Homeಮುಖಪುಟಆದಿವಾಸಿ ಪರ ಹೋರಾಟಗಾರ ಮೈಸೂರಿನ ಸೋಮಣ್ಣ ಅವರಿಗೆ 'ಪದ್ಮಶ್ರೀ' ಪ್ರಶಸ್ತಿ

ಆದಿವಾಸಿ ಪರ ಹೋರಾಟಗಾರ ಮೈಸೂರಿನ ಸೋಮಣ್ಣ ಅವರಿಗೆ ‘ಪದ್ಮಶ್ರೀ’ ಪ್ರಶಸ್ತಿ

- Advertisement -
- Advertisement -

2024ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಗುರುವಾರ ಪ್ರಕಟಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ದೇಶದ 34 ಸಾಧಕರನ್ನು ಮಾಡಲಾಗಿದೆ. ಈ ಪೈಕಿ ಕರ್ನಾಟಕದ ಇಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಒಲಿದಿದ್ದು, ಆದಿವಾಸಿ ಸಮುದಾಯಗಳ ಪರ ಹಲವು ವರ್ಷಗಳಿಂದ ಹೋರಾಡುತ್ತಿರುವ ಮೈಸೂರಿನ ಸೋಮಣ್ಣ ಹಾಗೂ 25 ಸಾವಿರ ಜನರಿಗೆ ಉಚಿತ ಪ್ಲಾಸ್ಟಿಕ್ ಸರ್ಜರಿ ಮಾಡಿರುವ ಪ್ರೇಮಾ ಧನರಾಜ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ದೊರೆತಿದೆ.

ಕಳೆದ ನಾಲ್ಕು ದಶಕಗಳಿಂದ ಹಾಡಿ ಜನರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸೋಮಣ್ಣ ಅವರಿಗೆ ಪದ್ಮಶ್ರೀ ಲಭಿಸಿರುವುದು ಅವರಿಗೂ ಅಚ್ಚರಿ ಮೂಡಿಸಿದೆ. ಜೇನು ಕುರುಬ ಸಮುದಾಯಕ್ಕೆ ಸೇರಿರುವ 66 ವರ್ಷದ ಸೋಮಣ್ಣ ಅವರು, ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಅಂತರ ಸಂತೆ ಹೋಬಳಿಯ ಮೊತ್ತ ಹಾಡಿ ನಿವಾಸಿಯಾಗಿದ್ದಾರೆ. ಬಡಕಟ್ಟು ಸಮುದಾಯದ ಅಭಿವೃದ್ಧಿಗಾಗಿ ಎಚ್.ಡಿ.ಕೋಟೆ ತಾಲೂಕಿನಲ್ಲಿ ಪ್ರಾರಂಭಗೊಂಡ ಹೋರಾಟದಲ್ಲಿ 1981ರಿಂದ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಸರ್ಕಾರತೇರ ಸಂಸ್ಥೆ ಮುಖ್ಯಸ್ಥ ದಿವಂಗತ ಕ್ಷೀರಸಾಗರ್ ಅವರ ಮಾರ್ಗದರ್ಶನದಲ್ಲಿ ಬುಡಕಟ್ಟು ಸಮುದಾಯದ ಪರ ಹೋರಾಟ ಮಾಡುತ್ತಿದ್ದ ನಂಜುಂಡಯ್ಯ ಮತ್ತು ಪ್ರಸನ್ನ ಅವರ ಸಹಕಾರದಲ್ಲಿ ಬುಡಕಟ್ಟು ಸಮುದಾಯದ ಪರವಾಗಿ ಸೋಮಣ್ಣ ಹೋರಾಟ ಮಾಡುತ್ತಿದ್ದರು.

ಬುಡಕಟ್ಟು ಸಮುದಾಯದ ಕೃಷಿಕರ ಸಂಘದ ಅಧ್ಯಕ್ಷರಾಗಿ ಅರಣ್ಯ ಹಕ್ಕು ಕಾಯ್ದೆ, ಅರಣ್ಯ ಒತ್ತುವರಿ ತೆರವುಗೊಳಿಸುವುದು, ಬುಡಕಟ್ಟು ಸಮುದಾಯದವರ ಒತ್ತುವರಿ ಭೂಮಿ ಬಿಡಿಸುವುದು ಸೇರಿದಂತೆ ಹಲವಾರು ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. ಸರ್ಕಾರದ ಮಟ್ಟದಲ್ಲಿ ಮತ್ತು ನ್ಯಾಯಾಲಯಗಳಲ್ಲಿ ಬುಡಕಟ್ಟು ಸಮುದಾಯದ ಪರವಾಗಿ ನಿರಂತರವಾಗಿ ಸೋಮಣ್ಣ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಎಚ್.ಡಿ.ಕೋಟೆ ತಾಲೂಕಿನ ಜೇನು ಕುರುಬ, ಬೆಟ್ಟ ಕುರುಬ, ಸೋಲಿಗ, ಪಂಜರೆ, ಹೆರವ, ಸಣ್ಣ ಹೆರವ ಸಮುದಾಯಗಳ ಪರ ಧ್ವನಿ ಎತ್ತುತ್ತಿದ್ದರು. ಇವರಿಗೆ ಇತ್ತೀಚೆಗೆ ರಾಜ್ಯ ವಾಲ್ಮೀಕಿ ಪ್ರಶಸ್ತಿಯೂ ಲಭಿಸಿತ್ತು.

ಪ್ರೇಮಾ ದೇವರಾಜ್:

ರಾಜ್ಯದ ಮತ್ತೋರ್ವ ಪದ್ಮಶ್ರೀ ಪ್ರಶಸ್ತಿ ವಿಜೇತೆ ಪ್ರೇಮಾ ದೇವರಾಜ್ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದಾರೆ. ಅಗ್ನಿ ರಕ್ಷಾ ಎಂಬ ಸರ್ಕಾರೇತರ ಸಂಸ್ಥೆಯ ಮೂಲಕ ಇವರು ಹಲವು ವರ್ಷಗಳಿಂದ ಸುಟ್ಟ ಗಾಯಗಳಿಗೆ ತುತ್ತಾದ 25,000ಕ್ಕೂ ಅಧಿಕ ಮಂದಿಗೆ ಉಚಿತ ಚಿಕಿತ್ಸೆ ನೀಡಿದ್ದಾರೆ. ಪ್ಲಾಸ್ಟಿಕ್ ಸರ್ಜರಿ ಕುರಿತು ಹವಾರು ಪುಸ್ತಕಗಳನ್ನು ಬರೆದಿರುವ ಪ್ರೇಮಾ, 1965ರಲ್ಲಿ ಅವರಿಗೆ 8 ವರ್ಷವಾಗಿದ್ದಾಗ, ಬೆಂಗಳೂರಿನಲ್ಲಿ ಮನೆಯ ಅಗ್ನಿ ದುರಂತದಲ್ಲಿ ಶೇ 50ರಷ್ಟು ಸುಟ್ಟ ಗಾಯಗಳಿಂದ ಬದುಕುಳಿದಿದ್ದಾರೆ. ಇವರು ಬಾಲ್ಯದಲ್ಲಿ 14ಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಕೊಂಡಿದ್ದಾರೆ.

ಅಡುಗೆ ಮನೆಯಲ್ಲಿ ಆಟವಾಡುವ ವೇಳೆ ಸ್ಟವ್ ಸ್ಪೋಟಗೊಂಡು ಮುಖ, ಕುತ್ತಿಗೆ ಹಾಗೂ ದೇಹ ಸಂಪೂರ್ಣವಾಗಿ ಸುಟ್ಟುಹೋಗಿತ್ತು. ಸಿಟ್ಟು ಗಾಯ ಹಾಗೂ ಶಸ್ತ್ರಚಿಕಿತ್ಸೆಯ ನೋವಿನ ನಡುವೆಯೂ ಅವರು ತಮ್ಮಹೋರಾಟ ಹಾಗೂ ಛಲ ಬಿಟ್ಟಿರಲಿಲ್ಲ. ಶೇ. 50ರಷ್ಟು ಸುಟ್ಟ ಗಾಯಗಳಾಗಿದ್ದ ಪ್ರೇಮಾ ಬದುಕುವುದೇ ಅನುಮಾನ ಎಂದು ವೈದ್ಯರು ತಿಳಿಸಿದ್ದರು. ಅಂದಾಜು ಒಂದು ತಿಂಗಳ ಚಿಕಿತ್ಸೆಯ ಬಳಿಕ ಪ್ರೇಮಾ ಅವರನ್ನು ಅವರ ತಂದೆ ಸಿಎಸ್ ಧನರಾಜ್ ಹಾಗೂ ತಾಯಿ ರೋಸಿ ಧನರಾಜ್ ತಮಿಳುನಾಡಿನ ವೆಲ್ಲೂರ್ನಲ್ಲಿರುವ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿಗೆ ಚಿಕಿತ್ಸೆಗಾಗಿ ಸೇರಿಸಿದ್ದರು.

ಇದನ್ನೂ ಓದಿ; ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ನಟ ಚಿರಂಜೀವಿ ಸೇರಿದಂತೆ 132 ಜನರಿಗೆ ಪದ್ಮ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...