Homeಮುಖಪುಟಉತ್ತರಪ್ರದೇಶದಲ್ಲಿ ಮನೆ ಮಾಡಲು ಮುಂದಾದ ಪ್ರಿಯಾಂಕಾ ಗಾಂಧಿ: ಪಕ್ಷದ ಕಾರ್ಯಕರ್ತರಲ್ಲಿ ಹೊಸ ಭರವಸೆ!

ಉತ್ತರಪ್ರದೇಶದಲ್ಲಿ ಮನೆ ಮಾಡಲು ಮುಂದಾದ ಪ್ರಿಯಾಂಕಾ ಗಾಂಧಿ: ಪಕ್ಷದ ಕಾರ್ಯಕರ್ತರಲ್ಲಿ ಹೊಸ ಭರವಸೆ!

ರಾಜ್ಯದಲ್ಲಿ ನಿಷ್ಕ್ರಿಯವಾಗಿರುವ ಪಕ್ಷ ಮತ್ತೆ ಪುಟಿದೇಳುವ ದಿನಗಳು ಬರಬಹುದು ಎಂಬ ನಿರೀಕ್ಷೆಯನ್ನು ಕಾರ್ಯಕರ್ತರು ಹೊಂದಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಸರ್ಕಾರ ಮಂಜೂರು ಮಾಡಿದ್ದ ಬಂಗಲೆ ಖಾಲಿ ಮಾಡುವಂತೆ ತಿಳಿಸಿದ ನಂತರ, ಪ್ರಿಯಾಂಕಾ ಗಾಂಧಿ ಉತ್ತರಪ್ರದೇಶದಲ್ಲಿ ಮನೆ ಹುಡುಕುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ಇದು ಉತ್ತರಪ್ರದೇಶದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಭರವಸೆ ಮೂಡಿಸಿದೆ.

ಕಳೆದ ಜೂನ್‌ನಲ್ಲಿ ನವದೆಹಲಿಯ ಲೋಧಿ ಎಸ್ಟೇಟ್‌ನಲ್ಲಿ ಪ್ರಿಯಾಂಕಾ ಗಾಂಧಿ ಅವರಿಗೆ ಸರ್ಕಾರ ಮಂಜೂರು ಮಾಡಿದ ಬಂಗಲೆ ಖಾಲಿ ಮಾಡುವಂತೆ ತಿಳಿಸಿತ್ತು. ಆ ನಂತರ ಪ್ರಿಯಾಂಕಾ ಗಾಂಧಿ ಲಖನೌದಲ್ಲಿ ಮನೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ನಿಷ್ಕ್ರಿಯವಾಗಿರುವ ಪಕ್ಷ ಮತ್ತೆ ಪುಟಿದೇಳುವ ದಿನಗಳು ಬರಬಹುದು ಎಂಬ ನಿರೀಕ್ಷೆಯನ್ನು ಕಾರ್ಯಕರ್ತರು ಹೊಂದಿದ್ದಾರೆ.

ದಿವಂಗತ ಕಾಂಗ್ರೆಸ್ ಮುಖಂಡ ಶೀಲಾ ಕೌಲ್‌ಗೆ ಸೇರಿದ ಮನೆಯೊಂದನ್ನು ಪ್ರಿಯಾಂಕಾ ಗಾಂಧಿಗಾಗಿ ನೋಡಲಾಗಿತ್ತು. ಆದರೆ, ಈಗ ಭದ್ರತಾ ಕಾರಣಗಳಿಂದಾಗಿ ಯೋಜನೆಗಳನ್ನು ಬದಲಾಯಿಸಲಾಗಿದೆ. ಅವರಿಗಾಗಿ  ಲಕ್ನೋದಲ್ಲಿ ಒಂದು ಮತ್ತು ಪ್ರಯಾಗರಾಜ್‌ನಲ್ಲಿ ಮತ್ತೊಂದು ಒಟ್ಟು ಎರಡು ಬಾಡಿಗೆ ಮನೆಗಳನ್ನು ಹುಡುಕಲಾಗುತ್ತಿದೆ.

ಇದನ್ನೂ ಓದಿ: ದೆಹಲಿಯ ಐತಿಹಾಸಿಕ ರೈತ ಹೋರಾಟದಲ್ಲಿ ಭಾಗಿಯಾಗಿರುವ ಕರ್ನಾಟಕದ ರೈತ ಮುಖಂಡರು ಹೇಳಿದ್ದೇನು?

ಪ್ರಿಯಾಂಕಾ ಗಾಂಧಿಯವರ ವೈಯಕ್ತಿಕ ಕಾರ್ಯದರ್ಶಿ ಸಂದೀಪ್ ಸಿಂಗ್ ಅವರು ಎರಡು ಮನೆಗಳ ಹುಡುಕಾಟವನ್ನು ನಡೆಸುತ್ತಿದ್ದಾರೆ. ಇತ್ತೀಚೆಗೆ ಕೆಲವು ಸ್ಥಳೀಯ ನಾಯಕರನ್ನು ಭೇಟಿ ಮಾಡಲು ಮತ್ತು ಮನೆಯನ್ನು ನೋಡಲು ಪ್ರಯಾಗರಾಜ್‌ಗೆ ಭೇಟಿ ನೀಡಿದ್ದರು. 2021 ರ ಜನವರಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರತಿ ತಿಂಗಳು ಉತ್ತರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ ಎಂದು ಲಖನೌದಲ್ಲಿನ ಕಾಂಗ್ರೆಸ್ ಮುಖಂಡರಿಗೆ ಹೇಳಲಾಗಿತ್ತು. ಆದರೆ, 2019ರ ಡಿಸೆಂಬರ್ ನಿಂದ ಯಾವ ಮುಖಂಡರು ಪಕ್ಷದ ರಾಜ್ಯ ಕೇಂದ್ರ ಕಚೇರಿಗೆ ಭೇಟಿ ನೀಡಿಲ್ಲ.

ಉತ್ತರಪ್ರದೇಶ ರಾಜಕೀಯದಲ್ಲಿ ಸಕ್ರಿಯವಾಗಿ ನೆಲೆಗೊಳ್ಳಲು ಕಾಂಗ್ರೆಸ್ ತುಂಬಾ ಹೆಣಗಾಡುತ್ತಿದೆ. ಇತ್ತೀಚಿನ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್, ಒಟ್ಟು ಮತಗಳಲ್ಲಿ ಶೇಕಡಾ 7.53 ರಷ್ಟು ಮಾತ್ರ ಮತ ಪಡೆದಿತ್ತು. ಅದರಲ್ಲೂ, ಕಾಂಗ್ರೆಸ್ ಅಭ್ಯರ್ಥಿಗಳು ನಾಲ್ಕು ಸ್ಥಾನಗಳಲ್ಲಿ ತಮ್ಮ ಠೇವಣಿ ಕಳೆದುಕೊಂಡಿದ್ದರು.

ಸದ್ಯ ಪ್ರಿಯಾಂಕಾ ಗಾಂಧಿ ಲಖನೌ ಮತ್ತು ಪ್ರಯಾಗರಾಜ್‌ಗಳಲ್ಲಿ ಮನೆ ಹುಡುಕುತ್ತಿರುವುದು ಪಕ್ಷ ಕಾರ್ಯಕರ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಉತ್ತರ ಪ್ರದೇಶದಲ್ಲಿ ಮತ್ತೆ ಪಕ್ಷ ಸಂಘಟನೆ ನಡೆಸಲು ಸಹಾಯಕವಾಗುತ್ತದೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ರೈತರ ಬೇಡಿಕೆ ಈಡೇರದಿದ್ದರೆ ದೇಶಾದ್ಯಂತ ಅಗತ್ಯ ಸರಕುಗಳ ಸಾಗಾಣಿಕೆ ನಿಲ್ಲಿಸುತ್ತೇವೆ: ಸಾಗಾಣಿಕೆದಾರ ಒಕ್ಕೂಟದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...