Homeಮುಖಪುಟಮೋದಿ ವಿರುದ್ಧ ಸ್ಪರ್ಧಿಸುವ ಎರಡನೇ ಸುಳಿವು ಕೊಟ್ಟ ಪ್ರಿಯಾಂಕಾ ಗಾಂಧಿ!

ಮೋದಿ ವಿರುದ್ಧ ಸ್ಪರ್ಧಿಸುವ ಎರಡನೇ ಸುಳಿವು ಕೊಟ್ಟ ಪ್ರಿಯಾಂಕಾ ಗಾಂಧಿ!

- Advertisement -
ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜೂನಿಯರ್ ಇಂದಿರಾ ಗಾಂಧಿ ಎಂತಲೇ ಪ್ರಸಿದ್ಧರಾಗಿರುವ ಪ್ರಿಯಾಂಕಾ ಗಾಂಧಿ ಈ ಚುನಾವಣೆಯಲ್ಲಿ ವಾರಣಾಸಿಯಿಂದ ಪ್ರಧಾನಿ ಮೋದಿಯವರ ವಿರುದ್ಧ ಕಣಕ್ಕಿಳಿಯುವ ಸೂಚನೆ ರವಾನಿಸಿದ್ದಾರೆ. ರಾಹುಲ್ ಗಾಂಧಿ ಸ್ಪರ್ಧಿಸಿರುವ ಕೇರಳದ ವಯನಾಡ್‍ನಲ್ಲಿ ಪ್ರಚಾರ ಮಾಡುವ ಸಂದರ್ಭದಲ್ಲಿ ಮಾಧ್ಯಮದವರು ಕೇಳಿದ “ನೀವು ವಾರಣಾಸಿಯಿಂದ ಸ್ಪರ್ಧಿಸುತ್ತೀರಿ ಎಂಬ ಸುದ್ದಿ ಇದೆ. ಇದು ನಿಜವಾ?” ಎಂಬ ಪ್ರಶ್ನೆಗೆ ನಗುತ್ತಲೇ ಉತ್ತರಿಸಿರುವ ಪ್ರಿಯಾಂಕ “ಒಂದುವೇಳೆ ಕಾಂಗ್ರೆಸ್ ಅಧ್ಯಕ್ಷರು ಸ್ಪರ್ಧಿಸಲು ಹೇಳಿದರೆ, ನಾನು ಖುಷಿಯಿಂದ ಸ್ಪರ್ಧಿಸುತ್ತೇನೆ” ಎಂದಿದ್ದಾರೆ. ಆ ಮೂಲಕ ಮೋದಿ ವಿರುದ್ಧದ ತನ್ನ ಸೆಣೆಸಾಟದ ನಿರ್ಧಾರವನ್ನು ಅಣ್ಣ ರಾಹುಲ್ ಗಾಂಧಿಯ ಅಂಗಳಕ್ಕೆ ತಳ್ಳಿದ್ದಾರೆ.
ತಮ್ಮ ಕುಟುಂಬದ ಭದ್ರ ಕೋಟೆಗಳಾದ ಅಮೇಥಿ, ರಾಯ್‍ಬರೇಲಿ ಕ್ಷೇತ್ರಗಳ ಚುನಾವಣಾ ಉಸ್ತುವಾರಿಗಷ್ಟೇ ಸೀಮಿತವಾಗಿದ್ದ ಪ್ರಿಯಾಂಕಾ ಗಾಂಧಿಯವರು ಈ ವರ್ಷದ ಫೆಬ್ರವರಿಯಲ್ಲಷ್ಟೆ ಪೂರ್ವ ಉತ್ತರ ಪ್ರದೇಶದ ಪ್ರಧಾನ ಕಾರ್ಯದರ್ಶಿಯಾಗುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಕಾಲಿರಿಸಿದ್ದಾರೆ. ಆದರೆ ಈ ಸಲದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ, ಇಲ್ಲವಾ ಎಂಬ ಬಗ್ಗೆ ಯಾವ ಸ್ಪಷ್ಟ ಮಾಹಿತಿಯೂ ಇಲ್ಲ. ಆ ಕಾರಣಕ್ಕೆ ಅವರ ಸ್ಪರ್ಧೆಯ ಬಗ್ಗೆ ಊಹಾಪೋಹಗಳು ಕೇಳಿಬರುತ್ತಲೇ ಇವೆ.
ಕಳೆದ ತಿಂಗಳಷ್ಟೇ ತಮ್ಮ ತಾಯಿ ಸೋನಿಯಾ ಗಾಂಧಿಯವರು ಸ್ಪರ್ಧಿಸಲಿರುವ ರಾಯ್‍ಬರೇಲಿಯಿಂದ ನೀವು ಸ್ಪರ್ಧಿಸುತ್ತೀರಾ? ಎಂದು ಮಾಧ್ಯಮ ಪ್ರತಿನಿಧಿಯೊಬ್ಬರು ಕೇಳಿದ ಪ್ರಶ್ನೆಗೆ “ರಾಯ್‍ಬರೇಲಿಯೇ ಯಾಕೆ, ವಾರಣಾಸಿಯಿಂದ ಯಾಕಾಗಬಾರದು?” ಎಂಬ ಮರುಪ್ರಶ್ನೆ ಎಸೆದು ಅಚ್ಚರಿ ಮೂಡಿಸಿದ್ದರು. ಈ ಕುರಿತು ಚರ್ಚೆಗಳು ಶುರುವಾದ ನಂತರ ಪಕ್ಷ ಬಯಸುವ ಯಾವುದೇ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ಧ ಎಂಬರ್ಥದಲ್ಲಿ ಹೇಳಿದ್ದೆ ಎಂದು ಸ್ಪಷ್ಟೀಕರಣ ಕೊಟ್ಟಿದ್ದರು.
ಆದರೆ ವಯನಾಡ್‍ನಲ್ಲಿ ಕೊಟ್ಟಿರುವ ಈ ಹೇಳಿಕೆಯನ್ನು ಹಳೆಯ ಹೇಳಿಕೆಗಿಂತ ಗಂಭೀರವಾಗಿ ಪರಿಗಣಿಸಲು ಒಂದು ಕಾರಣವಿದೆ. ಒಂದು ತಿಂಗಳ ಹಿಂದಿನ ಪ್ರಿಯಾಂಕ ಹೇಳಿಕೆ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಕೇಳಿದಾಗ “ಅದು ಪ್ರಿಯಾಂಕ ಅವರ ಇಷ್ಟಕ್ಕೆ ಬಿಟ್ಟ ವಿಚಾರ” ಎಂದು ಹೇಳಿದ್ದರು. ಆದರೆ ಪ್ರಿಯಾಂಕರವರ ಈ ಹೊಸ ಹೇಳಿಕೆ ಹೊರಬೀಳುವುದಕ್ಕು ಒಂದು ವಾರ ಮುನ್ನ ಮತ್ತೆ ತೂರಿಬಂದ ವಾರಣಾಸಿ ಸ್ಪರ್ಧೆ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ ವಾರಾಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ ಸ್ಪರ್ಧಿಸುವ ವಿಚಾರದಲ್ಲಿ “ಕುತೂಹಲವನ್ನು ಜೀವಂತವಾಗಿಟ್ಟುಕೊಳ್ಳುವುದರಲ್ಲಿ ನಷ್ಟವೇನೂ ಇಲ್ಲ ತಾನೆ?” ಎಂದು ರಾಹುಲ್ ಪ್ರತಿಕ್ರಿಯಿಸಿದ್ದರು. ಅದಾದ ಒಂದು ವಾರಕ್ಕೆ ಪ್ರಿಯಾಂಕರಿಂದ ಈ ಹೇಳಿಕೆ ಹೊರಬಿದ್ದಿರೋದು ಕಾಂಗ್ರೆಸ್ ಪಾಳೆಯದಲ್ಲಿ ಹೊಸ ಹುಮ್ಮಸ್ಸು ಹುಟ್ಟುಹಾಕಿದೆ.
ನೋಡುವುದಕ್ಕಷ್ಟೇ ಇಂದಿರಾ ಗಾಂಧಿಯವರನ್ನು ಹೋಲದೆ, ಜನರ ಜೊತೆ ಆತ್ಮೀಯವಾಗಿ ಬೆರೆಯುವ ನಡವಳಿಕೆಯಲ್ಲೂ ಇಂದಿರಾ ಗಾಂಧಿಯವರ ಗುಣವನ್ನೇ ಹೋಲುವ, ಅವರ ಮೊಮ್ಮಗಳು ಪ್ರಿಯಾಂಕ ಗಾಂಧಿಯವರಿಗೆ ದೊಡ್ಡ ಅಭಿಮಾನಿ ಬಳಗವಿದೆ. 2014ರಲ್ಲೇ ಆಕೆ ಸಕ್ರಿಯ ಚುನಾವಣಾ ರಾಜಕಾರಣಕ್ಕೆ ಧುಮುಕ್ಕಿದ್ದರೆ ಫಲಿತಾಂಶವೇ ಬೇರೆಯಾಗಿರುತ್ತಿತ್ತು ಎಂದು ಕಾಂಗ್ರೆಸ್‍ನ ಹಲವು ಮುಖಂಡರು ಅಭಿಪ್ರಾಯ ಪಟ್ಟಿದ್ದಾರೆ. ಅಂದಹಾಗೆ, 2014ರಲ್ಲಿ ಮೋದಿ ವಿರುದ್ಧ ವಾರಣಾಸಿಯಿಂದ ಕಣಕ್ಕಿಳಿದಿದ್ದ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಸುಮಾರು ಎರಡು ಲಕ್ಷಗಳಷ್ಟು ಮತ ಪಡೆದಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಸೋತರೂ ಅರವಿಂದ್ ಕೇಜ್ರಿವಾಲ್ ಅವರಿಗೆ ರಿಸ್ಕ್ ತೆಗೆದುಕೊಳ್ಳಲು ಹಿಂಜರಿಯದ ಲೀಡರ್ ಎಂಬ ಇಮೇಜು ಬಂದಿತ್ತು. ಅದಾದ ನಂತರವೇ ಅವರ ಆಪ್ ಪಕ್ಷ ದಿಲ್ಲಿಯಲ್ಲಿ ನಡೆದ ಅಸೆಂಬ್ಲಿ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ಸ್ಥಾನಗಳಲ್ಲಿ ಗೆದ್ದು ಸರ್ಕಾರ ರಚಿಸಿದ್ದು.
ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 22ರಿಂದ 29ರವರೆಗೆ ಕಾಲಾವಕಾಶವಿದ್ದು, ಮೇ 19ರಂದು ಅಂದರೆ ಕೊನೆಯ ಹಂತದಲ್ಲಿ ಚುನಾವಣೆ ನಡೆಯಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...