Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ಅದಾನಿ, ಅಂಬಾನಿಗಾಗಿ ಕೇಂದ್ರ ಸರಕಾರ ಕೆಲಸ ಮಾಡುತ್ತಿದೆ; ಮೊರಾದಾಬಾದ್‌ನಲ್ಲಿ ಮೋದಿ...

ಭಾರತ್‌ ಜೋಡೋ ನ್ಯಾಯ ಯಾತ್ರೆ: ಅದಾನಿ, ಅಂಬಾನಿಗಾಗಿ ಕೇಂದ್ರ ಸರಕಾರ ಕೆಲಸ ಮಾಡುತ್ತಿದೆ; ಮೊರಾದಾಬಾದ್‌ನಲ್ಲಿ ಮೋದಿ ವಿರುದ್ಧ ರಾಹುಲ್‌ ವಾಗ್ಧಾಳಿ

- Advertisement -
- Advertisement -

ಉತ್ತರಪ್ರದೇಶದಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಮತ್ತೆ ಪ್ರಾರಂಭವಾಗಿದ್ದು, ಮೊರಾದಾಬಾದ್‌ನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆ ಸಾಗುತ್ತಿದೆ, ಕಾಂಗ್ರೆಸ್‌ ಮತ್ತು ಇಂಡಿಯಾ ಮೈತ್ರಿ ಬಣ ಸಮಾಜವಾದಿ ಪಕ್ಷದ  ಕಾರ್ಯಕರ್ತರು ಯಾತ್ರೆಯಲ್ಲಿ ಭಾಗವಹಿಸಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಮೊರಾದಾಬಾದ್‌ನಲ್ಲಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಅವರು ಅಮ್ರೋಹಾ, ಸಂಭಾಲ್, ಬುಲಂದ್‌ಶಹರ್, ಅಲಿಘರ್, ಹತ್ರಾಸ್ ಮತ್ತು ಆಗ್ರಾ ಮೂಲಕ ಫತೇಪುರ್ ಸಿಕ್ರಿಗೆ ಪ್ರಯಾಣಿಸಲಿದ್ದಾರೆ. ಕಾಂಗ್ರೆಸ್ ಮತ್ತು ಎಸ್‌ಪಿ ನಡುವಿನ ಯಶಸ್ವಿ ಸೀಟು ಹಂಚಿಕೆಯ ನಂತರ, ಯುಪಿಸಿಸಿ ಅಧ್ಯಕ್ಷ ಅಜಯ್ ರೈ ಮತ್ತು ಎಸ್‌ಪಿಯ ಎಲ್ಲಾ ಪ್ರಮುಖ ನಾಯಕರು ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಇದು ಇಂಡಿಯಾ ಮೈತ್ರಿಕೂಟದ ಬಲವನ್ನು ವೃದ್ಧಿಸಿದೆ ಎಂಬುವುದನ್ನು ಬಹಿರಂಗಪಡಿಸುತ್ತಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಕಳೆದ ವಾರ ಚಂದೌಲಿ ಜಿಲ್ಲೆಯ ಮೂಲಕ ಭಾರತ್‌ ಜೊಡೋ ನ್ಯಾಯ ಯಾತ್ರೆ ಉತ್ತರಪ್ರದೇಶವನ್ನು ಪ್ರವೇಶಿಸಿದಾಗ ಯಾತ್ರೆಯನ್ನು ಸೇರಲು ನಿರ್ಧರಿಸಿದ್ದರು. ಆದರೆ ಅನಾರೋಗ್ಯದ ಕಾರಣ ಅವರು ಯಾತ್ರೆಯಲ್ಲಿ ಭಾಗಿಯಾಗಿರಲಿಲ್ಲ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮೊರಾದಾಬಾದ್‌ನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಅದಾನಿ ಮತ್ತು ಅಂಬಾನಿಯಂತಹ ಉದ್ಯಮಿಗಳಿಗಾಗಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದು ವಾಗ್ಧಾಳಿಯನ್ನು ನಡೆಸಿದ್ದಾರೆ.

ಬಿಜೆಪಿಯ ಪದ್ದತಿ ಏನೆಂದರೆ, ಕೆಲವರು ಬಾಲಿವುಡ್, ಸರ್ಜಿಕಲ್ ಸ್ಟ್ರೈಕ್ ಅಂತೆಲ್ಲ ಮಾತಾಡಿ ದಿಕ್ಕು ತಪ್ಪಿಸುತ್ತಾರೆ. ಈ ದೇಶದಲ್ಲಿ 50% ಹಿಂದುಳಿದವರು, 15% ಅಲ್ಪಸಂಖ್ಯಾತರು, 15% ದಲಿತರು ಮತ್ತು 8% ಆದಿವಾಸಿಗಳಿದ್ದಾರೆ. ಈ ದೇಶದಲ್ಲಿ ಈ 90% ಇರುವ ಜನಸಂಖ್ಯೆಯ ಒಟ್ಟಾರೆ ಭಾಗವಹಿಸುವಿಕೆ ಎಷ್ಟು ಎಂದು ನಾನು ನಿಮ್ಮನ್ನು ಕೇಳಲು ಬಯಸುತ್ತೇನೆ. ಈ ಸಮುದಾಯದ ಎಷ್ಟು ಮಂದಿ ಮಾದ್ಯಮದಲ್ಲಿದ್ದಾರೆ. ನೀವು ಅವರನ್ನು MGNREGA ಪಟ್ಟಿಯಲ್ಲಿ ನೋಡುತ್ತೀರಿ ಆದರೆ ದೊಡ್ಡ ಕಂಪನಿಗಳು, ಹೈಕೋರ್ಟ್‌ಗಳಲ್ಲಿ,  ಮಾದ್ಯಮಗಳಲ್ಲಿ ಕಾಣಲು ಸಾಧ್ಯವಿಲ್ಲ. ಪ್ರಧಾನಿ ಮೋದಿಯವರು ಹಿಂದೂಸ್ತಾನ್ ಸಬ್ಕಾ ಹೈ ಎಂದು ಹೇಳುತ್ತಾರೆ 90% ಇರುವ ಜನಸಂಖ್ಯೆ ಹೆಚ್ಚಿನ ಭಾಗವಹಿಸುವಿಕೆಯನ್ನು ಹೊಂದಿರದಿದ್ದರೆ ‘ಯೇ ಸಬ್ಕಾ ಹಿಂದೂಸ್ತಾನ್ ಕೈಸೇ ಹೈ?’  ಎಂದು ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ.

ಈ ದೇಶ ಎಲ್ಲರದ್ದು ಎಂದು ನರೇಂದ್ರ ಮೋದಿ ಜೀ ಹೇಳುತ್ತಿದ್ದಾರೆ. ಆದರೆ 90ರಷ್ಟು ಜನರು ಯಾವುದೇ ಭಾಗವಹಿಸುವಿಕೆಯನ್ನು ಹೊಂದಿಲ್ಲ. ಈ ಶೇಕಡಾ 90ರಷ್ಟು ಜನರನ್ನು ಪಾಲ್ಗೊಳ್ಳುವಂತೆ ಮಾಡಲು ಜಾತಿ ಗಣತಿ ಮೊದಲ ಹೆಜ್ಜೆಯಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಯುಪಿ ಪೊಲೀಸರ ನೇಮಕಾತಿ ಪರೀಕ್ಷೆಗೆ 28 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಆದರೆ ಈಗ ಪೇಪರ್ ಲೀಕ್ ಆಗಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಿದ್ದಂತೆ ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ನಿಮಗೆ ಉದ್ಯೋಗ ಸಿಗದವರೆಗೆ ಸೌಲಭ್ಯಗಳು ಸಿಗುವುದಿಲ್ಲ, ಪೇಪರ್ ಲೀಕ್ ನಿಲ್ಲುವುದಿಲ್ಲ, ಅಭಿವೃದ್ಧಿ ಆಗುವುದಿಲ್ಲ. ನಿಮ್ಮ ಅನುಭವಕ್ಕೆ ಅನುಗುಣವಾಗಿ ಮತ ಚಲಾಯಿಸಿದಾಗ ಮಾತ್ರ ಬದಲಾವಣೆಯಾಗುತ್ತದೆ ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ.

ನೀವು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಯೋಗಿ ಆದಿತ್ಯನಾಥ್ ಅವರಿಗೆ ಮತ ಹಾಕಿದ್ದೀರಿ, ಬೆಲೆ ಏರಿಕೆ, ನಿರುದ್ಯೋಗ, ಕಾಗದದ ಸೋರಿಕೆಯಂತಹ ನಿಮ್ಮ ನಿಜವಾದ ಸಮಸ್ಯೆಗಳು ಪರಿಹರಿಸಲ್ಪಟ್ಟಿವೆಯೇ ಎಂದು ನಾನು ನಿಮ್ಮೆಲ್ಲರನ್ನು ಕೇಳಲು ಬಯಸುತ್ತೇನೆ. ಮತ ಚಲಾಯಿಸುವಾಗ ನೀವು ಏನು ಯೋಚಿಸುತ್ತಿದ್ದೀರಿ ಎಂದು ನಾನು ನಿಮ್ಮನ್ನು ಕೇಳಲು ಬಯಸುತ್ತೇನೆ? ಇಲ್ಲಿನ ಉದ್ಯಮದಲ್ಲಿ ಏನಾದರೂ ಅಭಿವೃದ್ಧಿಯಾಗಿದೆಯೇ? ಎಂದು ಪ್ರಿಯಾಂಕ ಗಾಂಧಿ ಪ್ರಶ್ನಿಸಿದ್ದಾರೆ.

ಯಾತ್ರೆಯಲ್ಲಿ ಪಾಲ್ಗೊಳ್ಳಲಿರುವ ಅಖಿಲೇಶ್ ಯಾದವ್‌

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಫೆಬ್ರವರಿ 25ರಂದು ಭಾರತ್‌ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾಜವಾದಿ ಪಕ್ಷದ ನಾಯಕರು, ಕಾರ್ಯಕರ್ತರು ಉತ್ತರಪ್ರದೇಶದಲ್ಲಿ ಸಾಗುತ್ತಿರುವ ಭಾರತ್‌ ಜೋಡೋ ನ್ಯಾಯ ಯಾತ್ರೆಗೆ ಬೆಂಬಲವನ್ನು ಸೂಚಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಖುದ್ದು ಅಖಿಲೇಶ್ ಅವರನ್ನು ರಾಹುಲ್ ಗಾಂಧಿ ಅವರೊಂದಿಗೆ ಕೈಜೋಡಿಸುವಂತೆ ಆಹ್ವಾನಿಸಿದ್ದಾರೆ.

ಜನವರಿ 14ರಂದು ಮಣಿಪುರದಲ್ಲಿ ಪ್ರಾರಂಭವಾದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ 67 ದಿನಗಳಲ್ಲಿ 6,713 ಕಿಮೀ ಕ್ರಮಿಸಲಿದೆ. 15 ರಾಜ್ಯಗಳ 110 ಜಿಲ್ಲೆಗಳ ಮೂಲಕ ಯಾತ್ರೆ ಹಾದುಹೋಗಿ ಬಳಿಕ ಮಾರ್ಚ್ 20ರಂದು ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.

ಇದನ್ನು ಓದಿ: ‘ಮಜ್ದೂರ್ ಪೈದಲ್ ಜೋಡೋ ಯಾತ್ರೆ’: ಭೂರಹಿತ ದಲಿತ ಕಾರ್ಮಿಕರಿಂದ ಹಕ್ಕಿಗಾಗಿ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...