Homeಮುಖಪುಟಕ್ರೀಡಾಪಟುಗಳ ಹೋರಾಟ ಬೆಂಬಲಿಸಲು ಪ್ರಿಯಾಂಕಾ ಗಾಂಧಿ ಕರೆ; ಕೇಂದ್ರದ ವಿರುದ್ಧ ವಾಗ್ದಾಳಿ

ಕ್ರೀಡಾಪಟುಗಳ ಹೋರಾಟ ಬೆಂಬಲಿಸಲು ಪ್ರಿಯಾಂಕಾ ಗಾಂಧಿ ಕರೆ; ಕೇಂದ್ರದ ವಿರುದ್ಧ ವಾಗ್ದಾಳಿ

- Advertisement -
- Advertisement -

ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ (ಡಬ್ಲ್ಯುಎಫ್‌ಐ), ಬಿಜೆಪಿಯ ಸಂಸದ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್ ಅವರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದ್ದು, ಅವರು ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೇಶದ ಪ್ರಮುಖ ಕುಸ್ತಿಪಟುಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ಕ್ರೀಡಾಪಟುಗಳು ದೇಶದ ಹೆಮ್ಮೆಯಾಗಿದ್ದು, ನಮ್ಮ ಸಹೋದರಿಯರನ್ನು ಬೆಂಬಲಿಸೋಣ ಎಂದು ಕರೆ ನೀಡಿರುವ ಪ್ರಿಯಾಂಕಾ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಕ್ರೀಡಾಪಟುಗಳು ದೇಶದ ಮೌಲ್ಯ. ಅವರ ಬಗ್ಗೆ ದೇಶವೇಕೆ ಹೆಮ್ಮೆಪಡುತ್ತಿದೆ ಹೇಳಿ.. ಯಾಕೆಂದರೆ ಎಷ್ಟೇ ಕಷ್ಟಗಳು ಬಂದರೂ ಸಹಿಸಿಕೊಂಡು ದಣಿವರಿಯದೆ ದೇಶಕ್ಕೋಸ್ಕರ ದುಡಿದು ಪದಕಗಳನ್ನು ಗೆಲ್ಲುತ್ತಾರೆ. ಗೆದ್ದಾಗ ಅವರ ಗೆಲುವು ನಮ್ಮ ಗೆಲುವೇ ಎಂದು ದೇಶವೇ ಮುಗುಳ್ನಗುತ್ತದೆ.”

”ಮಹಿಳಾ ಆಟಗಾರತಿಯರ ಗೆಲುವು ದೊಡ್ಡದು. ಆ ಕ್ರೀಡಾಪಟುಗಳು ಈಗ ಸಂಸತ್ತಿನ ಎದುರುಗಡೆಯ ರಸ್ತೆಯಲ್ಲಿ ಕಣ್ಣೀರು ಸುರಿಸುತ್ತ ಕುಳಿತಿದ್ದಾಳೆ. ಈ ಹಿಂದೆಯೂ ಅವರ ಮೇಲೆ ನಡೆಯದ ಶೋಷಣೆ ವಿರುದ್ಧ ಅವರು ಪ್ರತಿಭಟಿಸಿದ್ದರು. ಈಗಲೂ ಪ್ರತಿಭಟಿಸುತ್ತಿದ್ದಾರೆ ಆದರೆ ಅವರ ಅಹವಾಲು ಆಲಿಸುವವರಿಲ್ಲ” ಎಂದಿದ್ದಾರೆ.

”ಸಧೃಡ ದೇಹ ಹೋಂದಿರುವ ಆ ಹೆಣ್ಣು ಮಕ್ಕಳು ಮುಗ್ದರು. ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ವಿಚಾರಣೆ ನಡೆಸುತ್ತಾರೆ ಎಂದು ಸರ್ಕಾರ ಹೇಳಿದಾಗ ಈ ಹುಡುಗಿಯರು ನಂಬಿದ್ದರು. ಆದರೆ ತನಿಖೆ ನಡೆಯಲಿಲ್ಲ ಇನ್ನು ಶಿಕ್ಷೆಯ ಪ್ರಶ್ನೆಯೇ ಉದ್ಭವಿಸಲಿಲ್ಲ. ಅಪರಾಧಿಗಳನ್ನು ರಕ್ಷಿಸಲು ಸರ್ಕಾರ ಬಯಸುತ್ತದೆಯೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದನ ಮೇಲೆ ಲೈಂಗಿಕ ಕಿರುಕುಳ ಆರೋಪ: #MeToo ಪ್ರತಿಭಟನೆಗೆ ‘ಎಲ್ಲಾ ಪಕ್ಷಗಳಿಗೂ ಸ್ವಾಗತ’ ಎಂದ ಕುಸ್ತಿಪಟುಗಳು

ಭಾರತ್ ಜೋಡೊ ಯಾತ್ರೆಯಲ್ಲಿ ಬಾಲಕಿಯ ನೋವನ್ನು ಆಲಿಸಿದ ವಿಪಕ್ಷ ನಾಯಕರನ್ನು ದೆಹಲಿ ಪೊಲೀಸರು ವಿಚಾರಣೆ ನಡೆಸಿದ್ದರು. ಆದರೆ ಅದೇ ಪೊಲೀಸರು ದೇಶದ ಗೌರವ ಹೆಚ್ಚಿಸುವ ಕ್ರೀಡಾಪಟುಗಳ ಬೇಡಿಕೆಯನ್ನು ನಿರ್ಲಕ್ಷಿಸಿದ್ದಾರೆ. ದೆಹಲಿ ಪೊಲೀಸರ ಮೇಲೆ ಯಾರ ಒತ್ತಡವಿದೆ? ಎಂದು ಪ್ರಶ್ನಿಸಿದ್ದಾರೆ.

”ಯಾವಾಗ ಪಕ್ಷ ಹಾಗೂ ಅದರ ನಾಯಕರ ದುರಹಂಕಾರ ಮಿತಿ ಮೀರುತ್ತದೆಯೋ ಆಗ ಅಂತಹ ದನಿಗಳನ್ನು ಹತ್ತಿಕ್ಕಲ್ಪಡುತ್ತವೆ. ಬನ್ನಿ ನಮ್ಮ ಸಹೋದರಿಯರನ್ನು ಬೆಂಬಲಿಸೋಣ. ದೇಶದ ಗೌರವದ ವಿಚಾರ ಇದಾಗಿದೆ” ಎಂದು ಪ್ರಿಯಾಂಕಾ ಗಾಂಧಿ ಮನವಿ ಮಾಡಿದ್ದಾರೆ.

ಪ್ರತಿಭಟನೆಯಲ್ಲಿ ಭಾಗಿಯಾಗಲು ಎಲ್ಲ ಪಕ್ಷಗಳಿಗೂ ಸ್ವಾಗತ ಎಂದ ಕ್ರೀಡಾಪಟುಗಳು

ಈ ಹಿಂದೆ ಜನವರಿಯಲ್ಲಿ ಇದು ‘ಕ್ರೀಡಾಪಟುಗಳ ಪ್ರತಿಭಟನೆ’ ಎಂದು ಎಡ ನಾಯಕಿ ವೃಂದಾ ಕಾರಟ್ ಅವರನ್ನು ಪ್ರತಿಭಟನಾಕಾರರು ವೇದಿಕೆಗೆ ಬಿಟ್ಟಿರಲಿಲ್ಲ. ಆದರೆ, ಈ ಬಾರಿ ನಾವು ಯಾರನ್ನೂ ತಿರಸ್ಕರಿಸುವುದಿಲ್ಲ, ತಮ್ಮ ಪ್ರತಿಭಟನೆಯನ್ನು ಬೆಂಬಲಿಸಲು ಬಯಸುವವರು ಬಂದು ಸೇರಬಹುದು. ಬಿಜೆಪಿ, ಕಾಂಗ್ರೆಸ್, ಎಎಪಿ, ಅಥವಾ ಯಾವುದೇ ಪಕ್ಷವಾಗಲಿ ನಮ್ಮ ಪ್ರತಿಭಟನೆಗೆ ಸೇರಲು ಎಲ್ಲಾ ಪಕ್ಷಗಳಿಗೆ ಸ್ವಾಗತವಿದೆ. ನಾವು ಯಾವುದೇ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಹೇಳಿದ್ದರು.

ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕ್ರೀಡಾಪಟುಗಳ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...