Homeಕರ್ನಾಟಕ'ನಾ ನಾಯಕಿ' ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿಯಿಂದ 'ಗೃಹಲಕ್ಷ್ಮಿ ಯೋಜನೆ' ಘೋಷಣೆ

‘ನಾ ನಾಯಕಿ’ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿಯಿಂದ ‘ಗೃಹಲಕ್ಷ್ಮಿ ಯೋಜನೆ’ ಘೋಷಣೆ

- Advertisement -
- Advertisement -

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಘೋಷಣೆ ಮಾಡಲು ತೀರ್ಮಾನಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಮ್ಮ ರಾಜ್ಯದ ಮಹಿಳೆಯರು ಏನನ್ನು ಬಯಸುತ್ತಾರೆ? ಎಂಬುದನ್ನ ತಿಳಿಯಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಾಜ್ಯದ ಮಹಿಳೆಯರಿಗೆ ತಮ್ಮ ಭಾವನೆ, ಸಮಸ್ಯೆ, ಸಲಹೆ, ಅಭಿಪ್ರಾಯ ಹಂಚಿಕೊಳ್ಳಲು ‘ನಾ ನಾಯಕಿ’ ಎನ್ನುವ ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಭಾಗಿಯಾಗಿದ್ದರು.

ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಳನ್ನು ತಿಳಿಯಲು ಕಾಂಗ್ರೆಸ್ ಪಕ್ಷ ಕರೆ ನೀಡಿತ್ತು. ಇದಕ್ಕೆ ಸ್ಪಂದಿಸಿದ ಮಹಿಳೆಯರು  ಸಾಮಾಜಿಕ ಜಾಲತಾಣ, ಇ ಮೇಲ್, ವಾಟ್ಸಪ್ ಹಾಗೂ ಪಕ್ಷದ ಕಚೇರಿಗೆ ಪತ್ರದ ರೂಪದಲ್ಲಿ ಸಾವಿರಾರು ಸಲಹೆಗಳನ್ನು ಹಾಗು ಸಮಸ್ಯಗಳನ್ನು ಹೇಳಿಕೊಂಡಿದ್ದಾರೆ. ಇದರಲ್ಲಿ ಬಹುತೇಕ ಮಹಿಳೆಯರು ಬೆಲೆ ಏರಿಕೆ ಸಮಸ್ಯೆಗೆ ಕಾಂಗ್ರೆಸ್ ಪಕ್ಷದಿಂದ ಪರಿಹಾರ ನಿರೀಕ್ಷಿಸುತ್ತಿರುವುದಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಬೆಲೆ ಏರಿಕೆ ಪರಿಣಾಮವಾಗಿ ಮನೆಯಲ್ಲಿ ದುಡಿಯುವವರ ವೇತನ ಸಾಲದೇ ಸಂಕಷ್ಟ ಅನುಭವಿಸುತ್ತಿರುವುದಾಗಿ ಹೇಳಿದ್ದಾರೆ.

ಮಹಿಳೆಯರು ನಮ್ಮ ಮನೆ ಹಾಗೂ ರಾಜ್ಯದ ಶಕ್ತಿ ಮೂಲವಾಗಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕುಟುಂಬ ಹಾಗೂ ಮನೆ ನಿರ್ವಹಣೆಯಲ್ಲಿ ಅವರು ಅನುಭವಿಸುತ್ತಿರುವ ಸಂಕಷ್ಟ ಅತೀವವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮಹಿಳೆಯರ ಸಂಕಷ್ಟಕ್ಕೆ ಪ್ರಮಾಣದ ನೆರವು ನೀಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಗೃಹಲಕ್ಷ್ಮಿ ಯೋಜನೆಯನ್ನು ಘೋಷಣೆ ಮಾಡಿದ್ದು, ಈ ಯೋಜನೆ ಮೂಲಕ ರಾಜ್ಯದ ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಸರ್ಕಾರದ ವತಿಯಿಂದ ಪ್ರತಿ ತಿಂಗಳು ₹2,000ರಂತೆ ವರ್ಷಕ್ಕೆ ₹24 ಸಾವಿರ ಆರ್ಥಿಕ ನೆರವನ್ನು ಕಾಂಗ್ರೆಸ್ ಸರ್ಕಾರ ಒದಗಿಸಲಿದೆ. ಈ ಯೋಜನೆಯು ರಾಜ್ಯದ 1.5 ಕೋಟಿ ಗೃಹಣಿಯರಿಗೆ ನೆರವಾಗಲಿದೆ ಎಂದು ಕಾಂಗ್ರೆಸ್ ಪಕ್ಷ ಪ್ರಕಟನೆಯಲ್ಲಿ ತಿಳಿಸಿದೆ.

ನಾ ನಾಯಕಿ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಾತುಗಳು:-

“ನನಗಾಗಿ ಇಷ್ಟು ಅಭಿಮಾನದಿಂದ ಇಲ್ಲಿಗೆ ಬಂದಿರುವ ಎಲ್ಲರಿಗೂ ನಮಸ್ಕಾರ. ನಾನು ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದ ಅಭಿಮಾನವನ್ನು ಕಂಡಿದ್ದೇನೆ. ನಾನು ಇಲ್ಲಿಗೆ ಆಗಮಿಸಿರುವುದು ಬಹಳ ಹೆಮ್ಮೆಯ ವಿಷಯವಾಗಿದೆ. ನೀವು ಬುದ್ಧಿವಂತರು, ಶಕ್ತಿವಂತರು, ಶ್ರಮಜೀವಿಗಳು. ಈ ದೇಶವೇ ಹೆಮ್ಮೆಪಡುವಂತೆ ರಾಜ್ಯವನ್ನು ಕಟ್ಟಿದ್ದೀರಿ. ವಿಶ್ವದ ಎಲ್ಲೆಡೆ ನಿಮ್ಮ ಪರಿಶ್ರಮ ಗುರುತಿಸಲಾಗುತ್ತಿದೆ. ಐಟಿ ಬಿಬಿ ಕ್ಷೇತ್ರ, ಕೈಗಾರಿಕಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ್ದೀರಿ” ಎಂದು ಹೇಳಿದರು.

“ನೀವು ಕರ್ನಾಟಕ ಭುವನೇಶ್ವರಿ ಹಾಗೂ ತಾಯಿ ಚಾಮುಂಡೇಶ್ವರಿಯ ಮಕ್ಕಳು. ಈ ನಾಡು ಅತ್ಯಂತ ಪ್ರಬಲಶಾಲಿ ಮಹಿಳೆಯರಾದ ಕಿತ್ತೂರು ರಾಣಿ ಚೆನ್ನಮ್ಮನ ಮಕ್ಕಳು. ನಿಮ್ಮಲ್ಲಿ ಅಹಿಂಸೆಯ ಗುಣ ನಿಮ್ಮ ಇತಿಹಾಸದಲ್ಲಿ ಅಡಗಿದೆ. ಬಸವಣ್ಣ ಅವರು ಪ್ರತಿಯೊಬ್ಬ ಮನುಷ್ಯನ ಪ್ರಾಮುಖ್ಯತೆಯನ್ನು ಸಾರಿದ್ದಾರೆ. ಬಸವಣ್ಣನವರಿಗೆ ಎಲ್ಲರೂ ಸಮಾನರು. ಅವರಿಗೆ ಜಾತಿ, ಧರ್ಮ, ಲಿಂಗದ ಭೇದವಿರಲಿಲ್ಲ. ಮಹಿಳೆಯರು ನಾಡಿನ ಸಂಸ್ಕೃತಿ ಕಾಪಾಡಿ, ನಮ್ಮ ಸಮಾಜವನ್ನು ಕಟ್ಟುವಲ್ಲಿ ಮಹಿಳೆಯರು ಸದಾ ಶ್ರಮಿಸಿದ್ದಾರೆ” ಎಂದರು.

“ನಾನು ಬೆಳೆದಿದ್ದು ತಾಯಿ ಸೋನಿಯಾಗಾಂಧಿ ಅವರನ್ನು ನೋಡಿಕೊಂಡು. ತನ್ನ 21ನೇ ವಯಸ್ಸಿನಲ್ಲಿ ತಂದೆ ರಾಜೀವ್ ಗಾಂಧಿ ಅವರನ್ನು ಪ್ರೀತಿಸಿ, ತಾನು ಹುಟ್ಟಿದ ಇಟಲಿ ಬಿಟ್ಟು ಭಾರತಕ್ಕೆ ಆಗಮಿಸುತ್ತಾರೆ. ಆಕೆ ಇಲ್ಲಿನ ಸಂಸ್ಕೃತಿ, ಆಚಾರ ವಿಚಾರ, ಭಾಷೆಗಳನ್ನು ಇಂದಿರಾ ಗಾಂಧಿ ಅವರಿಂದ ಕಲಿತರು. ಆಕೆ ತನ್ನ 44ನೇ ವಯಸ್ಸಿನಲ್ಲಿ ಗಂಡನನ್ನು ಕಳೆದುಕೊಂಡರು. ಆಕೆ ರಾಜಕೀಯದ ಬಗ್ಗೆ ಆಸಕ್ತಿ ಇಲ್ಲದಿದ್ದರೂ ದೇಶದ ಸೇವೆ ಮಾಡಲು ರಾಜಕೀಯದಲ್ಲಿ ಇದ್ದಾರೆ” ಎಂದು ಹೇಳಿದರು.

“ನಿಮ್ಮ ಜೀವನದಲ್ಲಿ ಏನೇ ಆಗಲಿ, ಎಷ್ಟೇ ಕಷ್ಟ ಬರಲಿ, ಅದು ಮನೆಯಲ್ಲಾಗಲಿ, ಕೆಲದ ವಿಚಾರದಲ್ಲಾಗಲಿ, ನೀವು ಅವುಗಳನ್ನು ಮೆಟ್ಟಿ ನಿಲ್ಲುವ ಸಾಮರ್ಥ್ಯ ನಿಮ್ಮಲ್ಲಿದೆ. ಇಲ್ಲಿರುವ ಪ್ರತಿ ಸಹೋದರಿಯರು ದೊಡ್ಡ ಸವಾಲು ಎದುರಿಸಿದ್ದೀರಿ ಎಂದು ನನಗೆ ಗೊತ್ತಿದೆ. ನಿಮ್ಮ ಮನೆಯನ್ನು ಒಟ್ಟಾಗಿಟ್ಟು, ನಿಮ್ಮ ಜೀವನದ ಸಮಸ್ಯೆಗಳನ್ನು ಬಹಳ ಧೈರ್ಯವಾಗಿ ಎದುರಿಸುತ್ತಿದ್ದೀರಿ. ಇಷ್ಟಾದರೂ ನಿಮ್ಮ ಜೀವನದಲ್ಲಿ ಬದಲಾವಣೆ ತರುವ ಸಾಮರ್ಥ್ಯ ನಿಮ್ಮಲ್ಲಿದೆ” ಎಂದು ಮಹಿಳೆಯರಿಗೆ ಸ್ಪೂರ್ತಿದಾಯಕ ಮಾತುಗಳನ್ನು ಹೇಳಿದರು.

“ನಾನು ಬಿಜೆಪಿಯನ್ನು ಟೀಕಿಸುವುದಿಲ್ಲ. ನಾನು ಇಲ್ಲಿರುವ ಮಹಿಳೆಯರಿಗೆ ಒಂದು ಪ್ರಶ್ನೆ ಕೇಳುತ್ತೇನೆ. ಬಿಜೆಪಿ ಬಹಳ ದಿನಗಳಿಂದ ಅಧಿಕಾರದಲ್ಲಿದೆ ನಿಮ್ಮ ಜೀವನದಲ್ಲಿ ಸುಧಾರಣೆ ಕಂಡಿದ್ದೀರಾ? ಬೆಲೆಗಳು ಇಳಿಕೆಯಾಗಿವೆಯೇ? ನಿಮ್ಮ ಬದುಕಿನಲ್ಲಿ ಸಕಾರಾತ್ಮಕ ವಿಚಾರಗಳಿವೆಯೇ? ನೀವು ಸಂತೋಷವಾಗಿದ್ದೀರಾ?” ಎಂದು ಪ್ರಶ್ನೆಗಳನ್ನು ಕೇಳಿದರು.

ಇದನ್ನೂ ಓದಿ: ಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ಒಪಿಎಸ್ ಜಾರಿಗೆ ಹಿಮಾಚಲ ಕ್ಯಾಬಿನೆಟ್ ಅಸ್ತು

“ಮುಂದಿನ ಕೆಲ ದಿನಗಳಲ್ಲಿ ಚುನಾವಣೆ ಬರುತ್ತಿವೆ. ನೀವು ಕಳೆದ ಕೆಲ ವರ್ಷಗಳ ಆಡಳಿತವನ್ನು ನೋಡಿ, ಯಾರು ಉತ್ತಮರು ಎಂದು ನೀವೇ ತುಲನೆ ಮಾಡಿ, ಯಾರು ನಿಮಗೆ ಅಗತ್ಯವಿರುವ ನೆರವು ನೀಡಿದ್ದಾರೆ ಎಂದು ತೀರ್ಮಾನಿಸಿ. ಕರ್ನಾಟಕದಲ್ಲಿ ಮಹಿಳೆಯರ ಪರಿಸ್ಥಿತಿ ನೀಜಕ್ಕೂ ನಾಚಿಕೆಗೇಡಿನ ವಿಚಾರವಿದೆ. ನಿಮ್ಮ ಸಚಿವರು ಉದ್ಯೋಗ ನೀಡಲು 40% ಲಂಚ ಪಡೆಯುತ್ತಿದ್ದಾರೆ ಎಂದು ಕೇಳಿದೆ. 1.50 ಲಕ್ಷ ಕೋಟಿ ನಿಮ್ಮ ಹಣವನ್ನು ಭ್ರಷ್ಟಾಚಾರದ ಮೂಲಕ ಲೂಟಿ ಮಾಡಿದ್ದಾರೆ” ಎಂದು ಹೇಳಿದರು.

“ಬೆಂಗಳೂರಿನಲ್ಲಿ 8 ಸಾವಿರ ಕೋಟಿ ಬಜೆಟ್ ಇದ್ದರೆ ಅದರಲ್ಲಿ 3,200 ಕೋಟಿ ಇವರ ಜೇಬಿಗೆ ಹೋಗುತ್ತದೆ. ಪಿಎಸ್ಐ ಹಗರಣದಂತೆ ಹಲವು ನೇಮಕಾತಿ ಅಕ್ರಮಗಳಿವೆ. ಪಿಎಸ್ಐ ಹುದ್ದೆ ಮಾರಿಕೊಂಡಿದ್ದಾರೆ. ನೀವು ನಿಮ್ಮ ಮಕ್ಕಳು ಉತ್ತಮ ಕೆಲಸ ಪಡೆಯಲಿ ಎಂದು ಶಿಕ್ಷಣೆ ಕೊಟ್ಟು ಬೆಳೆಸುತ್ತೀರಾ? ಈ ರೀತಿ ಹಗರಣವಾದರೆ, ನೀವು ಪ್ರತಿಯೊಂದಕ್ಕೂ ಲಂಚ ಕೊಡಬೇಕಾಗಿದೆ. ಚಾಲಕರ ಪರವಾನಿಗೆ, ಪಡಿತರ ಪಡೆಯಲು ಲಂಚ ನೀಡಬೇಕು” ಎಂದು ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಹೇಳಿದರು.

“ಕೋವಿಡ್ ಸಮಯದಲ್ಲಿ ಸರ್ಕಾರ ಮಹಿಳೆಯರಿಗೆ ಯಾವುದೇ ರೀತಿಯ ನೆರವು ನೀಡಲಿಲ್ಲ. ಗಾರ್ಮೆಂಟ್ಸ್ ಕಾರ್ಮಿಕರಿಗೆ ಸರ್ಕಾರ ನೆರವು ನೀಡಲಿಲ್ಲ. ಬೆಂಗಳೂರಿನ ರಸ್ತೆಗಳು ಗುಂಡಿಮಯವಾಗಿವೆ. ರೈತರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ರಾಜ್ಯದ 2.50 ಲಕ್ಷ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ತುಂಬಿಲ್ಲ. ಮಹಿಳೆಯರ ಮೇಲಿನ ಅಪರಾಧ ಹೆಚ್ಚಳವಾಗಿದ್ದು, ಪ್ರತಿನಿತ್ಯ ಮಹಿಳೆಯರ ಮೇಲೆ 46 ಅಪರಾಧ ನಡೆಯುತ್ತಿವೆ” ಎಂದರು.

“ನೀವು ಕಾಂಗ್ರೆಸ್ ಅವಧಿಯಲ್ಲಿ ಅಡುಗೆ ಅನಿಲ ಸಿಲಿಂಡರ್ ಎಷ್ಟಕ್ಕೆ ಪಡೆಯುತ್ತಿದ್ದಿರಿ, ಈಗ ಅದು ಎಷ್ಟಾಗಿದೆ ಎಂದು ನಿಮಗೆ ಗೊತ್ತಿದೆ. ಜೀವನಸಾಗಿಸುವುದು ದುಬಾರಿಯಾಗಿದ್ದು, ಕಷ್ಟವಾಗಿದೆ. ಮಕ್ಕಳ ಶುಲ್ಕವಾಗಲಿ, ಮದುವೆ ಸಮಾರಂಭವಾಗಲಿ ಎಲ್ಲವೂ ಆರ್ಥಿಕ ಹೊರೆಯಾಗಿವೆ. ಆದರೂ ಸರ್ಕಾರದ ಹೊಣೆಗಾರಿಕೆಯನ್ನು ಪ್ರಶ್ನೆ ಮಾಡುತ್ತಿಲ್ಲ. ಹೀಗಾಗಿ ಸರ್ಕಾರ ಪಠ್ಯ ಪರಿಷ್ಕರಣೆ ಹೆಸರಲ್ಲಿ ಮಹನೀಯರ ವಿಚಾರವನ್ನು ತೆಗೆಯುವ ಮೂಲಕ ಗಮನ ಬೇರೆಡೆ ಸೆಳೆಯುತ್ತಿದ್ದಾರೆ. ಇಡೀ ಆಡಳಿಯ ಯಂತ್ರ ಕೆಲವು ಬಂಡವಾಳ ಶಾಹಿಗಳ ಹಿತ ಕಾಯಲು ಇದೆ. ಕೆಲವರು ಮಾತ್ರ ಶ್ರೀಮಂತರಾಗುತ್ತಿದ್ದರೆ, ಉಳಿದ ಭಾರತ ದಿನನಿತ್ಯ ಬಡವಾಗುತ್ತಿದೆ” ಎಂದು ಹೇಳಿದರು.

“ಸಾರ್ವಜನಿಕ ಉದ್ದಿಮೆಗಳನ್ನು ಖಾಸಗಿಕರಣ ಮಾಡುತ್ತಿದ್ದಾರೆ. ಕೃಷಿಗೆ ಆರ್ಥಿಕ ನೆರವು ನೀಡದೇ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು ಸರ್ಕಾರದ ಜಿಎಸ್ ಟಿ, ನೋಟು ರದ್ಧತಿಗಳಿಂದ ಕೆಟ್ಟ ನಿರ್ಧಾರಗಳಿಂದ ನರಳುವಂತಾಗಿವೆ. ಕಾಂಗ್ರೆಸ್ ಸರ್ಕಾರ ಭೂ ಸುಧಾರಣಾ ಕಾಯ್ದೆಯಂತಹ ಕಾರ್ಯಕ್ರಮಗಳನ್ನು ನೀಡಿತ್ತು. ರೈತರ 8 ಸಾವಿರ ಕೋಟಿ ಸಾಲ ಮನ್ನಾ, ಬೆಂಗಳೂರಿನಲ್ಲಿ ಐಟಿ ಕ್ಷೇತ್ರಗಳ ಅಭಿವೃದ್ಧಿ ಮಾಡಲಾಗಿದೆ. ಅನ್ನಭಾಗ್ಯದ ಮೂಲಕ 3.80 ಲಕ್ಷ ಜನರಿಗೆ ಅಕ್ಕಿ, ಬೇಳೆಯಂತಹ ದಿನಸಿ ನೀಡಿದೆ. ಇಂದಿರಾ ಕ್ಯಾಂಟೀನ್, ಕ್ಷೀರ ಭಾಗ್ಯ, ಮಾತೃಪೂರ್ಣದಂತಹ ಕಾರ್ಯಕ್ರಮಗಳನ್ನು ನಿಮಗಾಗಿ ಕಾಂಗ್ರೆಸ್ ಸರ್ಕಾರ ನೀಡಿತ್ತು. ಹೀಗೆ ಸ್ವಸಹಾಯಕ ಯೋಜನೆ, ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳಂದತಹ ಕಾರ್ಯಕ್ರಮ ನೀಡಿದೆ” ಎಂದು ತಿಳಿಸಿದರು.

“ಈ ನಾ ನಾಯಕಿ ಕಾರ್ಯಕ್ರಮ ಮೂಲಕ ನೀವು ನಾಯಕರಾಗುವ ಮೂಲಕ ನಿಮ್ಮ ಜೀವನ ಬದಲಿಸಿಕೊಳ್ಳಿ. ಗೃಹಲಕ್ಷ್ಮೀ ಯೋಜನೆ ಮೂಲಕ ಪ್ರತಿ ಕುಟುಂಬದ ಓರ್ವ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ವರ್ಷಕ್ಕೆ 24 ಸಾವಿರ ಆರ್ಥಿಕ ನೆರವು ನೀಡಲಾಗುವುದು. ನನಗೆ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದಾಗ ನೀವು ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಮಾಡಿದರೆ ಮಾತ್ರ ನಾನು ಈ ಕಾರ್ಯಕ್ರಮಕ್ಕೆ ಬರುವುದಾಗಿ ಹೇಳಿದ್ದೆ. ಮಹಿಳೆಯರು ಸಶಕ್ತರಾಗಲು ಕೇವಲ ಒಂದು ಕಾರ್ಯಕ್ರಮ ನೀಡುತ್ತಿಲ್ಲ. ಅನೇಕ ವಿಚಾರವಾಗಿ ಕಾಂಗ್ರೆಸ್ ಸರ್ಕಾರ ನೆರವು ನೀಡಲು ನಿರ್ಧರಿಸಿದ್ದು, ಅದರ ಭಾಗವಾಗಿ ಇತ್ತೀಚೆಗೆ ಗೃಹಜ್ಯೋತಿ ಕಾರ್ಯಕ್ರಮದ ಮೂಲಕ ಪ್ರತಿ ಮನೆಗೆ 200 ಯುನಿಟ್ ವಿದ್ಯತ್ ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ. ಇದರ ಜತೆಗೆ ಮಹಿಳಾ ಪ್ರಣಾಳಿಕೆ ಮೂಲಕ ಇನ್ನಷ್ಟು ಜನಪರ ಕಾರ್ಯಕ್ರಮವನ್ನು ನಮ್ಮ ನಾಯಕರು ನೀಡಲಿದ್ದಾರೆ” ಎಂದು ಹೇಳಿದರು.

“ಉತ್ತರಪ್ರದೇಶದಲ್ಲಿ ಮಹಿಳಾ ಪ್ರಣಾಳಿಕೆ ಬಿಡುಗಡೆ ಮಾಡಿದಾಗ ಹಲವರು ನಮ್ಮನ್ನು ನೋಡಿ ನಕ್ಕರು. ಆದರೂ ನಮಗೆ ಹೆಚ್ಚಿನ ಮತಗಳು ಬರಲಿಲ್ಲ. ಆದರೆ ಪ್ರತಿ ರಾಜಕೀಯ ಪಕ್ಷಗಳು ಮಹಿಳೆಯರ ಆಗತ್ಯವನ್ನು ಗುರುತಿಸಿ, ಅವುಗಳಿಗೆ ಸ್ಪಂದಿಸುವಂತೆ ಮಾಡಿದೆವು. ಪರಿಣಾಮ ಇಂದು ಬಿಜೆಪಿ ಕೂಡ ತಾನು ಮಹಿಳೆಯರಿಗಾಗಿ ಏನು ಮಾಡುತ್ತೇವೆ ಎಂದು ಜಾಹೀರಾತು ನೀಡಿದೆ. ನಾವೆಲ್ಲರೂ ಮಹಿಳೆಯರು ನಮ್ಮ ಶಕ್ತಿ ತೋರಿಸುವ ಕಾಲ ಬಂದಿದೆ. ಈ ಚುನಾವಣೆಯನ್ನು ನಿಮ್ಮ ಚುನಾವಣೆ, ನಿಮ್ಮ ಭವಿಷ್ಯಕ್ಕಾಗಿ ಮಾಡಬೇಕಾಗಿದೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...