Homeಕರ್ನಾಟಕಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು...

ಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು ಮಾಧ್ಯಮಗಳು

- Advertisement -
- Advertisement -

ತನ್ನ ಅಣ್ಣನ ಮಗನೊಂದಿಗೆ ಪರಾರಿಯಾಗಿ ಗದಗದಲ್ಲಿ ರಿಜಿಸ್ಟರ್‌ ಮದುವೆಯಾಗಿದ್ದ ಯುವತಿಯ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಬಿಜೆಪಿ ಬೆಂಬಲಿತ ಸಂಘಟನೆಯ ನಾಯಕ ಶರಣ್‌ ಪಂಪ್‌ವೆಲ್‌ ಸೇರಿದಂತೆ ಬಿಜೆಪಿ ಪರ ಮಾಧ್ಯಮಗಳು ಇದನ್ನು ಲವ್‌ ಜಿಹಾದ್‌ ಪ್ರಕರಣ ಎಂದು ಆರೋಪಿಸಿದ್ದವು.

ಮೂಲತಃ ಗದಗಿನವರಾದ ರೇಷ್ಮಾ ಎಂಬ ಯುವತಿ ತನ್ನ ನಿಶ್ಚಿತಾರ್ಥ ನಡೆದ ನಂತರ ಚಿನ್ನಾಭರಣ ಮತ್ತು ನಗದಿನೊಂದಿಗೆ ನಾಪತ್ತೆಯಾಗಿದ್ದರು. ಈ ಬಗ್ಗೆ ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಶ್ವ ಹಿಂದೂ ಪರಿಷತ್‌ ನಾಯಕ ಶರಣ್‌ ಪಂ‌ಪ್‌ವೆಲ್‌ ಅವರು ಇದು ಲವ್‌ ಜಿಹಾದ್‌ ಎಂದು ಆರೋಪಿಸಿ, ಯುವಕನನ್ನು ಬಂಧಿಸುಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಇದೀಗ ಪೊಲೀಸರು ಯುವತಿಯನ್ನು ಪತ್ತೆಹಚ್ಚಿದ್ದು, ಪ್ರಕರಣವನ್ನು ಭೇದಿಸಿದ್ದಾರೆ. ಯುವತಿಯ ತಾಯಿ ಮೂಲತಃ ಮುಸ್ಲಿಂ ಧರ್ಮೀಯರಾಗಿದ್ದರು. ಅವರು ಸುಮಾರು 22 ವರ್ಷಗಳ ಹಿಂದೆ ವೀರೇಶ್‌ ಎಂಬವರನ್ನು ಪ್ರೀತಿಸಿ ಮದುವೆಯಾಗಿ ‘ಯಶೋಧ’ ಎಂದು ಹೆಸರು ಬದಲಾಯಿಸಿದ್ದರು. ಆದರೆ ಅವರು ತನ್ನ ಸಂಬಂಧಿಕರೊಂದಿಗೆ ಒಡನಾಟ ಮುಂದುವರೆಸಿದ್ದರು. ಈ ವೇಳೆ ಅವರ ಮಗಳಾದ ರೇಷ್ಮಾ ಮತ್ತು ಅವರ ಸಹೋದರಿಯ ಮಗ ಅಕ್ಬರ್‌ ಪರಸ್ಪರ ಪ್ರೀತಿಸುತ್ತಿದ್ದರು.

ಆದರೆ, ರೇಷ್ಮಾ ಅವರ ಹೆತ್ತವರು ಬೇರೆ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿದ್ದರಿಂದ ಅವರು ತನ್ನ ಮನೆಯಿಂದ ನಾಪತ್ತೆಯಾಗಿದ್ದಾರೆ. ಮಂಗಳೂರಿನಿಂದ ತೆರಳಿದ ರೇಷ್ಮಾ ಗದಗಿನಲ್ಲಿ ಅಕ್ಬರ್‌ ಅವರನ್ನು ರಿಜಿಸ್ಟರ್‌ ಮದುವೆಯಾಗಿದ್ದಾರೆ.

ಈ ಮಧ್ಯೆ ಕೆಲವು ಮಾಧ್ಯಮಗಳು ಪ್ರಕರಣವನ್ನು ಬಳಸಿಕೊಂಡು ದ್ವೇಷ ಅಭಿಯಾನದಲ್ಲಿ ತೊಡಗಿದೆ. ಮುಸ್ಲಿಂ ಕುಟುಂಬ 22 ವರ್ಷದ ಹಿಂದೆ ನಡೆದ ಘಟನೆಗೆ ಸೇಡು ತೀರಿಸಿಕೊಂಡಿದೆ ಎಂದು ವರದಿ ಮಾಡಿದೆ. ಅಷ್ಟೇ ಅಲ್ಲದೆ ಯಾವುದೆ ದಾಖಲೆ ಇಲ್ಲದೆ ಲವ್‌ ಜಿಹಾದ್ ಎಂಬುವುದು ನಡೆಯುತ್ತಿದೆ ಎಂದು ಬರೆದುಕೊಂಡಿದೆ.

ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವರು!

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಹಾಜಿರಾ, ವೀರೇಶ್‌ನನ್ನು ಪ್ರೀತಿಸಿ ಓಡಿಹೋಗಿ ಮದುವೆಯಾಗಿ ಯಶೋಧ ಆದಳು. ಯಶೋಧ (ಹಾಜಿರಾ) ಮಗಳು ರೇಷ್ಮಾ ತನ್ನ ತಾಯಿಯ ಅಕ್ಕನ ಮಗ ಅಕ್ಬರ್ ನನ್ನು ಪ್ರೀತಿಸಿ (ಓಡಿ ಹೋಗಿ) ಮದುವೆಯಾಗಿ ಮುಸ್ಲಿಂ ಕುಟುಂಬವನ್ನು ಸೇರಿಕೊಂಡಲು. ವೀರಾವೇಶದಿಂದ ಪತ್ರಿಕಾಗೋಷ್ಟಿ ನಡೆಸಿದ ಶರಣ್ ಪಂಪ್ ವೆಲ್ ಇದು ಲವ್ ಜಿಹಾದ್ ಎಂದು ಆರ್ಭಟಿಸಿ ನಗೆ ಪಾಟಲಾದರು” ಎಂದು ಹೇಳಿದ್ದಾರೆ.

“ರೇಷ್ಮಾ ತನ್ನ ತಾಯಿಯ ಅಕ್ಕನ ಮಗ ಅಕ್ಬರ್‌ನನ್ನು ಪ್ರೀತಿಸಿ ಮದುವೆಯಾಗುವುದು ಲವ್ ಜಿಹಾದ್ ಆಗುವುದಾದರೆ, ರೇಷ್ಮಾಳ ತಾಯಿ ಹಾಜಿರಾ ಅಂದು ವಿರೇಶ್‌ನನ್ನು ಪ್ರೀತಿಸಿ ಮದುವೆಯಾದನ್ನು ಏನಂತ ಕರೆಯುತ್ತೀರಿ ? ನಿಮ್ಮದೆ ಮಾದರಿಯ ಕೆಲವು ಮುಸ್ಲಿಮ್ ರಕ್ಷಣೆಯ ಸೋಗಿನ ಸಂಘಟನೆಗಳು ಆರೋಪಿಸುವಂತೆ ಅದು ಲವ್ ಕೇಸರಿಯಾ ?” ಎಂದು ಮುನೀರ್‌ ಪ್ರಶ್ನಿಸಿದ್ದಾರೆ.

“ಪದೇ ಪದೆ ಈ ರೀತಿ ಮಾತಾಡಿ ಹಾಸ್ಯಾಸ್ಪದರಾಗಲು ನಾಚಿಕೆಯಾಗುವುದಿಲ್ಲವೆ ಶರಣ್ ಪಂಪ್ ವೆಲ್? ನಿಮ್ಮ ಇಂತಹ ಬಾಲಿಶ ನಡೆಗಳು ಸಾಮಾಜದ ಮೇಲೆ ಬೀರುವ ಪರಿಣಾಮದ ಅರಿವಿದೆಯೆ ನಿಮಗೆ ? ನಿಮ್ಮದೇ ಲಾಜಿಕ್ ಪ್ರಕಾರ ಹಿಂದು ಹೆಣ್ಣುಮಕ್ಕಳು ಮುಸ್ಲಿಂ ಯುವಕರ ಗೆಳೆತನ, ಮದುವೆ ಆಗುವುದು ಅಪರಾಧ ಅಂತಾದರೆ, ಮುಸ್ಲಿಂ ಹೆಣ್ಣು ಮಕ್ಕಳು ಹಿಂದು ಯುವಕರ ಗೆಳೆತನ ಹೊಂದುವುದು ಮದುವೆಯಾಗುವುದನ್ನು ನೀವು ಯಾವ ರೀತಿ ನೋಡುತ್ತೀರಿ? ಎರಡನ್ನೂ ವಿರೋಧಿಸುತ್ತೀರ ? ಅಕ್ಬರ್ ರೇಷ್ಮಾಳನ್ನು ಮುದುವೆಯಾಗುವುದು ಅಪರಾಧ ಆದರೆ, ಆಕೆಯ ತಾಯಿ ಹಾಜಿರಾ ವಿರೇಶ್‌ನನ್ನು ಮದುವೆಯಾಗಿದ್ದೂ ಅಪರಾಧ ಆಗಬೇಕಲ್ಲವೆ? ಈ ಕುರಿತು ಕ್ಲಬ್ ಹೌಸ್ ನಲ್ಲಾದರು ಸರಿ, ಚರ್ಚೆ ಮಾಡಲು ಸಿದ್ದರಿದ್ದೀರಾ?” ಎಂದು ಶರಣ್ ಪಂಪ್‌ವೆಲ್‌ ಅವರಿಗೆ ಮುನೀರ್‌ ಕಾಟಿಪಳ್ಳ ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಮಂಗಳೂರು: ಬಿಜೆಪಿ ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ಸಾಮಾಜಿಕ ಕಾರ್ಯಕರ್ತೆಗೆ ಗ್ಯಾಂಗ್‌ರೇಪ್‌ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...