Homeಮುಖಪುಟಉತ್ತರಪ್ರದೇಶದಲ್ಲಿ ಮನೆ ಮಾಡಲು ಮುಂದಾದ ಪ್ರಿಯಾಂಕಾ ಗಾಂಧಿ: ಪಕ್ಷದ ಕಾರ್ಯಕರ್ತರಲ್ಲಿ ಹೊಸ ಭರವಸೆ!

ಉತ್ತರಪ್ರದೇಶದಲ್ಲಿ ಮನೆ ಮಾಡಲು ಮುಂದಾದ ಪ್ರಿಯಾಂಕಾ ಗಾಂಧಿ: ಪಕ್ಷದ ಕಾರ್ಯಕರ್ತರಲ್ಲಿ ಹೊಸ ಭರವಸೆ!

ರಾಜ್ಯದಲ್ಲಿ ನಿಷ್ಕ್ರಿಯವಾಗಿರುವ ಪಕ್ಷ ಮತ್ತೆ ಪುಟಿದೇಳುವ ದಿನಗಳು ಬರಬಹುದು ಎಂಬ ನಿರೀಕ್ಷೆಯನ್ನು ಕಾರ್ಯಕರ್ತರು ಹೊಂದಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಸರ್ಕಾರ ಮಂಜೂರು ಮಾಡಿದ್ದ ಬಂಗಲೆ ಖಾಲಿ ಮಾಡುವಂತೆ ತಿಳಿಸಿದ ನಂತರ, ಪ್ರಿಯಾಂಕಾ ಗಾಂಧಿ ಉತ್ತರಪ್ರದೇಶದಲ್ಲಿ ಮನೆ ಹುಡುಕುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ಇದು ಉತ್ತರಪ್ರದೇಶದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಭರವಸೆ ಮೂಡಿಸಿದೆ.

ಕಳೆದ ಜೂನ್‌ನಲ್ಲಿ ನವದೆಹಲಿಯ ಲೋಧಿ ಎಸ್ಟೇಟ್‌ನಲ್ಲಿ ಪ್ರಿಯಾಂಕಾ ಗಾಂಧಿ ಅವರಿಗೆ ಸರ್ಕಾರ ಮಂಜೂರು ಮಾಡಿದ ಬಂಗಲೆ ಖಾಲಿ ಮಾಡುವಂತೆ ತಿಳಿಸಿತ್ತು. ಆ ನಂತರ ಪ್ರಿಯಾಂಕಾ ಗಾಂಧಿ ಲಖನೌದಲ್ಲಿ ಮನೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ನಿಷ್ಕ್ರಿಯವಾಗಿರುವ ಪಕ್ಷ ಮತ್ತೆ ಪುಟಿದೇಳುವ ದಿನಗಳು ಬರಬಹುದು ಎಂಬ ನಿರೀಕ್ಷೆಯನ್ನು ಕಾರ್ಯಕರ್ತರು ಹೊಂದಿದ್ದಾರೆ.

ದಿವಂಗತ ಕಾಂಗ್ರೆಸ್ ಮುಖಂಡ ಶೀಲಾ ಕೌಲ್‌ಗೆ ಸೇರಿದ ಮನೆಯೊಂದನ್ನು ಪ್ರಿಯಾಂಕಾ ಗಾಂಧಿಗಾಗಿ ನೋಡಲಾಗಿತ್ತು. ಆದರೆ, ಈಗ ಭದ್ರತಾ ಕಾರಣಗಳಿಂದಾಗಿ ಯೋಜನೆಗಳನ್ನು ಬದಲಾಯಿಸಲಾಗಿದೆ. ಅವರಿಗಾಗಿ  ಲಕ್ನೋದಲ್ಲಿ ಒಂದು ಮತ್ತು ಪ್ರಯಾಗರಾಜ್‌ನಲ್ಲಿ ಮತ್ತೊಂದು ಒಟ್ಟು ಎರಡು ಬಾಡಿಗೆ ಮನೆಗಳನ್ನು ಹುಡುಕಲಾಗುತ್ತಿದೆ.

ಇದನ್ನೂ ಓದಿ: ದೆಹಲಿಯ ಐತಿಹಾಸಿಕ ರೈತ ಹೋರಾಟದಲ್ಲಿ ಭಾಗಿಯಾಗಿರುವ ಕರ್ನಾಟಕದ ರೈತ ಮುಖಂಡರು ಹೇಳಿದ್ದೇನು?

ಪ್ರಿಯಾಂಕಾ ಗಾಂಧಿಯವರ ವೈಯಕ್ತಿಕ ಕಾರ್ಯದರ್ಶಿ ಸಂದೀಪ್ ಸಿಂಗ್ ಅವರು ಎರಡು ಮನೆಗಳ ಹುಡುಕಾಟವನ್ನು ನಡೆಸುತ್ತಿದ್ದಾರೆ. ಇತ್ತೀಚೆಗೆ ಕೆಲವು ಸ್ಥಳೀಯ ನಾಯಕರನ್ನು ಭೇಟಿ ಮಾಡಲು ಮತ್ತು ಮನೆಯನ್ನು ನೋಡಲು ಪ್ರಯಾಗರಾಜ್‌ಗೆ ಭೇಟಿ ನೀಡಿದ್ದರು. 2021 ರ ಜನವರಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರತಿ ತಿಂಗಳು ಉತ್ತರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ ಎಂದು ಲಖನೌದಲ್ಲಿನ ಕಾಂಗ್ರೆಸ್ ಮುಖಂಡರಿಗೆ ಹೇಳಲಾಗಿತ್ತು. ಆದರೆ, 2019ರ ಡಿಸೆಂಬರ್ ನಿಂದ ಯಾವ ಮುಖಂಡರು ಪಕ್ಷದ ರಾಜ್ಯ ಕೇಂದ್ರ ಕಚೇರಿಗೆ ಭೇಟಿ ನೀಡಿಲ್ಲ.

ಉತ್ತರಪ್ರದೇಶ ರಾಜಕೀಯದಲ್ಲಿ ಸಕ್ರಿಯವಾಗಿ ನೆಲೆಗೊಳ್ಳಲು ಕಾಂಗ್ರೆಸ್ ತುಂಬಾ ಹೆಣಗಾಡುತ್ತಿದೆ. ಇತ್ತೀಚಿನ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್, ಒಟ್ಟು ಮತಗಳಲ್ಲಿ ಶೇಕಡಾ 7.53 ರಷ್ಟು ಮಾತ್ರ ಮತ ಪಡೆದಿತ್ತು. ಅದರಲ್ಲೂ, ಕಾಂಗ್ರೆಸ್ ಅಭ್ಯರ್ಥಿಗಳು ನಾಲ್ಕು ಸ್ಥಾನಗಳಲ್ಲಿ ತಮ್ಮ ಠೇವಣಿ ಕಳೆದುಕೊಂಡಿದ್ದರು.

ಸದ್ಯ ಪ್ರಿಯಾಂಕಾ ಗಾಂಧಿ ಲಖನೌ ಮತ್ತು ಪ್ರಯಾಗರಾಜ್‌ಗಳಲ್ಲಿ ಮನೆ ಹುಡುಕುತ್ತಿರುವುದು ಪಕ್ಷ ಕಾರ್ಯಕರ್ತರಲ್ಲಿ ಹೊಸ ಭರವಸೆ ಮೂಡಿಸಿದೆ. ಉತ್ತರ ಪ್ರದೇಶದಲ್ಲಿ ಮತ್ತೆ ಪಕ್ಷ ಸಂಘಟನೆ ನಡೆಸಲು ಸಹಾಯಕವಾಗುತ್ತದೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ರೈತರ ಬೇಡಿಕೆ ಈಡೇರದಿದ್ದರೆ ದೇಶಾದ್ಯಂತ ಅಗತ್ಯ ಸರಕುಗಳ ಸಾಗಾಣಿಕೆ ನಿಲ್ಲಿಸುತ್ತೇವೆ: ಸಾಗಾಣಿಕೆದಾರ ಒಕ್ಕೂಟದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...