Homeಮುಖಪುಟಆದಿವಾಸಿ ಪರ ಹೋರಾಟಗಾರ ಮೈಸೂರಿನ ಸೋಮಣ್ಣ ಅವರಿಗೆ 'ಪದ್ಮಶ್ರೀ' ಪ್ರಶಸ್ತಿ

ಆದಿವಾಸಿ ಪರ ಹೋರಾಟಗಾರ ಮೈಸೂರಿನ ಸೋಮಣ್ಣ ಅವರಿಗೆ ‘ಪದ್ಮಶ್ರೀ’ ಪ್ರಶಸ್ತಿ

- Advertisement -
- Advertisement -

2024ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಗುರುವಾರ ಪ್ರಕಟಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ದೇಶದ 34 ಸಾಧಕರನ್ನು ಮಾಡಲಾಗಿದೆ. ಈ ಪೈಕಿ ಕರ್ನಾಟಕದ ಇಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಒಲಿದಿದ್ದು, ಆದಿವಾಸಿ ಸಮುದಾಯಗಳ ಪರ ಹಲವು ವರ್ಷಗಳಿಂದ ಹೋರಾಡುತ್ತಿರುವ ಮೈಸೂರಿನ ಸೋಮಣ್ಣ ಹಾಗೂ 25 ಸಾವಿರ ಜನರಿಗೆ ಉಚಿತ ಪ್ಲಾಸ್ಟಿಕ್ ಸರ್ಜರಿ ಮಾಡಿರುವ ಪ್ರೇಮಾ ಧನರಾಜ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ದೊರೆತಿದೆ.

ಕಳೆದ ನಾಲ್ಕು ದಶಕಗಳಿಂದ ಹಾಡಿ ಜನರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸೋಮಣ್ಣ ಅವರಿಗೆ ಪದ್ಮಶ್ರೀ ಲಭಿಸಿರುವುದು ಅವರಿಗೂ ಅಚ್ಚರಿ ಮೂಡಿಸಿದೆ. ಜೇನು ಕುರುಬ ಸಮುದಾಯಕ್ಕೆ ಸೇರಿರುವ 66 ವರ್ಷದ ಸೋಮಣ್ಣ ಅವರು, ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಅಂತರ ಸಂತೆ ಹೋಬಳಿಯ ಮೊತ್ತ ಹಾಡಿ ನಿವಾಸಿಯಾಗಿದ್ದಾರೆ. ಬಡಕಟ್ಟು ಸಮುದಾಯದ ಅಭಿವೃದ್ಧಿಗಾಗಿ ಎಚ್.ಡಿ.ಕೋಟೆ ತಾಲೂಕಿನಲ್ಲಿ ಪ್ರಾರಂಭಗೊಂಡ ಹೋರಾಟದಲ್ಲಿ 1981ರಿಂದ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಸರ್ಕಾರತೇರ ಸಂಸ್ಥೆ ಮುಖ್ಯಸ್ಥ ದಿವಂಗತ ಕ್ಷೀರಸಾಗರ್ ಅವರ ಮಾರ್ಗದರ್ಶನದಲ್ಲಿ ಬುಡಕಟ್ಟು ಸಮುದಾಯದ ಪರ ಹೋರಾಟ ಮಾಡುತ್ತಿದ್ದ ನಂಜುಂಡಯ್ಯ ಮತ್ತು ಪ್ರಸನ್ನ ಅವರ ಸಹಕಾರದಲ್ಲಿ ಬುಡಕಟ್ಟು ಸಮುದಾಯದ ಪರವಾಗಿ ಸೋಮಣ್ಣ ಹೋರಾಟ ಮಾಡುತ್ತಿದ್ದರು.

ಬುಡಕಟ್ಟು ಸಮುದಾಯದ ಕೃಷಿಕರ ಸಂಘದ ಅಧ್ಯಕ್ಷರಾಗಿ ಅರಣ್ಯ ಹಕ್ಕು ಕಾಯ್ದೆ, ಅರಣ್ಯ ಒತ್ತುವರಿ ತೆರವುಗೊಳಿಸುವುದು, ಬುಡಕಟ್ಟು ಸಮುದಾಯದವರ ಒತ್ತುವರಿ ಭೂಮಿ ಬಿಡಿಸುವುದು ಸೇರಿದಂತೆ ಹಲವಾರು ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. ಸರ್ಕಾರದ ಮಟ್ಟದಲ್ಲಿ ಮತ್ತು ನ್ಯಾಯಾಲಯಗಳಲ್ಲಿ ಬುಡಕಟ್ಟು ಸಮುದಾಯದ ಪರವಾಗಿ ನಿರಂತರವಾಗಿ ಸೋಮಣ್ಣ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಎಚ್.ಡಿ.ಕೋಟೆ ತಾಲೂಕಿನ ಜೇನು ಕುರುಬ, ಬೆಟ್ಟ ಕುರುಬ, ಸೋಲಿಗ, ಪಂಜರೆ, ಹೆರವ, ಸಣ್ಣ ಹೆರವ ಸಮುದಾಯಗಳ ಪರ ಧ್ವನಿ ಎತ್ತುತ್ತಿದ್ದರು. ಇವರಿಗೆ ಇತ್ತೀಚೆಗೆ ರಾಜ್ಯ ವಾಲ್ಮೀಕಿ ಪ್ರಶಸ್ತಿಯೂ ಲಭಿಸಿತ್ತು.

ಪ್ರೇಮಾ ದೇವರಾಜ್:

ರಾಜ್ಯದ ಮತ್ತೋರ್ವ ಪದ್ಮಶ್ರೀ ಪ್ರಶಸ್ತಿ ವಿಜೇತೆ ಪ್ರೇಮಾ ದೇವರಾಜ್ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದಾರೆ. ಅಗ್ನಿ ರಕ್ಷಾ ಎಂಬ ಸರ್ಕಾರೇತರ ಸಂಸ್ಥೆಯ ಮೂಲಕ ಇವರು ಹಲವು ವರ್ಷಗಳಿಂದ ಸುಟ್ಟ ಗಾಯಗಳಿಗೆ ತುತ್ತಾದ 25,000ಕ್ಕೂ ಅಧಿಕ ಮಂದಿಗೆ ಉಚಿತ ಚಿಕಿತ್ಸೆ ನೀಡಿದ್ದಾರೆ. ಪ್ಲಾಸ್ಟಿಕ್ ಸರ್ಜರಿ ಕುರಿತು ಹವಾರು ಪುಸ್ತಕಗಳನ್ನು ಬರೆದಿರುವ ಪ್ರೇಮಾ, 1965ರಲ್ಲಿ ಅವರಿಗೆ 8 ವರ್ಷವಾಗಿದ್ದಾಗ, ಬೆಂಗಳೂರಿನಲ್ಲಿ ಮನೆಯ ಅಗ್ನಿ ದುರಂತದಲ್ಲಿ ಶೇ 50ರಷ್ಟು ಸುಟ್ಟ ಗಾಯಗಳಿಂದ ಬದುಕುಳಿದಿದ್ದಾರೆ. ಇವರು ಬಾಲ್ಯದಲ್ಲಿ 14ಕ್ಕೂ ಹೆಚ್ಚು ಶಸ್ತ್ರಚಿಕಿತ್ಸೆಗೆ ಒಳಗಾಗಿ ಚೇತರಿಸಕೊಂಡಿದ್ದಾರೆ.

ಅಡುಗೆ ಮನೆಯಲ್ಲಿ ಆಟವಾಡುವ ವೇಳೆ ಸ್ಟವ್ ಸ್ಪೋಟಗೊಂಡು ಮುಖ, ಕುತ್ತಿಗೆ ಹಾಗೂ ದೇಹ ಸಂಪೂರ್ಣವಾಗಿ ಸುಟ್ಟುಹೋಗಿತ್ತು. ಸಿಟ್ಟು ಗಾಯ ಹಾಗೂ ಶಸ್ತ್ರಚಿಕಿತ್ಸೆಯ ನೋವಿನ ನಡುವೆಯೂ ಅವರು ತಮ್ಮಹೋರಾಟ ಹಾಗೂ ಛಲ ಬಿಟ್ಟಿರಲಿಲ್ಲ. ಶೇ. 50ರಷ್ಟು ಸುಟ್ಟ ಗಾಯಗಳಾಗಿದ್ದ ಪ್ರೇಮಾ ಬದುಕುವುದೇ ಅನುಮಾನ ಎಂದು ವೈದ್ಯರು ತಿಳಿಸಿದ್ದರು. ಅಂದಾಜು ಒಂದು ತಿಂಗಳ ಚಿಕಿತ್ಸೆಯ ಬಳಿಕ ಪ್ರೇಮಾ ಅವರನ್ನು ಅವರ ತಂದೆ ಸಿಎಸ್ ಧನರಾಜ್ ಹಾಗೂ ತಾಯಿ ರೋಸಿ ಧನರಾಜ್ ತಮಿಳುನಾಡಿನ ವೆಲ್ಲೂರ್ನಲ್ಲಿರುವ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿಗೆ ಚಿಕಿತ್ಸೆಗಾಗಿ ಸೇರಿಸಿದ್ದರು.

ಇದನ್ನೂ ಓದಿ; ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ನಟ ಚಿರಂಜೀವಿ ಸೇರಿದಂತೆ 132 ಜನರಿಗೆ ಪದ್ಮ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...