Homeಮುಖಪುಟಆದಿವಾಸಿ ಪರ ಹೋರಾಟಗಾರ ಮೈಸೂರಿನ ಸೋಮಣ್ಣ ಅವರಿಗೆ 'ಪದ್ಮಶ್ರೀ' ಪ್ರಶಸ್ತಿ

ಆದಿವಾಸಿ ಪರ ಹೋರಾಟಗಾರ ಮೈಸೂರಿನ ಸೋಮಣ್ಣ ಅವರಿಗೆ ‘ಪದ್ಮಶ್ರೀ’ ಪ್ರಶಸ್ತಿ

- Advertisement -
- Advertisement -

2024ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಗುರುವಾರ ಪ್ರಕಟಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ದೇಶದ 34 ಸಾಧಕರನ್ನು ಮಾಡಲಾಗಿದೆ. ಈ ಪೈಕಿ ಕರ್ನಾಟಕದ ಇಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಒಲಿದಿದ್ದು, ಆದಿವಾಸಿ ಸಮುದಾಯಗಳ ಪರ ಹಲವು ವರ್ಷಗಳಿಂದ ಹೋರಾಡುತ್ತಿರುವ ಮೈಸೂರಿನ ಸೋಮಣ್ಣ ಹಾಗೂ 25 ಸಾವಿರ ಜನರಿಗೆ ಉಚಿತ ಪ್ಲಾಸ್ಟಿಕ್ ಸರ್ಜರಿ ಮಾಡಿರುವ ಪ್ರೇಮಾ ಧನರಾಜ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ದೊರೆತಿದೆ.

ಕಳೆದ ನಾಲ್ಕು ದಶಕಗಳಿಂದ ಹಾಡಿ ಜನರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸೋಮಣ್ಣ ಅವರಿಗೆ ಪದ್ಮಶ್ರೀ ಲಭಿಸಿರುವುದು ಅವರಿಗೂ ಅಚ್ಚರಿ ಮೂಡಿಸಿದೆ. ಜೇನು ಕುರುಬ ಸಮುದಾಯಕ್ಕೆ ಸೇರಿರುವ 66 ವರ್ಷದ ಸೋಮಣ್ಣ ಅವರು, ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಅಂತರ ಸಂತೆ ಹೋಬಳಿಯ ಮೊತ್ತ ಹಾಡಿ ನಿವಾಸಿಯಾಗಿದ್ದಾರೆ. ಬಡಕಟ್ಟು ಸಮುದಾಯದ ಅಭಿವೃದ್ಧಿಗಾಗಿ ಎಚ್.ಡಿ.ಕೋಟೆ ತಾಲೂಕಿನಲ್ಲಿ ಪ್ರಾರಂಭಗೊಂಡ ಹೋರಾಟದಲ್ಲಿ 1981ರಿಂದ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಸರ್ಕಾರತೇರ ಸಂಸ್ಥೆ ಮುಖ್ಯಸ್ಥ ದಿವಂಗತ ಕ್ಷೀರಸಾಗರ್ ಅವರ ಮಾರ್ಗದರ್ಶನದಲ್ಲಿ ಬುಡಕಟ್ಟು ಸಮುದಾಯದ ಪರ ಹೋರಾಟ ಮಾಡುತ್ತಿದ್ದ ನಂಜುಂಡಯ್ಯ ಮತ್ತು ಪ್ರಸನ್ನ ಅವರ ಸಹಕಾರದಲ್ಲಿ ಬುಡಕಟ್ಟು ಸಮುದಾಯದ ಪರವಾಗಿ ಸೋಮಣ್ಣ ಹೋರಾಟ ಮಾಡುತ್ತಿದ್ದರು.

ಬುಡಕಟ್ಟು ಸಮುದಾಯದ ಕೃಷಿಕರ ಸಂಘದ ಅಧ್ಯಕ್ಷರಾಗಿ ಅರಣ್ಯ ಹಕ್ಕು ಕಾಯ್ದೆ, ಅರಣ್ಯ ಒತ್ತುವರಿ ತೆರವುಗೊಳಿಸುವುದು, ಬುಡಕಟ್ಟು ಸಮುದಾಯದವರ ಒತ್ತುವರಿ ಭೂಮಿ ಬಿಡಿಸುವುದು ಸೇರಿದಂತೆ ಹಲವಾರು ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. ಸರ್ಕಾರದ ಮಟ್ಟದಲ್ಲಿ ಮತ್ತು ನ್ಯಾಯಾಲಯಗಳಲ್ಲಿ ಬುಡಕಟ್ಟು ಸಮುದಾಯದ ಪರವಾಗಿ ನಿರಂತರವಾಗಿ ಸೋಮಣ್ಣ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಎಚ್.ಡಿ.ಕೋಟೆ ತಾಲೂಕಿನ ಜೇನು ಕುರುಬ, ಬೆಟ್ಟ ಕುರುಬ, ಸೋಲಿಗ, ಪಂಜರೆ, ಹೆರವ, ಸಣ್ಣ ಹೆರವ ಸಮುದಾಯಗಳ ಪರ ಧ್ವನಿ ಎತ್ತುತ್ತಿದ್ದರು. ಇವರಿಗೆ ಇತ್ತೀಚೆಗೆ ರಾಜ್ಯ ವಾಲ್ಮೀಕಿ ಪ್ರಶಸ್ತಿಯೂ ಲಭಿಸಿತ್ತು.

ಪ್ರೇಮಾ ದೇವರಾಜ್:

ರಾಜ್ಯದ ಮತ್ತೋರ್ವ ಪದ್ಮಶ್ರೀ ಪ್ರಶಸ್ತಿ ವಿಜೇತೆ ಪ್ರೇಮಾ ದೇವರಾಜ್ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದಾರೆ. ಅಗ್ನಿ ರಕ್ಷಾ ಎಂಬ ಸರ್ಕಾರೇತರ ಸಂಸ್ಥೆಯ ಮೂಲಕ ಇವರು ಹಲವು ವರ್ಷಗಳಿಂದ ಸುಟ್ಟ ಗಾಯಗಳಿಗೆ ತುತ್ತಾದ 25,000ಕ್ಕೂ ಅಧಿಕ ಮಂದಿಗೆ ಉಚಿತ ಚಿಕಿತ್ಸೆ ನೀಡಿದ್ದಾರೆ. ಪ್ಲಾಸ್ಟಿಕ್ ಸರ್ಜರಿ ಕುರಿತು ಹವಾರು ಪುಸ್ತಕಗಳನ್ನು ಬರೆದಿರುವ ಪ್ರೇಮಾ, 1965ರಲ್ಲಿ ಅವರಿಗೆ 8 ವರ್ಷವಾಗಿದ್ದಾಗ, ಬೆಂಗಳೂರಿನಲ್ಲಿ ಮನೆಯ ಅಗ್ನಿ ದುರಂತದಲ್ಲಿ ಶೇ 50ರಷ್ಟು ಸುಟ್ಟ ಗಾಯಗಳಿಂದ ಬದುಕುಳಿದಿದ್ದಾರೆ. ಇವರು ಬಾಲ್ಯದಲ್ಲಿ 14ಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಕೊಂಡಿದ್ದಾರೆ.

ಅಡುಗೆ ಮನೆಯಲ್ಲಿ ಆಟವಾಡುವ ವೇಳೆ ಸ್ಟವ್ ಸ್ಪೋಟಗೊಂಡು ಮುಖ, ಕುತ್ತಿಗೆ ಹಾಗೂ ದೇಹ ಸಂಪೂರ್ಣವಾಗಿ ಸುಟ್ಟುಹೋಗಿತ್ತು. ಸಿಟ್ಟು ಗಾಯ ಹಾಗೂ ಶಸ್ತ್ರಚಿಕಿತ್ಸೆಯ ನೋವಿನ ನಡುವೆಯೂ ಅವರು ತಮ್ಮಹೋರಾಟ ಹಾಗೂ ಛಲ ಬಿಟ್ಟಿರಲಿಲ್ಲ. ಶೇ. 50ರಷ್ಟು ಸುಟ್ಟ ಗಾಯಗಳಾಗಿದ್ದ ಪ್ರೇಮಾ ಬದುಕುವುದೇ ಅನುಮಾನ ಎಂದು ವೈದ್ಯರು ತಿಳಿಸಿದ್ದರು. ಅಂದಾಜು ಒಂದು ತಿಂಗಳ ಚಿಕಿತ್ಸೆಯ ಬಳಿಕ ಪ್ರೇಮಾ ಅವರನ್ನು ಅವರ ತಂದೆ ಸಿಎಸ್ ಧನರಾಜ್ ಹಾಗೂ ತಾಯಿ ರೋಸಿ ಧನರಾಜ್ ತಮಿಳುನಾಡಿನ ವೆಲ್ಲೂರ್ನಲ್ಲಿರುವ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿಗೆ ಚಿಕಿತ್ಸೆಗಾಗಿ ಸೇರಿಸಿದ್ದರು.

ಇದನ್ನೂ ಓದಿ; ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ನಟ ಚಿರಂಜೀವಿ ಸೇರಿದಂತೆ 132 ಜನರಿಗೆ ಪದ್ಮ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...