Homeಮುಖಪುಟಉತ್ತರ ಪ್ರದೇಶ ಸರ್ಕಾರಕ್ಕೆ ‘ಅಧಿಕಾರದ ಅಹಂಕಾರ’ವಿದೆ: ಪ್ರಿಯಾಂಕಾ ಗಾಂಧಿ 

ಉತ್ತರ ಪ್ರದೇಶ ಸರ್ಕಾರಕ್ಕೆ ‘ಅಧಿಕಾರದ ಅಹಂಕಾರ’ವಿದೆ: ಪ್ರಿಯಾಂಕಾ ಗಾಂಧಿ 

- Advertisement -
- Advertisement -

ಚಿನ್ಮಯಾನಂದ್ ವಿರುದ್ಧದ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿಕಾರಿದ್ದಾರೆ. ಕೇಂದ್ರದ ಮಾಜಿ ಸಚಿವ ಚಿನ್ಮಯಾನಂದ್ ಮೇಲೆ ಅತ್ಯಾಚಾರ ಆರೋಪ ಹೊರಿಸಿದ್ದ ಕಾನೂನು ವಿದ್ಯಾರ್ಥಿಯನ್ನು ಬಂಧಿಸುವುದರ ವಿರುದ್ಧ ಕಾಂಗ್ರೆಸ್ ‘ನ್ಯಾಯ ಯಾತ್ರೆ’ ಯೋಜಿಸಿತ್ತು.

ಮಾಜಿ ಸಚಿವ ಜಿತಿನ್ ಪ್ರಸಾದ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರನ್ನು ಮೆರವಣಿಗೆಗೆ ಮುಂಚಿತವಾಗಿ ರ್‍ಯಾಲಿ ನಡೆಸುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.

“ಅಧಿಕಾರದ ದುರಹಂಕಾರ” ದಲ್ಲಿ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದೆ ಎಂದಿರುವ ಪ್ರಿಯಾಂಕಾ ಗಾಂಧಿ, “ಇದು (ಬಿಜೆಪಿ ಸರ್ಕಾರ) ಅತ್ಯಾಚಾರ ಆರೋಪಿಗಳನ್ನು ಉಳಿಸಲು ಮತ್ತು ಶಹಜಹಾನ್ಪುರದ ಮಗಳ ಧ್ವನಿಯನ್ನು ನಿಗ್ರಹಿಸಲು ಯಾವುದೇ ಮಟ್ಟಕ್ಕೆ ಬೇಕಾದರೂ ಹೋಗಬಹುದು” ಎಂದು ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರವು ನಮ್ಮ ಹೋರಾಟಕ್ಕೆ ಹೆದರಿದೆ. ಹಾಗಾಗಿ ಅವರ ವಿರುದ್ಧದ ಪ್ರತಿಭಟನೆಯ ಬಗ್ಗೆ ತಿಳಿದಾಗಲೆಲ್ಲಾ ಸಿಆರ್ಪಿಸಿಯ ಸೆಕ್ಷನ್ 144 ಅನ್ನು ವಿಧಿಸುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

“ಜನರ ಧ್ವನಿಯನ್ನು ನಿಗ್ರಹಿಸಲು ಸಾಧ್ಯವಿಲ್ಲ. ಶಹಜಹಾನ್ಪುರದ ಹುಡುಗಿಗೆ ನ್ಯಾಯ ನೀಡಿ. ನಿಮ್ಮ ಮಂತ್ರಿಯನ್ನು ಉಳಿಸುವುದನ್ನು ನಿಲ್ಲಿಸಿ” ಎಂದು ಒತ್ತಾಯಿಸಿದ್ದಾರೆ.

ಇಂದು ಬನಾರಸ್‌ನಲ್ಲಿ ದುಷ್ಕರ್ಮಿಗಳು ಬಹಿರಂಗವಾಗಿ 6 ಗುಂಡುಗಳನ್ನು ಹೊಡೆದು ವ್ಯಕ್ತಿಯನ್ನು ಕೊಂದಿದ್ದಾರೆ. ಬಿಜೆಪಿ ಸರ್ಕಾರವು ಆಡಳಿತದ ಸಂಪೂರ್ಣ ಕುಸಿದಿದೆ. ಇಲ್ಲಿ ಅಪರಾಧಿಗಳಿಗೆ ಎಸಿ ಕೊಠಡಿಗಳಿವೆ, ಅನಿಯಂತ್ರಿತ ಅಪರಾಧಗಳನ್ನು ಮಾಡಲು ಮುಕ್ತ ಅವಕಾಶವಿದೆ ಎಂದು ಅವರು ಕಿಡಿಕಾರಿದ್ದಾರೆ.

ಯುಪಿಯ ಬಿಜೆಪಿ ಸರ್ಕಾರ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯವೆಸಗಿದ ದುಷ್ಕರ್ಮಿಗಳ ಪರ ನಿಂತಿದೆ. ಪ್ರತಿಭಟನಾ ನಿರತ ಕಾಂಗ್ರೆಸ್ಸಿಗರನ್ನು ವಶಕ್ಕೆ ತೆಗೆದುಕೊಳ್ಳುತ್ತಿದೆ. ಆದರೆ ಈ ಹೋರಾಟದ ಹಾದಿಯಲ್ಲಿ, ನಮ್ಮ ಸಹಚರರು ಬೀದಿಗಳಲ್ಲಿ ನಿಂತು ದಬ್ಬಾಳಿಕೆಯನ್ನು ಎದುರಿಸುತ್ತಾರೆ. ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಹಬ್ಬದ ಸಮಯದಲ್ಲಿ “ಕಾನೂನು ಸುವ್ಯವಸ್ಥೆ” ಯನ್ನು ಕಾಪಾಡಿಕೊಳ್ಳಲು ಕಾಂಗ್ರೆಸ್ ನಾಯಕರಿಗೆ ಭಾನುವಾರದಂದು ಪ್ರತಿಭಟನೆಗೆ ಅನುಮತಿ ನಿರಾಕರಿಸಲಾಗಿದೆ ಎಂದು ಯುಪಿ ಸರ್ಕಾರ ಹೇಳಿದೆ.

ಹುಡುಗಿಯ ತಂದೆ ಪ್ರಿಯಾಂಕಾ ಗಾಂಧಿಗೆ ಸಹಾಯ ಕೋರಿ ಪತ್ರ ಬರೆದಿದ್ದರು. “ಚಿನ್ಮಯಾನಂದ್ ಅವರ ರಾಜಕೀಯ ಪ್ರಭಾವದಿಂದಾಗಿ ನನ್ನ ಮಗಳನ್ನು ತನಿಖಾ ಸಂಸ್ಥೆ ತಪ್ಪಾಗಿ ನಡೆಸಿಕೊಳ್ಳುತ್ತಿದೆ. ಅತ್ಯಾಚಾರಕ್ಕಾಗಿ  ಚಿನ್ನಮಯಾನಂದ್ ಮೇಲೆ ಕೇಸು ದಾಖಲಿಸುವಂತೆ ನಾನು ನಿಮ್ಮಲ್ಲಿ ವಿನಂತಿಸುತ್ತೇನೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಸರ್ಕಾರದ ಮಾಜಿ ಕೇಂದ್ರ ಸಚಿವರಾಗಿದ್ದ ಚಿನ್ಮಯಾನಂದ್ ಅವರನ್ನು ಯುಪಿ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ಸೆಪ್ಟೆಂಬರ್ 20 ರಂದು ಬಂಧಿಸಿತ್ತು. ಆತನ ಮೇಲೆ ಇನ್ನೂ ಅತ್ಯಾಚಾರ ಆರೋಪ ಹೊರಿಸಲಾಗಿಲ್ಲ. ಅವರು ಪ್ರಸ್ತುತ ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...