Homeಕರ್ನಾಟಕಕರ್ನಾಟಕ ಸರಕಾರದ ಅಧಿಕೃತ ವಕ್ತಾರರಾಗಿ ಪ್ರಿಯಾಂಕ ಖರ್ಗೆ ಸೇರಿ ಐವರು ಸಚಿವರು ನೇಮಕ

ಕರ್ನಾಟಕ ಸರಕಾರದ ಅಧಿಕೃತ ವಕ್ತಾರರಾಗಿ ಪ್ರಿಯಾಂಕ ಖರ್ಗೆ ಸೇರಿ ಐವರು ಸಚಿವರು ನೇಮಕ

- Advertisement -
- Advertisement -

ಕರ್ನಾಟಕ ಸರಕಾರದ ಅಧಿಕೃತ ವಕ್ತಾರರಾಗಿ ಸಚಿವ ಪ್ರಿಯಾಂಕ ಖರ್ಗೆ, ದಿನೇಶ್‌ ಗುಂಡೂರಾವ್‌, ಕೃಷ್ಣ ಬೈರೇಗೌಡ,  ಈಶ್ವರ್‌ ಬಿ.ಖಂಡ್ರೆ, ಸಂತೋಷ್ ಲಾಡ್‌ ಅವರನ್ನು ನೇಮಕ ಮಾಡಿ ಸಿಎಂ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಪ್ರಕಟಣೆಯನ್ನು ಹೊರಡಿಸಿದ್ದು,  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ಅರಣ್ಯ ಮತ್ತು ಪರಿಸರ ಖಾತೆ ಸಚಿವರಾದ ಈಶ್ವರ್‌ ಬಿ.ಖಂಡ್ರೆ, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್‌ ಅವರನ್ನು ಕರ್ನಾಟಕ ಸರಕಾರದ ವಕ್ತಾರರಾಗಿ ನೇಮಕ ಮಾಡಲಾಗಿದೆ. ಈ ಸಚಿವರುಗಳು ಸರಕಾರ ಸಾಧನೆಗಳು, ದಾಖಲೆಗಳು ಮತ್ತು ಮಾಹಿತಿಗಳನ್ನು  ಕಾಲ ಕಾಲಕ್ಕೆ ಒದಗಿಸಲು ಅಗತ್ಯ ಕ್ರಮ ವಹಿಸುವಂತೆ  ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ನಿರ್ದೇಶಿಸಲಾಗಿದೆ.

ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಪ್ರಭಾವಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಚಿವ ಪ್ರಿಯಾಂಕ ಖರ್ಗೆ, ಕರ್ನಾಟಕ ಸರ್ಕಾರದ ಅಧಿಕೃತ ವಕ್ತಾರನನ್ನಾಗಿ ನನ್ನನ್ನು ನೇಮಕ ಮಾಡಿ ಆದೇಶ ಹೊರಡಿಸಿರುವ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳು. ನುಡಿದಂತೆ ನಡೆಯುತ್ತಿರುವ ನಮ್ಮ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು, ವಿರೋಧ ಪಕ್ಷಗಳ ಟೀಕೆಗಳಿಗೆ ಉತ್ತರವನ್ನು ಹಾಗೂ ಸರ್ಕಾರದ ಪ್ರತಿ ನೂತನ ಕಾರ್ಯಕ್ರಮಗಳ ಮಾಹಿತಿಯನ್ನು ನಾಡಿನ ಪ್ರತಿ ಮನೆ ಮನೆಗೂ ಮುಟ್ಟಿಸಲು ನನ್ನ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

 

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ, ಸಚಿವರುಗಳಾದ ಸಚಿವ ಪ್ರಿಯಾಂಕ ಖರ್ಗೆ, ದಿನೇಶ್‌ ಗುಂಡೂರಾವ್‌, ಕೃಷ್ಣ ಬೈರೇಗೌಡ,  ಈಶ್ವರ್‌ ಬಿ.ಖಂಡ್ರೆ, ಸಂತೋಷ್ ಲಾಡ್‌ ಅವರನ್ನು  ರಾಜ್ಯ ಸರ್ಕಾರದ ವಕ್ತಾರರನ್ನಾಗಿ ನೇಮಿಸಿ ಆದೇಶಿಸಲಾಗಿದೆ. ಸರ್ಕಾರದ ವಕ್ತಾರರಾಗಿ ನೇಮಕಗೊಂಡಿರುವ ಈ ಎಲ್ಲಾ ಸಚಿವರು ಸರ್ಕಾರದ ಸಾಧನೆಗಳನ್ನು ಸಮರ್ಥವಾಗಿ ರಾಜ್ಯದ ಜನರ ಮುಂದಿಡಲಿದ್ದಾರೆ ಎಂಬ ಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ.

 

ಇದನ್ನು ಓದಿ: ಲೋಕಸಭೆ ಚುನಾವಣೆ: ಕಾಂಗ್ರೆಸ್‌ನಿಂದ ಬಡ ಮಹಿಳೆಗೆ ವರ್ಷಕ್ಕೆ 1 ಲಕ್ಷ ನೀಡುವ ‘ಮಹಾಲಕ್ಷ್ಮಿ’ ಯೋಜನೆ ಸೇರಿ ಹಲವು ಗ್ಯಾರೆಂಟಿಗಳ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...