Homeಮುಖಪುಟನಿರುದ್ಯೋಗ ಸಮಸ್ಯೆ ಪ್ರಸ್ತಾಪಿಸಿ ರೋಡ್‌ ಶೋ ನಡೆಸಿದ ಪ್ರಿಯಾಂಕಾ ಗಾಂಧಿ

ನಿರುದ್ಯೋಗ ಸಮಸ್ಯೆ ಪ್ರಸ್ತಾಪಿಸಿ ರೋಡ್‌ ಶೋ ನಡೆಸಿದ ಪ್ರಿಯಾಂಕಾ ಗಾಂಧಿ

- Advertisement -
- Advertisement -

ಅಲಿಗಢ (ಉತ್ತರ ಪ್ರದೇಶ): ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಉತ್ತರ ಪ್ರದೇಶದ ಕಾಂಗ್ರೆಸ್‌ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶನಿವಾರ ಅಲಿಗಢದಲ್ಲಿ ರೋಡ್ ಶೋ ನಡೆಸಿದರು.

ಉದ್ಯೋಗಾವಕಾಶಗಳನ್ನು ಕಲ್ಪಿಸುವುದು ಕಾಂಗ್ರೆಸ್‌ನ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

ಜನರ “ಅಹಂಕಾರ” ತೊಡೆದುಹಾಕುವುದಾಗಿ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿದ ಹೇಳಿಕೆ ವಿರುದ್ಧ ಕಿಡಿಕಾರಿರುವ ಅವರು, “ಕಾಂಗ್ರೆಸ್ ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸುವತ್ತ ಗಮನಹರಿಸಿದೆ” ಎಂದರು. ಸರ್ಕಾರದಲ್ಲಿ ಸುಮಾರು 12 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಟೀಕಿಸಿದರು.

ಕಾಂಗ್ರೆಸ್ ನಾಯಕರಿಗೆ ಪಕ್ಷದ ಬೆಂಬಲಿಗರು ಮತ್ತು ಕಾರ್ಯಕರ್ತರು ಹೂವಿನ ದಳಗಳನ್ನು ಸುರಿಸಿ ಆತ್ಮೀಯವಾಗಿ ಸ್ವಾಗತ ನೀಡಿದರು. ಆರು ಗಂಟೆಗಳ ಕಾಲ ರೋಡ್ ಶೋ ನಡೆದಿದ್ದು, ಕಾಂಗ್ರೆಸ್ ಬೆಂಬಲಿಗರು ರಸ್ತೆಗಳಲ್ಲಿ ಜಮಾಯಿಸಿ ಬೆಂಬಲ ಸೂಚಿಸಿದರು.

ಪ್ರಿಯಾಂಕಾ ಅವರು ಗುರುವಾರ ಮನೆ ಮನೆಗೆ ತೆರಳಿ ಪ್ರಚಾರದಲ್ಲಿ ಪಾಲ್ಗೊಂಡಿದ್ದು, ಕೋಯಿಲ್‌ನ ಕಾಂಗ್ರೆಸ್ ಅಭ್ಯರ್ಥಿ ವಿವೇಕ್ ಬನ್ಸಾಲ್, ಇಗ್ಲಾಸ್ ಅಭ್ಯರ್ಥಿ ಪ್ರೀತಿ ಧಂಗರ್ ಮತ್ತು ಅಲಿಘರ್ ಅಭ್ಯರ್ಥಿ ಸಲ್ಮಾನ್ ಇಮ್ತಿಯಾಜ್ ಅವರಿಗೆ ಮತ ನೀಡುವಂತೆ ಸಾರ್ವಜನಿಕರಲ್ಲಿ ಕೋರಿದರು.

ಇಗ್ಲಾಸ್ ಮತ್ತು ಕೊಯಿಲ್‌ನಲ್ಲಿ ಅವರು ಸ್ಥಳೀಯ ಜನರೊಂದಿಗೆ ಸಾರ್ವಜನಿಕ ಸಭೆಗಳನ್ನು ನಡೆಸಿದರು. ಕಚ್ಚಾ ವಸ್ತು, ವಿದ್ಯುತ್ ಮತ್ತು ಇಂಧನದ ಬೆಲೆ ಏರಿಕೆಯಿಂದ ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅಪ್ಪರ್‌‌ಪೋರ್ಟ್ ಪ್ರದೇಶದಲ್ಲಿ ಹಲವಾರು ಅಂಗಡಿಗಳ ಮಾಲೀಕರೊಂದಿಗೆ ಅವರು ಮಾತನಾಡಿದರು.

ರೋಡ್ ಶೋನ ಭಾಗವಾಗಿ ಯುವತಿಯರು ಮತ್ತು ಮಹಿಳೆಯರು ಕಾಂಗ್ರೆಸ್ ಪಕ್ಷದ ಮುಖ್ಯ ಘೋಷಣೆಯಾದ, “ಲಡ್ಕಿ ಹೂಂ, ಲಾಡ್ ಸಕ್ತಿ ಹೂಂ (ನಾನು ಹುಡುಗಿ, ಮತ್ತು ನಾನು ಹೋರಾಡಬಲ್ಲೆ)” ಕೂಗಿದರು.

ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು. ರೋಡ್‌ಶೋ ಸಮಯದಲ್ಲಿ, ಅವರು ಅಪ್ಪರ್‌ಪೋರ್ಟ್‌ ಪ್ರದೇಶದಲ್ಲಿ ಬಟ್ಟೆ ಮಾರಾಟಗಾರರನ್ನು ಭೇಟಿಯಾದರು. COVID-19 ಲಾಕ್‌ಡೌನ್ ಸಮಯದಲ್ಲಿ ಅವರು ಎದುರಿಸಿದ ತೊಂದರೆಗಳ ಬಗ್ಗೆ ಕೇಳಿದರು.

ಲಾಕ್‌ಡೌನ್‌ನಿಂದ ಉದ್ಯಮದ ಮೇಲಾದ ಪರಿಣಾಮವನ್ನು ವ್ಯಾಪಾರಿಗಳು ಹಂಚಿಕೊಂಡ ನಂತರ, “ಬಿಜೆಪಿ ಸರ್ಕಾರವು ದ್ವೇಷದ ಮೇಲೆ ಹೆಚ್ಚು ಗಮನಹರಿಸಿರುವುದರಿಂದ ಕಾಂಗ್ರೆಸ್‌ಗೆ ಮತ ಚಲಾಯಿಸಿರಿ” ಎಂದು ಅವರು ಕೋರಿದರು.

ಪ್ರಿಯಾಂಕಾ ಅವರು ಬ್ಯೂಟಿ ಪಾರ್ಲರ್‌ಗೆ ಭೇಟಿ ನೀಡಿದರು. ಮಹಿಳಾ ಸಮಸ್ಯೆಗಳ ಕುರಿತು ಕಾಂಗ್ರೆಸ್ ರೂಪಿಸಿರುವ ಪ್ರಣಾಳಿಕೆಯ ಕುರಿತು ಅವರು ತಿಳಿಸಿದರು.

ಖೈರ್ ಪ್ರದೇಶದಲ್ಲಿ, ಅವರು ಕೆಲವು ಅಂಗಡಿಯವರು ಮತ್ತು ಯುವಕರೊಂದಿಗೆ ಮಾತನಾಡಿದರು. ಯುವಕರೊಬ್ಬರು, “ಖಾಲಿ ಇರುವ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ನಡೆಯದೆ, ಯುವಜನರಿಗೆ ದೊಡ್ಡ ಸಮಸ್ಯೆಯಾಗಿದೆ” ಎಂದು ಹೇಳಿದರು.

“ಯುವಕರು ಸಮಸ್ಯೆಗಳ ಆಧಾರದ ಮೇಲೆ ಮತ ಚಲಾಯಿಸಬೇಕು” ಎಂದು ಪ್ರಿಯಾಂಕಾ ಪ್ರತಿಕ್ರಿಯೆ ನೀಡಿದರು.


ಇದನ್ನೂ ಓದಿರಿ: ಅಂಬೇಡ್ಕರ್‌ ಅನುಯಾಯಿಗಳು ಸಮಾಜವಾದಿ ಪಕ್ಷಕ್ಕೆ ಕೈಜೋಡಿಸಬೇಕು: ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...