Homeಮುಖಪುಟಮೋದಿ ವಿರುದ್ಧ ಸ್ಪರ್ಧಿಸುವ ಎರಡನೇ ಸುಳಿವು ಕೊಟ್ಟ ಪ್ರಿಯಾಂಕಾ ಗಾಂಧಿ!

ಮೋದಿ ವಿರುದ್ಧ ಸ್ಪರ್ಧಿಸುವ ಎರಡನೇ ಸುಳಿವು ಕೊಟ್ಟ ಪ್ರಿಯಾಂಕಾ ಗಾಂಧಿ!

- Advertisement -
ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜೂನಿಯರ್ ಇಂದಿರಾ ಗಾಂಧಿ ಎಂತಲೇ ಪ್ರಸಿದ್ಧರಾಗಿರುವ ಪ್ರಿಯಾಂಕಾ ಗಾಂಧಿ ಈ ಚುನಾವಣೆಯಲ್ಲಿ ವಾರಣಾಸಿಯಿಂದ ಪ್ರಧಾನಿ ಮೋದಿಯವರ ವಿರುದ್ಧ ಕಣಕ್ಕಿಳಿಯುವ ಸೂಚನೆ ರವಾನಿಸಿದ್ದಾರೆ. ರಾಹುಲ್ ಗಾಂಧಿ ಸ್ಪರ್ಧಿಸಿರುವ ಕೇರಳದ ವಯನಾಡ್‍ನಲ್ಲಿ ಪ್ರಚಾರ ಮಾಡುವ ಸಂದರ್ಭದಲ್ಲಿ ಮಾಧ್ಯಮದವರು ಕೇಳಿದ “ನೀವು ವಾರಣಾಸಿಯಿಂದ ಸ್ಪರ್ಧಿಸುತ್ತೀರಿ ಎಂಬ ಸುದ್ದಿ ಇದೆ. ಇದು ನಿಜವಾ?” ಎಂಬ ಪ್ರಶ್ನೆಗೆ ನಗುತ್ತಲೇ ಉತ್ತರಿಸಿರುವ ಪ್ರಿಯಾಂಕ “ಒಂದುವೇಳೆ ಕಾಂಗ್ರೆಸ್ ಅಧ್ಯಕ್ಷರು ಸ್ಪರ್ಧಿಸಲು ಹೇಳಿದರೆ, ನಾನು ಖುಷಿಯಿಂದ ಸ್ಪರ್ಧಿಸುತ್ತೇನೆ” ಎಂದಿದ್ದಾರೆ. ಆ ಮೂಲಕ ಮೋದಿ ವಿರುದ್ಧದ ತನ್ನ ಸೆಣೆಸಾಟದ ನಿರ್ಧಾರವನ್ನು ಅಣ್ಣ ರಾಹುಲ್ ಗಾಂಧಿಯ ಅಂಗಳಕ್ಕೆ ತಳ್ಳಿದ್ದಾರೆ.
ತಮ್ಮ ಕುಟುಂಬದ ಭದ್ರ ಕೋಟೆಗಳಾದ ಅಮೇಥಿ, ರಾಯ್‍ಬರೇಲಿ ಕ್ಷೇತ್ರಗಳ ಚುನಾವಣಾ ಉಸ್ತುವಾರಿಗಷ್ಟೇ ಸೀಮಿತವಾಗಿದ್ದ ಪ್ರಿಯಾಂಕಾ ಗಾಂಧಿಯವರು ಈ ವರ್ಷದ ಫೆಬ್ರವರಿಯಲ್ಲಷ್ಟೆ ಪೂರ್ವ ಉತ್ತರ ಪ್ರದೇಶದ ಪ್ರಧಾನ ಕಾರ್ಯದರ್ಶಿಯಾಗುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಕಾಲಿರಿಸಿದ್ದಾರೆ. ಆದರೆ ಈ ಸಲದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ, ಇಲ್ಲವಾ ಎಂಬ ಬಗ್ಗೆ ಯಾವ ಸ್ಪಷ್ಟ ಮಾಹಿತಿಯೂ ಇಲ್ಲ. ಆ ಕಾರಣಕ್ಕೆ ಅವರ ಸ್ಪರ್ಧೆಯ ಬಗ್ಗೆ ಊಹಾಪೋಹಗಳು ಕೇಳಿಬರುತ್ತಲೇ ಇವೆ.
ಕಳೆದ ತಿಂಗಳಷ್ಟೇ ತಮ್ಮ ತಾಯಿ ಸೋನಿಯಾ ಗಾಂಧಿಯವರು ಸ್ಪರ್ಧಿಸಲಿರುವ ರಾಯ್‍ಬರೇಲಿಯಿಂದ ನೀವು ಸ್ಪರ್ಧಿಸುತ್ತೀರಾ? ಎಂದು ಮಾಧ್ಯಮ ಪ್ರತಿನಿಧಿಯೊಬ್ಬರು ಕೇಳಿದ ಪ್ರಶ್ನೆಗೆ “ರಾಯ್‍ಬರೇಲಿಯೇ ಯಾಕೆ, ವಾರಣಾಸಿಯಿಂದ ಯಾಕಾಗಬಾರದು?” ಎಂಬ ಮರುಪ್ರಶ್ನೆ ಎಸೆದು ಅಚ್ಚರಿ ಮೂಡಿಸಿದ್ದರು. ಈ ಕುರಿತು ಚರ್ಚೆಗಳು ಶುರುವಾದ ನಂತರ ಪಕ್ಷ ಬಯಸುವ ಯಾವುದೇ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ಧ ಎಂಬರ್ಥದಲ್ಲಿ ಹೇಳಿದ್ದೆ ಎಂದು ಸ್ಪಷ್ಟೀಕರಣ ಕೊಟ್ಟಿದ್ದರು.
ಆದರೆ ವಯನಾಡ್‍ನಲ್ಲಿ ಕೊಟ್ಟಿರುವ ಈ ಹೇಳಿಕೆಯನ್ನು ಹಳೆಯ ಹೇಳಿಕೆಗಿಂತ ಗಂಭೀರವಾಗಿ ಪರಿಗಣಿಸಲು ಒಂದು ಕಾರಣವಿದೆ. ಒಂದು ತಿಂಗಳ ಹಿಂದಿನ ಪ್ರಿಯಾಂಕ ಹೇಳಿಕೆ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಕೇಳಿದಾಗ “ಅದು ಪ್ರಿಯಾಂಕ ಅವರ ಇಷ್ಟಕ್ಕೆ ಬಿಟ್ಟ ವಿಚಾರ” ಎಂದು ಹೇಳಿದ್ದರು. ಆದರೆ ಪ್ರಿಯಾಂಕರವರ ಈ ಹೊಸ ಹೇಳಿಕೆ ಹೊರಬೀಳುವುದಕ್ಕು ಒಂದು ವಾರ ಮುನ್ನ ಮತ್ತೆ ತೂರಿಬಂದ ವಾರಣಾಸಿ ಸ್ಪರ್ಧೆ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ ವಾರಾಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ ಸ್ಪರ್ಧಿಸುವ ವಿಚಾರದಲ್ಲಿ “ಕುತೂಹಲವನ್ನು ಜೀವಂತವಾಗಿಟ್ಟುಕೊಳ್ಳುವುದರಲ್ಲಿ ನಷ್ಟವೇನೂ ಇಲ್ಲ ತಾನೆ?” ಎಂದು ರಾಹುಲ್ ಪ್ರತಿಕ್ರಿಯಿಸಿದ್ದರು. ಅದಾದ ಒಂದು ವಾರಕ್ಕೆ ಪ್ರಿಯಾಂಕರಿಂದ ಈ ಹೇಳಿಕೆ ಹೊರಬಿದ್ದಿರೋದು ಕಾಂಗ್ರೆಸ್ ಪಾಳೆಯದಲ್ಲಿ ಹೊಸ ಹುಮ್ಮಸ್ಸು ಹುಟ್ಟುಹಾಕಿದೆ.
ನೋಡುವುದಕ್ಕಷ್ಟೇ ಇಂದಿರಾ ಗಾಂಧಿಯವರನ್ನು ಹೋಲದೆ, ಜನರ ಜೊತೆ ಆತ್ಮೀಯವಾಗಿ ಬೆರೆಯುವ ನಡವಳಿಕೆಯಲ್ಲೂ ಇಂದಿರಾ ಗಾಂಧಿಯವರ ಗುಣವನ್ನೇ ಹೋಲುವ, ಅವರ ಮೊಮ್ಮಗಳು ಪ್ರಿಯಾಂಕ ಗಾಂಧಿಯವರಿಗೆ ದೊಡ್ಡ ಅಭಿಮಾನಿ ಬಳಗವಿದೆ. 2014ರಲ್ಲೇ ಆಕೆ ಸಕ್ರಿಯ ಚುನಾವಣಾ ರಾಜಕಾರಣಕ್ಕೆ ಧುಮುಕ್ಕಿದ್ದರೆ ಫಲಿತಾಂಶವೇ ಬೇರೆಯಾಗಿರುತ್ತಿತ್ತು ಎಂದು ಕಾಂಗ್ರೆಸ್‍ನ ಹಲವು ಮುಖಂಡರು ಅಭಿಪ್ರಾಯ ಪಟ್ಟಿದ್ದಾರೆ. ಅಂದಹಾಗೆ, 2014ರಲ್ಲಿ ಮೋದಿ ವಿರುದ್ಧ ವಾರಣಾಸಿಯಿಂದ ಕಣಕ್ಕಿಳಿದಿದ್ದ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಸುಮಾರು ಎರಡು ಲಕ್ಷಗಳಷ್ಟು ಮತ ಪಡೆದಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಸೋತರೂ ಅರವಿಂದ್ ಕೇಜ್ರಿವಾಲ್ ಅವರಿಗೆ ರಿಸ್ಕ್ ತೆಗೆದುಕೊಳ್ಳಲು ಹಿಂಜರಿಯದ ಲೀಡರ್ ಎಂಬ ಇಮೇಜು ಬಂದಿತ್ತು. ಅದಾದ ನಂತರವೇ ಅವರ ಆಪ್ ಪಕ್ಷ ದಿಲ್ಲಿಯಲ್ಲಿ ನಡೆದ ಅಸೆಂಬ್ಲಿ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ಸ್ಥಾನಗಳಲ್ಲಿ ಗೆದ್ದು ಸರ್ಕಾರ ರಚಿಸಿದ್ದು.
ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 22ರಿಂದ 29ರವರೆಗೆ ಕಾಲಾವಕಾಶವಿದ್ದು, ಮೇ 19ರಂದು ಅಂದರೆ ಕೊನೆಯ ಹಂತದಲ್ಲಿ ಚುನಾವಣೆ ನಡೆಯಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...