Homeಕರ್ನಾಟಕ'ನಾ ನಾಯಕಿ' ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿಯಿಂದ 'ಗೃಹಲಕ್ಷ್ಮಿ ಯೋಜನೆ' ಘೋಷಣೆ

‘ನಾ ನಾಯಕಿ’ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿಯಿಂದ ‘ಗೃಹಲಕ್ಷ್ಮಿ ಯೋಜನೆ’ ಘೋಷಣೆ

- Advertisement -
- Advertisement -

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಘೋಷಣೆ ಮಾಡಲು ತೀರ್ಮಾನಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಮ್ಮ ರಾಜ್ಯದ ಮಹಿಳೆಯರು ಏನನ್ನು ಬಯಸುತ್ತಾರೆ? ಎಂಬುದನ್ನ ತಿಳಿಯಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ರಾಜ್ಯದ ಮಹಿಳೆಯರಿಗೆ ತಮ್ಮ ಭಾವನೆ, ಸಮಸ್ಯೆ, ಸಲಹೆ, ಅಭಿಪ್ರಾಯ ಹಂಚಿಕೊಳ್ಳಲು ‘ನಾ ನಾಯಕಿ’ ಎನ್ನುವ ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಭಾಗಿಯಾಗಿದ್ದರು.

ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಳನ್ನು ತಿಳಿಯಲು ಕಾಂಗ್ರೆಸ್ ಪಕ್ಷ ಕರೆ ನೀಡಿತ್ತು. ಇದಕ್ಕೆ ಸ್ಪಂದಿಸಿದ ಮಹಿಳೆಯರು  ಸಾಮಾಜಿಕ ಜಾಲತಾಣ, ಇ ಮೇಲ್, ವಾಟ್ಸಪ್ ಹಾಗೂ ಪಕ್ಷದ ಕಚೇರಿಗೆ ಪತ್ರದ ರೂಪದಲ್ಲಿ ಸಾವಿರಾರು ಸಲಹೆಗಳನ್ನು ಹಾಗು ಸಮಸ್ಯಗಳನ್ನು ಹೇಳಿಕೊಂಡಿದ್ದಾರೆ. ಇದರಲ್ಲಿ ಬಹುತೇಕ ಮಹಿಳೆಯರು ಬೆಲೆ ಏರಿಕೆ ಸಮಸ್ಯೆಗೆ ಕಾಂಗ್ರೆಸ್ ಪಕ್ಷದಿಂದ ಪರಿಹಾರ ನಿರೀಕ್ಷಿಸುತ್ತಿರುವುದಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಬೆಲೆ ಏರಿಕೆ ಪರಿಣಾಮವಾಗಿ ಮನೆಯಲ್ಲಿ ದುಡಿಯುವವರ ವೇತನ ಸಾಲದೇ ಸಂಕಷ್ಟ ಅನುಭವಿಸುತ್ತಿರುವುದಾಗಿ ಹೇಳಿದ್ದಾರೆ.

ಮಹಿಳೆಯರು ನಮ್ಮ ಮನೆ ಹಾಗೂ ರಾಜ್ಯದ ಶಕ್ತಿ ಮೂಲವಾಗಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕುಟುಂಬ ಹಾಗೂ ಮನೆ ನಿರ್ವಹಣೆಯಲ್ಲಿ ಅವರು ಅನುಭವಿಸುತ್ತಿರುವ ಸಂಕಷ್ಟ ಅತೀವವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮಹಿಳೆಯರ ಸಂಕಷ್ಟಕ್ಕೆ ಪ್ರಮಾಣದ ನೆರವು ನೀಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಗೃಹಲಕ್ಷ್ಮಿ ಯೋಜನೆಯನ್ನು ಘೋಷಣೆ ಮಾಡಿದ್ದು, ಈ ಯೋಜನೆ ಮೂಲಕ ರಾಜ್ಯದ ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಸರ್ಕಾರದ ವತಿಯಿಂದ ಪ್ರತಿ ತಿಂಗಳು ₹2,000ರಂತೆ ವರ್ಷಕ್ಕೆ ₹24 ಸಾವಿರ ಆರ್ಥಿಕ ನೆರವನ್ನು ಕಾಂಗ್ರೆಸ್ ಸರ್ಕಾರ ಒದಗಿಸಲಿದೆ. ಈ ಯೋಜನೆಯು ರಾಜ್ಯದ 1.5 ಕೋಟಿ ಗೃಹಣಿಯರಿಗೆ ನೆರವಾಗಲಿದೆ ಎಂದು ಕಾಂಗ್ರೆಸ್ ಪಕ್ಷ ಪ್ರಕಟನೆಯಲ್ಲಿ ತಿಳಿಸಿದೆ.

ನಾ ನಾಯಕಿ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಾತುಗಳು:-

“ನನಗಾಗಿ ಇಷ್ಟು ಅಭಿಮಾನದಿಂದ ಇಲ್ಲಿಗೆ ಬಂದಿರುವ ಎಲ್ಲರಿಗೂ ನಮಸ್ಕಾರ. ನಾನು ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದ ಅಭಿಮಾನವನ್ನು ಕಂಡಿದ್ದೇನೆ. ನಾನು ಇಲ್ಲಿಗೆ ಆಗಮಿಸಿರುವುದು ಬಹಳ ಹೆಮ್ಮೆಯ ವಿಷಯವಾಗಿದೆ. ನೀವು ಬುದ್ಧಿವಂತರು, ಶಕ್ತಿವಂತರು, ಶ್ರಮಜೀವಿಗಳು. ಈ ದೇಶವೇ ಹೆಮ್ಮೆಪಡುವಂತೆ ರಾಜ್ಯವನ್ನು ಕಟ್ಟಿದ್ದೀರಿ. ವಿಶ್ವದ ಎಲ್ಲೆಡೆ ನಿಮ್ಮ ಪರಿಶ್ರಮ ಗುರುತಿಸಲಾಗುತ್ತಿದೆ. ಐಟಿ ಬಿಬಿ ಕ್ಷೇತ್ರ, ಕೈಗಾರಿಕಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ್ದೀರಿ” ಎಂದು ಹೇಳಿದರು.

“ನೀವು ಕರ್ನಾಟಕ ಭುವನೇಶ್ವರಿ ಹಾಗೂ ತಾಯಿ ಚಾಮುಂಡೇಶ್ವರಿಯ ಮಕ್ಕಳು. ಈ ನಾಡು ಅತ್ಯಂತ ಪ್ರಬಲಶಾಲಿ ಮಹಿಳೆಯರಾದ ಕಿತ್ತೂರು ರಾಣಿ ಚೆನ್ನಮ್ಮನ ಮಕ್ಕಳು. ನಿಮ್ಮಲ್ಲಿ ಅಹಿಂಸೆಯ ಗುಣ ನಿಮ್ಮ ಇತಿಹಾಸದಲ್ಲಿ ಅಡಗಿದೆ. ಬಸವಣ್ಣ ಅವರು ಪ್ರತಿಯೊಬ್ಬ ಮನುಷ್ಯನ ಪ್ರಾಮುಖ್ಯತೆಯನ್ನು ಸಾರಿದ್ದಾರೆ. ಬಸವಣ್ಣನವರಿಗೆ ಎಲ್ಲರೂ ಸಮಾನರು. ಅವರಿಗೆ ಜಾತಿ, ಧರ್ಮ, ಲಿಂಗದ ಭೇದವಿರಲಿಲ್ಲ. ಮಹಿಳೆಯರು ನಾಡಿನ ಸಂಸ್ಕೃತಿ ಕಾಪಾಡಿ, ನಮ್ಮ ಸಮಾಜವನ್ನು ಕಟ್ಟುವಲ್ಲಿ ಮಹಿಳೆಯರು ಸದಾ ಶ್ರಮಿಸಿದ್ದಾರೆ” ಎಂದರು.

“ನಾನು ಬೆಳೆದಿದ್ದು ತಾಯಿ ಸೋನಿಯಾಗಾಂಧಿ ಅವರನ್ನು ನೋಡಿಕೊಂಡು. ತನ್ನ 21ನೇ ವಯಸ್ಸಿನಲ್ಲಿ ತಂದೆ ರಾಜೀವ್ ಗಾಂಧಿ ಅವರನ್ನು ಪ್ರೀತಿಸಿ, ತಾನು ಹುಟ್ಟಿದ ಇಟಲಿ ಬಿಟ್ಟು ಭಾರತಕ್ಕೆ ಆಗಮಿಸುತ್ತಾರೆ. ಆಕೆ ಇಲ್ಲಿನ ಸಂಸ್ಕೃತಿ, ಆಚಾರ ವಿಚಾರ, ಭಾಷೆಗಳನ್ನು ಇಂದಿರಾ ಗಾಂಧಿ ಅವರಿಂದ ಕಲಿತರು. ಆಕೆ ತನ್ನ 44ನೇ ವಯಸ್ಸಿನಲ್ಲಿ ಗಂಡನನ್ನು ಕಳೆದುಕೊಂಡರು. ಆಕೆ ರಾಜಕೀಯದ ಬಗ್ಗೆ ಆಸಕ್ತಿ ಇಲ್ಲದಿದ್ದರೂ ದೇಶದ ಸೇವೆ ಮಾಡಲು ರಾಜಕೀಯದಲ್ಲಿ ಇದ್ದಾರೆ” ಎಂದು ಹೇಳಿದರು.

“ನಿಮ್ಮ ಜೀವನದಲ್ಲಿ ಏನೇ ಆಗಲಿ, ಎಷ್ಟೇ ಕಷ್ಟ ಬರಲಿ, ಅದು ಮನೆಯಲ್ಲಾಗಲಿ, ಕೆಲದ ವಿಚಾರದಲ್ಲಾಗಲಿ, ನೀವು ಅವುಗಳನ್ನು ಮೆಟ್ಟಿ ನಿಲ್ಲುವ ಸಾಮರ್ಥ್ಯ ನಿಮ್ಮಲ್ಲಿದೆ. ಇಲ್ಲಿರುವ ಪ್ರತಿ ಸಹೋದರಿಯರು ದೊಡ್ಡ ಸವಾಲು ಎದುರಿಸಿದ್ದೀರಿ ಎಂದು ನನಗೆ ಗೊತ್ತಿದೆ. ನಿಮ್ಮ ಮನೆಯನ್ನು ಒಟ್ಟಾಗಿಟ್ಟು, ನಿಮ್ಮ ಜೀವನದ ಸಮಸ್ಯೆಗಳನ್ನು ಬಹಳ ಧೈರ್ಯವಾಗಿ ಎದುರಿಸುತ್ತಿದ್ದೀರಿ. ಇಷ್ಟಾದರೂ ನಿಮ್ಮ ಜೀವನದಲ್ಲಿ ಬದಲಾವಣೆ ತರುವ ಸಾಮರ್ಥ್ಯ ನಿಮ್ಮಲ್ಲಿದೆ” ಎಂದು ಮಹಿಳೆಯರಿಗೆ ಸ್ಪೂರ್ತಿದಾಯಕ ಮಾತುಗಳನ್ನು ಹೇಳಿದರು.

“ನಾನು ಬಿಜೆಪಿಯನ್ನು ಟೀಕಿಸುವುದಿಲ್ಲ. ನಾನು ಇಲ್ಲಿರುವ ಮಹಿಳೆಯರಿಗೆ ಒಂದು ಪ್ರಶ್ನೆ ಕೇಳುತ್ತೇನೆ. ಬಿಜೆಪಿ ಬಹಳ ದಿನಗಳಿಂದ ಅಧಿಕಾರದಲ್ಲಿದೆ ನಿಮ್ಮ ಜೀವನದಲ್ಲಿ ಸುಧಾರಣೆ ಕಂಡಿದ್ದೀರಾ? ಬೆಲೆಗಳು ಇಳಿಕೆಯಾಗಿವೆಯೇ? ನಿಮ್ಮ ಬದುಕಿನಲ್ಲಿ ಸಕಾರಾತ್ಮಕ ವಿಚಾರಗಳಿವೆಯೇ? ನೀವು ಸಂತೋಷವಾಗಿದ್ದೀರಾ?” ಎಂದು ಪ್ರಶ್ನೆಗಳನ್ನು ಕೇಳಿದರು.

ಇದನ್ನೂ ಓದಿ: ಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ಒಪಿಎಸ್ ಜಾರಿಗೆ ಹಿಮಾಚಲ ಕ್ಯಾಬಿನೆಟ್ ಅಸ್ತು

“ಮುಂದಿನ ಕೆಲ ದಿನಗಳಲ್ಲಿ ಚುನಾವಣೆ ಬರುತ್ತಿವೆ. ನೀವು ಕಳೆದ ಕೆಲ ವರ್ಷಗಳ ಆಡಳಿತವನ್ನು ನೋಡಿ, ಯಾರು ಉತ್ತಮರು ಎಂದು ನೀವೇ ತುಲನೆ ಮಾಡಿ, ಯಾರು ನಿಮಗೆ ಅಗತ್ಯವಿರುವ ನೆರವು ನೀಡಿದ್ದಾರೆ ಎಂದು ತೀರ್ಮಾನಿಸಿ. ಕರ್ನಾಟಕದಲ್ಲಿ ಮಹಿಳೆಯರ ಪರಿಸ್ಥಿತಿ ನೀಜಕ್ಕೂ ನಾಚಿಕೆಗೇಡಿನ ವಿಚಾರವಿದೆ. ನಿಮ್ಮ ಸಚಿವರು ಉದ್ಯೋಗ ನೀಡಲು 40% ಲಂಚ ಪಡೆಯುತ್ತಿದ್ದಾರೆ ಎಂದು ಕೇಳಿದೆ. 1.50 ಲಕ್ಷ ಕೋಟಿ ನಿಮ್ಮ ಹಣವನ್ನು ಭ್ರಷ್ಟಾಚಾರದ ಮೂಲಕ ಲೂಟಿ ಮಾಡಿದ್ದಾರೆ” ಎಂದು ಹೇಳಿದರು.

“ಬೆಂಗಳೂರಿನಲ್ಲಿ 8 ಸಾವಿರ ಕೋಟಿ ಬಜೆಟ್ ಇದ್ದರೆ ಅದರಲ್ಲಿ 3,200 ಕೋಟಿ ಇವರ ಜೇಬಿಗೆ ಹೋಗುತ್ತದೆ. ಪಿಎಸ್ಐ ಹಗರಣದಂತೆ ಹಲವು ನೇಮಕಾತಿ ಅಕ್ರಮಗಳಿವೆ. ಪಿಎಸ್ಐ ಹುದ್ದೆ ಮಾರಿಕೊಂಡಿದ್ದಾರೆ. ನೀವು ನಿಮ್ಮ ಮಕ್ಕಳು ಉತ್ತಮ ಕೆಲಸ ಪಡೆಯಲಿ ಎಂದು ಶಿಕ್ಷಣೆ ಕೊಟ್ಟು ಬೆಳೆಸುತ್ತೀರಾ? ಈ ರೀತಿ ಹಗರಣವಾದರೆ, ನೀವು ಪ್ರತಿಯೊಂದಕ್ಕೂ ಲಂಚ ಕೊಡಬೇಕಾಗಿದೆ. ಚಾಲಕರ ಪರವಾನಿಗೆ, ಪಡಿತರ ಪಡೆಯಲು ಲಂಚ ನೀಡಬೇಕು” ಎಂದು ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಹೇಳಿದರು.

“ಕೋವಿಡ್ ಸಮಯದಲ್ಲಿ ಸರ್ಕಾರ ಮಹಿಳೆಯರಿಗೆ ಯಾವುದೇ ರೀತಿಯ ನೆರವು ನೀಡಲಿಲ್ಲ. ಗಾರ್ಮೆಂಟ್ಸ್ ಕಾರ್ಮಿಕರಿಗೆ ಸರ್ಕಾರ ನೆರವು ನೀಡಲಿಲ್ಲ. ಬೆಂಗಳೂರಿನ ರಸ್ತೆಗಳು ಗುಂಡಿಮಯವಾಗಿವೆ. ರೈತರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ರಾಜ್ಯದ 2.50 ಲಕ್ಷ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ತುಂಬಿಲ್ಲ. ಮಹಿಳೆಯರ ಮೇಲಿನ ಅಪರಾಧ ಹೆಚ್ಚಳವಾಗಿದ್ದು, ಪ್ರತಿನಿತ್ಯ ಮಹಿಳೆಯರ ಮೇಲೆ 46 ಅಪರಾಧ ನಡೆಯುತ್ತಿವೆ” ಎಂದರು.

“ನೀವು ಕಾಂಗ್ರೆಸ್ ಅವಧಿಯಲ್ಲಿ ಅಡುಗೆ ಅನಿಲ ಸಿಲಿಂಡರ್ ಎಷ್ಟಕ್ಕೆ ಪಡೆಯುತ್ತಿದ್ದಿರಿ, ಈಗ ಅದು ಎಷ್ಟಾಗಿದೆ ಎಂದು ನಿಮಗೆ ಗೊತ್ತಿದೆ. ಜೀವನಸಾಗಿಸುವುದು ದುಬಾರಿಯಾಗಿದ್ದು, ಕಷ್ಟವಾಗಿದೆ. ಮಕ್ಕಳ ಶುಲ್ಕವಾಗಲಿ, ಮದುವೆ ಸಮಾರಂಭವಾಗಲಿ ಎಲ್ಲವೂ ಆರ್ಥಿಕ ಹೊರೆಯಾಗಿವೆ. ಆದರೂ ಸರ್ಕಾರದ ಹೊಣೆಗಾರಿಕೆಯನ್ನು ಪ್ರಶ್ನೆ ಮಾಡುತ್ತಿಲ್ಲ. ಹೀಗಾಗಿ ಸರ್ಕಾರ ಪಠ್ಯ ಪರಿಷ್ಕರಣೆ ಹೆಸರಲ್ಲಿ ಮಹನೀಯರ ವಿಚಾರವನ್ನು ತೆಗೆಯುವ ಮೂಲಕ ಗಮನ ಬೇರೆಡೆ ಸೆಳೆಯುತ್ತಿದ್ದಾರೆ. ಇಡೀ ಆಡಳಿಯ ಯಂತ್ರ ಕೆಲವು ಬಂಡವಾಳ ಶಾಹಿಗಳ ಹಿತ ಕಾಯಲು ಇದೆ. ಕೆಲವರು ಮಾತ್ರ ಶ್ರೀಮಂತರಾಗುತ್ತಿದ್ದರೆ, ಉಳಿದ ಭಾರತ ದಿನನಿತ್ಯ ಬಡವಾಗುತ್ತಿದೆ” ಎಂದು ಹೇಳಿದರು.

“ಸಾರ್ವಜನಿಕ ಉದ್ದಿಮೆಗಳನ್ನು ಖಾಸಗಿಕರಣ ಮಾಡುತ್ತಿದ್ದಾರೆ. ಕೃಷಿಗೆ ಆರ್ಥಿಕ ನೆರವು ನೀಡದೇ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು ಸರ್ಕಾರದ ಜಿಎಸ್ ಟಿ, ನೋಟು ರದ್ಧತಿಗಳಿಂದ ಕೆಟ್ಟ ನಿರ್ಧಾರಗಳಿಂದ ನರಳುವಂತಾಗಿವೆ. ಕಾಂಗ್ರೆಸ್ ಸರ್ಕಾರ ಭೂ ಸುಧಾರಣಾ ಕಾಯ್ದೆಯಂತಹ ಕಾರ್ಯಕ್ರಮಗಳನ್ನು ನೀಡಿತ್ತು. ರೈತರ 8 ಸಾವಿರ ಕೋಟಿ ಸಾಲ ಮನ್ನಾ, ಬೆಂಗಳೂರಿನಲ್ಲಿ ಐಟಿ ಕ್ಷೇತ್ರಗಳ ಅಭಿವೃದ್ಧಿ ಮಾಡಲಾಗಿದೆ. ಅನ್ನಭಾಗ್ಯದ ಮೂಲಕ 3.80 ಲಕ್ಷ ಜನರಿಗೆ ಅಕ್ಕಿ, ಬೇಳೆಯಂತಹ ದಿನಸಿ ನೀಡಿದೆ. ಇಂದಿರಾ ಕ್ಯಾಂಟೀನ್, ಕ್ಷೀರ ಭಾಗ್ಯ, ಮಾತೃಪೂರ್ಣದಂತಹ ಕಾರ್ಯಕ್ರಮಗಳನ್ನು ನಿಮಗಾಗಿ ಕಾಂಗ್ರೆಸ್ ಸರ್ಕಾರ ನೀಡಿತ್ತು. ಹೀಗೆ ಸ್ವಸಹಾಯಕ ಯೋಜನೆ, ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳಂದತಹ ಕಾರ್ಯಕ್ರಮ ನೀಡಿದೆ” ಎಂದು ತಿಳಿಸಿದರು.

“ಈ ನಾ ನಾಯಕಿ ಕಾರ್ಯಕ್ರಮ ಮೂಲಕ ನೀವು ನಾಯಕರಾಗುವ ಮೂಲಕ ನಿಮ್ಮ ಜೀವನ ಬದಲಿಸಿಕೊಳ್ಳಿ. ಗೃಹಲಕ್ಷ್ಮೀ ಯೋಜನೆ ಮೂಲಕ ಪ್ರತಿ ಕುಟುಂಬದ ಓರ್ವ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ವರ್ಷಕ್ಕೆ 24 ಸಾವಿರ ಆರ್ಥಿಕ ನೆರವು ನೀಡಲಾಗುವುದು. ನನಗೆ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದಾಗ ನೀವು ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಮಾಡಿದರೆ ಮಾತ್ರ ನಾನು ಈ ಕಾರ್ಯಕ್ರಮಕ್ಕೆ ಬರುವುದಾಗಿ ಹೇಳಿದ್ದೆ. ಮಹಿಳೆಯರು ಸಶಕ್ತರಾಗಲು ಕೇವಲ ಒಂದು ಕಾರ್ಯಕ್ರಮ ನೀಡುತ್ತಿಲ್ಲ. ಅನೇಕ ವಿಚಾರವಾಗಿ ಕಾಂಗ್ರೆಸ್ ಸರ್ಕಾರ ನೆರವು ನೀಡಲು ನಿರ್ಧರಿಸಿದ್ದು, ಅದರ ಭಾಗವಾಗಿ ಇತ್ತೀಚೆಗೆ ಗೃಹಜ್ಯೋತಿ ಕಾರ್ಯಕ್ರಮದ ಮೂಲಕ ಪ್ರತಿ ಮನೆಗೆ 200 ಯುನಿಟ್ ವಿದ್ಯತ್ ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ. ಇದರ ಜತೆಗೆ ಮಹಿಳಾ ಪ್ರಣಾಳಿಕೆ ಮೂಲಕ ಇನ್ನಷ್ಟು ಜನಪರ ಕಾರ್ಯಕ್ರಮವನ್ನು ನಮ್ಮ ನಾಯಕರು ನೀಡಲಿದ್ದಾರೆ” ಎಂದು ಹೇಳಿದರು.

“ಉತ್ತರಪ್ರದೇಶದಲ್ಲಿ ಮಹಿಳಾ ಪ್ರಣಾಳಿಕೆ ಬಿಡುಗಡೆ ಮಾಡಿದಾಗ ಹಲವರು ನಮ್ಮನ್ನು ನೋಡಿ ನಕ್ಕರು. ಆದರೂ ನಮಗೆ ಹೆಚ್ಚಿನ ಮತಗಳು ಬರಲಿಲ್ಲ. ಆದರೆ ಪ್ರತಿ ರಾಜಕೀಯ ಪಕ್ಷಗಳು ಮಹಿಳೆಯರ ಆಗತ್ಯವನ್ನು ಗುರುತಿಸಿ, ಅವುಗಳಿಗೆ ಸ್ಪಂದಿಸುವಂತೆ ಮಾಡಿದೆವು. ಪರಿಣಾಮ ಇಂದು ಬಿಜೆಪಿ ಕೂಡ ತಾನು ಮಹಿಳೆಯರಿಗಾಗಿ ಏನು ಮಾಡುತ್ತೇವೆ ಎಂದು ಜಾಹೀರಾತು ನೀಡಿದೆ. ನಾವೆಲ್ಲರೂ ಮಹಿಳೆಯರು ನಮ್ಮ ಶಕ್ತಿ ತೋರಿಸುವ ಕಾಲ ಬಂದಿದೆ. ಈ ಚುನಾವಣೆಯನ್ನು ನಿಮ್ಮ ಚುನಾವಣೆ, ನಿಮ್ಮ ಭವಿಷ್ಯಕ್ಕಾಗಿ ಮಾಡಬೇಕಾಗಿದೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...