Homeಮುಖಪುಟಮೋದಿ ವಿರುದ್ಧ ಸ್ಪರ್ಧಿಸುವ ಎರಡನೇ ಸುಳಿವು ಕೊಟ್ಟ ಪ್ರಿಯಾಂಕಾ ಗಾಂಧಿ!

ಮೋದಿ ವಿರುದ್ಧ ಸ್ಪರ್ಧಿಸುವ ಎರಡನೇ ಸುಳಿವು ಕೊಟ್ಟ ಪ್ರಿಯಾಂಕಾ ಗಾಂಧಿ!

- Advertisement -
ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜೂನಿಯರ್ ಇಂದಿರಾ ಗಾಂಧಿ ಎಂತಲೇ ಪ್ರಸಿದ್ಧರಾಗಿರುವ ಪ್ರಿಯಾಂಕಾ ಗಾಂಧಿ ಈ ಚುನಾವಣೆಯಲ್ಲಿ ವಾರಣಾಸಿಯಿಂದ ಪ್ರಧಾನಿ ಮೋದಿಯವರ ವಿರುದ್ಧ ಕಣಕ್ಕಿಳಿಯುವ ಸೂಚನೆ ರವಾನಿಸಿದ್ದಾರೆ. ರಾಹುಲ್ ಗಾಂಧಿ ಸ್ಪರ್ಧಿಸಿರುವ ಕೇರಳದ ವಯನಾಡ್‍ನಲ್ಲಿ ಪ್ರಚಾರ ಮಾಡುವ ಸಂದರ್ಭದಲ್ಲಿ ಮಾಧ್ಯಮದವರು ಕೇಳಿದ “ನೀವು ವಾರಣಾಸಿಯಿಂದ ಸ್ಪರ್ಧಿಸುತ್ತೀರಿ ಎಂಬ ಸುದ್ದಿ ಇದೆ. ಇದು ನಿಜವಾ?” ಎಂಬ ಪ್ರಶ್ನೆಗೆ ನಗುತ್ತಲೇ ಉತ್ತರಿಸಿರುವ ಪ್ರಿಯಾಂಕ “ಒಂದುವೇಳೆ ಕಾಂಗ್ರೆಸ್ ಅಧ್ಯಕ್ಷರು ಸ್ಪರ್ಧಿಸಲು ಹೇಳಿದರೆ, ನಾನು ಖುಷಿಯಿಂದ ಸ್ಪರ್ಧಿಸುತ್ತೇನೆ” ಎಂದಿದ್ದಾರೆ. ಆ ಮೂಲಕ ಮೋದಿ ವಿರುದ್ಧದ ತನ್ನ ಸೆಣೆಸಾಟದ ನಿರ್ಧಾರವನ್ನು ಅಣ್ಣ ರಾಹುಲ್ ಗಾಂಧಿಯ ಅಂಗಳಕ್ಕೆ ತಳ್ಳಿದ್ದಾರೆ.
ತಮ್ಮ ಕುಟುಂಬದ ಭದ್ರ ಕೋಟೆಗಳಾದ ಅಮೇಥಿ, ರಾಯ್‍ಬರೇಲಿ ಕ್ಷೇತ್ರಗಳ ಚುನಾವಣಾ ಉಸ್ತುವಾರಿಗಷ್ಟೇ ಸೀಮಿತವಾಗಿದ್ದ ಪ್ರಿಯಾಂಕಾ ಗಾಂಧಿಯವರು ಈ ವರ್ಷದ ಫೆಬ್ರವರಿಯಲ್ಲಷ್ಟೆ ಪೂರ್ವ ಉತ್ತರ ಪ್ರದೇಶದ ಪ್ರಧಾನ ಕಾರ್ಯದರ್ಶಿಯಾಗುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಕಾಲಿರಿಸಿದ್ದಾರೆ. ಆದರೆ ಈ ಸಲದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ, ಇಲ್ಲವಾ ಎಂಬ ಬಗ್ಗೆ ಯಾವ ಸ್ಪಷ್ಟ ಮಾಹಿತಿಯೂ ಇಲ್ಲ. ಆ ಕಾರಣಕ್ಕೆ ಅವರ ಸ್ಪರ್ಧೆಯ ಬಗ್ಗೆ ಊಹಾಪೋಹಗಳು ಕೇಳಿಬರುತ್ತಲೇ ಇವೆ.
ಕಳೆದ ತಿಂಗಳಷ್ಟೇ ತಮ್ಮ ತಾಯಿ ಸೋನಿಯಾ ಗಾಂಧಿಯವರು ಸ್ಪರ್ಧಿಸಲಿರುವ ರಾಯ್‍ಬರೇಲಿಯಿಂದ ನೀವು ಸ್ಪರ್ಧಿಸುತ್ತೀರಾ? ಎಂದು ಮಾಧ್ಯಮ ಪ್ರತಿನಿಧಿಯೊಬ್ಬರು ಕೇಳಿದ ಪ್ರಶ್ನೆಗೆ “ರಾಯ್‍ಬರೇಲಿಯೇ ಯಾಕೆ, ವಾರಣಾಸಿಯಿಂದ ಯಾಕಾಗಬಾರದು?” ಎಂಬ ಮರುಪ್ರಶ್ನೆ ಎಸೆದು ಅಚ್ಚರಿ ಮೂಡಿಸಿದ್ದರು. ಈ ಕುರಿತು ಚರ್ಚೆಗಳು ಶುರುವಾದ ನಂತರ ಪಕ್ಷ ಬಯಸುವ ಯಾವುದೇ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ಧ ಎಂಬರ್ಥದಲ್ಲಿ ಹೇಳಿದ್ದೆ ಎಂದು ಸ್ಪಷ್ಟೀಕರಣ ಕೊಟ್ಟಿದ್ದರು.
ಆದರೆ ವಯನಾಡ್‍ನಲ್ಲಿ ಕೊಟ್ಟಿರುವ ಈ ಹೇಳಿಕೆಯನ್ನು ಹಳೆಯ ಹೇಳಿಕೆಗಿಂತ ಗಂಭೀರವಾಗಿ ಪರಿಗಣಿಸಲು ಒಂದು ಕಾರಣವಿದೆ. ಒಂದು ತಿಂಗಳ ಹಿಂದಿನ ಪ್ರಿಯಾಂಕ ಹೇಳಿಕೆ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಕೇಳಿದಾಗ “ಅದು ಪ್ರಿಯಾಂಕ ಅವರ ಇಷ್ಟಕ್ಕೆ ಬಿಟ್ಟ ವಿಚಾರ” ಎಂದು ಹೇಳಿದ್ದರು. ಆದರೆ ಪ್ರಿಯಾಂಕರವರ ಈ ಹೊಸ ಹೇಳಿಕೆ ಹೊರಬೀಳುವುದಕ್ಕು ಒಂದು ವಾರ ಮುನ್ನ ಮತ್ತೆ ತೂರಿಬಂದ ವಾರಣಾಸಿ ಸ್ಪರ್ಧೆ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ ವಾರಾಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ ಸ್ಪರ್ಧಿಸುವ ವಿಚಾರದಲ್ಲಿ “ಕುತೂಹಲವನ್ನು ಜೀವಂತವಾಗಿಟ್ಟುಕೊಳ್ಳುವುದರಲ್ಲಿ ನಷ್ಟವೇನೂ ಇಲ್ಲ ತಾನೆ?” ಎಂದು ರಾಹುಲ್ ಪ್ರತಿಕ್ರಿಯಿಸಿದ್ದರು. ಅದಾದ ಒಂದು ವಾರಕ್ಕೆ ಪ್ರಿಯಾಂಕರಿಂದ ಈ ಹೇಳಿಕೆ ಹೊರಬಿದ್ದಿರೋದು ಕಾಂಗ್ರೆಸ್ ಪಾಳೆಯದಲ್ಲಿ ಹೊಸ ಹುಮ್ಮಸ್ಸು ಹುಟ್ಟುಹಾಕಿದೆ.
ನೋಡುವುದಕ್ಕಷ್ಟೇ ಇಂದಿರಾ ಗಾಂಧಿಯವರನ್ನು ಹೋಲದೆ, ಜನರ ಜೊತೆ ಆತ್ಮೀಯವಾಗಿ ಬೆರೆಯುವ ನಡವಳಿಕೆಯಲ್ಲೂ ಇಂದಿರಾ ಗಾಂಧಿಯವರ ಗುಣವನ್ನೇ ಹೋಲುವ, ಅವರ ಮೊಮ್ಮಗಳು ಪ್ರಿಯಾಂಕ ಗಾಂಧಿಯವರಿಗೆ ದೊಡ್ಡ ಅಭಿಮಾನಿ ಬಳಗವಿದೆ. 2014ರಲ್ಲೇ ಆಕೆ ಸಕ್ರಿಯ ಚುನಾವಣಾ ರಾಜಕಾರಣಕ್ಕೆ ಧುಮುಕ್ಕಿದ್ದರೆ ಫಲಿತಾಂಶವೇ ಬೇರೆಯಾಗಿರುತ್ತಿತ್ತು ಎಂದು ಕಾಂಗ್ರೆಸ್‍ನ ಹಲವು ಮುಖಂಡರು ಅಭಿಪ್ರಾಯ ಪಟ್ಟಿದ್ದಾರೆ. ಅಂದಹಾಗೆ, 2014ರಲ್ಲಿ ಮೋದಿ ವಿರುದ್ಧ ವಾರಣಾಸಿಯಿಂದ ಕಣಕ್ಕಿಳಿದಿದ್ದ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಸುಮಾರು ಎರಡು ಲಕ್ಷಗಳಷ್ಟು ಮತ ಪಡೆದಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಸೋತರೂ ಅರವಿಂದ್ ಕೇಜ್ರಿವಾಲ್ ಅವರಿಗೆ ರಿಸ್ಕ್ ತೆಗೆದುಕೊಳ್ಳಲು ಹಿಂಜರಿಯದ ಲೀಡರ್ ಎಂಬ ಇಮೇಜು ಬಂದಿತ್ತು. ಅದಾದ ನಂತರವೇ ಅವರ ಆಪ್ ಪಕ್ಷ ದಿಲ್ಲಿಯಲ್ಲಿ ನಡೆದ ಅಸೆಂಬ್ಲಿ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ಸ್ಥಾನಗಳಲ್ಲಿ ಗೆದ್ದು ಸರ್ಕಾರ ರಚಿಸಿದ್ದು.
ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 22ರಿಂದ 29ರವರೆಗೆ ಕಾಲಾವಕಾಶವಿದ್ದು, ಮೇ 19ರಂದು ಅಂದರೆ ಕೊನೆಯ ಹಂತದಲ್ಲಿ ಚುನಾವಣೆ ನಡೆಯಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...