Homeಮುಖಪುಟವಯನಾಡ್‌ನಿಂದ ಪ್ರಿಯಾಂಕಾ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧಾರ: ರಾಯ್‌ಬರೇಲಿ ಕ್ಷೇತ್ರ ಉಳಿಸಿಕೊಳ್ಳಲಿರುವ ರಾಹುಲ್ ಗಾಂಧಿ

ವಯನಾಡ್‌ನಿಂದ ಪ್ರಿಯಾಂಕಾ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧಾರ: ರಾಯ್‌ಬರೇಲಿ ಕ್ಷೇತ್ರ ಉಳಿಸಿಕೊಳ್ಳಲಿರುವ ರಾಹುಲ್ ಗಾಂಧಿ

- Advertisement -
- Advertisement -

ರಾಹುಲ್ ಗಾಂಧಿ ತೆರವುಗೊಳಿಸಲಿರುವ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ನಿರ್ಧರಿಸಿದೆ.

ಕಾಂಗ್ರೆಸ್‌ ಉನ್ನತ ಮಟ್ಟದ ನಾಯಕರ ಜೊತೆ ಸಭೆ ನಡೆಸಿದ ಬಳಿಕ, ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಗೆದ್ದಿರುವ ಎರಡು ಕ್ಷೇತ್ರಗಳ ಪೈಕಿ ರಾಹುಲ್ ಗಾಂಧಿ ರಾಯ್‌ಬರೇಲಿಯನ್ನು ಉಳಿಸಿಕೊಳ್ಳಲಿದ್ದು, ಅವರಿಂದ ತೆರವಾಗಲಿರುವ ವಯನಾಡ್‌ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಉಪ ಚುನಾವಣೆಗೆ ಸ್ಪರ್ಧಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಮೂಲಕ ಎಐಸಿಸಿ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ ಗಾಂಧಿ, ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಲಿದ್ದಾರೆ.

2004ರ ಹೊತ್ತಿಗೆ ಸಕ್ರಿಯ ರಾಜಕಾರಣಕ್ಕೆ ಪಾದಾರ್ಪಣೆ ಮಾಡಿದ ಪ್ರಿಯಾಂಕಾ ಗಾಂಧಿ, 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾರಣಾಸಿಯಲ್ಲಿ ಎದುರಾಳಿ ಎಂದು ಬಿಂಬಿತರಾಗಿದ್ದರು. ನಂತರ ರಾಯ್‌ಬರೇಲಿಯಿಂದ ಸೋನಿಯಾ ಗಾಂಧಿಯ ಉತ್ತರಾಧಿಕಾರಿಯಾಗಿ ಸ್ಪರ್ಧಿಸುವ ಅಭ್ಯರ್ಥಿ ಎಂದು ಗುರುತಿಸಿಕೊಂಡಿದ್ದರು.

2004ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋನಿಯಾ ಗಾಂಧಿ ರಾಯ್‌ಬರೇಲಿಯಿಂದ ಸ್ಪರ್ಧಿಸಿದ್ದರು. ಈ ವೇಳೆ ಅವರ ಪ್ರಚಾರದ ಉಸ್ತುವಾರಿಯನ್ನು ಪ್ರಿಯಾಂಕಾ ವಹಿಸಿದ್ದರು. ಅಮೇಥಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳಿಗೆ ಆಗಾಗ ಭೇಟಿ ನೀಡುತ್ತಿದ್ದ ಪ್ರಿಯಾಂಕಾ, ಅಲ್ಲಿನ ಜನರೊಂದಿಗೆ ಉತ್ತಮ ಸಂಪರ್ಕ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

2007ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ, ರಾಹುಲ್ ಗಾಂಧಿಯವರು ರಾಜ್ಯಾದ್ಯಂತ ಪ್ರಚಾರದ ಉಸ್ತುವಾರಿ ವಹಿಸಿಕೊಂಡಿದ್ದರು. ಆಗ ಅಮೇಥಿ, ರಾಯ್‌ಬರೇಲಿ ಪ್ರದೇಶದ ಹತ್ತು ಸ್ಥಾನಗಳ ಮೇಲೆ ಪ್ರಿಯಾಂಕಾ ಕೇಂದ್ರೀಕರಿಸಿದ್ದರು. ಎರಡು ವಾರಗಳ ಕಾಲ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಪಕ್ಷದ ಕಾರ್ಯಕರ್ತರಲ್ಲಿ ಉಂಟಾಗಿದ್ದ ಆಂತರಿಕ ಕಲಹವನ್ನು ಶಮನಗೊಳಿಸಲು ಪ್ರಯತ್ನಿಸಿದ್ದರು.

2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡ್ ಮತ್ತು ರಾಯ್‌ಬರೇಲಿ ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು. ಎರಡೂ ಕಡೆಗಳಲ್ಲಿ ಭಾರೀ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ನಿಯಮದ ಪ್ರಕಾರ ಒಂದು ಕ್ಷೇತ್ರವನ್ನು ಬಿಟ್ಟು ಕೊಡಬೇಕಾದ ಕಾರಣ, ರಾಯ್‌ಬರೇಲಿ ಉಳಿಸಿಕೊಂಡು ವಯನಾಡ್‌ ಅನ್ನು ಸಹೋದರಿಗೆ ಬಿಟ್ಟು ಕೊಡಲು ರಾಹುಲ್ ಮುಂದಾಗಿದ್ದಾರೆ.

ಉತ್ತರ ಪ್ರದೇಶದ ರಾಯ್‌ಬರೇಲಿ ಮತ್ತು ಅಮೇಥಿ ಕ್ಷೇತ್ರಗಳು ಗಾಂಧಿ ಕುಟುಂಬದ ಭದ್ರಕೋಟೆಯಾಗಿವೆ. ಹಲವು ವರ್ಷಗಳ ಕಾಲ ರಾಯ್‌ಬರೇಲಿಯನ್ನು ಸೋನಿಯಾ ಗಾಂಧಿ ಪ್ರತಿನಿಧಿಸಿದ್ದರು. ಈ ಬಾರಿ ಮಗ ರಾಹುಲ್‌ ಗಾಂಧಿಗೆ ಕ್ಷೇತ್ರ ಬಿಟ್ಟು ಕೊಟ್ಟಿದ್ದರು. ರಾಹುಲ್ ಗಾಂಧಿ ಕ್ಷೇತ್ರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಅಮೇಥಿ ಕ್ಷೇತ್ರವನ್ನು ಈ ಹಿಂದೆ ರಾಹುಲ್ ಗಾಂಧಿ ಪ್ರತಿನಿಧಿಸುತ್ತಿದ್ದರು. ಆದರೆ, 2019ರ ಚುನಾವಣೆಯಲ್ಲಿ ಅಲ್ಲಿ ಬಿಜೆಪಿಯಿಂದ ಸ್ಮೃತಿ ಇರಾನಿ ಗೆಲುವು ದಾಖಲಿಸಿದ್ದರು. ಈ ಮೂಲಕ ಅಮೇಥಿ ಗಾಂಧಿ ಕುಟುಂಬದ ಕೈ ತಪ್ಪಿತ್ತು. ಆದರೆ, 2024ರ ಚುನಾವಣೆಯಲ್ಲಿ ಗಾಂಧಿ ಕುಟುಂಬದ ಆಪ್ತ ಕಿಶೋರಿ ಲಾಲ್ ಶರ್ಮಾ ಸ್ಮೃತಿ ಇರಾನಿಯನ್ನು ಸೋಲಿಸಿ ಕ್ಷೇತ್ರವನ್ನು ವಾಪಸ್ ಪಡೆದಿದ್ದಾರೆ.

ವಯನಾಡ್‌ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಈ ವರ್ಷ ಎರಡನೇ ಬಾರಿ ರಾಹುಲ್ ಗಾಂಧಿ ಇಲ್ಲಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ಮುಕ್ತ ಬೆಂಬಲ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಇದೆ. ಹಾಗಾಗಿ, ಇಲ್ಲಿ ಚುನಾವಣೆ ನಡೆದರೆ ಪ್ರಿಯಾಂಕಾ ಗಾಂಧಿ ಅನಾಯಸವಾಗಿ ಗೆಲ್ಲಬಹುದು.

ಇದನ್ನೂ ಓದಿ : ‘ಎನ್‌ಸಿಇಆರ್‌ಟಿ’ಯು ಆರ್‌ಎಸ್‌ಎಸ್‌ ಅಂಗಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...