Homeಮುಖಪುಟಮೋದಿ ವಿರುದ್ಧ ಸ್ಪರ್ಧಿಸುವ ಎರಡನೇ ಸುಳಿವು ಕೊಟ್ಟ ಪ್ರಿಯಾಂಕಾ ಗಾಂಧಿ!

ಮೋದಿ ವಿರುದ್ಧ ಸ್ಪರ್ಧಿಸುವ ಎರಡನೇ ಸುಳಿವು ಕೊಟ್ಟ ಪ್ರಿಯಾಂಕಾ ಗಾಂಧಿ!

- Advertisement -
ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜೂನಿಯರ್ ಇಂದಿರಾ ಗಾಂಧಿ ಎಂತಲೇ ಪ್ರಸಿದ್ಧರಾಗಿರುವ ಪ್ರಿಯಾಂಕಾ ಗಾಂಧಿ ಈ ಚುನಾವಣೆಯಲ್ಲಿ ವಾರಣಾಸಿಯಿಂದ ಪ್ರಧಾನಿ ಮೋದಿಯವರ ವಿರುದ್ಧ ಕಣಕ್ಕಿಳಿಯುವ ಸೂಚನೆ ರವಾನಿಸಿದ್ದಾರೆ. ರಾಹುಲ್ ಗಾಂಧಿ ಸ್ಪರ್ಧಿಸಿರುವ ಕೇರಳದ ವಯನಾಡ್‍ನಲ್ಲಿ ಪ್ರಚಾರ ಮಾಡುವ ಸಂದರ್ಭದಲ್ಲಿ ಮಾಧ್ಯಮದವರು ಕೇಳಿದ “ನೀವು ವಾರಣಾಸಿಯಿಂದ ಸ್ಪರ್ಧಿಸುತ್ತೀರಿ ಎಂಬ ಸುದ್ದಿ ಇದೆ. ಇದು ನಿಜವಾ?” ಎಂಬ ಪ್ರಶ್ನೆಗೆ ನಗುತ್ತಲೇ ಉತ್ತರಿಸಿರುವ ಪ್ರಿಯಾಂಕ “ಒಂದುವೇಳೆ ಕಾಂಗ್ರೆಸ್ ಅಧ್ಯಕ್ಷರು ಸ್ಪರ್ಧಿಸಲು ಹೇಳಿದರೆ, ನಾನು ಖುಷಿಯಿಂದ ಸ್ಪರ್ಧಿಸುತ್ತೇನೆ” ಎಂದಿದ್ದಾರೆ. ಆ ಮೂಲಕ ಮೋದಿ ವಿರುದ್ಧದ ತನ್ನ ಸೆಣೆಸಾಟದ ನಿರ್ಧಾರವನ್ನು ಅಣ್ಣ ರಾಹುಲ್ ಗಾಂಧಿಯ ಅಂಗಳಕ್ಕೆ ತಳ್ಳಿದ್ದಾರೆ.
ತಮ್ಮ ಕುಟುಂಬದ ಭದ್ರ ಕೋಟೆಗಳಾದ ಅಮೇಥಿ, ರಾಯ್‍ಬರೇಲಿ ಕ್ಷೇತ್ರಗಳ ಚುನಾವಣಾ ಉಸ್ತುವಾರಿಗಷ್ಟೇ ಸೀಮಿತವಾಗಿದ್ದ ಪ್ರಿಯಾಂಕಾ ಗಾಂಧಿಯವರು ಈ ವರ್ಷದ ಫೆಬ್ರವರಿಯಲ್ಲಷ್ಟೆ ಪೂರ್ವ ಉತ್ತರ ಪ್ರದೇಶದ ಪ್ರಧಾನ ಕಾರ್ಯದರ್ಶಿಯಾಗುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಕಾಲಿರಿಸಿದ್ದಾರೆ. ಆದರೆ ಈ ಸಲದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ, ಇಲ್ಲವಾ ಎಂಬ ಬಗ್ಗೆ ಯಾವ ಸ್ಪಷ್ಟ ಮಾಹಿತಿಯೂ ಇಲ್ಲ. ಆ ಕಾರಣಕ್ಕೆ ಅವರ ಸ್ಪರ್ಧೆಯ ಬಗ್ಗೆ ಊಹಾಪೋಹಗಳು ಕೇಳಿಬರುತ್ತಲೇ ಇವೆ.
ಕಳೆದ ತಿಂಗಳಷ್ಟೇ ತಮ್ಮ ತಾಯಿ ಸೋನಿಯಾ ಗಾಂಧಿಯವರು ಸ್ಪರ್ಧಿಸಲಿರುವ ರಾಯ್‍ಬರೇಲಿಯಿಂದ ನೀವು ಸ್ಪರ್ಧಿಸುತ್ತೀರಾ? ಎಂದು ಮಾಧ್ಯಮ ಪ್ರತಿನಿಧಿಯೊಬ್ಬರು ಕೇಳಿದ ಪ್ರಶ್ನೆಗೆ “ರಾಯ್‍ಬರೇಲಿಯೇ ಯಾಕೆ, ವಾರಣಾಸಿಯಿಂದ ಯಾಕಾಗಬಾರದು?” ಎಂಬ ಮರುಪ್ರಶ್ನೆ ಎಸೆದು ಅಚ್ಚರಿ ಮೂಡಿಸಿದ್ದರು. ಈ ಕುರಿತು ಚರ್ಚೆಗಳು ಶುರುವಾದ ನಂತರ ಪಕ್ಷ ಬಯಸುವ ಯಾವುದೇ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ಧ ಎಂಬರ್ಥದಲ್ಲಿ ಹೇಳಿದ್ದೆ ಎಂದು ಸ್ಪಷ್ಟೀಕರಣ ಕೊಟ್ಟಿದ್ದರು.
ಆದರೆ ವಯನಾಡ್‍ನಲ್ಲಿ ಕೊಟ್ಟಿರುವ ಈ ಹೇಳಿಕೆಯನ್ನು ಹಳೆಯ ಹೇಳಿಕೆಗಿಂತ ಗಂಭೀರವಾಗಿ ಪರಿಗಣಿಸಲು ಒಂದು ಕಾರಣವಿದೆ. ಒಂದು ತಿಂಗಳ ಹಿಂದಿನ ಪ್ರಿಯಾಂಕ ಹೇಳಿಕೆ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಕೇಳಿದಾಗ “ಅದು ಪ್ರಿಯಾಂಕ ಅವರ ಇಷ್ಟಕ್ಕೆ ಬಿಟ್ಟ ವಿಚಾರ” ಎಂದು ಹೇಳಿದ್ದರು. ಆದರೆ ಪ್ರಿಯಾಂಕರವರ ಈ ಹೊಸ ಹೇಳಿಕೆ ಹೊರಬೀಳುವುದಕ್ಕು ಒಂದು ವಾರ ಮುನ್ನ ಮತ್ತೆ ತೂರಿಬಂದ ವಾರಣಾಸಿ ಸ್ಪರ್ಧೆ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ ವಾರಾಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ ಸ್ಪರ್ಧಿಸುವ ವಿಚಾರದಲ್ಲಿ “ಕುತೂಹಲವನ್ನು ಜೀವಂತವಾಗಿಟ್ಟುಕೊಳ್ಳುವುದರಲ್ಲಿ ನಷ್ಟವೇನೂ ಇಲ್ಲ ತಾನೆ?” ಎಂದು ರಾಹುಲ್ ಪ್ರತಿಕ್ರಿಯಿಸಿದ್ದರು. ಅದಾದ ಒಂದು ವಾರಕ್ಕೆ ಪ್ರಿಯಾಂಕರಿಂದ ಈ ಹೇಳಿಕೆ ಹೊರಬಿದ್ದಿರೋದು ಕಾಂಗ್ರೆಸ್ ಪಾಳೆಯದಲ್ಲಿ ಹೊಸ ಹುಮ್ಮಸ್ಸು ಹುಟ್ಟುಹಾಕಿದೆ.
ನೋಡುವುದಕ್ಕಷ್ಟೇ ಇಂದಿರಾ ಗಾಂಧಿಯವರನ್ನು ಹೋಲದೆ, ಜನರ ಜೊತೆ ಆತ್ಮೀಯವಾಗಿ ಬೆರೆಯುವ ನಡವಳಿಕೆಯಲ್ಲೂ ಇಂದಿರಾ ಗಾಂಧಿಯವರ ಗುಣವನ್ನೇ ಹೋಲುವ, ಅವರ ಮೊಮ್ಮಗಳು ಪ್ರಿಯಾಂಕ ಗಾಂಧಿಯವರಿಗೆ ದೊಡ್ಡ ಅಭಿಮಾನಿ ಬಳಗವಿದೆ. 2014ರಲ್ಲೇ ಆಕೆ ಸಕ್ರಿಯ ಚುನಾವಣಾ ರಾಜಕಾರಣಕ್ಕೆ ಧುಮುಕ್ಕಿದ್ದರೆ ಫಲಿತಾಂಶವೇ ಬೇರೆಯಾಗಿರುತ್ತಿತ್ತು ಎಂದು ಕಾಂಗ್ರೆಸ್‍ನ ಹಲವು ಮುಖಂಡರು ಅಭಿಪ್ರಾಯ ಪಟ್ಟಿದ್ದಾರೆ. ಅಂದಹಾಗೆ, 2014ರಲ್ಲಿ ಮೋದಿ ವಿರುದ್ಧ ವಾರಣಾಸಿಯಿಂದ ಕಣಕ್ಕಿಳಿದಿದ್ದ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಸುಮಾರು ಎರಡು ಲಕ್ಷಗಳಷ್ಟು ಮತ ಪಡೆದಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಸೋತರೂ ಅರವಿಂದ್ ಕೇಜ್ರಿವಾಲ್ ಅವರಿಗೆ ರಿಸ್ಕ್ ತೆಗೆದುಕೊಳ್ಳಲು ಹಿಂಜರಿಯದ ಲೀಡರ್ ಎಂಬ ಇಮೇಜು ಬಂದಿತ್ತು. ಅದಾದ ನಂತರವೇ ಅವರ ಆಪ್ ಪಕ್ಷ ದಿಲ್ಲಿಯಲ್ಲಿ ನಡೆದ ಅಸೆಂಬ್ಲಿ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ಸ್ಥಾನಗಳಲ್ಲಿ ಗೆದ್ದು ಸರ್ಕಾರ ರಚಿಸಿದ್ದು.
ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 22ರಿಂದ 29ರವರೆಗೆ ಕಾಲಾವಕಾಶವಿದ್ದು, ಮೇ 19ರಂದು ಅಂದರೆ ಕೊನೆಯ ಹಂತದಲ್ಲಿ ಚುನಾವಣೆ ನಡೆಯಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...