Homeಮುಖಪುಟಅಣು ಶಕ್ತಿಯ ಖಾಸಗೀಕರಣ : 'ಶಾಂತಿ' ಮಸೂದೆಗೆ ಲೋಕಸಭೆ ಅಸ್ತು

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಖಾಸಗಿ ಕಂಪನಿಯೊಂದು ಪರಮಾಣು ಇಂಧನ ವಲಯ ಪ್ರವೇಶಿಸುವ ಯೋಜನೆ ಘೋಷಿಸಿದ ಬೆನ್ನಲ್ಲೇ ಮಸೂದೆ ಮಂಡನೆ- ಕಾಂಗ್ರೆಸ್ ಸಂಸದ ಮನೀಶ್ ತಿವಾರಿ

- Advertisement -
- Advertisement -

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು.

ವಿಪಕ್ಷಗಳ ಸದಸ್ಯರು ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಭಾರತೀಯ ಪರಮಾಣು ಇಂಧನ ವಲಯದಲ್ಲಿ ಖಾಸಗಿ ಕಂಪನಿಗಳ ಪ್ರವೇಶವು ಅವುಗಳ ಲಾಭಗಳಿಕೆಗೆ ಮಾತ್ರ ಸಹಾಯ ಮಾಡುತ್ತದೆ. ಹೆಚ್ಚಿನ ವಿದ್ಯುತ್ ಬೆಲೆಗಳ ಹೊರೆಯನ್ನು ಹೊರುತ್ತಿರುವ ಸಾಮಾನ್ಯ ಜನರಿಗೆ ಇದರಿಂದ ಯಾವುದೇ ಉಪಯೋಗ ಇಲ್ಲ ಎಂದು ಹೆಚ್ಚಿನ ಸಂಸದರು ಹೇಳಿದರು.

ಮಸೂದೆಯನ್ನು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಥವಾ ಸ್ಥಾಯಿ ಸಮಿತಿಗೆ ಕಳುಹಿಸಬೇಕೆಂಬ ಬೇಡಿಕೆಯನ್ನು ಪುರಸ್ಕರಿಸದ ಕಾರಣ, ಮಸೂದೆ ಅಂಗೀಕಾರವಾದಾಗ ಇಂಡಿಯಾ ಒಕ್ಕೂಟದ ಸಂಸದರು ಸಭಾತ್ಯಾಗ ಮಾಡಿದರು.

ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಮಾತನಾಡಿ, ಶಾಂತಿ ಮಸೂದೆಯು ಅಸ್ತಿತ್ವದಲ್ಲಿರುವ ಎರಡು ಪ್ರಗತಿಪರ ಶಾಸನಗಳನ್ನು ಬದಲಾಯಿಸುತ್ತಿದೆ ಎಂದು ವಿವರಿಸುತ್ತಾ ಮಸೂದೆಯ ವಿರೋಧಕ್ಕೆ ಮುಕ್ತವಾಗಿ ಧ್ವನಿಗೂಡಿಸಿದರು.

ಸ್ವಾವಲಂಬನೆಯ ಕಡೆಗೆ ಭಾರತದ ಪರಮಾಣು ಕಾರ್ಯಕ್ರಮವನ್ನು ಮೊದಲು ಪರಿಚಯಿಸಿದ್ದು ಜವಾಹರಲಾಲ್ ನೆಹರು ಎಂದು ಅವರು ನೆನಪಿಸಿಕೊಂಡರು.

ಪರಮಾಣು ಅಪಘಾತಗಳಿಗೆ ಪೂರೈಕೆದಾರರನ್ನು ಹೊಣೆಗಾರರನ್ನಾಗಿ ಮಾಡುವ ಪರಮಾಣು ಹೊಣೆಗಾರಿಕೆ ಆಡಳಿತದ ಕುರಿತು 2010ರ ಒಪ್ಪಂದವನ್ನು ಮುರಿಯುವ ಮೂಲಕ ಬಿಜೆಪಿ ನೇತೃತ್ವದ ಸರ್ಕಾರವು ಭಾರತದ ಇಂಧನ ಸ್ವಾತಂತ್ರ್ಯ ಮತ್ತು ಶುದ್ಧ ಇಂಧನ ಗುರಿಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಹೇಳಿದರು.

“ಪರಮಾಣು ಶಕ್ತಿ ನಿಯಂತ್ರಕದ ಪಾತ್ರದ ಬಗ್ಗೆ ಸ್ಪಷ್ಟತೆಯನ್ನು ನೀಡದಿದ್ದಕ್ಕಾಗಿ” ಅವರು ಕರಡು ಮಸೂದೆಯ ಪ್ರತಿಯನ್ನು ಹರಿದು ಹಾಕಿದರು.

ಪರಮಾಣು ಇಂಧನ ವಲಯದಲ್ಲಿ ವಿದೇಶಿ ಕಂಪನಿಗಳ ಪ್ರವೇಶವನ್ನು ತಿವಾರಿ ವಿರೋಧಿಸದಿದ್ದರೂ, ಪೂರೈಕೆದಾರರ ಹೊಣೆಗಾರಿಕೆಯನ್ನು ನಿಗದಿಪಡಿಸಬೇಕು ಮತ್ತು ಮುಖ್ಯವಾಗಿ, ಪರಮಾಣು ಇಂಧನ ನಿಯಂತ್ರಣ ಮಂಡಳಿಯ ಸ್ವಾತಂತ್ರ್ಯವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಈ ಎರಡೂ ಕಳವಳಗಳನ್ನು ಮಸೂದೆ ಪರಿಹರಿಸಿಲ್ಲ ಎಂದು ತಿವಾರಿ ಅಸಮಾಧಾನ ವ್ಯಕ್ತಪಡಿಸಿದರು.

“ನಾವು ವಿದೇಶಿ ಪೂರೈಕೆದಾರರ ಮೇಲೆ ಅವಲಂಬಿತರಾಗಿರುವುದರಿಂದ ಪರಮಾಣು ಅಪಘಾತ ಸಂಭವಿಸಿದರೆ… ಪೂರೈಕೆದಾರರು ಹೊಣೆಗಾರರಾಗಬೇಕಲ್ಲವೇ?” ಎಂದು ಅವರು ಕೇಳಿದರು.

ಮಸೂದೆಯಲ್ಲಿ ನಿಗದಿಪಡಿಸಿದ ಹೊಣೆಗಾರಿಕೆಯ ಮೇಲಿನ 410 ಮಿಲಿಯನ್ ಡಾಲರ್ ಮಿತಿಯನ್ನು ಅವರು ಟೀಕಿಸಿದರು. ಭೋಪಾಲ್ ಅನಿಲ ದುರಂತದ ಸಮಯದಲ್ಲಿ ಮಿತಿ 470 ಮಿಲಿಯನ್ ಡಾಲರ್ ಆಗಿತ್ತು ಎಂದ ಅವರು, 10,000 ಕೋಟಿ ರೂ.ಗಳ ಮಿತಿಗೆ ಒತ್ತಾಯಿಸಿದರು.

ಸರ್ಕಾರ ನಡೆಸುವ ಸಂಸ್ಥೆಗಳಿಗೆ ವಿಮಾ ರಕ್ಷಣೆಯಿಂದ ವಿನಾಯಿತಿ ನೀಡಲಾಗುವುದು ಎಂಬ ಷರತ್ತನ್ನು ಅವರು ವಿರೋಧಿಸಿದರು. ದುರಂತದ ಸಂದರ್ಭದಲ್ಲಿ ಪರಿಹಾರವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸುತ್ತದೆಯೇ ಎಂದು ಕೇಳಿದರು. ಮಸೂದೆಯಲ್ಲಿ ಪರಮಾಣು ತ್ಯಾಜ್ಯ ವಿಲೇವಾರಿಗೆ ಬಲವಾದ ಕಾರ್ಯವಿಧಾನದ ಕೊರತೆಯ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದರು.

“ಮನಮೋಹನ್ ಸಿಂಗ್ ತಾರತಮ್ಯ ನೀತಿಯನ್ನು ಮುರಿಯಲು ಪ್ರಯತ್ನಿಸಿದ್ದರು. ನೀವು (ಬಿಜೆಪಿ) ಆ ಕಾರ್ಯಕ್ರಮವನ್ನು ಹಳಿತಪ್ಪಿಸಲು ಪ್ರಯತ್ನಿಸಿದ್ದೀರಿ” ಎಂದು ತಿವಾರಿ ಹೇಳಿದರು. ಮಸೂದೆಯನ್ನು ಜೆಪಿಸಿ ಅಥವಾ ಸ್ಥಾಯಿ ಸಮಿತಿಗೆ ಕಳುಹಿಸಬೇಕು ಎಂದು ಒತ್ತಾಯಿಸಿದರು.

“ಖಾಸಗಿ ಸಮೂಹವೊಂದು ಭಾರತದಲ್ಲಿ ಪರಮಾಣು ಇಂಧನ ವಲಯವನ್ನು ಪ್ರವೇಶಿಸುವ ಯೋಜನೆಯನ್ನು ಘೋಷಿಸಿದ ಒಂದು ತಿಂಗಳ ನಂತರ ಈ ಮಸೂದೆಯನ್ನು ಅಂಗೀಕರಿಸಲಾಗಿದೆ ಎಂದು ತಿವಾರಿ ಆರೋಪಿಸಿದರು. ಇದು ಕಾಕತಾಳೀಯವೇ? ಎಂದು ಪ್ರಶ್ನಿಸಿದರು. ಇದಕ್ಕೆ ಆಡಳಿತ ಪಕ್ಷದವರು ಆಕ್ಷೇಪ ವ್ಯಕ್ತಪಡಿಸಿದರು. ಮಸೂದೆ ಮಂಡಿಸಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಈ ಆರೋಪವನ್ನು ‘ಆಧಾರರಹಿತ ಮತ್ತು ರಾಜಕೀಯ ಪ್ರೇರಿತ’ ಎಂದು ಹೇಳಿದರು.

ತೃಣಮೂಲ ಕಾಂಗ್ರೆಸ್ ಸಂಸದ ಸೌಗತ ರೇ ಅವರು ಭಾರತದ ಪರಮಾಣು ಇಂಧನ ಕ್ಷೇತ್ರದಲ್ಲಿ ಪ್ರಮುಖ ಖಾಸಗಿ ಕಂಪನಿಗಳ ಪ್ರವೇಶವನ್ನು ವಿರೋಧಿಸಿದರು ಮತ್ತು ಹೊಣೆಗಾರಿಕೆ ಮಿತಿಯನ್ನು ಹೆಚ್ಚಿಸಬೇಕೆಂದು ಒತ್ತಾಯಿಸಿದರು.

ಸಿಪಿಐ(ಎಂಎಲ್) ಸಂಸದ ಸುದಾಮ ಪ್ರಸಾದ್, ಶಾಂತಿ ಮಸೂದೆ “ಸಾರ್ವಜನಿಕ ವಿರೋಧಿ, ಪರಿಸರ ವಿರೋಧಿ” ಮತ್ತು “ಖಾಸಗಿ ಸಂಸ್ಥೆಗಳಿಗೆ ಲಾಭ ಮಾಡಿಕೊಡುವ ಪ್ರಯತ್ತ ಎಂದರು. ಸರ್ಕಾರ ಭಾರತದ ಇಂಧನ ಅವಶ್ಯಕತೆಗಳನ್ನು ಪೂರೈಸಲು ಅಸಮರ್ಥವಾಗಿದೆಯೇ? ಎಂದು ಪ್ರಶ್ನಿಸಿದರು. ಇಂತಹ ಸೂಕ್ಷ್ಮ ಇಂಧನ ಮೂಲವನ್ನು ಖಾಸಗಿ ವಲಯಕ್ಕೆ ಹಸ್ತಾಂತರಿಸುವುದು ‘ಏಕಸ್ವಾಮ್ಯ’ಕ್ಕೆ ಕಾರಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಬಿಜು ಜನತಾದಳದ (ಬಿಜೆಡಿ) ಸಂಸದ ರವೀಂದ್ರ ನಾರಾಯಣ್ ಬೆಹೆರಾ ಮಸೂದೆಯನ್ನು ಬೆಂಬಲಿಸಿದರು. “ಬಲವಾದ ಸಂಶೋಧನೆ ಮತ್ತು ಅಭಿವೃದ್ಧಿಯೊಂದಿಗೆ, ಭಾರತವು ಪರಮಾಣು ತಂತ್ರಜ್ಞಾನದಲ್ಲಿ ಸ್ವಾವಲಂಬನೆಯನ್ನು ಸಾಧಿಸಲು ಸಾಧ್ಯವಾಗಿದೆ ಮತ್ತು ಪರಮಾಣು ಕಾರ್ಯಕ್ರಮವನ್ನು ಜವಾಬ್ದಾರಿಯುತ ರೀತಿಯಲ್ಲಿ ನಿರ್ವಹಿಸುತ್ತಿದೆ” ಎಂದು ಅವರು ಹೇಳಿದರು. ಇಂಧನ ಕ್ಷೇತ್ರದ ವೈವಿಧ್ಯೀಕರಣವು ಗ್ರಾಹಕರಿಗೆ ವಿದ್ಯುತ್ ಬೆಲೆಗಳನ್ನು ಕಡಿಮೆ ಮಾಡಲು ಕಾರಣವಾಗಬಹುದು ಎಂದರು. ಈ ಮಸೂದೆ ಖಂಡಿತವಾಗಿಯೂ ನವ ಭಾರತ ನಿರ್ಮಾಣಕ್ಕೆ ಸಹಾಯ ಮಾಡುತ್ತದೆ ಎಂದು ಹೇಳಿದರು.

ಸಮಾಜವಾದಿ ಪಕ್ಷದ ಸಂಸದರಾದ ಆದಿತ್ಯ ಯಾದವ್ ಮತ್ತು ಪುಷ್ಪೇಂದ್ರ ಸರೋಜ್ ಅವರು ಮಸೂದೆಯು ಸರಿಯಾದ ತ್ಯಾಜ್ಯ ವಿಲೇವಾರಿಗೆ ಬದ್ಧವಾಗಿಲ್ಲ ಎಂಬಂತಹ ವಿವಿಧ ಆಧಾರದ ಮೇಲೆ ಮಸೂದೆಯನ್ನು ವಿರೋಧಿಸಿದರು ಮತ್ತು 2008ರಲ್ಲಿ ಬಿಜೆಪಿ ವಿರೋಧ ಪಕ್ಷದಲ್ಲಿದ್ದಾಗ ಭಾರತ-ಯುಎಸ್ ಪರಮಾಣು ಒಪ್ಪಂದವನ್ನು ವಿರೋಧಿಸಿತ್ತು ಎಂದು ಗಮನಸೆಳೆದರು.

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ಈ ಮಸೂದೆ ‘ನ್ಯೂಕ್ಲಿಯರ್ ಅಲ್ಲ, ಅನ್‌ಕ್ಲಿಯರ್’ ಮತ್ತು ಅಪಾಯಕಾರಿ ಮಸೂದೆ ಎಂದರು. ಮಸೂದೆಯನ್ನು ಸ್ಥಾಯಿ ಸಮಿತಿ ಅಥವಾ ಜೆಪಿಸಿಗೆ ಕಳುಹಿಸಬೇಕೆಂದು ಆಗ್ರಹಿಸಿದರು.

ಮಸೂದೆ ಮಂಡಿಸಿದ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಹೊಸ ಮಸೂದೆಯು 1962ರ ಪರಮಾಣು ಶಕ್ತಿ ಕಾಯ್ದೆ ಮತ್ತು 2010ರ ಪರಮಾಣು ಹಾನಿಗೆ ನಾಗರಿಕ ಹೊಣೆಗಾರಿಕೆ ಕಾಯ್ದೆಯನ್ನು ರದ್ದುಗೊಳಿಸುತ್ತದೆ. ಅವುಗಳನ್ನು ‘ಭಾರತದ ಪ್ರಸ್ತುತ ಮತ್ತು ಭವಿಷ್ಯದ ಇಂಧನ ಅವಶ್ಯಕತೆಗಳಿಗೆ ಹೊಂದಿಕೆಯಾಗುವ ಒಂದೇ, ಸಮಗ್ರ ಕಾನೂನೊಂದಿಗೆ’ ಬದಲಾಯಿಸಲು ಪ್ರಯತ್ನಿಸುತ್ತದೆ ಎಂದು ಹೇಳಿದರು.

ಮಸೂದೆಯು “ಪರಮಾಣು ಹಾನಿಗೆ ಪ್ರಾಯೋಗಿಕ ನಾಗರಿಕ ಹೊಣೆಗಾರಿಕೆ ಆಡಳಿತವನ್ನು ಮತ್ತು ಪರಮಾಣು ಶಕ್ತಿ ನಿಯಂತ್ರಣ ಮಂಡಳಿಗೆ ಶಾಸನಬದ್ಧ ಸ್ಥಾನಮಾನವನ್ನು ನೀಡಲು” ಅನುಮತಿಸುತ್ತದೆ ಎಂದು ಪ್ರತಿಪಾದಿಸಿದರು.

ಶಾಂತಿ ಮಸೂದೆಯು ಖಾಸಗಿ ಕಂಪನಿ ಅಥವಾ ಸರ್ಕಾರಿ ಉದ್ಯಮ ಅಥವಾ ಜಂಟಿ ಉದ್ಯಮಕ್ಕೆ ಪರಮಾಣು ವಿದ್ಯುತ್ ಯೋಜನೆ ಅಥವಾ ರಿಯಾಕ್ಟರ್ ನಿರ್ಮಿಸಲು, ಹೊಂದಲು, ನಿರ್ವಹಿಸಲು ಅಥವಾ ರದ್ದುಗೊಳಿಸಲು, ಸಾಗಿಸಬಹುದಾದ ಯುರೇನಿಯಂ -235 ರ ಪರಿವರ್ತನೆ, ಸಂಸ್ಕರಣೆ ಮತ್ತು ಪುಷ್ಟೀಕರಣ ಸೇರಿದಂತೆ ಪರಮಾಣು ಇಂಧನ ತಯಾರಿಕೆ, ಪರಮಾಣು ಇಂಧನದ ಆಮದು, ರಫ್ತು, ಸ್ವಾಧೀನ ಅಥವಾ ಸ್ವಾಧೀನಕ್ಕಾಗಿ ಪರವಾನಗಿಗಳನ್ನು ನೀಡಲು ಕೇಂದ್ರಕ್ಕೆ ಅವಕಾಶ ನೀಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...