Homeಮುಖಪುಟಉತ್ತರಪ್ರದೇಶದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿಯಿಂದ ಕೋಟ್ಯಾಧಿಪತಿಗಳ ತೆರಿಗೆ ಮನ್ನಾ; ರಾಹುಲ್‌...

ಉತ್ತರಪ್ರದೇಶದಲ್ಲಿ ಮುಂದುವರಿದ ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿಯಿಂದ ಕೋಟ್ಯಾಧಿಪತಿಗಳ ತೆರಿಗೆ ಮನ್ನಾ; ರಾಹುಲ್‌ ವಾಗ್ಧಾಳಿ

- Advertisement -
- Advertisement -

ಭಾರತ್‌ ಜೋಡೋ ನ್ಯಾಯ ಯಾತ್ರೆ ಉತ್ತರಪ್ರದೇಶದಲ್ಲಿ ಮುಂದುವರಿದಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ ಅವರು ಇಂದು ಉತ್ತರಪ್ರದೇಶದ ಅಲಿಗಢದಿಂದ ತಮ್ಮ ಯಾತ್ರೆಯನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ವಿರುದ್ಧ ರಾಹುಲ್‌ ಗಾಂಧಿ ವಾಗ್ಧಾಳಿಯನ್ನು ನಡೆಸಿದ್ದು, ಪ್ರಧಾನಿ ಮೋದಿ ಕೋಟ್ಯಾಧಿಪತಿಗಳ ತೆರಿಯನ್ನು ಮನ್ನಾ ಮಾಡಿದ್ದು, ರೈತರ ಒಂದೇ ಒಂದು ರೂ.ಸಾಲವನ್ನು ಮನ್ನಾ ಮಾಡಿಲ್ಲ ಎಂದು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಪ್ರತಿಪಕ್ಷಗಳ ಒಗ್ಗಟ್ಟನ್ನು ಪ್ರದರ್ಶಿಸುವ ಭಾಗವಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆಗ್ರಾದಲ್ಲಿ ಯಾತ್ರೆಯೊಂದಿಗೆ ಸೇರಲಿದ್ದಾರೆ. ಸಾವಿರಾರು ಮಂದಿ ಕಾಂಗ್ರೆಸ್‌- ಎಸ್ಪಿ ಕಾರ್ಯಕರ್ತರು ಯಾತ್ರೆಯಲ್ಲಿ ಭಾಗವಹಿಸಿದ್ದಾರೆ.

ಯಾತ್ರೆಯ ವೇಳೆ ಮಾತನಾಡಿದ ರಾಹುಲ್‌ ಗಾಂಧಿ, ಕೇಂದ್ರ ಸರಕಾರ ಅದಾನಿಗೆ ಎಲ್ಲವನ್ನೂ ನೀಡಿದ್ದು, ಸಣ್ಣ  ಕುಶಲಕರ್ಮಿಗಳಿಗೆ ಏನೂ ಉಳಿದಿಲ್ಲ. ಖಾಸಗಿ ಕಂಪನಿಗಳು, ದೊಡ್ಡ ಮಾಧ್ಯಮ ಸಂಸ್ಥೆಗಳಲ್ಲಿ ಒಬಿಸಿ, ದಲಿತರು, ಎಸ್ಟಿಗಳ ಪ್ರಾತಿನಿಧ್ಯ ಶೂನ್ಯ. ನಿರುದ್ಯೋಗ ಇಲ್ಲದಿದ್ದರೆ ಯುವಕರು ದಿನದ 12 ಗಂಟೆ ಮೊಬೈಲ್ ಬಳಸುತ್ತಿರಲಿಲ್ಲ ಎಂದು ಹೇಳಿದ್ದಾರೆ.

ನಾನು 10 ವರ್ಷಗಳ ನಂತರ ಮತ್ತೆ ಇಲ್ಲಿಗೆ ಬರಲು ಬಯಸುತ್ತೇನೆ. ಅಲಿಗಢ್ ಮೊಬೈಲ್ ಉತ್ಪಾದನಾ ಕೇಂದ್ರವಾಗಿದೆ. ನಾನು ಮೊಬೈಲ್ ಫೋನ್‌ಗಳಲ್ಲಿ ‘ಮೇಡ್ ಇನ್ ಅಲಿಗಢ’ ಎಂದು ಬರೆದಿರುವುದನ್ನು ನೋಡಲು ಬಯಸುತ್ತೇನೆ ಹೊರತಾಗಿ ‘ಮೇಡ್ ಇನ್ ಚೀನಾ’ ಅಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಟಾರ್ಚ್‌ ಲೈಟ್‌ ಹಾಕುವಂತೆ, ಪಾತ್ರೆಗಳನ್ನು ಬಡಿಯುವಂತೆ ಹೇಳಿ ಮೋದಿ ಜನಸಾಮಾನ್ಯರನ್ನು ತಬ್ಬಿಬ್ಬುಗೊಳಿಸುತ್ತಿದ್ದಾರೆ. ಪ್ರಧಾನಿ ಮೋದಿ ಕೋಟ್ಯಾಧಿಪತಿಗಳ ತೆರಿಗೆಯನ್ನು ಮನ್ನಾ ಮಾಡಿದ್ದಾರೆ, ಆದರೆ ರೈತರ ಸಾಲವನ್ನು ಒಂದು ರೂಪಾಯಿ ಕೂಡ ಮನ್ನಾ ಮಾಡಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಬಜೆಟ್ ರಚಿಸುವವರಲ್ಲಿ ಶೇಕಡಾ 90ರಷ್ಟು ಜನರು ಮೇಲ್ಜಾತಿಯವರು, ಒಬಿಸಿಗಳು ಯುಪಿಯ ಬಜೆಟ್‌ನಲ್ಲಿ ಶೇಕಡಾ 4ರಷ್ಟು ಪಡೆಯುತ್ತಾರೆ. ಎಲ್ಲಾ ಹಿಂದುಳಿದ ಜಾತಿಗಳ ಜನರು ಏನು ಮಾಡುತ್ತಿದ್ದಾರೆ? ನೀವು MNGREGA, ಗುತ್ತಿಗೆ ಕಾರ್ಮಿಕರ ಪಟ್ಟಿ ಬಗ್ಗೆ ಕೇಳಬೇಕು ಎಂದು ಹೇಳಿದ್ದಾರೆ.

ನಾವು ದೇಶವನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿದ್ದೇವೆ, ಹಿಂಸೆ ಮತ್ತು ದ್ವೇಷ ‘ಅನ್ಯಾಯ’ದ ಕಾರಣದಿಂದ ನಡೆಯುತ್ತಿದೆ ಎಂದು  ರೈತರು ಹೇಳಿದ್ದಾರೆ. ಇಲ್ಲಿ ಪ್ರತಿನಿತ್ಯ ಮಹಿಳೆಯರು, ಕಾರ್ಮಿಕರು, ರೈತರು ಅನ್ಯಾಯ ಎದುರಿಸುತ್ತಿದ್ದಾರೆ. ಆದ್ದರಿಂದ ಈ ಯಾತ್ರೆಯನ್ನು ಆಯೋಜಿಸಲಾಗಿದೆ. ಈ ಅನ್ಯಾಯದ ವಿರುದ್ಧ ಒಗ್ಗೂಡಿ ಹೋರಾಡಲು ಪ್ರಯತ್ನಿಸುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನೀವು ಓದುತ್ತೀರಿ, ಖಾಸಗಿ ಟ್ಯೂಷನ್ ತೆಗೆದುಕೊಳ್ಳುತ್ತೀರಿ. ನಂತರ ಪರೀಕ್ಷೆ ಬರೆಯಲು ಹೋದಾಗ ಪೇಪರ್ ಲೀಕ್ ಆಗಿರುವುದು ಗೊತ್ತಾಗಿದೆ. ಮೋದಿ ಸರ್ಕಾರದ ಗುರಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವವರ ಸಮಯವನ್ನು ವ್ಯರ್ಥ ಮಾಡುವುದಾಗಿದೆ. ಏಕೆಂದರೆ ಅವರು ನಿಮಗೆ ಉದ್ಯೋಗವನ್ನು ನೀಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಕುಟುಂಬದಲ್ಲಿ ಜಗಳವಾದಾಗ ಕುಟುಂಬ ದುರ್ಬಲವಾಗುತ್ತದೆ. ಹಾಗೆಯೇ, ಯಾರಾದರೂ ದೇಶವನ್ನು ದುರ್ಬಲಗೊಳಿಸಿದಾಗ, ದೇಶಭಕ್ತ ದೇಶವನ್ನು ಉಳಿಸುತ್ತಾನೆ. ದ್ವೇಷ ಮತ್ತು ಹಿಂಸೆಯನ್ನು ಹೋಗಲಾಡಿಸಲಾಗುತ್ತದೆ. ಇದು ಭಾರತ್ ಜೋಡೋ ಯಾತ್ರೆಯ ಉದ್ದೇಶವಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಭಾರತ್‌ ಜೋಡೋ ನ್ಯಾಯ ಯಾತ್ರೆಯ ವೇಳೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ಅಗ್ನಿವೀರ್ ಯೋಜನೆಯು ಬಿಹಾರ, ಯುಪಿಯ ಶ್ರಮಜೀವಿ ಯುವಕರ ಮೇಲೆ ನೇರವಾಗಿ ದಾಳಿ ಮಾಡುತ್ತದೆ. ಹಣದುಬ್ಬರ, ಕನಿಷ್ಠ ವೇತನ ಹೆಚ್ಚಳ, 10 ವರ್ಷಗಳ ಮೋದಿ ಸರ್ಕಾರ ಏನು ಮಾಡಿದೆ ಎಂಬುವುದನ್ನು ಪ್ರತಿಬಿಂಬಿಸುತ್ತದೆ. ನೀವು ಯೋಚಿಸುತ್ತೀರಿ ಮತ್ತು ಇದನ್ನು ಅರಿತುಕೊಳ್ಳುತ್ತೀರಿ ಇದರಿಂದ ಬದಲಾವಣೆಗೆ ನಾಂದಿ ಹಾಡಬಹುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಗಾಝಾದಲ್ಲಿ ಮಾನವೀಯ ನೆರವು ಕಾರ್ಯಚರಣೆ: ಸಂಕಷ್ಟದಲ್ಲಿರುವ UN ಏಜೆನ್ಸಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...