Homeಕರ್ನಾಟಕಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು...

ಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು ಮಾಧ್ಯಮಗಳು

- Advertisement -
- Advertisement -

ತನ್ನ ಅಣ್ಣನ ಮಗನೊಂದಿಗೆ ಪರಾರಿಯಾಗಿ ಗದಗದಲ್ಲಿ ರಿಜಿಸ್ಟರ್‌ ಮದುವೆಯಾಗಿದ್ದ ಯುವತಿಯ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಬಿಜೆಪಿ ಬೆಂಬಲಿತ ಸಂಘಟನೆಯ ನಾಯಕ ಶರಣ್‌ ಪಂಪ್‌ವೆಲ್‌ ಸೇರಿದಂತೆ ಬಿಜೆಪಿ ಪರ ಮಾಧ್ಯಮಗಳು ಇದನ್ನು ಲವ್‌ ಜಿಹಾದ್‌ ಪ್ರಕರಣ ಎಂದು ಆರೋಪಿಸಿದ್ದವು.

ಮೂಲತಃ ಗದಗಿನವರಾದ ರೇಷ್ಮಾ ಎಂಬ ಯುವತಿ ತನ್ನ ನಿಶ್ಚಿತಾರ್ಥ ನಡೆದ ನಂತರ ಚಿನ್ನಾಭರಣ ಮತ್ತು ನಗದಿನೊಂದಿಗೆ ನಾಪತ್ತೆಯಾಗಿದ್ದರು. ಈ ಬಗ್ಗೆ ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಶ್ವ ಹಿಂದೂ ಪರಿಷತ್‌ ನಾಯಕ ಶರಣ್‌ ಪಂ‌ಪ್‌ವೆಲ್‌ ಅವರು ಇದು ಲವ್‌ ಜಿಹಾದ್‌ ಎಂದು ಆರೋಪಿಸಿ, ಯುವಕನನ್ನು ಬಂಧಿಸುಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಇದೀಗ ಪೊಲೀಸರು ಯುವತಿಯನ್ನು ಪತ್ತೆಹಚ್ಚಿದ್ದು, ಪ್ರಕರಣವನ್ನು ಭೇದಿಸಿದ್ದಾರೆ. ಯುವತಿಯ ತಾಯಿ ಮೂಲತಃ ಮುಸ್ಲಿಂ ಧರ್ಮೀಯರಾಗಿದ್ದರು. ಅವರು ಸುಮಾರು 22 ವರ್ಷಗಳ ಹಿಂದೆ ವೀರೇಶ್‌ ಎಂಬವರನ್ನು ಪ್ರೀತಿಸಿ ಮದುವೆಯಾಗಿ ‘ಯಶೋಧ’ ಎಂದು ಹೆಸರು ಬದಲಾಯಿಸಿದ್ದರು. ಆದರೆ ಅವರು ತನ್ನ ಸಂಬಂಧಿಕರೊಂದಿಗೆ ಒಡನಾಟ ಮುಂದುವರೆಸಿದ್ದರು. ಈ ವೇಳೆ ಅವರ ಮಗಳಾದ ರೇಷ್ಮಾ ಮತ್ತು ಅವರ ಸಹೋದರಿಯ ಮಗ ಅಕ್ಬರ್‌ ಪರಸ್ಪರ ಪ್ರೀತಿಸುತ್ತಿದ್ದರು.

ಆದರೆ, ರೇಷ್ಮಾ ಅವರ ಹೆತ್ತವರು ಬೇರೆ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿದ್ದರಿಂದ ಅವರು ತನ್ನ ಮನೆಯಿಂದ ನಾಪತ್ತೆಯಾಗಿದ್ದಾರೆ. ಮಂಗಳೂರಿನಿಂದ ತೆರಳಿದ ರೇಷ್ಮಾ ಗದಗಿನಲ್ಲಿ ಅಕ್ಬರ್‌ ಅವರನ್ನು ರಿಜಿಸ್ಟರ್‌ ಮದುವೆಯಾಗಿದ್ದಾರೆ.

ಈ ಮಧ್ಯೆ ಕೆಲವು ಮಾಧ್ಯಮಗಳು ಪ್ರಕರಣವನ್ನು ಬಳಸಿಕೊಂಡು ದ್ವೇಷ ಅಭಿಯಾನದಲ್ಲಿ ತೊಡಗಿದೆ. ಮುಸ್ಲಿಂ ಕುಟುಂಬ 22 ವರ್ಷದ ಹಿಂದೆ ನಡೆದ ಘಟನೆಗೆ ಸೇಡು ತೀರಿಸಿಕೊಂಡಿದೆ ಎಂದು ವರದಿ ಮಾಡಿದೆ. ಅಷ್ಟೇ ಅಲ್ಲದೆ ಯಾವುದೆ ದಾಖಲೆ ಇಲ್ಲದೆ ಲವ್‌ ಜಿಹಾದ್ ಎಂಬುವುದು ನಡೆಯುತ್ತಿದೆ ಎಂದು ಬರೆದುಕೊಂಡಿದೆ.

ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವರು!

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಹಾಜಿರಾ, ವೀರೇಶ್‌ನನ್ನು ಪ್ರೀತಿಸಿ ಓಡಿಹೋಗಿ ಮದುವೆಯಾಗಿ ಯಶೋಧ ಆದಳು. ಯಶೋಧ (ಹಾಜಿರಾ) ಮಗಳು ರೇಷ್ಮಾ ತನ್ನ ತಾಯಿಯ ಅಕ್ಕನ ಮಗ ಅಕ್ಬರ್ ನನ್ನು ಪ್ರೀತಿಸಿ (ಓಡಿ ಹೋಗಿ) ಮದುವೆಯಾಗಿ ಮುಸ್ಲಿಂ ಕುಟುಂಬವನ್ನು ಸೇರಿಕೊಂಡಲು. ವೀರಾವೇಶದಿಂದ ಪತ್ರಿಕಾಗೋಷ್ಟಿ ನಡೆಸಿದ ಶರಣ್ ಪಂಪ್ ವೆಲ್ ಇದು ಲವ್ ಜಿಹಾದ್ ಎಂದು ಆರ್ಭಟಿಸಿ ನಗೆ ಪಾಟಲಾದರು” ಎಂದು ಹೇಳಿದ್ದಾರೆ.

“ರೇಷ್ಮಾ ತನ್ನ ತಾಯಿಯ ಅಕ್ಕನ ಮಗ ಅಕ್ಬರ್‌ನನ್ನು ಪ್ರೀತಿಸಿ ಮದುವೆಯಾಗುವುದು ಲವ್ ಜಿಹಾದ್ ಆಗುವುದಾದರೆ, ರೇಷ್ಮಾಳ ತಾಯಿ ಹಾಜಿರಾ ಅಂದು ವಿರೇಶ್‌ನನ್ನು ಪ್ರೀತಿಸಿ ಮದುವೆಯಾದನ್ನು ಏನಂತ ಕರೆಯುತ್ತೀರಿ ? ನಿಮ್ಮದೆ ಮಾದರಿಯ ಕೆಲವು ಮುಸ್ಲಿಮ್ ರಕ್ಷಣೆಯ ಸೋಗಿನ ಸಂಘಟನೆಗಳು ಆರೋಪಿಸುವಂತೆ ಅದು ಲವ್ ಕೇಸರಿಯಾ ?” ಎಂದು ಮುನೀರ್‌ ಪ್ರಶ್ನಿಸಿದ್ದಾರೆ.

“ಪದೇ ಪದೆ ಈ ರೀತಿ ಮಾತಾಡಿ ಹಾಸ್ಯಾಸ್ಪದರಾಗಲು ನಾಚಿಕೆಯಾಗುವುದಿಲ್ಲವೆ ಶರಣ್ ಪಂಪ್ ವೆಲ್? ನಿಮ್ಮ ಇಂತಹ ಬಾಲಿಶ ನಡೆಗಳು ಸಾಮಾಜದ ಮೇಲೆ ಬೀರುವ ಪರಿಣಾಮದ ಅರಿವಿದೆಯೆ ನಿಮಗೆ ? ನಿಮ್ಮದೇ ಲಾಜಿಕ್ ಪ್ರಕಾರ ಹಿಂದು ಹೆಣ್ಣುಮಕ್ಕಳು ಮುಸ್ಲಿಂ ಯುವಕರ ಗೆಳೆತನ, ಮದುವೆ ಆಗುವುದು ಅಪರಾಧ ಅಂತಾದರೆ, ಮುಸ್ಲಿಂ ಹೆಣ್ಣು ಮಕ್ಕಳು ಹಿಂದು ಯುವಕರ ಗೆಳೆತನ ಹೊಂದುವುದು ಮದುವೆಯಾಗುವುದನ್ನು ನೀವು ಯಾವ ರೀತಿ ನೋಡುತ್ತೀರಿ? ಎರಡನ್ನೂ ವಿರೋಧಿಸುತ್ತೀರ ? ಅಕ್ಬರ್ ರೇಷ್ಮಾಳನ್ನು ಮುದುವೆಯಾಗುವುದು ಅಪರಾಧ ಆದರೆ, ಆಕೆಯ ತಾಯಿ ಹಾಜಿರಾ ವಿರೇಶ್‌ನನ್ನು ಮದುವೆಯಾಗಿದ್ದೂ ಅಪರಾಧ ಆಗಬೇಕಲ್ಲವೆ? ಈ ಕುರಿತು ಕ್ಲಬ್ ಹೌಸ್ ನಲ್ಲಾದರು ಸರಿ, ಚರ್ಚೆ ಮಾಡಲು ಸಿದ್ದರಿದ್ದೀರಾ?” ಎಂದು ಶರಣ್ ಪಂಪ್‌ವೆಲ್‌ ಅವರಿಗೆ ಮುನೀರ್‌ ಕಾಟಿಪಳ್ಳ ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಮಂಗಳೂರು: ಬಿಜೆಪಿ ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ಸಾಮಾಜಿಕ ಕಾರ್ಯಕರ್ತೆಗೆ ಗ್ಯಾಂಗ್‌ರೇಪ್‌ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...