Homeಮುಖಪುಟಉತ್ತರಪ್ರದೇಶದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿಯಿಂದ ಕೋಟ್ಯಾಧಿಪತಿಗಳ ತೆರಿಗೆ ಮನ್ನಾ; ರಾಹುಲ್‌...

ಉತ್ತರಪ್ರದೇಶದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿಯಿಂದ ಕೋಟ್ಯಾಧಿಪತಿಗಳ ತೆರಿಗೆ ಮನ್ನಾ; ರಾಹುಲ್‌ ವಾಗ್ಧಾಳಿ

- Advertisement -
- Advertisement -

ಭಾರತ್‌ ಜೋಡೋ ನ್ಯಾಯ ಯಾತ್ರೆ ಉತ್ತರಪ್ರದೇಶದಲ್ಲಿ ಮುಂದುವರಿದಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಅವರು ಇಂದು ಉತ್ತರಪ್ರದೇಶದ ಅಲಿಗಢದಿಂದ ತಮ್ಮ ಯಾತ್ರೆಯನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ವಿರುದ್ಧ ರಾಹುಲ್‌ ಗಾಂಧಿ ವಾಗ್ಧಾಳಿಯನ್ನು ನಡೆಸಿದ್ದು, ಪ್ರಧಾನಿ ಮೋದಿ ಕೋಟ್ಯಾಧಿಪತಿಗಳ ತೆರಿಯನ್ನು ಮನ್ನಾ ಮಾಡಿದ್ದು, ರೈತರ ಒಂದೇ ಒಂದು ರೂ.ಸಾಲವನ್ನು ಮನ್ನಾ ಮಾಡಿಲ್ಲ ಎಂದು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಪ್ರತಿಪಕ್ಷಗಳ ಒಗ್ಗಟ್ಟನ್ನು ಪ್ರದರ್ಶಿಸುವ ಭಾಗವಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆಗ್ರಾದಲ್ಲಿ ಯಾತ್ರೆಯೊಂದಿಗೆ ಸೇರಲಿದ್ದಾರೆ. ಸಾವಿರಾರು ಮಂದಿ ಕಾಂಗ್ರೆಸ್‌- ಎಸ್ಪಿ ಕಾರ್ಯಕರ್ತರು ಯಾತ್ರೆಯಲ್ಲಿ ಭಾಗವಹಿಸಿದ್ದಾರೆ.

ಯಾತ್ರೆಯ ವೇಳೆ ಮಾತನಾಡಿದ ರಾಹುಲ್‌ ಗಾಂಧಿ, ಕೇಂದ್ರ ಸರಕಾರ ಅದಾನಿಗೆ ಎಲ್ಲವನ್ನೂ ನೀಡಿದ್ದು, ಸಣ್ಣ  ಕುಶಲಕರ್ಮಿಗಳಿಗೆ ಏನೂ ಉಳಿದಿಲ್ಲ. ಖಾಸಗಿ ಕಂಪನಿಗಳು, ದೊಡ್ಡ ಮಾಧ್ಯಮ ಸಂಸ್ಥೆಗಳಲ್ಲಿ ಒಬಿಸಿ, ದಲಿತರು, ಎಸ್ಟಿಗಳ ಪ್ರಾತಿನಿಧ್ಯ ಶೂನ್ಯ. ನಿರುದ್ಯೋಗ ಇಲ್ಲದಿದ್ದರೆ ಯುವಕರು ದಿನದ 12 ಗಂಟೆ ಮೊಬೈಲ್ ಬಳಸುತ್ತಿರಲಿಲ್ಲ ಎಂದು ಹೇಳಿದ್ದಾರೆ.

ನಾನು 10 ವರ್ಷಗಳ ನಂತರ ಮತ್ತೆ ಇಲ್ಲಿಗೆ ಬರಲು ಬಯಸುತ್ತೇನೆ. ಅಲಿಗಢ್ ಮೊಬೈಲ್ ಉತ್ಪಾದನಾ ಕೇಂದ್ರವಾಗಿದೆ. ನಾನು ಮೊಬೈಲ್ ಫೋನ್‌ಗಳಲ್ಲಿ ‘ಮೇಡ್ ಇನ್ ಅಲಿಗಢ’ ಎಂದು ಬರೆದಿರುವುದನ್ನು ನೋಡಲು ಬಯಸುತ್ತೇನೆ ಹೊರತಾಗಿ ‘ಮೇಡ್ ಇನ್ ಚೀನಾ’ ಅಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಟಾರ್ಚ್‌ ಲೈಟ್‌ ಹಾಕುವಂತೆ, ಪಾತ್ರೆಗಳನ್ನು ಬಡಿಯುವಂತೆ ಹೇಳಿ ಮೋದಿ ಜನಸಾಮಾನ್ಯರನ್ನು ತಬ್ಬಿಬ್ಬುಗೊಳಿಸುತ್ತಿದ್ದಾರೆ. ಪ್ರಧಾನಿ ಮೋದಿ ಕೋಟ್ಯಾಧಿಪತಿಗಳ ತೆರಿಗೆಯನ್ನು ಮನ್ನಾ ಮಾಡಿದ್ದಾರೆ, ಆದರೆ ರೈತರ ಸಾಲವನ್ನು ಒಂದು ರೂಪಾಯಿ ಕೂಡ ಮನ್ನಾ ಮಾಡಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಬಜೆಟ್ ರಚಿಸುವವರಲ್ಲಿ ಶೇಕಡಾ 90ರಷ್ಟು ಜನರು ಮೇಲ್ಜಾತಿಯವರು, ಒಬಿಸಿಗಳು ಯುಪಿಯ ಬಜೆಟ್‌ನಲ್ಲಿ ಶೇಕಡಾ 4ರಷ್ಟು ಪಡೆಯುತ್ತಾರೆ. ಎಲ್ಲಾ ಹಿಂದುಳಿದ ಜಾತಿಗಳ ಜನರು ಏನು ಮಾಡುತ್ತಿದ್ದಾರೆ? ನೀವು MNGREGA, ಗುತ್ತಿಗೆ ಕಾರ್ಮಿಕರ ಪಟ್ಟಿ ಬಗ್ಗೆ ಕೇಳಬೇಕು ಎಂದು ಹೇಳಿದ್ದಾರೆ.

ನಾವು ದೇಶವನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿದ್ದೇವೆ, ಹಿಂಸೆ ಮತ್ತು ದ್ವೇಷ ‘ಅನ್ಯಾಯ’ದ ಕಾರಣದಿಂದ ನಡೆಯುತ್ತಿದೆ ಎಂದು  ರೈತರು ಹೇಳಿದ್ದಾರೆ. ಇಲ್ಲಿ ಪ್ರತಿನಿತ್ಯ ಮಹಿಳೆಯರು, ಕಾರ್ಮಿಕರು, ರೈತರು ಅನ್ಯಾಯ ಎದುರಿಸುತ್ತಿದ್ದಾರೆ. ಆದ್ದರಿಂದ ಈ ಯಾತ್ರೆಯನ್ನು ಆಯೋಜಿಸಲಾಗಿದೆ. ಈ ಅನ್ಯಾಯದ ವಿರುದ್ಧ ಒಗ್ಗೂಡಿ ಹೋರಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನೀವು ಓದುತ್ತೀರಿ, ಖಾಸಗಿ ಟ್ಯೂಷನ್ ತೆಗೆದುಕೊಳ್ಳುತ್ತೀರಿ. ನಂತರ ಪರೀಕ್ಷೆ ಬರೆಯಲು ಹೋದಾಗ ಪೇಪರ್ ಲೀಕ್ ಆಗಿರುವುದು ಗೊತ್ತಾಗಿದೆ. ಮೋದಿ ಸರ್ಕಾರದ ಗುರಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವವರ ಸಮಯವನ್ನು ವ್ಯರ್ಥ ಮಾಡುವುದಾಗಿದೆ. ಏಕೆಂದರೆ ಅವರು ನಿಮಗೆ ಉದ್ಯೋಗವನ್ನು ನೀಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಕುಟುಂಬದಲ್ಲಿ ಜಗಳವಾದಾಗ ಕುಟುಂಬ ದುರ್ಬಲವಾಗುತ್ತದೆ. ಹಾಗೆಯೇ, ಯಾರಾದರೂ ದೇಶವನ್ನು ದುರ್ಬಲಗೊಳಿಸಿದಾಗ, ದೇಶಭಕ್ತ ದೇಶವನ್ನು ಉಳಿಸುತ್ತಾನೆ. ದ್ವೇಷ ಮತ್ತು ಹಿಂಸೆಯನ್ನು ಹೋಗಲಾಡಿಸಲಾಗುತ್ತದೆ. ಇದು ಭಾರತ್ ಜೋಡೋ ಯಾತ್ರೆಯ ಉದ್ದೇಶವಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆಯ ವೇಳೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ಅಗ್ನಿವೀರ್ ಯೋಜನೆಯು ಬಿಹಾರ, ಯುಪಿಯ ಶ್ರಮಜೀವಿ ಯುವಕರ ಮೇಲೆ ನೇರವಾಗಿ ದಾಳಿ ಮಾಡುತ್ತದೆ. ಹಣದುಬ್ಬರ, ಕನಿಷ್ಠ ವೇತನ ಹೆಚ್ಚಳ, 10 ವರ್ಷಗಳ ಮೋದಿ ಸರ್ಕಾರ ಏನು ಮಾಡಿದೆ ಎಂಬುವುದನ್ನು ಪ್ರತಿಬಿಂಬಿಸುತ್ತದೆ. ನೀವು ಯೋಚಿಸುತ್ತೀರಿ ಮತ್ತು ಇದನ್ನು ಅರಿತುಕೊಳ್ಳುತ್ತೀರಿ ಇದರಿಂದ ಬದಲಾವಣೆಗೆ ನಾಂದಿ ಹಾಡಬಹುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...