Homeಮುಖಪುಟಉತ್ತರ ಪ್ರದೇಶ ಸರ್ಕಾರಕ್ಕೆ ‘ಅಧಿಕಾರದ ಅಹಂಕಾರ’ವಿದೆ: ಪ್ರಿಯಾಂಕಾ ಗಾಂಧಿ 

ಉತ್ತರ ಪ್ರದೇಶ ಸರ್ಕಾರಕ್ಕೆ ‘ಅಧಿಕಾರದ ಅಹಂಕಾರ’ವಿದೆ: ಪ್ರಿಯಾಂಕಾ ಗಾಂಧಿ 

- Advertisement -
- Advertisement -

ಚಿನ್ಮಯಾನಂದ್ ವಿರುದ್ಧದ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿಕಾರಿದ್ದಾರೆ. ಕೇಂದ್ರದ ಮಾಜಿ ಸಚಿವ ಚಿನ್ಮಯಾನಂದ್ ಮೇಲೆ ಅತ್ಯಾಚಾರ ಆರೋಪ ಹೊರಿಸಿದ್ದ ಕಾನೂನು ವಿದ್ಯಾರ್ಥಿಯನ್ನು ಬಂಧಿಸುವುದರ ವಿರುದ್ಧ ಕಾಂಗ್ರೆಸ್ ‘ನ್ಯಾಯ ಯಾತ್ರೆ’ ಯೋಜಿಸಿತ್ತು.

ಮಾಜಿ ಸಚಿವ ಜಿತಿನ್ ಪ್ರಸಾದ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರನ್ನು ಮೆರವಣಿಗೆಗೆ ಮುಂಚಿತವಾಗಿ ರ್‍ಯಾಲಿ ನಡೆಸುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.

“ಅಧಿಕಾರದ ದುರಹಂಕಾರ” ದಲ್ಲಿ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿದೆ ಎಂದಿರುವ ಪ್ರಿಯಾಂಕಾ ಗಾಂಧಿ, “ಇದು (ಬಿಜೆಪಿ ಸರ್ಕಾರ) ಅತ್ಯಾಚಾರ ಆರೋಪಿಗಳನ್ನು ಉಳಿಸಲು ಮತ್ತು ಶಹಜಹಾನ್ಪುರದ ಮಗಳ ಧ್ವನಿಯನ್ನು ನಿಗ್ರಹಿಸಲು ಯಾವುದೇ ಮಟ್ಟಕ್ಕೆ ಬೇಕಾದರೂ ಹೋಗಬಹುದು” ಎಂದು ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರವು ನಮ್ಮ ಹೋರಾಟಕ್ಕೆ ಹೆದರಿದೆ. ಹಾಗಾಗಿ ಅವರ ವಿರುದ್ಧದ ಪ್ರತಿಭಟನೆಯ ಬಗ್ಗೆ ತಿಳಿದಾಗಲೆಲ್ಲಾ ಸಿಆರ್ಪಿಸಿಯ ಸೆಕ್ಷನ್ 144 ಅನ್ನು ವಿಧಿಸುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

“ಜನರ ಧ್ವನಿಯನ್ನು ನಿಗ್ರಹಿಸಲು ಸಾಧ್ಯವಿಲ್ಲ. ಶಹಜಹಾನ್ಪುರದ ಹುಡುಗಿಗೆ ನ್ಯಾಯ ನೀಡಿ. ನಿಮ್ಮ ಮಂತ್ರಿಯನ್ನು ಉಳಿಸುವುದನ್ನು ನಿಲ್ಲಿಸಿ” ಎಂದು ಒತ್ತಾಯಿಸಿದ್ದಾರೆ.

ಇಂದು ಬನಾರಸ್‌ನಲ್ಲಿ ದುಷ್ಕರ್ಮಿಗಳು ಬಹಿರಂಗವಾಗಿ 6 ಗುಂಡುಗಳನ್ನು ಹೊಡೆದು ವ್ಯಕ್ತಿಯನ್ನು ಕೊಂದಿದ್ದಾರೆ. ಬಿಜೆಪಿ ಸರ್ಕಾರವು ಆಡಳಿತದ ಸಂಪೂರ್ಣ ಕುಸಿದಿದೆ. ಇಲ್ಲಿ ಅಪರಾಧಿಗಳಿಗೆ ಎಸಿ ಕೊಠಡಿಗಳಿವೆ, ಅನಿಯಂತ್ರಿತ ಅಪರಾಧಗಳನ್ನು ಮಾಡಲು ಮುಕ್ತ ಅವಕಾಶವಿದೆ ಎಂದು ಅವರು ಕಿಡಿಕಾರಿದ್ದಾರೆ.

ಯುಪಿಯ ಬಿಜೆಪಿ ಸರ್ಕಾರ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯವೆಸಗಿದ ದುಷ್ಕರ್ಮಿಗಳ ಪರ ನಿಂತಿದೆ. ಪ್ರತಿಭಟನಾ ನಿರತ ಕಾಂಗ್ರೆಸ್ಸಿಗರನ್ನು ವಶಕ್ಕೆ ತೆಗೆದುಕೊಳ್ಳುತ್ತಿದೆ. ಆದರೆ ಈ ಹೋರಾಟದ ಹಾದಿಯಲ್ಲಿ, ನಮ್ಮ ಸಹಚರರು ಬೀದಿಗಳಲ್ಲಿ ನಿಂತು ದಬ್ಬಾಳಿಕೆಯನ್ನು ಎದುರಿಸುತ್ತಾರೆ. ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಹಬ್ಬದ ಸಮಯದಲ್ಲಿ “ಕಾನೂನು ಸುವ್ಯವಸ್ಥೆ” ಯನ್ನು ಕಾಪಾಡಿಕೊಳ್ಳಲು ಕಾಂಗ್ರೆಸ್ ನಾಯಕರಿಗೆ ಭಾನುವಾರದಂದು ಪ್ರತಿಭಟನೆಗೆ ಅನುಮತಿ ನಿರಾಕರಿಸಲಾಗಿದೆ ಎಂದು ಯುಪಿ ಸರ್ಕಾರ ಹೇಳಿದೆ.

ಹುಡುಗಿಯ ತಂದೆ ಪ್ರಿಯಾಂಕಾ ಗಾಂಧಿಗೆ ಸಹಾಯ ಕೋರಿ ಪತ್ರ ಬರೆದಿದ್ದರು. “ಚಿನ್ಮಯಾನಂದ್ ಅವರ ರಾಜಕೀಯ ಪ್ರಭಾವದಿಂದಾಗಿ ನನ್ನ ಮಗಳನ್ನು ತನಿಖಾ ಸಂಸ್ಥೆ ತಪ್ಪಾಗಿ ನಡೆಸಿಕೊಳ್ಳುತ್ತಿದೆ. ಅತ್ಯಾಚಾರಕ್ಕಾಗಿ  ಚಿನ್ನಮಯಾನಂದ್ ಮೇಲೆ ಕೇಸು ದಾಖಲಿಸುವಂತೆ ನಾನು ನಿಮ್ಮಲ್ಲಿ ವಿನಂತಿಸುತ್ತೇನೆ” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಸರ್ಕಾರದ ಮಾಜಿ ಕೇಂದ್ರ ಸಚಿವರಾಗಿದ್ದ ಚಿನ್ಮಯಾನಂದ್ ಅವರನ್ನು ಯುಪಿ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ಸೆಪ್ಟೆಂಬರ್ 20 ರಂದು ಬಂಧಿಸಿತ್ತು. ಆತನ ಮೇಲೆ ಇನ್ನೂ ಅತ್ಯಾಚಾರ ಆರೋಪ ಹೊರಿಸಲಾಗಿಲ್ಲ. ಅವರು ಪ್ರಸ್ತುತ ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...