Homeಮುಖಪುಟಅಣು ಶಕ್ತಿಯ ಖಾಸಗೀಕರಣ : 'ಶಾಂತಿ' ಮಸೂದೆಗೆ ಲೋಕಸಭೆ ಅಸ್ತು

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಖಾಸಗಿ ಕಂಪನಿಯೊಂದು ಪರಮಾಣು ಇಂಧನ ವಲಯ ಪ್ರವೇಶಿಸುವ ಯೋಜನೆ ಘೋಷಿಸಿದ ಬೆನ್ನಲ್ಲೇ ಮಸೂದೆ ಮಂಡನೆ- ಕಾಂಗ್ರೆಸ್ ಸಂಸದ ಮನೀಶ್ ತಿವಾರಿ

- Advertisement -
- Advertisement -

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು.

ವಿಪಕ್ಷಗಳ ಸದಸ್ಯರು ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಭಾರತೀಯ ಪರಮಾಣು ಇಂಧನ ವಲಯದಲ್ಲಿ ಖಾಸಗಿ ಕಂಪನಿಗಳ ಪ್ರವೇಶವು ಅವುಗಳ ಲಾಭಗಳಿಕೆಗೆ ಮಾತ್ರ ಸಹಾಯ ಮಾಡುತ್ತದೆ. ಹೆಚ್ಚಿನ ವಿದ್ಯುತ್ ಬೆಲೆಗಳ ಹೊರೆಯನ್ನು ಹೊರುತ್ತಿರುವ ಸಾಮಾನ್ಯ ಜನರಿಗೆ ಇದರಿಂದ ಯಾವುದೇ ಉಪಯೋಗ ಇಲ್ಲ ಎಂದು ಹೆಚ್ಚಿನ ಸಂಸದರು ಹೇಳಿದರು.

ಮಸೂದೆಯನ್ನು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಥವಾ ಸ್ಥಾಯಿ ಸಮಿತಿಗೆ ಕಳುಹಿಸಬೇಕೆಂಬ ಬೇಡಿಕೆಯನ್ನು ಪುರಸ್ಕರಿಸದ ಕಾರಣ, ಮಸೂದೆ ಅಂಗೀಕಾರವಾದಾಗ ಇಂಡಿಯಾ ಒಕ್ಕೂಟದ ಸಂಸದರು ಸಭಾತ್ಯಾಗ ಮಾಡಿದರು.

ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಮಾತನಾಡಿ, ಶಾಂತಿ ಮಸೂದೆಯು ಅಸ್ತಿತ್ವದಲ್ಲಿರುವ ಎರಡು ಪ್ರಗತಿಪರ ಶಾಸನಗಳನ್ನು ಬದಲಾಯಿಸುತ್ತಿದೆ ಎಂದು ವಿವರಿಸುತ್ತಾ ಮಸೂದೆಯ ವಿರೋಧಕ್ಕೆ ಮುಕ್ತವಾಗಿ ಧ್ವನಿಗೂಡಿಸಿದರು.

ಸ್ವಾವಲಂಬನೆಯ ಕಡೆಗೆ ಭಾರತದ ಪರಮಾಣು ಕಾರ್ಯಕ್ರಮವನ್ನು ಮೊದಲು ಪರಿಚಯಿಸಿದ್ದು ಜವಾಹರಲಾಲ್ ನೆಹರು ಎಂದು ಅವರು ನೆನಪಿಸಿಕೊಂಡರು.

ಪರಮಾಣು ಅಪಘಾತಗಳಿಗೆ ಪೂರೈಕೆದಾರರನ್ನು ಹೊಣೆಗಾರರನ್ನಾಗಿ ಮಾಡುವ ಪರಮಾಣು ಹೊಣೆಗಾರಿಕೆ ಆಡಳಿತದ ಕುರಿತು 2010ರ ಒಪ್ಪಂದವನ್ನು ಮುರಿಯುವ ಮೂಲಕ ಬಿಜೆಪಿ ನೇತೃತ್ವದ ಸರ್ಕಾರವು ಭಾರತದ ಇಂಧನ ಸ್ವಾತಂತ್ರ್ಯ ಮತ್ತು ಶುದ್ಧ ಇಂಧನ ಗುರಿಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಹೇಳಿದರು.

“ಪರಮಾಣು ಶಕ್ತಿ ನಿಯಂತ್ರಕದ ಪಾತ್ರದ ಬಗ್ಗೆ ಸ್ಪಷ್ಟತೆಯನ್ನು ನೀಡದಿದ್ದಕ್ಕಾಗಿ” ಅವರು ಕರಡು ಮಸೂದೆಯ ಪ್ರತಿಯನ್ನು ಹರಿದು ಹಾಕಿದರು.

ಪರಮಾಣು ಇಂಧನ ವಲಯದಲ್ಲಿ ವಿದೇಶಿ ಕಂಪನಿಗಳ ಪ್ರವೇಶವನ್ನು ತಿವಾರಿ ವಿರೋಧಿಸದಿದ್ದರೂ, ಪೂರೈಕೆದಾರರ ಹೊಣೆಗಾರಿಕೆಯನ್ನು ನಿಗದಿಪಡಿಸಬೇಕು ಮತ್ತು ಮುಖ್ಯವಾಗಿ, ಪರಮಾಣು ಇಂಧನ ನಿಯಂತ್ರಣ ಮಂಡಳಿಯ ಸ್ವಾತಂತ್ರ್ಯವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಈ ಎರಡೂ ಕಳವಳಗಳನ್ನು ಮಸೂದೆ ಪರಿಹರಿಸಿಲ್ಲ ಎಂದು ತಿವಾರಿ ಅಸಮಾಧಾನ ವ್ಯಕ್ತಪಡಿಸಿದರು.

“ನಾವು ವಿದೇಶಿ ಪೂರೈಕೆದಾರರ ಮೇಲೆ ಅವಲಂಬಿತರಾಗಿರುವುದರಿಂದ ಪರಮಾಣು ಅಪಘಾತ ಸಂಭವಿಸಿದರೆ… ಪೂರೈಕೆದಾರರು ಹೊಣೆಗಾರರಾಗಬೇಕಲ್ಲವೇ?” ಎಂದು ಅವರು ಕೇಳಿದರು.

ಮಸೂದೆಯಲ್ಲಿ ನಿಗದಿಪಡಿಸಿದ ಹೊಣೆಗಾರಿಕೆಯ ಮೇಲಿನ 410 ಮಿಲಿಯನ್ ಡಾಲರ್ ಮಿತಿಯನ್ನು ಅವರು ಟೀಕಿಸಿದರು. ಭೋಪಾಲ್ ಅನಿಲ ದುರಂತದ ಸಮಯದಲ್ಲಿ ಮಿತಿ 470 ಮಿಲಿಯನ್ ಡಾಲರ್ ಆಗಿತ್ತು ಎಂದ ಅವರು, 10,000 ಕೋಟಿ ರೂ.ಗಳ ಮಿತಿಗೆ ಒತ್ತಾಯಿಸಿದರು.

ಸರ್ಕಾರ ನಡೆಸುವ ಸಂಸ್ಥೆಗಳಿಗೆ ವಿಮಾ ರಕ್ಷಣೆಯಿಂದ ವಿನಾಯಿತಿ ನೀಡಲಾಗುವುದು ಎಂಬ ಷರತ್ತನ್ನು ಅವರು ವಿರೋಧಿಸಿದರು. ದುರಂತದ ಸಂದರ್ಭದಲ್ಲಿ ಪರಿಹಾರವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸುತ್ತದೆಯೇ ಎಂದು ಕೇಳಿದರು. ಮಸೂದೆಯಲ್ಲಿ ಪರಮಾಣು ತ್ಯಾಜ್ಯ ವಿಲೇವಾರಿಗೆ ಬಲವಾದ ಕಾರ್ಯವಿಧಾನದ ಕೊರತೆಯ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದರು.

“ಮನಮೋಹನ್ ಸಿಂಗ್ ತಾರತಮ್ಯ ನೀತಿಯನ್ನು ಮುರಿಯಲು ಪ್ರಯತ್ನಿಸಿದ್ದರು. ನೀವು (ಬಿಜೆಪಿ) ಆ ಕಾರ್ಯಕ್ರಮವನ್ನು ಹಳಿತಪ್ಪಿಸಲು ಪ್ರಯತ್ನಿಸಿದ್ದೀರಿ” ಎಂದು ತಿವಾರಿ ಹೇಳಿದರು. ಮಸೂದೆಯನ್ನು ಜೆಪಿಸಿ ಅಥವಾ ಸ್ಥಾಯಿ ಸಮಿತಿಗೆ ಕಳುಹಿಸಬೇಕು ಎಂದು ಒತ್ತಾಯಿಸಿದರು.

“ಖಾಸಗಿ ಸಮೂಹವೊಂದು ಭಾರತದಲ್ಲಿ ಪರಮಾಣು ಇಂಧನ ವಲಯವನ್ನು ಪ್ರವೇಶಿಸುವ ಯೋಜನೆಯನ್ನು ಘೋಷಿಸಿದ ಒಂದು ತಿಂಗಳ ನಂತರ ಈ ಮಸೂದೆಯನ್ನು ಅಂಗೀಕರಿಸಲಾಗಿದೆ ಎಂದು ತಿವಾರಿ ಆರೋಪಿಸಿದರು. ಇದು ಕಾಕತಾಳೀಯವೇ? ಎಂದು ಪ್ರಶ್ನಿಸಿದರು. ಇದಕ್ಕೆ ಆಡಳಿತ ಪಕ್ಷದವರು ಆಕ್ಷೇಪ ವ್ಯಕ್ತಪಡಿಸಿದರು. ಮಸೂದೆ ಮಂಡಿಸಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಈ ಆರೋಪವನ್ನು ‘ಆಧಾರರಹಿತ ಮತ್ತು ರಾಜಕೀಯ ಪ್ರೇರಿತ’ ಎಂದು ಹೇಳಿದರು.

ತೃಣಮೂಲ ಕಾಂಗ್ರೆಸ್ ಸಂಸದ ಸೌಗತ ರೇ ಅವರು ಭಾರತದ ಪರಮಾಣು ಇಂಧನ ಕ್ಷೇತ್ರದಲ್ಲಿ ಪ್ರಮುಖ ಖಾಸಗಿ ಕಂಪನಿಗಳ ಪ್ರವೇಶವನ್ನು ವಿರೋಧಿಸಿದರು ಮತ್ತು ಹೊಣೆಗಾರಿಕೆ ಮಿತಿಯನ್ನು ಹೆಚ್ಚಿಸಬೇಕೆಂದು ಒತ್ತಾಯಿಸಿದರು.

ಸಿಪಿಐ(ಎಂಎಲ್) ಸಂಸದ ಸುದಾಮ ಪ್ರಸಾದ್, ಶಾಂತಿ ಮಸೂದೆ “ಸಾರ್ವಜನಿಕ ವಿರೋಧಿ, ಪರಿಸರ ವಿರೋಧಿ” ಮತ್ತು “ಖಾಸಗಿ ಸಂಸ್ಥೆಗಳಿಗೆ ಲಾಭ ಮಾಡಿಕೊಡುವ ಪ್ರಯತ್ತ ಎಂದರು. ಸರ್ಕಾರ ಭಾರತದ ಇಂಧನ ಅವಶ್ಯಕತೆಗಳನ್ನು ಪೂರೈಸಲು ಅಸಮರ್ಥವಾಗಿದೆಯೇ? ಎಂದು ಪ್ರಶ್ನಿಸಿದರು. ಇಂತಹ ಸೂಕ್ಷ್ಮ ಇಂಧನ ಮೂಲವನ್ನು ಖಾಸಗಿ ವಲಯಕ್ಕೆ ಹಸ್ತಾಂತರಿಸುವುದು ‘ಏಕಸ್ವಾಮ್ಯ’ಕ್ಕೆ ಕಾರಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಬಿಜು ಜನತಾದಳದ (ಬಿಜೆಡಿ) ಸಂಸದ ರವೀಂದ್ರ ನಾರಾಯಣ್ ಬೆಹೆರಾ ಮಸೂದೆಯನ್ನು ಬೆಂಬಲಿಸಿದರು. “ಬಲವಾದ ಸಂಶೋಧನೆ ಮತ್ತು ಅಭಿವೃದ್ಧಿಯೊಂದಿಗೆ, ಭಾರತವು ಪರಮಾಣು ತಂತ್ರಜ್ಞಾನದಲ್ಲಿ ಸ್ವಾವಲಂಬನೆಯನ್ನು ಸಾಧಿಸಲು ಸಾಧ್ಯವಾಗಿದೆ ಮತ್ತು ಪರಮಾಣು ಕಾರ್ಯಕ್ರಮವನ್ನು ಜವಾಬ್ದಾರಿಯುತ ರೀತಿಯಲ್ಲಿ ನಿರ್ವಹಿಸುತ್ತಿದೆ” ಎಂದು ಅವರು ಹೇಳಿದರು. ಇಂಧನ ಕ್ಷೇತ್ರದ ವೈವಿಧ್ಯೀಕರಣವು ಗ್ರಾಹಕರಿಗೆ ವಿದ್ಯುತ್ ಬೆಲೆಗಳನ್ನು ಕಡಿಮೆ ಮಾಡಲು ಕಾರಣವಾಗಬಹುದು ಎಂದರು. ಈ ಮಸೂದೆ ಖಂಡಿತವಾಗಿಯೂ ನವ ಭಾರತ ನಿರ್ಮಾಣಕ್ಕೆ ಸಹಾಯ ಮಾಡುತ್ತದೆ ಎಂದು ಹೇಳಿದರು.

ಸಮಾಜವಾದಿ ಪಕ್ಷದ ಸಂಸದರಾದ ಆದಿತ್ಯ ಯಾದವ್ ಮತ್ತು ಪುಷ್ಪೇಂದ್ರ ಸರೋಜ್ ಅವರು ಮಸೂದೆಯು ಸರಿಯಾದ ತ್ಯಾಜ್ಯ ವಿಲೇವಾರಿಗೆ ಬದ್ಧವಾಗಿಲ್ಲ ಎಂಬಂತಹ ವಿವಿಧ ಆಧಾರದ ಮೇಲೆ ಮಸೂದೆಯನ್ನು ವಿರೋಧಿಸಿದರು ಮತ್ತು 2008ರಲ್ಲಿ ಬಿಜೆಪಿ ವಿರೋಧ ಪಕ್ಷದಲ್ಲಿದ್ದಾಗ ಭಾರತ-ಯುಎಸ್ ಪರಮಾಣು ಒಪ್ಪಂದವನ್ನು ವಿರೋಧಿಸಿತ್ತು ಎಂದು ಗಮನಸೆಳೆದರು.

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ಈ ಮಸೂದೆ ‘ನ್ಯೂಕ್ಲಿಯರ್ ಅಲ್ಲ, ಅನ್‌ಕ್ಲಿಯರ್’ ಮತ್ತು ಅಪಾಯಕಾರಿ ಮಸೂದೆ ಎಂದರು. ಮಸೂದೆಯನ್ನು ಸ್ಥಾಯಿ ಸಮಿತಿ ಅಥವಾ ಜೆಪಿಸಿಗೆ ಕಳುಹಿಸಬೇಕೆಂದು ಆಗ್ರಹಿಸಿದರು.

ಮಸೂದೆ ಮಂಡಿಸಿದ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಹೊಸ ಮಸೂದೆಯು 1962ರ ಪರಮಾಣು ಶಕ್ತಿ ಕಾಯ್ದೆ ಮತ್ತು 2010ರ ಪರಮಾಣು ಹಾನಿಗೆ ನಾಗರಿಕ ಹೊಣೆಗಾರಿಕೆ ಕಾಯ್ದೆಯನ್ನು ರದ್ದುಗೊಳಿಸುತ್ತದೆ. ಅವುಗಳನ್ನು ‘ಭಾರತದ ಪ್ರಸ್ತುತ ಮತ್ತು ಭವಿಷ್ಯದ ಇಂಧನ ಅವಶ್ಯಕತೆಗಳಿಗೆ ಹೊಂದಿಕೆಯಾಗುವ ಒಂದೇ, ಸಮಗ್ರ ಕಾನೂನೊಂದಿಗೆ’ ಬದಲಾಯಿಸಲು ಪ್ರಯತ್ನಿಸುತ್ತದೆ ಎಂದು ಹೇಳಿದರು.

ಮಸೂದೆಯು “ಪರಮಾಣು ಹಾನಿಗೆ ಪ್ರಾಯೋಗಿಕ ನಾಗರಿಕ ಹೊಣೆಗಾರಿಕೆ ಆಡಳಿತವನ್ನು ಮತ್ತು ಪರಮಾಣು ಶಕ್ತಿ ನಿಯಂತ್ರಣ ಮಂಡಳಿಗೆ ಶಾಸನಬದ್ಧ ಸ್ಥಾನಮಾನವನ್ನು ನೀಡಲು” ಅನುಮತಿಸುತ್ತದೆ ಎಂದು ಪ್ರತಿಪಾದಿಸಿದರು.

ಶಾಂತಿ ಮಸೂದೆಯು ಖಾಸಗಿ ಕಂಪನಿ ಅಥವಾ ಸರ್ಕಾರಿ ಉದ್ಯಮ ಅಥವಾ ಜಂಟಿ ಉದ್ಯಮಕ್ಕೆ ಪರಮಾಣು ವಿದ್ಯುತ್ ಯೋಜನೆ ಅಥವಾ ರಿಯಾಕ್ಟರ್ ನಿರ್ಮಿಸಲು, ಹೊಂದಲು, ನಿರ್ವಹಿಸಲು ಅಥವಾ ರದ್ದುಗೊಳಿಸಲು, ಸಾಗಿಸಬಹುದಾದ ಯುರೇನಿಯಂ -235 ರ ಪರಿವರ್ತನೆ, ಸಂಸ್ಕರಣೆ ಮತ್ತು ಪುಷ್ಟೀಕರಣ ಸೇರಿದಂತೆ ಪರಮಾಣು ಇಂಧನ ತಯಾರಿಕೆ, ಪರಮಾಣು ಇಂಧನದ ಆಮದು, ರಫ್ತು, ಸ್ವಾಧೀನ ಅಥವಾ ಸ್ವಾಧೀನಕ್ಕಾಗಿ ಪರವಾನಗಿಗಳನ್ನು ನೀಡಲು ಕೇಂದ್ರಕ್ಕೆ ಅವಕಾಶ ನೀಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...