Homeಮುಖಪುಟನಿರುದ್ಯೋಗ ಸಮಸ್ಯೆ ಪ್ರಸ್ತಾಪಿಸಿ ರೋಡ್‌ ಶೋ ನಡೆಸಿದ ಪ್ರಿಯಾಂಕಾ ಗಾಂಧಿ

ನಿರುದ್ಯೋಗ ಸಮಸ್ಯೆ ಪ್ರಸ್ತಾಪಿಸಿ ರೋಡ್‌ ಶೋ ನಡೆಸಿದ ಪ್ರಿಯಾಂಕಾ ಗಾಂಧಿ

- Advertisement -
- Advertisement -

ಅಲಿಗಢ (ಉತ್ತರ ಪ್ರದೇಶ): ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಉತ್ತರ ಪ್ರದೇಶದ ಕಾಂಗ್ರೆಸ್‌ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶನಿವಾರ ಅಲಿಗಢದಲ್ಲಿ ರೋಡ್ ಶೋ ನಡೆಸಿದರು.

ಉದ್ಯೋಗಾವಕಾಶಗಳನ್ನು ಕಲ್ಪಿಸುವುದು ಕಾಂಗ್ರೆಸ್‌ನ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

ಜನರ “ಅಹಂಕಾರ” ತೊಡೆದುಹಾಕುವುದಾಗಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿದ ಹೇಳಿಕೆ ವಿರುದ್ಧ ಕಿಡಿಕಾರಿರುವ ಅವರು, “ಕಾಂಗ್ರೆಸ್ ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸುವತ್ತ ಗಮನಹರಿಸಿದೆ” ಎಂದರು. ಸರ್ಕಾರದಲ್ಲಿ ಸುಮಾರು 12 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಟೀಕಿಸಿದರು.

ಕಾಂಗ್ರೆಸ್ ನಾಯಕರಿಗೆ ಪಕ್ಷದ ಬೆಂಬಲಿಗರು ಮತ್ತು ಕಾರ್ಯಕರ್ತರು ಹೂವಿನ ದಳಗಳನ್ನು ಸುರಿಸಿ ಆತ್ಮೀಯವಾಗಿ ಸ್ವಾಗತ ನೀಡಿದರು. ಆರು ಗಂಟೆಗಳ ಕಾಲ ರೋಡ್ ಶೋ ನಡೆದಿದ್ದು, ಕಾಂಗ್ರೆಸ್ ಬೆಂಬಲಿಗರು ರಸ್ತೆಗಳಲ್ಲಿ ಜಮಾಯಿಸಿ ಬೆಂಬಲ ಸೂಚಿಸಿದರು.

ಪ್ರಿಯಾಂಕಾ ಅವರು ಗುರುವಾರ ಮನೆ ಮನೆಗೆ ತೆರಳಿ ಪ್ರಚಾರದಲ್ಲಿ ಪಾಲ್ಗೊಂಡಿದ್ದು, ಕೋಯಿಲ್‌ನ ಕಾಂಗ್ರೆಸ್ ಅಭ್ಯರ್ಥಿ ವಿವೇಕ್ ಬನ್ಸಾಲ್, ಇಗ್ಲಾಸ್ ಅಭ್ಯರ್ಥಿ ಪ್ರೀತಿ ಧಂಗರ್ ಮತ್ತು ಅಲಿಘರ್ ಅಭ್ಯರ್ಥಿ ಸಲ್ಮಾನ್ ಇಮ್ತಿಯಾಜ್ ಅವರಿಗೆ ಮತ ನೀಡುವಂತೆ ಸಾರ್ವಜನಿಕರಲ್ಲಿ ಕೋರಿದರು.

ಇಗ್ಲಾಸ್ ಮತ್ತು ಕೊಯಿಲ್‌ನಲ್ಲಿ ಅವರು ಸ್ಥಳೀಯ ಜನರೊಂದಿಗೆ ಸಾರ್ವಜನಿಕ ಸಭೆಗಳನ್ನು ನಡೆಸಿದರು. ಕಚ್ಚಾ ವಸ್ತು, ವಿದ್ಯುತ್ ಮತ್ತು ಇಂಧನದ ಬೆಲೆ ಏರಿಕೆಯಿಂದ ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅಪ್ಪರ್‌‌ಪೋರ್ಟ್ ಪ್ರದೇಶದಲ್ಲಿ ಹಲವಾರು ಅಂಗಡಿಗಳ ಮಾಲೀಕರೊಂದಿಗೆ ಅವರು ಮಾತನಾಡಿದರು.

ರೋಡ್ ಶೋನ ಭಾಗವಾಗಿ ಯುವತಿಯರು ಮತ್ತು ಮಹಿಳೆಯರು ಕಾಂಗ್ರೆಸ್ ಪಕ್ಷದ ಮುಖ್ಯ ಘೋಷಣೆಯಾದ, “ಲಡ್ಕಿ ಹೂಂ, ಲಾಡ್ ಸಕ್ತಿ ಹೂಂ (ನಾನು ಹುಡುಗಿ, ಮತ್ತು ನಾನು ಹೋರಾಡಬಲ್ಲೆ)” ಕೂಗಿದರು.

ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು. ರೋಡ್‌ಶೋ ಸಮಯದಲ್ಲಿ, ಅವರು ಅಪ್ಪರ್‌ಪೋರ್ಟ್‌ ಪ್ರದೇಶದಲ್ಲಿ ಬಟ್ಟೆ ಮಾರಾಟಗಾರರನ್ನು ಭೇಟಿಯಾದರು. COVID-19 ಲಾಕ್‌ಡೌನ್ ಸಮಯದಲ್ಲಿ ಅವರು ಎದುರಿಸಿದ ತೊಂದರೆಗಳ ಬಗ್ಗೆ ಕೇಳಿದರು.

ಲಾಕ್‌ಡೌನ್‌ನಿಂದ ಉದ್ಯಮದ ಮೇಲಾದ ಪರಿಣಾಮವನ್ನು ವ್ಯಾಪಾರಿಗಳು ಹಂಚಿಕೊಂಡ ನಂತರ, “ಬಿಜೆಪಿ ಸರ್ಕಾರವು ದ್ವೇಷದ ಮೇಲೆ ಹೆಚ್ಚು ಗಮನಹರಿಸಿರುವುದರಿಂದ ಕಾಂಗ್ರೆಸ್‌ಗೆ ಮತ ಚಲಾಯಿಸಿರಿ” ಎಂದು ಅವರು ಕೋರಿದರು.

ಪ್ರಿಯಾಂಕಾ ಅವರು ಬ್ಯೂಟಿ ಪಾರ್ಲರ್‌ಗೆ ಭೇಟಿ ನೀಡಿದರು. ಮಹಿಳಾ ಸಮಸ್ಯೆಗಳ ಕುರಿತು ಕಾಂಗ್ರೆಸ್ ರೂಪಿಸಿರುವ ಪ್ರಣಾಳಿಕೆಯ ಕುರಿತು ಅವರು ತಿಳಿಸಿದರು.

ಖೈರ್ ಪ್ರದೇಶದಲ್ಲಿ, ಅವರು ಕೆಲವು ಅಂಗಡಿಯವರು ಮತ್ತು ಯುವಕರೊಂದಿಗೆ ಮಾತನಾಡಿದರು. ಯುವಕರೊಬ್ಬರು, “ಖಾಲಿ ಇರುವ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ನಡೆಯದೆ, ಯುವಜನರಿಗೆ ದೊಡ್ಡ ಸಮಸ್ಯೆಯಾಗಿದೆ” ಎಂದು ಹೇಳಿದರು.

“ಯುವಕರು ಸಮಸ್ಯೆಗಳ ಆಧಾರದ ಮೇಲೆ ಮತ ಚಲಾಯಿಸಬೇಕು” ಎಂದು ಪ್ರಿಯಾಂಕಾ ಪ್ರತಿಕ್ರಿಯೆ ನೀಡಿದರು.


ಇದನ್ನೂ ಓದಿರಿ: ಅಂಬೇಡ್ಕರ್‌ ಅನುಯಾಯಿಗಳು ಸಮಾಜವಾದಿ ಪಕ್ಷಕ್ಕೆ ಕೈಜೋಡಿಸಬೇಕು: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...