ ಹೋರಾಟ ಸಂಘಟನೆಯಿಂದ ಬೃಹತ್ ರ್‍ಯಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...