Homeಮುಖಪುಟವಯನಾಡ್‌ನಿಂದ ಪ್ರಿಯಾಂಕಾ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧಾರ: ರಾಯ್‌ಬರೇಲಿ ಕ್ಷೇತ್ರ ಉಳಿಸಿಕೊಳ್ಳಲಿರುವ ರಾಹುಲ್ ಗಾಂಧಿ

ವಯನಾಡ್‌ನಿಂದ ಪ್ರಿಯಾಂಕಾ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧಾರ: ರಾಯ್‌ಬರೇಲಿ ಕ್ಷೇತ್ರ ಉಳಿಸಿಕೊಳ್ಳಲಿರುವ ರಾಹುಲ್ ಗಾಂಧಿ

- Advertisement -
- Advertisement -

ರಾಹುಲ್ ಗಾಂಧಿ ತೆರವುಗೊಳಿಸಲಿರುವ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ನಿರ್ಧರಿಸಿದೆ.

ಕಾಂಗ್ರೆಸ್‌ ಉನ್ನತ ಮಟ್ಟದ ನಾಯಕರ ಜೊತೆ ಸಭೆ ನಡೆಸಿದ ಬಳಿಕ, ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಗೆದ್ದಿರುವ ಎರಡು ಕ್ಷೇತ್ರಗಳ ಪೈಕಿ ರಾಹುಲ್ ಗಾಂಧಿ ರಾಯ್‌ಬರೇಲಿಯನ್ನು ಉಳಿಸಿಕೊಳ್ಳಲಿದ್ದು, ಅವರಿಂದ ತೆರವಾಗಲಿರುವ ವಯನಾಡ್‌ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಉಪ ಚುನಾವಣೆಗೆ ಸ್ಪರ್ಧಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಮೂಲಕ ಎಐಸಿಸಿ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ ಗಾಂಧಿ, ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಲಿದ್ದಾರೆ.

2004ರ ಹೊತ್ತಿಗೆ ಸಕ್ರಿಯ ರಾಜಕಾರಣಕ್ಕೆ ಪಾದಾರ್ಪಣೆ ಮಾಡಿದ ಪ್ರಿಯಾಂಕಾ ಗಾಂಧಿ, 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಾರಣಾಸಿಯಲ್ಲಿ ಎದುರಾಳಿ ಎಂದು ಬಿಂಬಿತರಾಗಿದ್ದರು. ನಂತರ ರಾಯ್‌ಬರೇಲಿಯಿಂದ ಸೋನಿಯಾ ಗಾಂಧಿಯ ಉತ್ತರಾಧಿಕಾರಿಯಾಗಿ ಸ್ಪರ್ಧಿಸುವ ಅಭ್ಯರ್ಥಿ ಎಂದು ಗುರುತಿಸಿಕೊಂಡಿದ್ದರು.

2004ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋನಿಯಾ ಗಾಂಧಿ ರಾಯ್‌ಬರೇಲಿಯಿಂದ ಸ್ಪರ್ಧಿಸಿದ್ದರು. ಈ ವೇಳೆ ಅವರ ಪ್ರಚಾರದ ಉಸ್ತುವಾರಿಯನ್ನು ಪ್ರಿಯಾಂಕಾ ವಹಿಸಿದ್ದರು. ಅಮೇಥಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳಿಗೆ ಆಗಾಗ ಭೇಟಿ ನೀಡುತ್ತಿದ್ದ ಪ್ರಿಯಾಂಕಾ, ಅಲ್ಲಿನ ಜನರೊಂದಿಗೆ ಉತ್ತಮ ಸಂಪರ್ಕ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

2007ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ, ರಾಹುಲ್ ಗಾಂಧಿಯವರು ರಾಜ್ಯಾದ್ಯಂತ ಪ್ರಚಾರದ ಉಸ್ತುವಾರಿ ವಹಿಸಿಕೊಂಡಿದ್ದರು. ಆಗ ಅಮೇಥಿ, ರಾಯ್‌ಬರೇಲಿ ಪ್ರದೇಶದ ಹತ್ತು ಸ್ಥಾನಗಳ ಮೇಲೆ ಪ್ರಿಯಾಂಕಾ ಕೇಂದ್ರೀಕರಿಸಿದ್ದರು. ಎರಡು ವಾರಗಳ ಕಾಲ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಪಕ್ಷದ ಕಾರ್ಯಕರ್ತರಲ್ಲಿ ಉಂಟಾಗಿದ್ದ ಆಂತರಿಕ ಕಲಹವನ್ನು ಶಮನಗೊಳಿಸಲು ಪ್ರಯತ್ನಿಸಿದ್ದರು.

2024ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡ್ ಮತ್ತು ರಾಯ್‌ಬರೇಲಿ ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು. ಎರಡೂ ಕಡೆಗಳಲ್ಲಿ ಭಾರೀ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ನಿಯಮದ ಪ್ರಕಾರ ಒಂದು ಕ್ಷೇತ್ರವನ್ನು ಬಿಟ್ಟು ಕೊಡಬೇಕಾದ ಕಾರಣ, ರಾಯ್‌ಬರೇಲಿ ಉಳಿಸಿಕೊಂಡು ವಯನಾಡ್‌ ಅನ್ನು ಸಹೋದರಿಗೆ ಬಿಟ್ಟು ಕೊಡಲು ರಾಹುಲ್ ಮುಂದಾಗಿದ್ದಾರೆ.

ಉತ್ತರ ಪ್ರದೇಶದ ರಾಯ್‌ಬರೇಲಿ ಮತ್ತು ಅಮೇಥಿ ಕ್ಷೇತ್ರಗಳು ಗಾಂಧಿ ಕುಟುಂಬದ ಭದ್ರಕೋಟೆಯಾಗಿವೆ. ಹಲವು ವರ್ಷಗಳ ಕಾಲ ರಾಯ್‌ಬರೇಲಿಯನ್ನು ಸೋನಿಯಾ ಗಾಂಧಿ ಪ್ರತಿನಿಧಿಸಿದ್ದರು. ಈ ಬಾರಿ ಮಗ ರಾಹುಲ್‌ ಗಾಂಧಿಗೆ ಕ್ಷೇತ್ರ ಬಿಟ್ಟು ಕೊಟ್ಟಿದ್ದರು. ರಾಹುಲ್ ಗಾಂಧಿ ಕ್ಷೇತ್ರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಅಮೇಥಿ ಕ್ಷೇತ್ರವನ್ನು ಈ ಹಿಂದೆ ರಾಹುಲ್ ಗಾಂಧಿ ಪ್ರತಿನಿಧಿಸುತ್ತಿದ್ದರು. ಆದರೆ, 2019ರ ಚುನಾವಣೆಯಲ್ಲಿ ಅಲ್ಲಿ ಬಿಜೆಪಿಯಿಂದ ಸ್ಮೃತಿ ಇರಾನಿ ಗೆಲುವು ದಾಖಲಿಸಿದ್ದರು. ಈ ಮೂಲಕ ಅಮೇಥಿ ಗಾಂಧಿ ಕುಟುಂಬದ ಕೈ ತಪ್ಪಿತ್ತು. ಆದರೆ, 2024ರ ಚುನಾವಣೆಯಲ್ಲಿ ಗಾಂಧಿ ಕುಟುಂಬದ ಆಪ್ತ ಕಿಶೋರಿ ಲಾಲ್ ಶರ್ಮಾ ಸ್ಮೃತಿ ಇರಾನಿಯನ್ನು ಸೋಲಿಸಿ ಕ್ಷೇತ್ರವನ್ನು ವಾಪಸ್ ಪಡೆದಿದ್ದಾರೆ.

ವಯನಾಡ್‌ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಈ ವರ್ಷ ಎರಡನೇ ಬಾರಿ ರಾಹುಲ್ ಗಾಂಧಿ ಇಲ್ಲಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ಮುಕ್ತ ಬೆಂಬಲ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಇದೆ. ಹಾಗಾಗಿ, ಇಲ್ಲಿ ಚುನಾವಣೆ ನಡೆದರೆ ಪ್ರಿಯಾಂಕಾ ಗಾಂಧಿ ಅನಾಯಸವಾಗಿ ಗೆಲ್ಲಬಹುದು.

ಇದನ್ನೂ ಓದಿ : ‘ಎನ್‌ಸಿಇಆರ್‌ಟಿ’ಯು ಆರ್‌ಎಸ್‌ಎಸ್‌ ಅಂಗಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...