Homeಮುಖಪುಟಉತ್ತರಪ್ರದೇಶದಲ್ಲಿ ಮನೆ ಮಾಡಲು ಮುಂದಾದ ಪ್ರಿಯಾಂಕಾ ಗಾಂಧಿ: ಪಕ್ಷದ ಕಾರ್ಯಕರ್ತರಲ್ಲಿ ಹೊಸ ಭರವಸೆ!

ಉತ್ತರಪ್ರದೇಶದಲ್ಲಿ ಮನೆ ಮಾಡಲು ಮುಂದಾದ ಪ್ರಿಯಾಂಕಾ ಗಾಂಧಿ: ಪಕ್ಷದ ಕಾರ್ಯಕರ್ತರಲ್ಲಿ ಹೊಸ ಭರವಸೆ!

ರಾಜ್ಯದಲ್ಲಿ ನಿಷ್ಕ್ರಿಯವಾಗಿರುವ ಪಕ್ಷ ಮತ್ತೆ ಪುಟಿದೇಳುವ ದಿನಗಳು ಬರಬಹುದು ಎಂಬ ನಿರೀಕ್ಷೆಯನ್ನು ಕಾರ್ಯಕರ್ತರು ಹೊಂದಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಸರ್ಕಾರ ಮಂಜೂರು ಮಾಡಿದ್ದ ಬಂಗಲೆ ಖಾಲಿ ಮಾಡುವಂತೆ ತಿಳಿಸಿದ ನಂತರ, ಪ್ರಿಯಾಂಕಾ ಗಾಂಧಿ ಉತ್ತರಪ್ರದೇಶದಲ್ಲಿ ಮನೆ ಹುಡುಕುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ಇದು ಉತ್ತರಪ್ರದೇಶದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಭರವಸೆ ಮೂಡಿಸಿದೆ.

ಕಳೆದ ಜೂನ್‌ನಲ್ಲಿ ನವದೆಹಲಿಯ ಲೋಧಿ ಎಸ್ಟೇಟ್‌ನಲ್ಲಿ ಪ್ರಿಯಾಂಕಾ ಗಾಂಧಿ ಅವರಿಗೆ ಸರ್ಕಾರ ಮಂಜೂರು ಮಾಡಿದ ಬಂಗಲೆ ಖಾಲಿ ಮಾಡುವಂತೆ ತಿಳಿಸಿತ್ತು. ಆ ನಂತರ ಪ್ರಿಯಾಂಕಾ ಗಾಂಧಿ ಲಖನೌದಲ್ಲಿ ಮನೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ನಿಷ್ಕ್ರಿಯವಾಗಿರುವ ಪಕ್ಷ ಮತ್ತೆ ಪುಟಿದೇಳುವ ದಿನಗಳು ಬರಬಹುದು ಎಂಬ ನಿರೀಕ್ಷೆಯನ್ನು ಕಾರ್ಯಕರ್ತರು ಹೊಂದಿದ್ದಾರೆ.

ದಿವಂಗತ ಕಾಂಗ್ರೆಸ್ ಮುಖಂಡ ಶೀಲಾ ಕೌಲ್‌ಗೆ ಸೇರಿದ ಮನೆಯೊಂದನ್ನು ಪ್ರಿಯಾಂಕಾ ಗಾಂಧಿಗಾಗಿ ನೋಡಲಾಗಿತ್ತು. ಆದರೆ, ಈಗ ಭದ್ರತಾ ಕಾರಣಗಳಿಂದಾಗಿ ಯೋಜನೆಗಳನ್ನು ಬದಲಾಯಿಸಲಾಗಿದೆ. ಅವರಿಗಾಗಿ  ಲಕ್ನೋದಲ್ಲಿ ಒಂದು ಮತ್ತು ಪ್ರಯಾಗರಾಜ್‌ನಲ್ಲಿ ಮತ್ತೊಂದು ಒಟ್ಟು ಎರಡು ಬಾಡಿಗೆ ಮನೆಗಳನ್ನು ಹುಡುಕಲಾಗುತ್ತಿದೆ.

ಇದನ್ನೂ ಓದಿ: ದೆಹಲಿಯ ಐತಿಹಾಸಿಕ ರೈತ ಹೋರಾಟದಲ್ಲಿ ಭಾಗಿಯಾಗಿರುವ ಕರ್ನಾಟಕದ ರೈತ ಮುಖಂಡರು ಹೇಳಿದ್ದೇನು?

ಪ್ರಿಯಾಂಕಾ ಗಾಂಧಿಯವರ ವೈಯಕ್ತಿಕ ಕಾರ್ಯದರ್ಶಿ ಸಂದೀಪ್ ಸಿಂಗ್ ಅವರು ಎರಡು ಮನೆಗಳ ಹುಡುಕಾಟವನ್ನು ನಡೆಸುತ್ತಿದ್ದಾರೆ. ಇತ್ತೀಚೆಗೆ ಕೆಲವು ಸ್ಥಳೀಯ ನಾಯಕರನ್ನು ಭೇಟಿ ಮಾಡಲು ಮತ್ತು ಮನೆಯನ್ನು ನೋಡಲು ಪ್ರಯಾಗರಾಜ್‌ಗೆ ಭೇಟಿ ನೀಡಿದ್ದರು. 2021 ರ ಜನವರಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರತಿ ತಿಂಗಳು ಉತ್ತರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ ಎಂದು ಲಖನೌದಲ್ಲಿನ ಕಾಂಗ್ರೆಸ್ ಮುಖಂಡರಿಗೆ ಹೇಳಲಾಗಿತ್ತು. ಆದರೆ, 2019ರ ಡಿಸೆಂಬರ್ ನಿಂದ ಯಾವ ಮುಖಂಡರು ಪಕ್ಷದ ರಾಜ್ಯ ಕೇಂದ್ರ ಕಚೇರಿಗೆ ಭೇಟಿ ನೀಡಿಲ್ಲ.

ಉತ್ತರಪ್ರದೇಶ ರಾಜಕೀಯದಲ್ಲಿ ಸಕ್ರಿಯವಾಗಿ ನೆಲೆಗೊಳ್ಳಲು ಕಾಂಗ್ರೆಸ್ ತುಂಬಾ ಹೆಣಗಾಡುತ್ತಿದೆ. ಇತ್ತೀಚಿನ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್, ಒಟ್ಟು ಮತಗಳಲ್ಲಿ ಶೇಕಡಾ 7.53 ರಷ್ಟು ಮಾತ್ರ ಮತ ಪಡೆದಿತ್ತು. ಅದರಲ್ಲೂ, ಕಾಂಗ್ರೆಸ್ ಅಭ್ಯರ್ಥಿಗಳು ನಾಲ್ಕು ಸ್ಥಾನಗಳಲ್ಲಿ ತಮ್ಮ ಠೇವಣಿ ಕಳೆದುಕೊಂಡಿದ್ದರು.

ಸದ್ಯ ಪ್ರಿಯಾಂಕಾ ಗಾಂಧಿ ಲಖನೌ ಮತ್ತು ಪ್ರಯಾಗರಾಜ್‌ಗಳಲ್ಲಿ ಮನೆ ಹುಡುಕುತ್ತಿರುವುದು ಪಕ್ಷ ಕಾರ್ಯಕರ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಉತ್ತರ ಪ್ರದೇಶದಲ್ಲಿ ಮತ್ತೆ ಪಕ್ಷ ಸಂಘಟನೆ ನಡೆಸಲು ಸಹಾಯಕವಾಗುತ್ತದೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ರೈತರ ಬೇಡಿಕೆ ಈಡೇರದಿದ್ದರೆ ದೇಶಾದ್ಯಂತ ಅಗತ್ಯ ಸರಕುಗಳ ಸಾಗಾಣಿಕೆ ನಿಲ್ಲಿಸುತ್ತೇವೆ: ಸಾಗಾಣಿಕೆದಾರ ಒಕ್ಕೂಟದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...