Homeಮುಖಪುಟಚುನಾವಣಾ ಬಾಂಡ್ ತೀರ್ಪಿನ ನಂತರ ಸರ್ಕಾರ ನ್ಯಾಯಾಂಗದ ಮೇಲೆ ಒತ್ತಡ ಹೇರುತ್ತಿದೆ: ಪ್ರಿಯಾಂಕಾ ಗಾಂಧಿ

ಚುನಾವಣಾ ಬಾಂಡ್ ತೀರ್ಪಿನ ನಂತರ ಸರ್ಕಾರ ನ್ಯಾಯಾಂಗದ ಮೇಲೆ ಒತ್ತಡ ಹೇರುತ್ತಿದೆ: ಪ್ರಿಯಾಂಕಾ ಗಾಂಧಿ

- Advertisement -
- Advertisement -

ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ನಂತರ ಕೇಂದ್ರವು ನ್ಯಾಯಾಂಗದ ಮೇಲೆ ಒತ್ತಡ ಹೇರುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ ಮತ್ತು ನರೇಂದ್ರ ಮೋದಿ ಸರ್ಕಾರವು ಸ್ವತಂತ್ರ ಮತ್ತು ಬಲಿಷ್ಠ ನ್ಯಾಯಾಂಗ ವ್ಯವಸ್ಥೆಗೆ ಅನುಮೋದಿಸುವುದಿಲ್ಲವೇ ಎಂದು ಆಶ್ಚರ್ಯವನ್ನು ವ್ಯಕ್ತಪಡಿಸಿದ್ದಾರೆ.

‘ಪಟ್ಟಭದ್ರ ಹಿತಾಸಕ್ತಿ ಗುಂಪು’ ನ್ಯಾಯಾಂಗದ ಮೇಲೆ ಒತ್ತಡ ಹೇರಲು ಮತ್ತು ಮಾನಹಾನಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ 600ಕ್ಕೂ ಹೆಚ್ಚು ವಕೀಲರು ಭಾರತದ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಕ್ಕೆ ಪ್ರತಿಕ್ರಿಯೆಯಾಗಿ ಪ್ರಧಾನಿ ಮೋದಿ ಅವರು ಕಾಂಗ್ರೆಸ್‌ ಪಕ್ಷವನ್ನು ಟೀಕಿಸಿದ ಎರಡು ದಿನಗಳ ನಂತರ ಪ್ರಿಯಾಂಕ ಗಾಂಧಿ ಈ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪ್ರಿಯಾಂಕಾ ಗಾಂಧಿ ಪೋಸ್ಟ್‌ ಮಾಡಿದ್ದು, ಚುನಾವಣಾ ಬಾಂಡ್‌ಗಳ ಕುರಿತ ಸುಪ್ರೀಂ ಕೋರ್ಟ್‌ನ ತೀರ್ಪಿನಿಂದ ಹಗರಣ ಬಯಲಾಗುತ್ತಿರುವುದನ್ನು ನೋಡಿದ ನಂತರ ಪತ್ರಗಳನ್ನು ಬರೆಯುವ ಮೂಲಕ ನ್ಯಾಯಾಂಗ ವ್ಯವಸ್ಥೆಯ ಮೇಲೆ ಒತ್ತಡ ಹೇರುತ್ತಿರುವ ರೀತಿ, ಸ್ವತಃ ಪ್ರಧಾನಿಯೇ ಅಖಾಡಕ್ಕಿಳಿದು ನ್ಯಾಯಾಂಗದ ಬಗ್ಗೆ ಋಣಾತ್ಮಕ ಟೀಕೆಗಳನ್ನು ಮಾಡುತ್ತಿರುವುದು ಏನೋ ಮೀನಮೇಷವಿದೆ ಎಂಬುದನ್ನು ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.

ರಾಜಕೀಯ ಹಸ್ತಕ್ಷೇಪದಿಂದ ತೊಂದರೆಗೀಡಾದ ಸುಪ್ರೀಂಕೋರ್ಟ್ ನ್ಯಾಯಾಧೀಶರು ಪತ್ರಿಕಾಗೋಷ್ಠಿಗಳನ್ನು ನಡೆಸುವುದು, ರಾಜ್ಯಸಭೆಗೆ ನ್ಯಾಯಾಧೀಶರನ್ನು ಕಳುಹಿಸುವುದು, ಚುನಾವಣೆಯಲ್ಲಿ (ಮಾಜಿ) ನ್ಯಾಯಾಧೀಶರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವುದು, ನ್ಯಾಯಾಧೀಶರ ನೇಮಕಾತಿಯನ್ನು ನಿಯಂತ್ರಿಸಲು ಪ್ರಯತ್ನಿಸುವುದು ಮತ್ತು ತೀರ್ಪುಗಳು ವಿರುದ್ಧವಾದಾಗ ನ್ಯಾಯಾಂಗದ ಬಗ್ಗೆ ಕಾಮೆಂಟ್ ಮಾಡುವುದು ಕಂಡು ಬರುತ್ತಿದೆ. ಮೋದಿಜಿಯವರ ಸರ್ಕಾರ ಸ್ವತಂತ್ರ ಮತ್ತು ಬಲಿಷ್ಠ ನ್ಯಾಯಾಂಗವನ್ನು ಅನುಮೋದಿಸುವುದಿಲ್ಲವೇ? ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.

ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಬಾರ್ ಕೌನ್ಸಿಲ್ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಸೇರಿದಂತೆ 600ಕ್ಕೂ ಹೆಚ್ಚು ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ. “ಪಟ್ಟಭದ್ರ ಹಿತಾಸಕ್ತಿಗಳ ಗುಂಪು” ನ್ಯಾಯಾಂಗದ ಮೇಲೆ ಒತ್ತಡ ಹೇರಲು ಮತ್ತು ವಿಶೇಷವಾಗಿ ನ್ಯಾಯಾಲಯಗಳ ಮಾನಹಾನಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದರು. ಈ ತಂತ್ರಗಳು ನಮ್ಮ ನ್ಯಾಯಾಲಯಗಳಿಗೆ ಹಾನಿಯನ್ನುಂಟುಮಾಡುತ್ತವೆ ಮತ್ತು ನಮ್ಮ ಪ್ರಜಾಪ್ರಭುತ್ವದ ರಚನೆಗೆ ಬೆದರಿಕೆ ಹಾಕುತ್ತಿವೆ ಎಂದು ವಕೀಲರು ಮಾರ್ಚ್ 26ರಂದು ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದರು.

ಇದನ್ನು ಓದಿ: ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ಕೇಸ್‌ ದಾಖಲು: ‘ಮೋದಿ ಪರಿವಾರ’ದ ವಿರುದ್ಧ ಎಫ್‌ಐಆರ್ ಎಂದ ಕಾಂಗ್ರೆಸ್

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...