Homeಕರ್ನಾಟಕಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು...

ಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು ಮಾಧ್ಯಮಗಳು

- Advertisement -
- Advertisement -

ತನ್ನ ಅಣ್ಣನ ಮಗನೊಂದಿಗೆ ಪರಾರಿಯಾಗಿ ಗದಗದಲ್ಲಿ ರಿಜಿಸ್ಟರ್‌ ಮದುವೆಯಾಗಿದ್ದ ಯುವತಿಯ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಬಿಜೆಪಿ ಬೆಂಬಲಿತ ಸಂಘಟನೆಯ ನಾಯಕ ಶರಣ್‌ ಪಂಪ್‌ವೆಲ್‌ ಸೇರಿದಂತೆ ಬಿಜೆಪಿ ಪರ ಮಾಧ್ಯಮಗಳು ಇದನ್ನು ಲವ್‌ ಜಿಹಾದ್‌ ಪ್ರಕರಣ ಎಂದು ಆರೋಪಿಸಿದ್ದವು.

ಮೂಲತಃ ಗದಗಿನವರಾದ ರೇಷ್ಮಾ ಎಂಬ ಯುವತಿ ತನ್ನ ನಿಶ್ಚಿತಾರ್ಥ ನಡೆದ ನಂತರ ಚಿನ್ನಾಭರಣ ಮತ್ತು ನಗದಿನೊಂದಿಗೆ ನಾಪತ್ತೆಯಾಗಿದ್ದರು. ಈ ಬಗ್ಗೆ ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಶ್ವ ಹಿಂದೂ ಪರಿಷತ್‌ ನಾಯಕ ಶರಣ್‌ ಪಂ‌ಪ್‌ವೆಲ್‌ ಅವರು ಇದು ಲವ್‌ ಜಿಹಾದ್‌ ಎಂದು ಆರೋಪಿಸಿ, ಯುವಕನನ್ನು ಬಂಧಿಸುಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಇದೀಗ ಪೊಲೀಸರು ಯುವತಿಯನ್ನು ಪತ್ತೆಹಚ್ಚಿದ್ದು, ಪ್ರಕರಣವನ್ನು ಭೇದಿಸಿದ್ದಾರೆ. ಯುವತಿಯ ತಾಯಿ ಮೂಲತಃ ಮುಸ್ಲಿಂ ಧರ್ಮೀಯರಾಗಿದ್ದರು. ಅವರು ಸುಮಾರು 22 ವರ್ಷಗಳ ಹಿಂದೆ ವೀರೇಶ್‌ ಎಂಬವರನ್ನು ಪ್ರೀತಿಸಿ ಮದುವೆಯಾಗಿ ‘ಯಶೋಧ’ ಎಂದು ಹೆಸರು ಬದಲಾಯಿಸಿದ್ದರು. ಆದರೆ ಅವರು ತನ್ನ ಸಂಬಂಧಿಕರೊಂದಿಗೆ ಒಡನಾಟ ಮುಂದುವರೆಸಿದ್ದರು. ಈ ವೇಳೆ ಅವರ ಮಗಳಾದ ರೇಷ್ಮಾ ಮತ್ತು ಅವರ ಸಹೋದರಿಯ ಮಗ ಅಕ್ಬರ್‌ ಪರಸ್ಪರ ಪ್ರೀತಿಸುತ್ತಿದ್ದರು.

ಆದರೆ, ರೇಷ್ಮಾ ಅವರ ಹೆತ್ತವರು ಬೇರೆ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿದ್ದರಿಂದ ಅವರು ತನ್ನ ಮನೆಯಿಂದ ನಾಪತ್ತೆಯಾಗಿದ್ದಾರೆ. ಮಂಗಳೂರಿನಿಂದ ತೆರಳಿದ ರೇಷ್ಮಾ ಗದಗಿನಲ್ಲಿ ಅಕ್ಬರ್‌ ಅವರನ್ನು ರಿಜಿಸ್ಟರ್‌ ಮದುವೆಯಾಗಿದ್ದಾರೆ.

ಈ ಮಧ್ಯೆ ಕೆಲವು ಮಾಧ್ಯಮಗಳು ಪ್ರಕರಣವನ್ನು ಬಳಸಿಕೊಂಡು ದ್ವೇಷ ಅಭಿಯಾನದಲ್ಲಿ ತೊಡಗಿದೆ. ಮುಸ್ಲಿಂ ಕುಟುಂಬ 22 ವರ್ಷದ ಹಿಂದೆ ನಡೆದ ಘಟನೆಗೆ ಸೇಡು ತೀರಿಸಿಕೊಂಡಿದೆ ಎಂದು ವರದಿ ಮಾಡಿದೆ. ಅಷ್ಟೇ ಅಲ್ಲದೆ ಯಾವುದೆ ದಾಖಲೆ ಇಲ್ಲದೆ ಲವ್‌ ಜಿಹಾದ್ ಎಂಬುವುದು ನಡೆಯುತ್ತಿದೆ ಎಂದು ಬರೆದುಕೊಂಡಿದೆ.

ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವರು!

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಹಾಜಿರಾ, ವೀರೇಶ್‌ನನ್ನು ಪ್ರೀತಿಸಿ ಓಡಿಹೋಗಿ ಮದುವೆಯಾಗಿ ಯಶೋಧ ಆದಳು. ಯಶೋಧ (ಹಾಜಿರಾ) ಮಗಳು ರೇಷ್ಮಾ ತನ್ನ ತಾಯಿಯ ಅಕ್ಕನ ಮಗ ಅಕ್ಬರ್ ನನ್ನು ಪ್ರೀತಿಸಿ (ಓಡಿ ಹೋಗಿ) ಮದುವೆಯಾಗಿ ಮುಸ್ಲಿಂ ಕುಟುಂಬವನ್ನು ಸೇರಿಕೊಂಡಲು. ವೀರಾವೇಶದಿಂದ ಪತ್ರಿಕಾಗೋಷ್ಟಿ ನಡೆಸಿದ ಶರಣ್ ಪಂಪ್ ವೆಲ್ ಇದು ಲವ್ ಜಿಹಾದ್ ಎಂದು ಆರ್ಭಟಿಸಿ ನಗೆ ಪಾಟಲಾದರು” ಎಂದು ಹೇಳಿದ್ದಾರೆ.

“ರೇಷ್ಮಾ ತನ್ನ ತಾಯಿಯ ಅಕ್ಕನ ಮಗ ಅಕ್ಬರ್‌ನನ್ನು ಪ್ರೀತಿಸಿ ಮದುವೆಯಾಗುವುದು ಲವ್ ಜಿಹಾದ್ ಆಗುವುದಾದರೆ, ರೇಷ್ಮಾಳ ತಾಯಿ ಹಾಜಿರಾ ಅಂದು ವಿರೇಶ್‌ನನ್ನು ಪ್ರೀತಿಸಿ ಮದುವೆಯಾದನ್ನು ಏನಂತ ಕರೆಯುತ್ತೀರಿ ? ನಿಮ್ಮದೆ ಮಾದರಿಯ ಕೆಲವು ಮುಸ್ಲಿಮ್ ರಕ್ಷಣೆಯ ಸೋಗಿನ ಸಂಘಟನೆಗಳು ಆರೋಪಿಸುವಂತೆ ಅದು ಲವ್ ಕೇಸರಿಯಾ ?” ಎಂದು ಮುನೀರ್‌ ಪ್ರಶ್ನಿಸಿದ್ದಾರೆ.

“ಪದೇ ಪದೆ ಈ ರೀತಿ ಮಾತಾಡಿ ಹಾಸ್ಯಾಸ್ಪದರಾಗಲು ನಾಚಿಕೆಯಾಗುವುದಿಲ್ಲವೆ ಶರಣ್ ಪಂಪ್ ವೆಲ್? ನಿಮ್ಮ ಇಂತಹ ಬಾಲಿಶ ನಡೆಗಳು ಸಾಮಾಜದ ಮೇಲೆ ಬೀರುವ ಪರಿಣಾಮದ ಅರಿವಿದೆಯೆ ನಿಮಗೆ ? ನಿಮ್ಮದೇ ಲಾಜಿಕ್ ಪ್ರಕಾರ ಹಿಂದು ಹೆಣ್ಣುಮಕ್ಕಳು ಮುಸ್ಲಿಂ ಯುವಕರ ಗೆಳೆತನ, ಮದುವೆ ಆಗುವುದು ಅಪರಾಧ ಅಂತಾದರೆ, ಮುಸ್ಲಿಂ ಹೆಣ್ಣು ಮಕ್ಕಳು ಹಿಂದು ಯುವಕರ ಗೆಳೆತನ ಹೊಂದುವುದು ಮದುವೆಯಾಗುವುದನ್ನು ನೀವು ಯಾವ ರೀತಿ ನೋಡುತ್ತೀರಿ? ಎರಡನ್ನೂ ವಿರೋಧಿಸುತ್ತೀರ ? ಅಕ್ಬರ್ ರೇಷ್ಮಾಳನ್ನು ಮುದುವೆಯಾಗುವುದು ಅಪರಾಧ ಆದರೆ, ಆಕೆಯ ತಾಯಿ ಹಾಜಿರಾ ವಿರೇಶ್‌ನನ್ನು ಮದುವೆಯಾಗಿದ್ದೂ ಅಪರಾಧ ಆಗಬೇಕಲ್ಲವೆ? ಈ ಕುರಿತು ಕ್ಲಬ್ ಹೌಸ್ ನಲ್ಲಾದರು ಸರಿ, ಚರ್ಚೆ ಮಾಡಲು ಸಿದ್ದರಿದ್ದೀರಾ?” ಎಂದು ಶರಣ್ ಪಂಪ್‌ವೆಲ್‌ ಅವರಿಗೆ ಮುನೀರ್‌ ಕಾಟಿಪಳ್ಳ ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಮಂಗಳೂರು: ಬಿಜೆಪಿ ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ಸಾಮಾಜಿಕ ಕಾರ್ಯಕರ್ತೆಗೆ ಗ್ಯಾಂಗ್‌ರೇಪ್‌ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...