Homeಮುಖಪುಟತಪ್ಪು ಮಾಡದೆ ಜೈಲಿನಲ್ಲಿದ್ದಾರೆ: ದಿಶಾ ರವಿಯನ್ನು ಬೆಂಬಲಿಸಿದ ಪತ್ರಕರ್ತೆ ಪ್ರಿಯಾ ರಮಣಿ

ತಪ್ಪು ಮಾಡದೆ ಜೈಲಿನಲ್ಲಿದ್ದಾರೆ: ದಿಶಾ ರವಿಯನ್ನು ಬೆಂಬಲಿಸಿದ ಪತ್ರಕರ್ತೆ ಪ್ರಿಯಾ ರಮಣಿ

ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ದಾಖಲಾದ ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧದ ಮಾನಹಾನಿ ಪ್ರಕರಣವನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ

- Advertisement -
- Advertisement -

ರೈತರ ಪ್ರತಿಭಟನೆಗೆ ಸಂಬಂಧಿಸಿದ ಟೂಲ್‌ಕಿಟ್ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಮೂಲದ ದಿಶಾ ರವಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಪತ್ರಕರ್ತೆ ಪ್ರಿಯಾ ರಮಣಿ, “ತಮ್ಮದಲ್ಲದ ತಪ್ಪಿಗೆ ಜೈಲಿನಲ್ಲಿರುವ ದಿಶಾ ರವಿ ಮತ್ತು ಇತರ ಮಹಿಳೆಯರ ಪರವಾಗಿ ನಮ್ಮ ಚಿಂತನೆಗಳಿರುತ್ತವೆ” ಎಂದು ಹೇಳಿದ್ದಾರೆ.

ಈ ಕುರಿತು ಪ್ರಿಯಾ ರಮಣಿಯವರ ಹೇಳಿಕೆಯನ್ನು ಎನ್‌ಡಿಟಿವಿ ವರದಿ ಮಾಡಿದೆ. ದಿಶಾ ರವಿಯವರ ಬಂಧನವನ್ನು ಖಂಡಿಸಿ ಜಗತ್ತಿನಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ದಿಶಾ ರವಿಯನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ
ಪ್ರಿಯಾ ರಮಣಿ ಯಾರು?

ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ದಾಖಲಾದ ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧದ ಮಾನಹಾನಿ ಪ್ರಕರಣವನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ. ಪ್ರಿಯಾ ರಮಣಿ ಮೇಲಿನ ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿರುವ ಕೋರ್ಟ್ “ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಕ್ಕಾಗಿ ಮಹಿಳೆಯರಿಗೆ ಶಿಕ್ಷಿಸಲು ಸಾಧ್ಯವಿಲ್ಲ” ಎಂದು ಹೇಳಿತ್ತು.

2018 ರಲ್ಲಿ ಭಾರಿ ಸದ್ದು ಮಾಡಿದ್ದ #MeToo ವಿವಾದದ ಸಮಯದಲ್ಲಿ, ಮಾಜಿ ಕೇಂದ್ರ ಸಚಿವ ಎಂ.ಜೆ. ಅಕ್ಬರ್‌ ವಿರುದ್ದ ಪತ್ರಕರ್ತೆ ಪ್ರಿಯಾ ರಮಣಿ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಆದರೆ ಪತ್ರಕರ್ತೆಯ ವಿರುದ್ಧ ಅಕ್ಬರ್‌ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದ ಕುರಿತು ದೆಹಲಿ ಕೋರ್ಟ್ ವಿಚಾರಣೆ ನಡೆಸಿ ನಿನ್ನೆ ತೀರ್ಪು ಪ್ರಕಟಿಸಿದೆ.

ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಸಚಿವರಾಗಿದ್ದ ಅಕ್ಬರ್ ಅವರು ರಮಣಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಆದಾದ ಎರಡು ದಿನಗಳ ನಂತರ, ಅಕ್ಟೋಬರ್ 17, 2018 ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ರೈತ ಹೋರಾಟದ ಆಕ್ರೋಶ: ಪಂಜಾಬ್‌ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ

“ಭಾರತೀಯ ಸಂವಿಧಾನವು ಮಹಿಳೆಯರಿಗೆ ತನ್ನ ಕುಂದುಕೊರತೆಗಳನ್ನು ಯಾವುದೇ ವೇದಿಕೆಯ ಮುಂದೆ ಮತ್ತು ಯಾವುದೇ ಸಮಯದಲ್ಲಿ ಮಂಡಿಸಲು ಅನುವು ಮಾಡಿಕೊಡುತ್ತದೆ “ಎಂದು ನ್ಯಾಯಾಧೀಶರು ತೀರ್ಪಿನ ವೇಳೆ ತಿಳಿಸಿದ್ದಾರೆ.

ಪತ್ರಕರ್ತೆ ಪ್ರಿಯಾ ರಮಣಿ ತಮ್ಮ ಮೇಲೆ ಸುಳ್ಳು ಆರೋಪ ಮಾಡಿದ್ದಾರೆಂದು 2018 ರ ಅಕ್ಟೋಬರ್‌ 15 ರಂದು ಅಕ್ಬರ್‌ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದರು. 2021 ರ ಫೆಬ್ರವರಿ 1 ರಂದು ಎರಡು ಕಡೆಯ ವಾದಗಳನ್ನು ಆಲಿಸಿದ್ದ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಮುಚ್ಚಿದ ಬಾಗಿಲುಗಳ ಹಿಂದೆ ಹೆಚ್ಚಿನ ಬಾರಿ ಲೈಂಗಿಕ ಕಿರುಕುಳ ನಡೆಯುತ್ತಿರುವುದನ್ನು ನಿರ್ಲಕ್ಷಿಸಲಾಗುವುದಿಲ್ಲ … ದುರುಪಯೋಗಕ್ಕೆ ಒಳಗಾಗುವ ಹೆಚ್ಚಿನ ಮಹಿಳೆಯರು ತಮ್ಮ ಮೇಲಿನ ಕಳಂಕ ಮತ್ತು ದಾಳಿಯಿಂದಾಗಿ ಹೆಚ್ಚಾಗಿ ಮಾತನಾಡಲು ಸಾಧ್ಯವಿಲ್ಲ” ಎಂದು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಪಾಂಡೆ ಹೇಳಿದ್ದಾರೆ.

ಲೈಂಗಿಕ ದಾಳಿ ಮತ್ತು ಕಿರುಕುಳಕ್ಕೆ ಒಳಗಾದ ಸಂತ್ರಸ್ಥೆಯ ಮನಸ್ಥಿತಿ ಹೇಗಿರುತ್ತದೆ ಎಂಬುದನ್ನು ಸಮಾಜ ಅರ್ಥಮಾಡಿಕೊಳ್ಳಬೇಕಿದೆ. ಇದು 20 ವರ್ಷದ ಹಿಂದಿನ ಪ್ರಕರಣವಾಗಿರಬಹುದು. ಮಹಿಳೆಯು ತನಗಾದ ಅನ್ಯಾಯದ ವಿರುದ್ಧ ದಶಕಗಳ ನಂತರವೂ ದನಿಯೆತ್ತುವ ಹಕ್ಕು ಹೊಂದಿದ್ದಾಳೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಎಂ.ಜೆ. ಅಕ್ಬರ್ ಏಷ್ಯನ್ ಏಜ್ ಮುಖ್ಯಸ್ಥರಾಗಿದ್ದಾಗ, ಸುಮಾರು 20 ವರ್ಷಗಳ ಹಿಂದೆ ಈ ಲೈಂಗಿಕ ದುಷ್ಕೃತ್ಯ ನಡೆದಿದೆ ಎಂದು ಪತ್ರಿಕೆಯ ಲೇಖನವೊಂದರಲ್ಲಿ ಪ್ರಿಯಾ ರಮಣಿ ಬರೆದಿದ್ದರು. ಉದ್ಯೋಗ ಸಂದರ್ಶನಕ್ಕಾಗಿ ನನ್ನನ್ನು ತಮ್ಮ ಹೋಟೆಲ್ ಮಲಗುವ ಕೋಣೆಗೆ ಕರೆದು ಅಕ್ಬರ್ ಅನುಚಿತವಾಗಿ ವರ್ತಿಸಿದ್ದರು ಎಂದು ರಮಣಿ ಆರೋಪಿಸಿದ್ದರು. ಅವರ ಲೇಖನದ ಪರಿಣಾಮವಾಗಿ, ಸುಮಾರು ಒಂದು ಡಜನ್ ಮಹಿಳೆಯರು ಮಾಜಿ ಸಂಪಾದಕ ಅಕ್ಬರ್ ವಿರುದ್ಧ ಇದೇ ರೀತಿಯ ಆರೋಪಗಳನ್ನು ಹೊರಿಸಿದ್ದರು.


ಇದನ್ನೂ ಓದಿ: ಪೆಟ್ರೋಲ್ ಬೆಲೆ ಏರಿಕೆಗೆ ಹಿಂದಿನ ಸರ್ಕಾರಗಳೇ ಕಾರಣ: ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...