Homeಮುಖಪುಟಕ್ರೀಡಾಪಟುಗಳ ಹೋರಾಟ ಬೆಂಬಲಿಸಲು ಪ್ರಿಯಾಂಕಾ ಗಾಂಧಿ ಕರೆ; ಕೇಂದ್ರದ ವಿರುದ್ಧ ವಾಗ್ದಾಳಿ

ಕ್ರೀಡಾಪಟುಗಳ ಹೋರಾಟ ಬೆಂಬಲಿಸಲು ಪ್ರಿಯಾಂಕಾ ಗಾಂಧಿ ಕರೆ; ಕೇಂದ್ರದ ವಿರುದ್ಧ ವಾಗ್ದಾಳಿ

- Advertisement -
- Advertisement -

ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ (ಡಬ್ಲ್ಯುಎಫ್‌ಐ), ಬಿಜೆಪಿಯ ಸಂಸದ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್ ಅವರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದ್ದು, ಅವರು ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೇಶದ ಪ್ರಮುಖ ಕುಸ್ತಿಪಟುಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ಕ್ರೀಡಾಪಟುಗಳು ದೇಶದ ಹೆಮ್ಮೆಯಾಗಿದ್ದು, ನಮ್ಮ ಸಹೋದರಿಯರನ್ನು ಬೆಂಬಲಿಸೋಣ ಎಂದು ಕರೆ ನೀಡಿರುವ ಪ್ರಿಯಾಂಕಾ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಕ್ರೀಡಾಪಟುಗಳು ದೇಶದ ಮೌಲ್ಯ. ಅವರ ಬಗ್ಗೆ ದೇಶವೇಕೆ ಹೆಮ್ಮೆಪಡುತ್ತಿದೆ ಹೇಳಿ.. ಯಾಕೆಂದರೆ ಎಷ್ಟೇ ಕಷ್ಟಗಳು ಬಂದರೂ ಸಹಿಸಿಕೊಂಡು ದಣಿವರಿಯದೆ ದೇಶಕ್ಕೋಸ್ಕರ ದುಡಿದು ಪದಕಗಳನ್ನು ಗೆಲ್ಲುತ್ತಾರೆ. ಗೆದ್ದಾಗ ಅವರ ಗೆಲುವು ನಮ್ಮ ಗೆಲುವೇ ಎಂದು ದೇಶವೇ ಮುಗುಳ್ನಗುತ್ತದೆ.”

”ಮಹಿಳಾ ಆಟಗಾರತಿಯರ ಗೆಲುವು ದೊಡ್ಡದು. ಆ ಕ್ರೀಡಾಪಟುಗಳು ಈಗ ಸಂಸತ್ತಿನ ಎದುರುಗಡೆಯ ರಸ್ತೆಯಲ್ಲಿ ಕಣ್ಣೀರು ಸುರಿಸುತ್ತ ಕುಳಿತಿದ್ದಾಳೆ. ಈ ಹಿಂದೆಯೂ ಅವರ ಮೇಲೆ ನಡೆಯದ ಶೋಷಣೆ ವಿರುದ್ಧ ಅವರು ಪ್ರತಿಭಟಿಸಿದ್ದರು. ಈಗಲೂ ಪ್ರತಿಭಟಿಸುತ್ತಿದ್ದಾರೆ ಆದರೆ ಅವರ ಅಹವಾಲು ಆಲಿಸುವವರಿಲ್ಲ” ಎಂದಿದ್ದಾರೆ.

”ಸಧೃಡ ದೇಹ ಹೋಂದಿರುವ ಆ ಹೆಣ್ಣು ಮಕ್ಕಳು ಮುಗ್ದರು. ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ವಿಚಾರಣೆ ನಡೆಸುತ್ತಾರೆ ಎಂದು ಸರ್ಕಾರ ಹೇಳಿದಾಗ ಈ ಹುಡುಗಿಯರು ನಂಬಿದ್ದರು. ಆದರೆ ತನಿಖೆ ನಡೆಯಲಿಲ್ಲ ಇನ್ನು ಶಿಕ್ಷೆಯ ಪ್ರಶ್ನೆಯೇ ಉದ್ಭವಿಸಲಿಲ್ಲ. ಅಪರಾಧಿಗಳನ್ನು ರಕ್ಷಿಸಲು ಸರ್ಕಾರ ಬಯಸುತ್ತದೆಯೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದನ ಮೇಲೆ ಲೈಂಗಿಕ ಕಿರುಕುಳ ಆರೋಪ: #MeToo ಪ್ರತಿಭಟನೆಗೆ ‘ಎಲ್ಲಾ ಪಕ್ಷಗಳಿಗೂ ಸ್ವಾಗತ’ ಎಂದ ಕುಸ್ತಿಪಟುಗಳು

ಭಾರತ್ ಜೋಡೊ ಯಾತ್ರೆಯಲ್ಲಿ ಬಾಲಕಿಯ ನೋವನ್ನು ಆಲಿಸಿದ ವಿಪಕ್ಷ ನಾಯಕರನ್ನು ದೆಹಲಿ ಪೊಲೀಸರು ವಿಚಾರಣೆ ನಡೆಸಿದ್ದರು. ಆದರೆ ಅದೇ ಪೊಲೀಸರು ದೇಶದ ಗೌರವ ಹೆಚ್ಚಿಸುವ ಕ್ರೀಡಾಪಟುಗಳ ಬೇಡಿಕೆಯನ್ನು ನಿರ್ಲಕ್ಷಿಸಿದ್ದಾರೆ. ದೆಹಲಿ ಪೊಲೀಸರ ಮೇಲೆ ಯಾರ ಒತ್ತಡವಿದೆ? ಎಂದು ಪ್ರಶ್ನಿಸಿದ್ದಾರೆ.

”ಯಾವಾಗ ಪಕ್ಷ ಹಾಗೂ ಅದರ ನಾಯಕರ ದುರಹಂಕಾರ ಮಿತಿ ಮೀರುತ್ತದೆಯೋ ಆಗ ಅಂತಹ ದನಿಗಳನ್ನು ಹತ್ತಿಕ್ಕಲ್ಪಡುತ್ತವೆ. ಬನ್ನಿ ನಮ್ಮ ಸಹೋದರಿಯರನ್ನು ಬೆಂಬಲಿಸೋಣ. ದೇಶದ ಗೌರವದ ವಿಚಾರ ಇದಾಗಿದೆ” ಎಂದು ಪ್ರಿಯಾಂಕಾ ಗಾಂಧಿ ಮನವಿ ಮಾಡಿದ್ದಾರೆ.

ಪ್ರತಿಭಟನೆಯಲ್ಲಿ ಭಾಗಿಯಾಗಲು ಎಲ್ಲ ಪಕ್ಷಗಳಿಗೂ ಸ್ವಾಗತ ಎಂದ ಕ್ರೀಡಾಪಟುಗಳು

ಈ ಹಿಂದೆ ಜನವರಿಯಲ್ಲಿ ಇದು ‘ಕ್ರೀಡಾಪಟುಗಳ ಪ್ರತಿಭಟನೆ’ ಎಂದು ಎಡ ನಾಯಕಿ ವೃಂದಾ ಕಾರಟ್ ಅವರನ್ನು ಪ್ರತಿಭಟನಾಕಾರರು ವೇದಿಕೆಗೆ ಬಿಟ್ಟಿರಲಿಲ್ಲ. ಆದರೆ, ಈ ಬಾರಿ ನಾವು ಯಾರನ್ನೂ ತಿರಸ್ಕರಿಸುವುದಿಲ್ಲ, ತಮ್ಮ ಪ್ರತಿಭಟನೆಯನ್ನು ಬೆಂಬಲಿಸಲು ಬಯಸುವವರು ಬಂದು ಸೇರಬಹುದು. ಬಿಜೆಪಿ, ಕಾಂಗ್ರೆಸ್, ಎಎಪಿ, ಅಥವಾ ಯಾವುದೇ ಪಕ್ಷವಾಗಲಿ ನಮ್ಮ ಪ್ರತಿಭಟನೆಗೆ ಸೇರಲು ಎಲ್ಲಾ ಪಕ್ಷಗಳಿಗೆ ಸ್ವಾಗತವಿದೆ. ನಾವು ಯಾವುದೇ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಹೇಳಿದ್ದರು.

ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕ್ರೀಡಾಪಟುಗಳ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...