Homeಕರ್ನಾಟಕರಮೇಶ್‌ಕುಮಾರ್‌ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ಖಂಡನೆ

ರಮೇಶ್‌ಕುಮಾರ್‌ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ಖಂಡನೆ

- Advertisement -
- Advertisement -

ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ, ಮಾಜಿ ಸ್ಪೀಕರ್‌‌ ಕೆ.ಆರ್.ರಮೇಶ್ ಕುಮಾರ್ ಅವರು “ಅತ್ಯಾಚಾರವನ್ನು ಆನಂದಿಸಿ” ಎಂದು ಹೇಳಿರುವುದನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಖಂಡಿಸಿದ್ದಾರೆ.

“ರಮೇಶ್ ಕುಮಾರ್ ಅವರು ನೀಡಿದ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಅಂತಹ ಮಾತುಗಳನ್ನು ಯಾರಾದರೂ ಹೇಗೆ ಹೇಳಬಹುದು ಎಂಬುದನ್ನು ವಿವರಿಸಲಾಗದು, ಅವು ಅಸಮರ್ಥನೀಯವಾಗಿವೆ. ಅತ್ಯಾಚಾರವು ಘೋರ ಅಪರಾಧ. ಪೂರ್ಣ ವಿರಾಮ” ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ರಮೇಶ್‌ಕುಮಾರ್‌‌ ಅವರ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ್ದು, “ನಾಚಿಕೆಗೇಡು” ಎಂದಿದ್ದಾರೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಮಹಿಳಾ ಪ್ರಚಾರ ಕಾರ್ಯಕ್ರಮವನ್ನು ಉಲ್ಲೇಖಿಸಿ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಅವರ ಮೇಲೆ ವಾಗ್ದಾಳಿ ನಡೆಸಿದ್ದಾರೆ. “ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಮೊದಲು ಮತ್ತು ಉತ್ತರ ಪ್ರದೇಶದಲ್ಲಿ -ಲಡ್ಕಿ ಹೂ, ಲಾಡ್ ಸಕ್ತಿ ಹೂ- ಎಂಬ ಘೋಷಣೆಗಳನ್ನು ಎತ್ತುವ ಮೊದಲು ಕಾಂಗ್ರೆಸ್‌ ತಮ್ಮ ನಾಯಕನನ್ನು ಅಮಾನತುಗೊಳಿಸಬೇಕು” ಎಂದು ಸ್ಮೃತಿ ಇರಾನಿ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ ಎನ್ನಲಾಗಿದೆ.

ಇರಾನಿ ಅವರು ಸಂಸತ್ತಿನಲ್ಲೂ ಈ ವಿಷಯವನ್ನು ಪ್ರಸ್ತಾಪಿಸಿದ್ದರು. “ನಿಮಗೆ ಹೆಣ್ಣಿನ ವಿಚಾರದಲ್ಲಿ ನಿಜವಾದ ನಂಬಿಕೆ ಇದ್ದರೆ ರಮೇಶ್‌ ಕುಮಾರ್‌ ಅವರ ಹೇಳಿಕೆಯನ್ನು ಖಂಡಿಸಬೇಕು” ಎಂದಿದ್ದರು.

ಕೆ.ಆರ್.ರಮೇಶ್ ಕುಮಾರ್ ಅವರನ್ನು ಅವರ ಪಕ್ಷದವರು ಸೇರಿದಂತೆ ಹಲವು ನಾಯಕರು ಟೀಕಿಸಿದ್ದಾರೆ. ಸಮಾಜವಾದಿ ಪಕ್ಷದ ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ಅವರು ರಮೇಶ್‌ಕುಮಾರ್‌‌ ವಿರುದ್ಧ ಕಾಂಗ್ರೆಸ್ ಪಕ್ಷ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

“ಕರ್ನಾಟಕ ವಿಧಾನಸಭೆ ಸ್ಪೀಕರ್ ಮತ್ತು ಹಿರಿಯ ಕಾಂಗ್ರೆಸ್ ಶಾಸಕರ ನಡುವೆ ಸದನದಲ್ಲಿ ನಡೆದ ಸಂವೇದನಾ ರಹಿತ ಮಾತುಗಳನ್ನು ಕಾಂಗ್ರೆಸ್ ಒಪ್ಪುವುದಿಲ್ಲ” ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ʼದತ್ತಜಯಂತಿ ಹಿನ್ನೆಲೆʼ: ಮದ್ಯ ಮಾರಾಟ ನಿಷೇಧಕ್ಕೆ ಹಾಸನ ಡಿಸಿ ಆದೇಶ

ವಿಧಾನಸಭೆಯ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌‌ ವಿಧಾನಸಭೆಯಲ್ಲಿ ಮಾತನಾಡುತ್ತಾ, “ಅತ್ಯಾಚಾರ ಅನಿವಾರ್ಯವಾದರೆ ಮಲಗಿ ಆನಂದಿಸಿ” ಎಂಬ ಹೇಳಿಕೆಯನ್ನು ಉಲ್ಲೇಖಿಸಿ ಭಾರಿ ಟೀಕೆಗೆ ಗುರಿಯಾಗಿದ್ದರು. ರಮೇಶ್ ಕುಮಾರ್‌ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಉಂಟಾಗಿತ್ತು.

ಬಳಿಕ ಕ್ಷಮೆಯಾಚಿಸಿದ್ದ ಅವರು, “ಅತ್ಯಾಚಾರದ ಕುರಿತು ಇಂದಿನ ವಿಧಾನಸಭೆಯಲ್ಲಿ ನಾನು ಮಾಡಿದ ಅಸಡ್ಡೆ ಮತ್ತು ನಿರ್ಲಕ್ಷ್ಯದ ಹೇಳಿಕೆಗಾಗಿ ನಾನು ಎಲ್ಲರಲ್ಲಿಯೂ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ನನ್ನ ಉದ್ದೇಶವು ಒಂದು ಹೇಯ ಅಪರಾಧವನ್ನು ಕ್ಷುಲ್ಲಕಗೊಳಿಸುವುದು ಅಥವಾ ಅಮುಖ್ಯವಾಗಿಸುವುದು ಆಗಿರಲಿಲ್ಲ. ಅದು ಯೋಚಿಸದೇ ಬಂದ ಹೇಳಿಕೆ! ಇನ್ನು ಮುಂದೆ ನನ್ನ ಮಾತುಗಳಲ್ಲಿ ಎಚ್ಚರಿಕೆ ವಹಿಸುತ್ತೇನೆ” ಎಂದಿದ್ದರು.

ಗುರುವಾರ ಅಧಿವೇಶನದ ಸಮಯದಲ್ಲಿ ರೈತರ ಸಮಸ್ಯೆಗಳ ಮೇಲಿನ ಚರ್ಚೆ ವೇಳೆ ಎಲ್ಲರಿಗೂ ಸಮಯ ನೀಡಿದರೆ ಅಧಿವೇಶನ ನಡೆಸುವುದಾದರೂ ಹೇಗೆ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಶ್ನಿಸಿದಾಗ ರಮೇಶ್‌ ಕುಮಾರ್‌ ಈ ಆಕ್ಷೇಪಾರ್ಹ ಹೇಳಿಕೆಯನ್ನು ಉಲ್ಲೇಖಿಸಿದ್ದರು.

“ಎಲ್ಲರೂ ಮಾತನಾಡಬೇಕು ಎನ್ನುತ್ತಾರೆ. ನೀವು ಏನು ಡಿಸೈಡ್ ಮಾಡಿಕೊಳ್ಳುತ್ತಿರೋ ಅದಕ್ಕೆ ನಾನು ಎಸ್‌, ಎಸ್‌ ಎನ್ನಬೇಕು ಅಷ್ಟೇ. ರಮೇಶ್ ಕುಮಾರ್ ಅವರೇ ಈಗ ನನ್ನ ಪರಿಸ್ಥಿತಿ ಹೇಗಾಗಿದೆ ಅಂದರೆ ಲೆಟ್ಸ್ ಎಂಜಾಯ್​ದ ಸಿಚುಯೇಷನ್ ಅನ್ನೋ ರೀತಿ ಆಗಿದೆ. ಇದನ್ನು ಕಂಟ್ರೋಲ್ ಮಾಡಿ ನಿಯಂತ್ರಣದಲ್ಲಿಟ್ಟು, ಒಂದು ವ್ಯವಸ್ಥಿತವಾಗಿ ತೆಗೆದುಕೊಂಡು ಹೋಗುವ ಪ್ರಯತ್ನ ಬಿಟ್ಟು ಹೀಗೆ ಮಾತಾಡಿ ಎಂದು ಬಿಟ್ಟುಬಿಡುವುದು. ಆ ಸ್ಥಿತಿಗೆ ಬಂದುಬಿಟ್ಟಿದೆ” ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ರಮೇಶ್​ಕುಮಾರ್, ‘ದೆರ್‌ ಈಸ್‌ ಎ ಸೇಯಿಂಗ್‌, ವೆನ್‌ ರೇಪ್‌ ಈಸ್‌ ಇನೆವಿಟಬಲ್‌ ಲೆಟ್‌ ಲೇಡೌನ್‌ ಅಂಡ್‌ ಎಂಜಾಯ್‌’ (ಒಂದು ಹೇಳಿಕೆಯಿದೆ. ಅತ್ಯಾಚಾರ ಅನಿವಾರ್ಯವಾದಾಗ, ಮಲಗಿ ಆನಂದಿಸಿ) ಎಂದು ಹೇಳಿದ್ದರು. ಈ ಹೇಳಿಕೆಗೆ ಸ್ಪೀಕರ್ ಕಾಗೇರಿ ಸೇರಿದಂತೆ ಹಲವು ಮಂದಿ ನಕ್ಕು, ತಮಾಷೆಯಾಗಿ ತೆಗೆದುಕೊಂಡಿದ್ದರು. ಸದನವನ್ನು ಗಮನಿಸುತ್ತಿರುವ ರಾಜ್ಯದ ಜನತೆ ಜನಪ್ರತಿನಿಧಿಗಳ ವರ್ತನೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.


ಇದನ್ನೂ ಓದಿರಿ: ಮತಾಂತರ ನಿಷೇಧ ಕಾಯಿದೆ ಹಿಂದೆ ದೇಶದ ಕೋಮುಸೌಹಾರ್ದತೆ ಹಾಳುಗೆಡವುವ ದುರುದ್ದೇಶವಿದೆ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...