Homeಮುಖಪುಟಸಾಕ್ಷಿ ಮಲಿಕ್‌ ನಿವಾಸಕ್ಕೆ ಪ್ರಿಯಾಂಕಾ ಗಾಂಧಿ ಭೇಟಿ: ಕುಸ್ತಿಪಟುಗಳ ಜೊತೆ ಮಾತುಕತೆ

ಸಾಕ್ಷಿ ಮಲಿಕ್‌ ನಿವಾಸಕ್ಕೆ ಪ್ರಿಯಾಂಕಾ ಗಾಂಧಿ ಭೇಟಿ: ಕುಸ್ತಿಪಟುಗಳ ಜೊತೆ ಮಾತುಕತೆ

- Advertisement -
- Advertisement -

ಒಲಿಂಪಿಯನ್ ಕುಸ್ತಿಪಟು ಸಾಕ್ಷಿ ಮಲಿಕ್ ಅವರ ನಿವಾಸಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭೇಟಿ ನೀಡಿದ್ದು, ನ್ಯಾಯಕ್ಕಾಗಿ ಅವರ ಹೋರಾಟಕ್ಕೆ ಎಲ್ಲಾ ರೀತಿಯಲ್ಲೂ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರು ಸಾಕ್ಷಿ ಮಲಿಕ್ ಅವರ ನಿವಾಸಕ್ಕೆ ಭೇಟಿ ಮಾಡಿ ಸಾಕ್ಷಿ ಮತ್ತು ಇತರ ಕುಸ್ತಿಪಟುಗಳ  ಜೊತೆ ಮಾತುಕತೆ ನಡೆಸಿದ್ದಾರೆ.

ಬಳಿಕ ಮಾತನಾಡಿದ ಪ್ರಿಯಾಂಕ ಗಾಂಧಿ, ಬಿಜೆಪಿ ಈಗಲೂ ಆರೋಪಿಗಳ ಜೊತೆ ನಿಂತಿದೆ ಮತ್ತು ಅವರಿಗೆ ಎಲ್ಲಾ ರೀತಿಯಲ್ಲೂ ಸಹಾಯ ಮಾಡುತ್ತಿದ್ದಾರೆ. ದೇಶದ ಮಹಿಳೆಯರು ಈ ದೌರ್ಜನ್ಯಗಳನ್ನು ನೋಡುತ್ತಿದ್ದಾರೆ. ದೇಶಕ್ಕೆ ಕೀರ್ತಿ ತಂದ ಮಹಿಳಾ ಆಟಗಾರರು ಬಿಜೆಪಿ ಸಂಸದ ಮತ್ತು ಆಗಿನ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಬಿಜೆಪಿ ಸರ್ಕಾರವು ಅವರ ವಿರುದ್ಧ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಮತ್ತು ಇದಕ್ಕೆ ವಿರುದ್ಧವಾಗಿ ಸಂತ್ರಸ್ತರಿಗೆ ವಿವಿಧ ರೀತಿಯಲ್ಲಿ ಚಿತ್ರಹಿಂಸೆ ನೀಡಲಾಯಿತು ಎಂದು ಹೇಳಿದ್ದಾರೆ.

ಈ ಬಗ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಇದು ಭಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಅವರಂತಹ ಆಟಗಾರರಿಗೆ ಮಾಡಿದ ಮಾತ್ರ ಅವಮಾನವಲ್ಲ, ಇಡೀ ದೇಶಕ್ಕೆ ಮಾಡಿದ ಅವಮಾನ ಎಂದು ಹೇಳಿದ್ದಾರೆ.

ವಿಶ್ವಮಟ್ಟದಲ್ಲಿ ಭಾರತದ ಕೀರ್ತಿಯನ್ನು ಹೆಚ್ಚಿಸಿದ ಆಟಗಾರರು ತಮ್ಮದೇ ಸರ್ಕಾರದ ಮುಂದೆ ಅಸಹಾಯಕರಾಗಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಪ್ರಧಾನಿ ಈ ವಿಚಾರದಲ್ಲಿಯಾದರೂ ತಮ್ಮ ಅಹಂ ಬಿಟ್ಟು ದೇಶವೇ ಹೆಮ್ಮೆ ಪಡುವಂತೆ ಮಾಡಿದ ಆಟಗಾರರಿಗೆ ನ್ಯಾಯ ಒದಗಿಸುವ ಭರವಸೆ ನೀಡಬೇಕಿತ್ತು. ಆದರೆ ಪ್ರಧಾನಿ ಮತ್ತು ಬಿಜೆಪಿ ಲೈಂಗಿಕ ಶೋಷಣೆಯ ಆರೋಪಿಗಳ ಜೊತೆಗಿದ್ದಾರೆ, ದೇಶವು ತನ್ನ ಚಾಂಪಿಯನ್‌ಗಳೊಂದಿಗೆ ನಿಂತಿದೆ ಎಂದು ಹೇಳಿದ್ದರು.

ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯೂಎಫ್ಐ‌) ಸಂಸ್ಥೆಗೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಆಯ್ಕೆಯಾದ ನಂತರ ಕೇಂದ್ರ ಸರ್ಕಾರದ ವಿರುದ್ಧ ದೇಶದ ಅಥ್ಲೀಟ್‌ಗಳ ಅಸಮಾಧಾನ ಹೆಚ್ಚಾಗಿತ್ತು. ಸಾಕ್ಷಿ ಮಲಿಕ್‌ ಅವರು ಈ ಕುರಿತು ಪತ್ರಿಕಾಗೋಷ್ಟಿಯನ್ನು ನಡೆಸಿ  ಕುಸ್ತಿ ತ್ಯಜಿಸುವುದಾಗಿ ಘೋಷಿಸಿದ್ದು,  ಪ್ರತ್ರಕರ್ತರ ಮುಂದೆಯೇ ತಮ್ಮ ಬೂಟು ಕಳಚಿಟ್ಟು ಪ್ರತಿಭಟನೆ ವ್ಯಕ್ತಪಡಿಸಿದ್ದರು. ಕಣ್ಣೀರಿಟ್ಟು ಪತ್ರಿಕಾಗೋಷ್ಟಿಯಿಂದ ನಿರ್ಗಮಿಸಿದ್ದರು.

ಇದರ ಬೆನ್ನಲ್ಲೇ  ಪ್ರಧಾನಿ ಮೋದಿ ಅವರಿಗೆ ಒಲಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಪತ್ರ ಬರೆದು,  ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸುತ್ತಿದ್ದೇನೆ ಎಂದು ಹೇಳಿದ್ದರು. ಬಳಿಕ ತಮಗೆ ಲಭಿಸಿದ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿ ಮೋದಿ ನಿವಾಸವಿರುವ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ತೊರೆದು ಹೋಗಿದ್ದರು. ನಾನು ಮೊದಲೇ ಹೇಳಿದಂತೆ ನಾವು ನಮ್ಮ ಹೆಣ್ಣುಮಕ್ಕಳು ಮತ್ತು ಸಹೋದರಿಯರಿಗಾಗಿ ಹೋರಾಡುತ್ತಿದ್ದೆವು. ನನ್ನಿಂದ ಅವರಿಗೆ ನ್ಯಾಯ ಸಿಗಲಿಲ್ಲ. ಈ ಕಾರಣದಿಂದಾಗಿ ನಾನು ಈ ಗೌರವಕ್ಕೆ ಅರ್ಹನಲ್ಲ ಎಂದು ನಾನು ಭಾವಿಸುತ್ತೇನೆ. ನನ್ನ ಪ್ರಶಸ್ತಿಯನ್ನು ಹಿಂದಿರುಗಿಸಲು ನಾನು ಇಲ್ಲಿಗೆ ಬಂದಿದ್ದೇನೆ. ಆದರೆ ನನಗೆ ಅಪಾಯಿಂಟ್‌ಮೆಂಟ್ ಇಲ್ಲದ ಕಾರಣ ಪ್ರಧಾನಿಯನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ. ಹಾಗಾಗಿ ಪ್ರಧಾನಿಗೆ ಬರೆದ ಪತ್ರದೊಂದಿಗೆ ನನ್ನ ಪ್ರಶಸ್ತಿಯನ್ನು ಬಿಟ್ಟು ಹೋಗುತ್ತಿದ್ದೇನೆ. ನಾನು ಈ ಪದಕವನ್ನು ನನ್ನ ಮನೆಗೆ ತೆಗೆದುಕೊಂಡು ಹೋಗುವುದಿಲ್ಲ ಎಂದು ಬಜರಂಗ್ ಪುನಿಯಾ ಹೇಳಿಕೊಂಡಿದ್ದರು.

ಇದನ್ನು ಓದಿ: ‘ಪ್ರಶಸ್ತಿಗಳಿಗಿಂತ ದುಃಖವು ಹೆಚ್ಚು ಭಾರವಾಗಿದೆ…’; ಪದ್ಮಶ್ರೀ ಮರಳಿಸಿದ ಬಜರಂಗ್ ಪುನಿಯಾ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...