Homeಚಳವಳಿರೈತರ ಹೋರಾಟವನ್ನು ಬೆಂಬಲಿಸಿದ ನಟಿ ಪ್ರಿಯಾಂಕಾ ಚೋಪ್ರಾ

ರೈತರ ಹೋರಾಟವನ್ನು ಬೆಂಬಲಿಸಿದ ನಟಿ ಪ್ರಿಯಾಂಕಾ ಚೋಪ್ರಾ

ಸರ್ಕಾರದ ಪರವಿರುವವರ ಹಾಗೂ ಕೋಮುವಾದಿಗಳ ಪ್ರತಿಕಾರಕ್ಕೆ ಒಳಗಾಗುತ್ತೇವೆ ಎಂಬ ಭಯಕ್ಕೆ ಸಾರ್ವಜನಿಕ ಜೀವನದಲ್ಲಿರುವ ಜನಪ್ರಿಯ ವ್ಯಕ್ತಿಗಳು ಸರ್ಕಾರದ ಬಗ್ಗೆ ಅಥವಾ ರಾಜಕೀಯದ ಬಗ್ಗೆ ಯಾವುದೇ ನಿಲುವು ವ್ಯಕ್ತಪಡಿಸದೆ ಇರುವ ಪ್ರವೃತ್ತಿಯನ್ನು ಹೆಚ್ಚಿಸಿದ್ದಾರೆ.

- Advertisement -
- Advertisement -

ನಟಿ ಪ್ರಿಯಾಂಕಾ ಚೋಪ್ರಾ ರೈತರ ಪ್ರತಿಭಟನೆಗೆ ಬೆಂಬಲ ನೀಡಿದ್ದು, ಟ್ವಿಟ್ಟರ್‌‌ನಲ್ಲಿ ಗಾಯಕ-ನಟ ದಿಲ್‌ಜಿತ್ ದೋಸಾಂಜ್ ಅವರ ಟ್ವೀಟ್ ಅನ್ನು ಅನುಮೋದಿಸಿ, ಕೇಂದ್ರದ ಹೊಸ ಕೃಷಿ ಕಾನೂನುಗಳ ಬಗ್ಗೆ ತಮ್ಮ ಕಳವಳವ ವ್ಯಕ್ತಪಡಿಸಿ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಬೇಕೆಂದು ಕರೆ ನೀಡಿದರು.

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಜಾರಿಗೆ ತಂದಿರುವ ರೈತ ವಿರೋಧಿ ಕಾನೂನುಗಳ ವಿರುದ್ದ ರೈತರು ನಡೆಸುತ್ತಿರುವ ದೆಹಲಿ ಚಲೋ ಆಂದೋಲನ ಇಂದಿಗೆ 12 ನೇ ದಿನಕ್ಕೆ ಕಾಲಿಟ್ಟಿದ್ದು ವಿಶ್ವದಾದ್ಯಂತ ಭಾರಿ ಜನಬೆಂಬಲ ವ್ಯಕ್ತವಾಗಿದೆ. ರೈತರೊಂದಿಗೆ ಕೇಂದ್ರ ಸರ್ಕಾರವು ಇದುವರೆಗೂ ಐದು ಸುತ್ತಿನ ಮಾತುಕತೆ ನಡೆಸಿದೆಯಾದರೂ ಎಲ್ಲವು ವಿಫಲವಾಗಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸದ ಕೇಂದ್ರದ ವಿರುದ್ದ ರೈತರು ಡಿಸೆಂಬರ್‌ 8 ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿದ್ದು ದೇಶದಾದ್ಯಂತ ಭಾರಿ ಜನಬೆಂಬಲ ಪಡೆದಿದೆ.

ಇದನ್ನೂ ಓದಿ: ಹೋರಾಟನಿರತ ರೈತರ ಸ್ಪೆಟರ್, ಹೊದಿಕೆ‌ಗಾಗಿ 1 ಕೋಟಿ ರೂ. ದೇಣಿಗೆ ನೀಡಿದ ಗಾಯಕ ದಿಲ್ಜಿತ್​ ದೋಸಂಜ್

ರೈತ ಹೋರಾಟದ ಹಿನ್ನಲೆಯಲ್ಲಿ ಭಾರಿ ಸುದ್ದಿಯಲ್ಲಿರುವ ಪಂಜಾಬಿ ನಟ-ಗಾಯಕ ದಿಲ್‌ಜಿತ್‌ ದೊಸಾಂಜ್, ರೈತರ ಹೋರಾಟದ ಪರವಾಗಿ ಏಕತೆಯ ಬಗ್ಗೆ ಪಂಜಾಬಿ ಭಾಷೆಯಲ್ಲಿ ಟ್ವೀಟ್ ಮಾಡಿದ್ದರು. ಇದನ್ನು ರೀಟ್ವೀಟ್ ಮಾಡಿರುವ ನಟಿ ಪ್ರಿಯಾಂಕ ಚೋಪ್ರಾ, “ನಮ್ಮ ರೈತರು ಭಾರತದ ಆಹಾರ ಸೈನಿಕರು. ಅವರ ಆತಂಕಗಳನ್ನು ನಿವಾರಿಸಬೇಕಾಗಿದೆ. ಅವರ ಆಶಯಗಳನ್ನು ಈಡೇರಿಸಬೇಕಾಗಿದೆ. ಪ್ರವರ್ಧಮಾನಕ್ಕೆ ಬರುತ್ತಿರುವ ಪ್ರಜಾಪ್ರಭುತ್ವವಾಗಿ, ಈ ಬಿಕ್ಕಟ್ಟುಗಳು ಶೀಘ್ರದಲ್ಲೇ ಬಗೆಹರಿಯುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು” ಎಂದು ಬರೆದಿದ್ದಾರೆ.

ಸರ್ಕಾರದ ಪರವಿರುವವರ ಹಾಗೂ ಕೋಮುವಾದಿಗಳ ಪ್ರತಿಕಾರಕ್ಕೆ ಒಳಗಾಗುತ್ತೇವೆ ಎಂಬ ಭಯಕ್ಕೆ ಸಾರ್ವಜನಿಕ ಜೀವನದಲ್ಲಿರುವ ಜನಪ್ರಿಯ ವ್ಯಕ್ತಿಗಳು ಸರ್ಕಾರದ ಬಗ್ಗೆ ಅಥವಾ ರಾಜಕೀಯದ ಬಗ್ಗೆ ಯಾವುದೇ ನಿಲುವು ವ್ಯಕ್ತಪಡಿಸದೆ ಇರುವ ಪ್ರವೃತ್ತಿಯನ್ನು ಹೆಚ್ಚಿಸಿದ್ದಾರೆ.

ಕಳೆದ ವಾರದದಿಂದ ದಿಲ್‌ಜಿಲ್ ದೋಸಾಂಜ್ ಮತ್ತು ನಟಿ ಕಂಗನಾ ರಾಣಾವತ್ ಅವರ ನಡುವೆ ಟ್ವಿಟ್ಟರ್‌ನಲ್ಲಿ ಭಾರಿ ವಾದ ಪ್ರತಿವಾದಗಳು ನಡೆಯುತ್ತಿದೆ. ನಟಿ ಕಂಗನಾ ರಾಣಾವತ್ ಆಡಳಿತಾರೂಡ ಬಿಜೆಪಿಯ ತೀವ್ರ ಬೆಂಬಲಿಗರಾಗಿದ್ದು ರೈತರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೆ ದಿಲ್‌ಜಿತ್ ಪ್ರತ್ಯುತ್ತರ ನೀಡಿ ನೆಟ್ಟಿಗರ ಮನಗೆದ್ದಿದ್ದರು.

ಇದನ್ನೂ ಓದಿ: ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...