Homeಮುಖಪುಟಮೋದಿ ವಿರುದ್ಧ ಸ್ಪರ್ಧಿಸುವ ಎರಡನೇ ಸುಳಿವು ಕೊಟ್ಟ ಪ್ರಿಯಾಂಕಾ ಗಾಂಧಿ!

ಮೋದಿ ವಿರುದ್ಧ ಸ್ಪರ್ಧಿಸುವ ಎರಡನೇ ಸುಳಿವು ಕೊಟ್ಟ ಪ್ರಿಯಾಂಕಾ ಗಾಂಧಿ!

- Advertisement -
ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜೂನಿಯರ್ ಇಂದಿರಾ ಗಾಂಧಿ ಎಂತಲೇ ಪ್ರಸಿದ್ಧರಾಗಿರುವ ಪ್ರಿಯಾಂಕಾ ಗಾಂಧಿ ಈ ಚುನಾವಣೆಯಲ್ಲಿ ವಾರಣಾಸಿಯಿಂದ ಪ್ರಧಾನಿ ಮೋದಿಯವರ ವಿರುದ್ಧ ಕಣಕ್ಕಿಳಿಯುವ ಸೂಚನೆ ರವಾನಿಸಿದ್ದಾರೆ. ರಾಹುಲ್ ಗಾಂಧಿ ಸ್ಪರ್ಧಿಸಿರುವ ಕೇರಳದ ವಯನಾಡ್‍ನಲ್ಲಿ ಪ್ರಚಾರ ಮಾಡುವ ಸಂದರ್ಭದಲ್ಲಿ ಮಾಧ್ಯಮದವರು ಕೇಳಿದ “ನೀವು ವಾರಣಾಸಿಯಿಂದ ಸ್ಪರ್ಧಿಸುತ್ತೀರಿ ಎಂಬ ಸುದ್ದಿ ಇದೆ. ಇದು ನಿಜವಾ?” ಎಂಬ ಪ್ರಶ್ನೆಗೆ ನಗುತ್ತಲೇ ಉತ್ತರಿಸಿರುವ ಪ್ರಿಯಾಂಕ “ಒಂದುವೇಳೆ ಕಾಂಗ್ರೆಸ್ ಅಧ್ಯಕ್ಷರು ಸ್ಪರ್ಧಿಸಲು ಹೇಳಿದರೆ, ನಾನು ಖುಷಿಯಿಂದ ಸ್ಪರ್ಧಿಸುತ್ತೇನೆ” ಎಂದಿದ್ದಾರೆ. ಆ ಮೂಲಕ ಮೋದಿ ವಿರುದ್ಧದ ತನ್ನ ಸೆಣೆಸಾಟದ ನಿರ್ಧಾರವನ್ನು ಅಣ್ಣ ರಾಹುಲ್ ಗಾಂಧಿಯ ಅಂಗಳಕ್ಕೆ ತಳ್ಳಿದ್ದಾರೆ.
ತಮ್ಮ ಕುಟುಂಬದ ಭದ್ರ ಕೋಟೆಗಳಾದ ಅಮೇಥಿ, ರಾಯ್‍ಬರೇಲಿ ಕ್ಷೇತ್ರಗಳ ಚುನಾವಣಾ ಉಸ್ತುವಾರಿಗಷ್ಟೇ ಸೀಮಿತವಾಗಿದ್ದ ಪ್ರಿಯಾಂಕಾ ಗಾಂಧಿಯವರು ಈ ವರ್ಷದ ಫೆಬ್ರವರಿಯಲ್ಲಷ್ಟೆ ಪೂರ್ವ ಉತ್ತರ ಪ್ರದೇಶದ ಪ್ರಧಾನ ಕಾರ್ಯದರ್ಶಿಯಾಗುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಕಾಲಿರಿಸಿದ್ದಾರೆ. ಆದರೆ ಈ ಸಲದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ, ಇಲ್ಲವಾ ಎಂಬ ಬಗ್ಗೆ ಯಾವ ಸ್ಪಷ್ಟ ಮಾಹಿತಿಯೂ ಇಲ್ಲ. ಆ ಕಾರಣಕ್ಕೆ ಅವರ ಸ್ಪರ್ಧೆಯ ಬಗ್ಗೆ ಊಹಾಪೋಹಗಳು ಕೇಳಿಬರುತ್ತಲೇ ಇವೆ.
ಕಳೆದ ತಿಂಗಳಷ್ಟೇ ತಮ್ಮ ತಾಯಿ ಸೋನಿಯಾ ಗಾಂಧಿಯವರು ಸ್ಪರ್ಧಿಸಲಿರುವ ರಾಯ್‍ಬರೇಲಿಯಿಂದ ನೀವು ಸ್ಪರ್ಧಿಸುತ್ತೀರಾ? ಎಂದು ಮಾಧ್ಯಮ ಪ್ರತಿನಿಧಿಯೊಬ್ಬರು ಕೇಳಿದ ಪ್ರಶ್ನೆಗೆ “ರಾಯ್‍ಬರೇಲಿಯೇ ಯಾಕೆ, ವಾರಣಾಸಿಯಿಂದ ಯಾಕಾಗಬಾರದು?” ಎಂಬ ಮರುಪ್ರಶ್ನೆ ಎಸೆದು ಅಚ್ಚರಿ ಮೂಡಿಸಿದ್ದರು. ಈ ಕುರಿತು ಚರ್ಚೆಗಳು ಶುರುವಾದ ನಂತರ ಪಕ್ಷ ಬಯಸುವ ಯಾವುದೇ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ಧ ಎಂಬರ್ಥದಲ್ಲಿ ಹೇಳಿದ್ದೆ ಎಂದು ಸ್ಪಷ್ಟೀಕರಣ ಕೊಟ್ಟಿದ್ದರು.
ಆದರೆ ವಯನಾಡ್‍ನಲ್ಲಿ ಕೊಟ್ಟಿರುವ ಈ ಹೇಳಿಕೆಯನ್ನು ಹಳೆಯ ಹೇಳಿಕೆಗಿಂತ ಗಂಭೀರವಾಗಿ ಪರಿಗಣಿಸಲು ಒಂದು ಕಾರಣವಿದೆ. ಒಂದು ತಿಂಗಳ ಹಿಂದಿನ ಪ್ರಿಯಾಂಕ ಹೇಳಿಕೆ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಕೇಳಿದಾಗ “ಅದು ಪ್ರಿಯಾಂಕ ಅವರ ಇಷ್ಟಕ್ಕೆ ಬಿಟ್ಟ ವಿಚಾರ” ಎಂದು ಹೇಳಿದ್ದರು. ಆದರೆ ಪ್ರಿಯಾಂಕರವರ ಈ ಹೊಸ ಹೇಳಿಕೆ ಹೊರಬೀಳುವುದಕ್ಕು ಒಂದು ವಾರ ಮುನ್ನ ಮತ್ತೆ ತೂರಿಬಂದ ವಾರಣಾಸಿ ಸ್ಪರ್ಧೆ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ ವಾರಾಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ ಸ್ಪರ್ಧಿಸುವ ವಿಚಾರದಲ್ಲಿ “ಕುತೂಹಲವನ್ನು ಜೀವಂತವಾಗಿಟ್ಟುಕೊಳ್ಳುವುದರಲ್ಲಿ ನಷ್ಟವೇನೂ ಇಲ್ಲ ತಾನೆ?” ಎಂದು ರಾಹುಲ್ ಪ್ರತಿಕ್ರಿಯಿಸಿದ್ದರು. ಅದಾದ ಒಂದು ವಾರಕ್ಕೆ ಪ್ರಿಯಾಂಕರಿಂದ ಈ ಹೇಳಿಕೆ ಹೊರಬಿದ್ದಿರೋದು ಕಾಂಗ್ರೆಸ್ ಪಾಳೆಯದಲ್ಲಿ ಹೊಸ ಹುಮ್ಮಸ್ಸು ಹುಟ್ಟುಹಾಕಿದೆ.
ನೋಡುವುದಕ್ಕಷ್ಟೇ ಇಂದಿರಾ ಗಾಂಧಿಯವರನ್ನು ಹೋಲದೆ, ಜನರ ಜೊತೆ ಆತ್ಮೀಯವಾಗಿ ಬೆರೆಯುವ ನಡವಳಿಕೆಯಲ್ಲೂ ಇಂದಿರಾ ಗಾಂಧಿಯವರ ಗುಣವನ್ನೇ ಹೋಲುವ, ಅವರ ಮೊಮ್ಮಗಳು ಪ್ರಿಯಾಂಕ ಗಾಂಧಿಯವರಿಗೆ ದೊಡ್ಡ ಅಭಿಮಾನಿ ಬಳಗವಿದೆ. 2014ರಲ್ಲೇ ಆಕೆ ಸಕ್ರಿಯ ಚುನಾವಣಾ ರಾಜಕಾರಣಕ್ಕೆ ಧುಮುಕ್ಕಿದ್ದರೆ ಫಲಿತಾಂಶವೇ ಬೇರೆಯಾಗಿರುತ್ತಿತ್ತು ಎಂದು ಕಾಂಗ್ರೆಸ್‍ನ ಹಲವು ಮುಖಂಡರು ಅಭಿಪ್ರಾಯ ಪಟ್ಟಿದ್ದಾರೆ. ಅಂದಹಾಗೆ, 2014ರಲ್ಲಿ ಮೋದಿ ವಿರುದ್ಧ ವಾರಣಾಸಿಯಿಂದ ಕಣಕ್ಕಿಳಿದಿದ್ದ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಸುಮಾರು ಎರಡು ಲಕ್ಷಗಳಷ್ಟು ಮತ ಪಡೆದಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಸೋತರೂ ಅರವಿಂದ್ ಕೇಜ್ರಿವಾಲ್ ಅವರಿಗೆ ರಿಸ್ಕ್ ತೆಗೆದುಕೊಳ್ಳಲು ಹಿಂಜರಿಯದ ಲೀಡರ್ ಎಂಬ ಇಮೇಜು ಬಂದಿತ್ತು. ಅದಾದ ನಂತರವೇ ಅವರ ಆಪ್ ಪಕ್ಷ ದಿಲ್ಲಿಯಲ್ಲಿ ನಡೆದ ಅಸೆಂಬ್ಲಿ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ಸ್ಥಾನಗಳಲ್ಲಿ ಗೆದ್ದು ಸರ್ಕಾರ ರಚಿಸಿದ್ದು.
ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 22ರಿಂದ 29ರವರೆಗೆ ಕಾಲಾವಕಾಶವಿದ್ದು, ಮೇ 19ರಂದು ಅಂದರೆ ಕೊನೆಯ ಹಂತದಲ್ಲಿ ಚುನಾವಣೆ ನಡೆಯಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್ ಕ್ಲಬ್ ಮಾಲೀಕರ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ: ಥೈಲ್ಯಾಂಡ್‌ನಿಂದಲೂ ಗಡಿಪಾರು ಪ್ರಕ್ರಿಯೆ ಆರಂಭ 

ನವದೆಹಲಿ: ಕಳೆದ ವಾರ ಕನಿಷ್ಠ 25 ಜನರ ಸಾವಿಗೆ ಕಾರಣವಾಗಿದ್ದ, ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲುಥ್ರಾಸ್ ಅವರ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು...

ಮಾದಕ ದ್ರವ್ಯ ಬಳಕೆ-ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ: ಪರಮೇಶ್ವರ್

ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮ, ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಗುರುವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ...

ದುಡ್ಡು ಕೊಟ್ಟವರಿಗೆ ರಾಜಾತಿಥ್ಯ, ಪೌರತ್ವಕ್ಕೆ ರಹದಾರಿ : ಏನಿದು ‘ಟ್ರಂಪ್ ಗೋಲ್ಡ್ ಕಾರ್ಡ್’

ಟ್ರಂಪ್ ಆಡಳಿತವು ಬುಧವಾರ (ಡಿಸೆಂಬರ್ 10) ಔಪಚಾರಿಕವಾಗಿ 'ಟ್ರಂಪ್ ಗೋಲ್ಡ್ ಕಾರ್ಡ್'ಗಾಗಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಇದನ್ನು ಅಮೆರಿಕ ಸರ್ಕಾರ ಕನಿಷ್ಠ 1 ಮಿಲಿಯನ್ ಡಾಲರ್ ಪಾವತಿಸುವ ಜನರಿಗೆ ನೀಡಲು ಯೋಜಿಸಿದೆ. 'ಟ್ರಂಪ್ ಗೋಲ್ಡ್...

ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜೈಲು ಶಿಕ್ಷೆ ಅಮಾನತು ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್

1996 ರ ಮಾದಕ ದ್ರವ್ಯ ವಶ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ 20 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಗುರುವಾರ ಅವರ ಬಿಡುಗಡೆಗಾಗಿನ ಪ್ರಯತ್ನ...

ಅರುಣಾಚಲ ಪ್ರದೇಶ: ಟ್ರಕ್ ಕಂದಕಕ್ಕೆ ಉರುಳಿ ಅಸ್ಸಾಂ ಮೂಲದ 21 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ, 18 ಮೃತದೇಹಗಳು ಪತ್ತೆ

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಅಸ್ಸಾಂನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಆಳವಾದ ಕಂದಕಕ್ಕೆ ಉರುಳಿದ್ದು, 21 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇಲ್ಲಿಯವರೆಗೆ 18 ಶವಗಳನ್ನು ಹೊರತೆಗೆಯಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.  ಡಿಸೆಂಬರ್ 8ನೇ...

ಜಾರ್ಖಂಡ್‌ನ 27 ಮಕ್ಕಳು ನೇಪಾಳಕ್ಕೆ ಕಳ್ಳಸಾಗಣೆ; ತನಿಖೆ ಆರಂಭಿಸಿದ ಪೊಲೀಸರು

ಉತ್ತಮ ಶಿಕ್ಷಣ ಒದಗಿಸುವ ನೆಪದಲ್ಲಿ 27 ಮಕ್ಕಳನ್ನು ನೇಪಾಳಕ್ಕೆ ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಪೊಲೀಸರು ಗುರುವಾರ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳನ್ನು...

ಉಮರ್ ಖಾಲಿದ್‌ಗೆ 14 ದಿನಗಳ ಮಧ್ಯಂತರ ಜಾಮೀನು; ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶ

ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರಿಗೆ ಡಿಸೆಂಬರ್ 27 ರಂದು ನಿಗದಿಯಾಗಿದ್ದ ತಮ್ಮ ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 16 ರಿಂದ 29 ರವರೆಗೆ 14 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಲಾಯಿತು....

ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ; ಕೋಮುವಾದವನ್ನಲ್ಲ: ಮಮತಾ ಬ್ಯಾನರ್ಜಿ

ನಾನು ಕೋಮುವಾದದಲ್ಲಿ ನಂಬಿಕೆ ಇಡುವುದಿಲ್ಲ. ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ. ಚುನಾವಣೆ ಸಮೀಪಿಸಿದಾಗಲೆಲ್ಲಾ, ಬಿಜೆಪಿ ಹಣವನ್ನು ಬಳಸಿ ಇತರ ರಾಜ್ಯಗಳಿಂದ ಜನರನ್ನು ಕರೆತಂದು ಸಾರ್ವಜನಿಕರನ್ನು ವಿಭಜಿಸಲು ಪ್ರಯತ್ನಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...

ಅತ್ಯಾಚಾರ ಪ್ರಕರಣದ ವಿಚಾರಣೆ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಮನವಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿರುವ ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳನ್ನು ಬೇರೆ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌...

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್...