Homeರಾಷ್ಟ್ರೀಯ‘ಅಂದು ಪ್ರಿಯಾಂಕ ಗಾಂಧಿ ದೇವತೆಯಂತಿದ್ದರು; ಅತ್ತು ಬಿಟ್ಟರು!’: ರಾಜೀವ್‌‌ ಗಾಂಧಿ ಹತ್ಯೆ ಅಪರಾಧಿ ನಳಿನಿ

‘ಅಂದು ಪ್ರಿಯಾಂಕ ಗಾಂಧಿ ದೇವತೆಯಂತಿದ್ದರು; ಅತ್ತು ಬಿಟ್ಟರು!’: ರಾಜೀವ್‌‌ ಗಾಂಧಿ ಹತ್ಯೆ ಅಪರಾಧಿ ನಳಿನಿ

ವೆಲ್ಲೂರು ಜೈಲಿನಲ್ಲಿ ನನ್ನನ್ನು ಭೇಟಿಯಾಗಿದ್ದು, ಮೂರು ದಶಕಗಳ ಸೆರೆವಾಸದಲ್ಲೆ ನಾನು ಎದುರಿಸಿದ ಅತ್ಯಂತ ಪ್ರಕ್ಷುಬ್ಧ ದಿನವಾಗಿದೆ ಎಂದು ಅವರು ಹೇಳಿದ್ದಾರೆ

- Advertisement -
- Advertisement -

“ರಾಜೀವ್‌ ಗಾಂಧಿಯವರ ಪುತ್ರಿ ಪ್ರಿಯಾಂಕಾ ಗಾಂಧಿ ಅವರು ವೆಲ್ಲೂರು ಜೈಲಿನಲ್ಲಿ ನನ್ನನ್ನು ಭೇಟಿಯಾಗಿದ್ದು, ಮೂರು ದಶಕಗಳ ಸೆರೆವಾಸದಲ್ಲೆ ನಾನು ಎದುರಿಸಿದ ಅತ್ಯಂತ ಪ್ರಕ್ಷುಬ್ಧ ದಿನವಾಗಿದೆ” ಎಂದು ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಅಪರಾಧಿ ನಳಿನಿ ಶ್ರೀಹರನ್ ಹೇಳಿದ್ದಾರೆ. 1991ರ ರಾಜೀವ್‌‌‌‌‌ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳೊಂದಿಗೆ ನಳಿನಿ ಶ್ರೀಹರನ್ ಅವರು ತಮಿಳುನಾಡು ಜೈಲಿನಿಂದ ಶನಿವಾರ ಸಂಜೆ ಬಿಡುಗಡೆಯಾಗಿದ್ದಾರೆ.

ಜೈಲಿನಿಂದ ಬಿಡುಗಡೆಯಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ನಳಿನಿ, ತನ್ನ ಪತಿ, ಸಹ ಅಪರಾಧಿ ಮುರುಗನ್ ಜೊತೆಗೆ ಇಂಗ್ಲೆಂಡ್‌ನಲ್ಲಿ ವಾಸಿಸುತ್ತಿರುವ ಮಗಳನ್ನು ಭೇಟಿಯಾಗುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೇ 1991 ರಲ್ಲಿ ರಾಜೀವ್ ಗಾಂಧಿ ಹತ್ಯೆ ಸ್ಫೋಟದ ಸಂತ್ರಸ್ತರಾದ ಗಾಂಧಿ ಕುಟುಂಬ ಮತ್ತು ಇತರ ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗುತ್ತೀರ ಎಂಬ ಪ್ರಶ್ನೆಗೆ ಉತ್ತರಿಸಿದ ನಳಿನಿ, “ಈ ಬಗ್ಗೆ ನನಗೆ ಮಾತುಗಳೆ ಹೊರಡುತ್ತಿಲ್ಲ. ರಾಜೀವ್ ಗಾಂಧಿ ಕುಟುಂಬವನ್ನು ಭೇಟಿಯಾಗಲು ಹಿಂಜರಿಕೆಯಿದೆ” ಎಂದು ನಳಿನಿ ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಗೆ ವಿರಾಮ: ಗುಜರಾತ್ ಚುನಾವಣಾ ಪ್ರಚಾರಕ್ಕೆ ರಾಹುಲ್ ಗಾಂಧಿ

“ಗಾಂಧಿ ಕುಟುಂಬ ತಮ್ಮ ಆತ್ಮೀಯ ವ್ಯಕ್ತಯಾದ ತಂದೆಯನ್ನು ಕಳೆದುಕೊಂಡಿತು. ನಾನು ಆ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿ. ಅವರು ಈಗಲೂ ಆ ಅಪಾರವಾದ ನೋವನ್ನು ಅನುಭವಿಸುತ್ತಿರಬೇಕು. ಬಹುಶಃ, ಅವರು ಬಯಸಿದರೆ, ನಾನು ಅವರನ್ನು ಭೇಟಿ ಮಾಡುತ್ತೇನೆ” ಎಂದು ನಳಿನಿ ಹೇಳಿದ್ದಾರೆ.

ನಳಿನಿ ಅವರನ್ನು 2008ರಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾಗಲು ವೆಲ್ಲೂರು ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದ್ದರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಇದು ನಂಬಲಸಾಧ್ಯ ಘಟನೆ. ನನ್ನನ್ನು ನಾನು ನಂಬುವಂತೆ ಆಗಲು ನಾನು ಪ್ರಿಯಾಂಕ ಗಾಂಧಿ ಅವರನ್ನು ಸ್ಪರ್ಶಿಸಬೇಕಾಗಿತ್ತು…” ಎಂದು ಹೇಳಿದ್ದಾರೆ.

“ಅಂದು ಅವರು ದೇವತೆಯಂತಿದ್ದರು… ನನಗೆ ಭಯವಾಯಿತು … ಅವರು ತನ್ನ ತಂದೆಯ ಹತ್ಯೆಯ ಬಗ್ಗೆ ನನ್ನನ್ನು ಕೇಳಲು ಬಯಸಿದ್ದರು. ಅವರು ಅಂದು ಅತ್ತರು. ನನಗೆ ತಿಳಿದಿದ್ದನ್ನೆಲ್ಲಾ ಅವರಿಗೆ ಹೇಳಿದೆ. ಅವರು ಹಿಂದಿರುಗಿದ ನಂತರ, ನಾನು ಗಾಬರಿಗೊಂಡು, ಅವರು ಸುರಕ್ಷಿತವಾಗಿ ದೆಹಲಿ ಹಿಂದಿರುಗಲು ಪ್ರಾರ್ಥಿಸಿ, ಉಪವಾಸ ಕೈಗೊಂಡೆ” ಎಂದು ನಳಿನಿ ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮೋದಿ ಕಾರ್ಯಕ್ರಮಕ್ಕೆ ಕಾರ್ಮಿಕರನ್ನು ಕರೆತಂದು ಹಣ ಕೊಡದೆ ವಂಚನೆ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

ಸ್ಫೋಟದ ಇತರ ಸಂತ್ರಸ್ತರ ಬಗ್ಗೆ ಹೇಳಿದ ನಳಿನಿ, “ಅವರ ದುಃಖ ಮತ್ತು ನಷ್ಟವನ್ನು ಹಂಚಿಕೊಳ್ಳುತ್ತೇನೆ. ಅವರಿಗೆ ನಾನು ಏನು ಹೇಳಲಿ? ಅವರ ಬಗ್ಗೆ ನಾನು ಹೇಳಿಕೆ ಹೇಗೆ ಸಾಧ್ಯ? ನಾನು ನಿರಪರಾಧಿ ಎಂದು ಹೇಳಲು ಸಹ ನನಗೆ ಅವಕಾಶವಿಲ್ಲ… ಹಾಗಾದರೆ ಸಂತ್ರಸ್ತರ ಕುಟುಂಬಗಳಿಗೆ ನಾನು ಏನು ಹೇಳಲಿ?…” ಎಂದು ಅವರು ಪ್ರಶ್ನಿಸಿದ್ದಾರೆ.

ತಿರುಚ್ಚಿಯ ವಿಶೇಷ ನಿರಾಶ್ರಿತರ ಜೈಲು ಶಿಬಿರದಿಂದ ತಮ್ಮ ಪತಿ ಹಾಗೂ ಸಹ ಅಪರಾಧಿ ಆಗಿರುವ ಮುರುಗನ್‌ ಅವರ ಔಪಚಾರಿಕ ಬಿಡುಗಡೆ ಮಾಡಿದ ನಂತರ, ಗ್ರೀನ್ ಕಾರ್ಡ್ ಹೊಂದಿರುವ ತಮ್ಮ ಮಗಳ ಭೇಟಿಗೆ ಪಾಸ್‌ಪೋರ್ಟ್ ಮತ್ತು ವೀಸಾ ಪಡೆಯುವುದು ತನ್ನ ಮೊದಲ ಆದ್ಯತೆಯಾಗಿದೆ ಎಂದು ನಳಿನಿ ಹೇಳಿದ್ದಾರೆ.

“ಮಗಳು ಯುಕೆಯಲ್ಲಿ ವಾಸಿಸುತ್ತಿದ್ದಾರೆ. ಅದು ನನ್ನ ಮೊದಲ ಆದ್ಯತೆ. ನನ್ನ ಇಡೀ ಕುಟುಂಬ ನಾಶವಾಗಿದೆ…ನಾನು ಅವುಗಳನ್ನು ತುಂಡುಗಳಾಗಿ ಸಂಗ್ರಹಿಸಬೇಕು. ತುರ್ತು ಪಾಸ್‌ಪೋರ್ಟ್ ಮತ್ತು ದಾಖಲೆಗಳಿಗಾಗಿ ನಾವು ಶ್ರೀಲಂಕಾದ ಹೈಕಮಿಷನ್ ಅನ್ನು ಸಂಪರ್ಕಿಸುತ್ತೇವೆ. ಇದರಿಂದ ನಮ್ಮ ಮಗಳು ನಮ್ಮನ್ನು ಯುಕೆಗೆ ಕರೆದೊಯ್ಯಲು ಸಾಧ್ಯವಾಗಲಿದೆ” ಎಂದು ನಳಿನಿ ಹೇಳಿದ್ದಾರೆ.

ಇದನ್ನೂ ಓದಿ: EWS: ಆರ್ಥಿಕ ದುರ್ಬಲ ವರ್ಗದ ಹೆಸರಿನಲ್ಲಿ ಮೀಸಲಾತಿಯನ್ನೇ ದುರ್ಬಲಗೊಳಿಸುವ ಹುನ್ನಾರ

ಸ್ಪೋಟ ಪ್ರಕರಣದ ಆರು ಮಂದಿಯಲ್ಲಿ ನಾಲ್ವರು ಶ್ರೀಲಂಕಾ ಪ್ರಜೆಗಳಾಗಿದ್ದು, ಅವರಲ್ಲಿ ಒಬ್ಬರಾಗಿರುವ ಮುರುಗನ್ ಅವರನ್ನು 31 ವರ್ಷಗಳ ಸೆರೆವಾಸದ ನಂತರ ಔಪಚಾರಿಕವಾಗಿ ಬಿಡುಗಡೆ ಮಾಡಿ, ನಂತರ ಶನಿವಾರ ಸಂಜೆ ವೆಲ್ಲೂರು ಕೇಂದ್ರ ಕಾರಾಗೃಹದಿಂದ ತಿರುಚ್ಚಿ ಶಿಬಿರಕ್ಕೆ ಕರೆದೊಯ್ಯಲಾಯಿತು.

“ನನ್ನ ಬಂಧನದ ಮೊದಲ ದಿನದಿಂದಲೂ, ನಾನು ನನ್ನ ಬಿಡುಗಡೆಗಾಗಿ ಪ್ರಯತ್ನಿಸುತ್ತಿದ್ದೆ. ನಾನು ಅನೇಕ ಹಿನ್ನಡೆಗಳನ್ನು ಎದುರಿಸಿದ್ದೇನೆ. ನನ್ನ ಜೀವನವನ್ನು ಕೊನೆಗೊಳಿಸಬೇಕೆಂದು ನಾನು ಯೋಚಿಸಿದೆ…ಆದರೆ ಪ್ರತಿ ಬಾರಿಯೂ, ನಾನು ನನ್ನ ಪ್ರಯತ್ನಗಳನ್ನು ಹೊಸ ಹೆಜ್ಜೆಯಂತೆ ತೆಗೆದುಕೊಳ್ಳಲು ಪ್ರಯತ್ನಿಸಿದೆ” ಎಂದು ಅವರು ಹೇಳಿದ್ದಾರೆ.

2000 ರಲ್ಲಿ ಆಗಿನ ಗವರ್ನರ್ ಫಾತಿಮಾ ಬೀವಿ ಅವರು ರಾಜೀವ್ ಗಾಂಧಿಯವರ ಪತ್ನಿ ಸೋನಿಯಾ ಗಾಂಧಿ ಮಾಡಿದ ಮನವಿಯ ಮೇರೆಗೆ ನಳಿನಿ ಅವರ ಮರಣದಂಡನೆಯನ್ನು ಕಡಿಮೆಗೊಳಿಸಿದಾಗ ತಾನು ತುಂಬಾ ಸಂತೋಷವಾಗಿರಲಿಲ್ಲ ಎಂದು ಹೇಳಿದ್ದಾರೆ.

“ಯಾಕೆಂದರೆ ಮೂವರು ಇನ್ನೂ ಮರಣದಂಡನೆ ಶಿಕ್ಷೆಯಲ್ಲಿದ್ದರು. ಜೈಲಿನಲ್ಲಿರುವ ನಾವು ಎಲ್ಲಾ ಏಳು ಮಂದಿ ಅಪರಾಧಿಗಳು ಮೂವರು ಅಪರಾಧಿಗಳ ನ್ಯಾಯಕ್ಕಾಗಿ ಹೋರಾಡುತ್ತಿದ್ದೇವು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಶಾಸಕ ಪ್ರಿಯಾಂಕ್‌ ಖರ್ಗೆಗೆ ಜೀವ ಬೆದರಿಕೆಯೊಡ್ಡಿ ಪರಾರಿಯಾಗಿದ್ದ ಬಿಜೆಪಿ ಮುಖಂಡನ ಬಂಧನ

ಮೂವರು ಅಪರಾಧಿಗಳ ಮರಣದಂಡನೆ ಶಿಕ್ಷೆಯನ್ನು ಜೀವಾವಧಿಗೆ ಪರಿವರ್ತಿಸಿದ 2014 ರ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿದ ನಳಿನಿ, “ಅದು ನಾವು ನ್ಯಾಯಕ್ಕಾಗಿ ನಡೆಸುತ್ತಿದ್ದ ಹೋರಾಟ ಮತ್ತು ಬಿಡುಗಡೆಯ ಮಹತ್ವದ ಅಧ್ಯಾಯ” ಎಂದು ಹೇಳಿದ್ದಾರೆ.

“ಕಾನೂನು ಪ್ರಕ್ರಿಯೆಯು ಪ್ರತಿ ಹಂತದಲ್ಲೂ ಕೊನೆಗೊಳ್ಳುವುದಿಲ್ಲ. ನಮ್ಮ ಬಂಧನದ ನಂತರ, ವಿಚಾರಣೆಯನ್ನು ಪೂರ್ಣಗೊಳಿಸಲು ಏಳು ವರ್ಷಗಳು ತೆಗೆದುಕೊಂಡಿತು. 2014 ರ ಸುಪ್ರಿಂಕೋರ್ಟ್‌ ಆದೇಶದ ನಂತರ, ನಮ್ಮ ಬಿಡುಗಡೆಗೆ ಇನ್ನೂ ಎಂಟು ವರ್ಷಗಳು ಬೇಕಾಯಿತು…” ಎಂದು ಅವರು ಹೇಳಿದ್ದಾರೆ.

“ನಮಗೆ ಮರಣದಂಡನೆ ವಿಧಿಸುವ ಮುಂಚೆಯೇ, ನಾವೆಲ್ಲರೂ ಮರಣದಂಡನೆ ಕೈದಿಗಳಂತೆ ಪರಿಗಣಿಸಲ್ಪಟ್ಟಿದ್ದೇವೆ. ಏಕಾಂತ ಸೆರೆಮನೆಗಳಲ್ಲಿ ಇರಿಸಲ್ಪಟ್ಟಿದ್ದೇವೆ. ನಾನು ಗರ್ಭಿಣಿಯಾಗಿದ್ದಾಗ ನಡೆಯಲು ಅನುಮತಿ ಪಡೆಯಲು ವೈದ್ಯರು ಮಧ್ಯಪ್ರವೇಶಿಸಿದರು” ಎಂದು ಅವರು ನೆನಪಿಸಿಕೊಂಡಿದ್ದಾರೆ.

ತಮ್ಮನ್ನು ಬಿಡುಗಡೆ ಮಾಡಲು 2014 ರಲ್ಲಿ ವಿಧಾನಸಭೆ ನಿರ್ಣಯ ಮತ್ತು 2018 ರಲ್ಲಿ ಕ್ಯಾಬಿನೆಟ್ ಶಿಫಾರಸ್ಸು ಮಾಡಿದ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಜೆ. ಜಯಲಲಿತಾ ಮತ್ತು ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರನ್ನು ನಳಿನಿ ಧನ್ಯವಾದ ಅರ್ಪಿಸಿದ್ದಾರೆ.

ಇದನ್ನೂ ಓದಿ: ಬೊಮ್ಮಾಯಿಯವರ ಕ್ರಿಯೆ-ಪ್ರತಿಕ್ರಿಯೆ ಹೇಳಿಕೆ ಕೊಲೆ ಬೆದರಿಕೆಯಾಗಿ ಪ್ರಕಟವಾಗುತ್ತಿದೆ: ಸಿದ್ದರಾಮಯ್ಯ

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಅಧಿಕಾರ ವಹಿಸಿಕೊಂಡ ಮೊದಲ ದಿನದಿಂದಲೇ ತಮ್ಮ ಬಿಡುಗಡೆಗೆ ಶ್ರಮಿಸಿದ್ದಕ್ಕಾಗಿ ಅವರು ಧನ್ಯವಾದ ಅರ್ಪಿಸಿದ್ದಾರೆ. “ನಾನು ಡಿಎಂಕೆ ಸರ್ಕಾರದಿಂದ ಪೆರೋಲ್ ಪಡೆದಿದ್ದರಿಂದಲೆ ನನ್ನ ಬಿಡುಗಡೆಗಾಗಿ ಸುಪ್ರೀಂಕೋರ್ಟ್‌ನಲ್ಲಿ ಹೋರಾಡಲು ಸಾಧ್ಯವಾಯಿತು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತನ್ನ ಗಂಡನನ್ನು ಕೊಂದವರನ್ನೇ ಕ್ರಮಿಸಿದ ಸೋನಿಯಾ ಗಾಂಧಿಯವರ ವ್ಯಕ್ತಿತ್ವ ಬಹಳ ಉನ್ನತವಾದುದು.

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...