Homeಮುಖಪುಟಉತ್ತರಪ್ರದೇಶದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿಯಿಂದ ಕೋಟ್ಯಾಧಿಪತಿಗಳ ತೆರಿಗೆ ಮನ್ನಾ; ರಾಹುಲ್‌...

ಉತ್ತರಪ್ರದೇಶದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿಯಿಂದ ಕೋಟ್ಯಾಧಿಪತಿಗಳ ತೆರಿಗೆ ಮನ್ನಾ; ರಾಹುಲ್‌ ವಾಗ್ಧಾಳಿ

- Advertisement -
- Advertisement -

ಭಾರತ್‌ ಜೋಡೋ ನ್ಯಾಯ ಯಾತ್ರೆ ಉತ್ತರಪ್ರದೇಶದಲ್ಲಿ ಮುಂದುವರಿದಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಅವರು ಇಂದು ಉತ್ತರಪ್ರದೇಶದ ಅಲಿಗಢದಿಂದ ತಮ್ಮ ಯಾತ್ರೆಯನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ವಿರುದ್ಧ ರಾಹುಲ್‌ ಗಾಂಧಿ ವಾಗ್ಧಾಳಿಯನ್ನು ನಡೆಸಿದ್ದು, ಪ್ರಧಾನಿ ಮೋದಿ ಕೋಟ್ಯಾಧಿಪತಿಗಳ ತೆರಿಯನ್ನು ಮನ್ನಾ ಮಾಡಿದ್ದು, ರೈತರ ಒಂದೇ ಒಂದು ರೂ.ಸಾಲವನ್ನು ಮನ್ನಾ ಮಾಡಿಲ್ಲ ಎಂದು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಪ್ರತಿಪಕ್ಷಗಳ ಒಗ್ಗಟ್ಟನ್ನು ಪ್ರದರ್ಶಿಸುವ ಭಾಗವಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆಗ್ರಾದಲ್ಲಿ ಯಾತ್ರೆಯೊಂದಿಗೆ ಸೇರಲಿದ್ದಾರೆ. ಸಾವಿರಾರು ಮಂದಿ ಕಾಂಗ್ರೆಸ್‌- ಎಸ್ಪಿ ಕಾರ್ಯಕರ್ತರು ಯಾತ್ರೆಯಲ್ಲಿ ಭಾಗವಹಿಸಿದ್ದಾರೆ.

ಯಾತ್ರೆಯ ವೇಳೆ ಮಾತನಾಡಿದ ರಾಹುಲ್‌ ಗಾಂಧಿ, ಕೇಂದ್ರ ಸರಕಾರ ಅದಾನಿಗೆ ಎಲ್ಲವನ್ನೂ ನೀಡಿದ್ದು, ಸಣ್ಣ  ಕುಶಲಕರ್ಮಿಗಳಿಗೆ ಏನೂ ಉಳಿದಿಲ್ಲ. ಖಾಸಗಿ ಕಂಪನಿಗಳು, ದೊಡ್ಡ ಮಾಧ್ಯಮ ಸಂಸ್ಥೆಗಳಲ್ಲಿ ಒಬಿಸಿ, ದಲಿತರು, ಎಸ್ಟಿಗಳ ಪ್ರಾತಿನಿಧ್ಯ ಶೂನ್ಯ. ನಿರುದ್ಯೋಗ ಇಲ್ಲದಿದ್ದರೆ ಯುವಕರು ದಿನದ 12 ಗಂಟೆ ಮೊಬೈಲ್ ಬಳಸುತ್ತಿರಲಿಲ್ಲ ಎಂದು ಹೇಳಿದ್ದಾರೆ.

ನಾನು 10 ವರ್ಷಗಳ ನಂತರ ಮತ್ತೆ ಇಲ್ಲಿಗೆ ಬರಲು ಬಯಸುತ್ತೇನೆ. ಅಲಿಗಢ್ ಮೊಬೈಲ್ ಉತ್ಪಾದನಾ ಕೇಂದ್ರವಾಗಿದೆ. ನಾನು ಮೊಬೈಲ್ ಫೋನ್‌ಗಳಲ್ಲಿ ‘ಮೇಡ್ ಇನ್ ಅಲಿಗಢ’ ಎಂದು ಬರೆದಿರುವುದನ್ನು ನೋಡಲು ಬಯಸುತ್ತೇನೆ ಹೊರತಾಗಿ ‘ಮೇಡ್ ಇನ್ ಚೀನಾ’ ಅಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಟಾರ್ಚ್‌ ಲೈಟ್‌ ಹಾಕುವಂತೆ, ಪಾತ್ರೆಗಳನ್ನು ಬಡಿಯುವಂತೆ ಹೇಳಿ ಮೋದಿ ಜನಸಾಮಾನ್ಯರನ್ನು ತಬ್ಬಿಬ್ಬುಗೊಳಿಸುತ್ತಿದ್ದಾರೆ. ಪ್ರಧಾನಿ ಮೋದಿ ಕೋಟ್ಯಾಧಿಪತಿಗಳ ತೆರಿಗೆಯನ್ನು ಮನ್ನಾ ಮಾಡಿದ್ದಾರೆ, ಆದರೆ ರೈತರ ಸಾಲವನ್ನು ಒಂದು ರೂಪಾಯಿ ಕೂಡ ಮನ್ನಾ ಮಾಡಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಬಜೆಟ್ ರಚಿಸುವವರಲ್ಲಿ ಶೇಕಡಾ 90ರಷ್ಟು ಜನರು ಮೇಲ್ಜಾತಿಯವರು, ಒಬಿಸಿಗಳು ಯುಪಿಯ ಬಜೆಟ್‌ನಲ್ಲಿ ಶೇಕಡಾ 4ರಷ್ಟು ಪಡೆಯುತ್ತಾರೆ. ಎಲ್ಲಾ ಹಿಂದುಳಿದ ಜಾತಿಗಳ ಜನರು ಏನು ಮಾಡುತ್ತಿದ್ದಾರೆ? ನೀವು MNGREGA, ಗುತ್ತಿಗೆ ಕಾರ್ಮಿಕರ ಪಟ್ಟಿ ಬಗ್ಗೆ ಕೇಳಬೇಕು ಎಂದು ಹೇಳಿದ್ದಾರೆ.

ನಾವು ದೇಶವನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿದ್ದೇವೆ, ಹಿಂಸೆ ಮತ್ತು ದ್ವೇಷ ‘ಅನ್ಯಾಯ’ದ ಕಾರಣದಿಂದ ನಡೆಯುತ್ತಿದೆ ಎಂದು  ರೈತರು ಹೇಳಿದ್ದಾರೆ. ಇಲ್ಲಿ ಪ್ರತಿನಿತ್ಯ ಮಹಿಳೆಯರು, ಕಾರ್ಮಿಕರು, ರೈತರು ಅನ್ಯಾಯ ಎದುರಿಸುತ್ತಿದ್ದಾರೆ. ಆದ್ದರಿಂದ ಈ ಯಾತ್ರೆಯನ್ನು ಆಯೋಜಿಸಲಾಗಿದೆ. ಈ ಅನ್ಯಾಯದ ವಿರುದ್ಧ ಒಗ್ಗೂಡಿ ಹೋರಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನೀವು ಓದುತ್ತೀರಿ, ಖಾಸಗಿ ಟ್ಯೂಷನ್ ತೆಗೆದುಕೊಳ್ಳುತ್ತೀರಿ. ನಂತರ ಪರೀಕ್ಷೆ ಬರೆಯಲು ಹೋದಾಗ ಪೇಪರ್ ಲೀಕ್ ಆಗಿರುವುದು ಗೊತ್ತಾಗಿದೆ. ಮೋದಿ ಸರ್ಕಾರದ ಗುರಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವವರ ಸಮಯವನ್ನು ವ್ಯರ್ಥ ಮಾಡುವುದಾಗಿದೆ. ಏಕೆಂದರೆ ಅವರು ನಿಮಗೆ ಉದ್ಯೋಗವನ್ನು ನೀಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಕುಟುಂಬದಲ್ಲಿ ಜಗಳವಾದಾಗ ಕುಟುಂಬ ದುರ್ಬಲವಾಗುತ್ತದೆ. ಹಾಗೆಯೇ, ಯಾರಾದರೂ ದೇಶವನ್ನು ದುರ್ಬಲಗೊಳಿಸಿದಾಗ, ದೇಶಭಕ್ತ ದೇಶವನ್ನು ಉಳಿಸುತ್ತಾನೆ. ದ್ವೇಷ ಮತ್ತು ಹಿಂಸೆಯನ್ನು ಹೋಗಲಾಡಿಸಲಾಗುತ್ತದೆ. ಇದು ಭಾರತ್ ಜೋಡೋ ಯಾತ್ರೆಯ ಉದ್ದೇಶವಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆಯ ವೇಳೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ಅಗ್ನಿವೀರ್ ಯೋಜನೆಯು ಬಿಹಾರ, ಯುಪಿಯ ಶ್ರಮಜೀವಿ ಯುವಕರ ಮೇಲೆ ನೇರವಾಗಿ ದಾಳಿ ಮಾಡುತ್ತದೆ. ಹಣದುಬ್ಬರ, ಕನಿಷ್ಠ ವೇತನ ಹೆಚ್ಚಳ, 10 ವರ್ಷಗಳ ಮೋದಿ ಸರ್ಕಾರ ಏನು ಮಾಡಿದೆ ಎಂಬುವುದನ್ನು ಪ್ರತಿಬಿಂಬಿಸುತ್ತದೆ. ನೀವು ಯೋಚಿಸುತ್ತೀರಿ ಮತ್ತು ಇದನ್ನು ಅರಿತುಕೊಳ್ಳುತ್ತೀರಿ ಇದರಿಂದ ಬದಲಾವಣೆಗೆ ನಾಂದಿ ಹಾಡಬಹುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...