Homeಕರ್ನಾಟಕಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು...

ಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು ಮಾಧ್ಯಮಗಳು

- Advertisement -
- Advertisement -

ತನ್ನ ಅಣ್ಣನ ಮಗನೊಂದಿಗೆ ಪರಾರಿಯಾಗಿ ಗದಗದಲ್ಲಿ ರಿಜಿಸ್ಟರ್‌ ಮದುವೆಯಾಗಿದ್ದ ಯುವತಿಯ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಬಿಜೆಪಿ ಬೆಂಬಲಿತ ಸಂಘಟನೆಯ ನಾಯಕ ಶರಣ್‌ ಪಂಪ್‌ವೆಲ್‌ ಸೇರಿದಂತೆ ಬಿಜೆಪಿ ಪರ ಮಾಧ್ಯಮಗಳು ಇದನ್ನು ಲವ್‌ ಜಿಹಾದ್‌ ಪ್ರಕರಣ ಎಂದು ಆರೋಪಿಸಿದ್ದವು.

ಮೂಲತಃ ಗದಗಿನವರಾದ ರೇಷ್ಮಾ ಎಂಬ ಯುವತಿ ತನ್ನ ನಿಶ್ಚಿತಾರ್ಥ ನಡೆದ ನಂತರ ಚಿನ್ನಾಭರಣ ಮತ್ತು ನಗದಿನೊಂದಿಗೆ ನಾಪತ್ತೆಯಾಗಿದ್ದರು. ಈ ಬಗ್ಗೆ ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಶ್ವ ಹಿಂದೂ ಪರಿಷತ್‌ ನಾಯಕ ಶರಣ್‌ ಪಂ‌ಪ್‌ವೆಲ್‌ ಅವರು ಇದು ಲವ್‌ ಜಿಹಾದ್‌ ಎಂದು ಆರೋಪಿಸಿ, ಯುವಕನನ್ನು ಬಂಧಿಸುಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಇದೀಗ ಪೊಲೀಸರು ಯುವತಿಯನ್ನು ಪತ್ತೆಹಚ್ಚಿದ್ದು, ಪ್ರಕರಣವನ್ನು ಭೇದಿಸಿದ್ದಾರೆ. ಯುವತಿಯ ತಾಯಿ ಮೂಲತಃ ಮುಸ್ಲಿಂ ಧರ್ಮೀಯರಾಗಿದ್ದರು. ಅವರು ಸುಮಾರು 22 ವರ್ಷಗಳ ಹಿಂದೆ ವೀರೇಶ್‌ ಎಂಬವರನ್ನು ಪ್ರೀತಿಸಿ ಮದುವೆಯಾಗಿ ‘ಯಶೋಧ’ ಎಂದು ಹೆಸರು ಬದಲಾಯಿಸಿದ್ದರು. ಆದರೆ ಅವರು ತನ್ನ ಸಂಬಂಧಿಕರೊಂದಿಗೆ ಒಡನಾಟ ಮುಂದುವರೆಸಿದ್ದರು. ಈ ವೇಳೆ ಅವರ ಮಗಳಾದ ರೇಷ್ಮಾ ಮತ್ತು ಅವರ ಸಹೋದರಿಯ ಮಗ ಅಕ್ಬರ್‌ ಪರಸ್ಪರ ಪ್ರೀತಿಸುತ್ತಿದ್ದರು.

ಆದರೆ, ರೇಷ್ಮಾ ಅವರ ಹೆತ್ತವರು ಬೇರೆ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿದ್ದರಿಂದ ಅವರು ತನ್ನ ಮನೆಯಿಂದ ನಾಪತ್ತೆಯಾಗಿದ್ದಾರೆ. ಮಂಗಳೂರಿನಿಂದ ತೆರಳಿದ ರೇಷ್ಮಾ ಗದಗಿನಲ್ಲಿ ಅಕ್ಬರ್‌ ಅವರನ್ನು ರಿಜಿಸ್ಟರ್‌ ಮದುವೆಯಾಗಿದ್ದಾರೆ.

ಈ ಮಧ್ಯೆ ಕೆಲವು ಮಾಧ್ಯಮಗಳು ಪ್ರಕರಣವನ್ನು ಬಳಸಿಕೊಂಡು ದ್ವೇಷ ಅಭಿಯಾನದಲ್ಲಿ ತೊಡಗಿದೆ. ಮುಸ್ಲಿಂ ಕುಟುಂಬ 22 ವರ್ಷದ ಹಿಂದೆ ನಡೆದ ಘಟನೆಗೆ ಸೇಡು ತೀರಿಸಿಕೊಂಡಿದೆ ಎಂದು ವರದಿ ಮಾಡಿದೆ. ಅಷ್ಟೇ ಅಲ್ಲದೆ ಯಾವುದೆ ದಾಖಲೆ ಇಲ್ಲದೆ ಲವ್‌ ಜಿಹಾದ್ ಎಂಬುವುದು ನಡೆಯುತ್ತಿದೆ ಎಂದು ಬರೆದುಕೊಂಡಿದೆ.

ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವರು!

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಹಾಜಿರಾ, ವೀರೇಶ್‌ನನ್ನು ಪ್ರೀತಿಸಿ ಓಡಿಹೋಗಿ ಮದುವೆಯಾಗಿ ಯಶೋಧ ಆದಳು. ಯಶೋಧ (ಹಾಜಿರಾ) ಮಗಳು ರೇಷ್ಮಾ ತನ್ನ ತಾಯಿಯ ಅಕ್ಕನ ಮಗ ಅಕ್ಬರ್ ನನ್ನು ಪ್ರೀತಿಸಿ (ಓಡಿ ಹೋಗಿ) ಮದುವೆಯಾಗಿ ಮುಸ್ಲಿಂ ಕುಟುಂಬವನ್ನು ಸೇರಿಕೊಂಡಲು. ವೀರಾವೇಶದಿಂದ ಪತ್ರಿಕಾಗೋಷ್ಟಿ ನಡೆಸಿದ ಶರಣ್ ಪಂಪ್ ವೆಲ್ ಇದು ಲವ್ ಜಿಹಾದ್ ಎಂದು ಆರ್ಭಟಿಸಿ ನಗೆ ಪಾಟಲಾದರು” ಎಂದು ಹೇಳಿದ್ದಾರೆ.

“ರೇಷ್ಮಾ ತನ್ನ ತಾಯಿಯ ಅಕ್ಕನ ಮಗ ಅಕ್ಬರ್‌ನನ್ನು ಪ್ರೀತಿಸಿ ಮದುವೆಯಾಗುವುದು ಲವ್ ಜಿಹಾದ್ ಆಗುವುದಾದರೆ, ರೇಷ್ಮಾಳ ತಾಯಿ ಹಾಜಿರಾ ಅಂದು ವಿರೇಶ್‌ನನ್ನು ಪ್ರೀತಿಸಿ ಮದುವೆಯಾದನ್ನು ಏನಂತ ಕರೆಯುತ್ತೀರಿ ? ನಿಮ್ಮದೆ ಮಾದರಿಯ ಕೆಲವು ಮುಸ್ಲಿಮ್ ರಕ್ಷಣೆಯ ಸೋಗಿನ ಸಂಘಟನೆಗಳು ಆರೋಪಿಸುವಂತೆ ಅದು ಲವ್ ಕೇಸರಿಯಾ ?” ಎಂದು ಮುನೀರ್‌ ಪ್ರಶ್ನಿಸಿದ್ದಾರೆ.

“ಪದೇ ಪದೆ ಈ ರೀತಿ ಮಾತಾಡಿ ಹಾಸ್ಯಾಸ್ಪದರಾಗಲು ನಾಚಿಕೆಯಾಗುವುದಿಲ್ಲವೆ ಶರಣ್ ಪಂಪ್ ವೆಲ್? ನಿಮ್ಮ ಇಂತಹ ಬಾಲಿಶ ನಡೆಗಳು ಸಾಮಾಜದ ಮೇಲೆ ಬೀರುವ ಪರಿಣಾಮದ ಅರಿವಿದೆಯೆ ನಿಮಗೆ ? ನಿಮ್ಮದೇ ಲಾಜಿಕ್ ಪ್ರಕಾರ ಹಿಂದು ಹೆಣ್ಣುಮಕ್ಕಳು ಮುಸ್ಲಿಂ ಯುವಕರ ಗೆಳೆತನ, ಮದುವೆ ಆಗುವುದು ಅಪರಾಧ ಅಂತಾದರೆ, ಮುಸ್ಲಿಂ ಹೆಣ್ಣು ಮಕ್ಕಳು ಹಿಂದು ಯುವಕರ ಗೆಳೆತನ ಹೊಂದುವುದು ಮದುವೆಯಾಗುವುದನ್ನು ನೀವು ಯಾವ ರೀತಿ ನೋಡುತ್ತೀರಿ? ಎರಡನ್ನೂ ವಿರೋಧಿಸುತ್ತೀರ ? ಅಕ್ಬರ್ ರೇಷ್ಮಾಳನ್ನು ಮುದುವೆಯಾಗುವುದು ಅಪರಾಧ ಆದರೆ, ಆಕೆಯ ತಾಯಿ ಹಾಜಿರಾ ವಿರೇಶ್‌ನನ್ನು ಮದುವೆಯಾಗಿದ್ದೂ ಅಪರಾಧ ಆಗಬೇಕಲ್ಲವೆ? ಈ ಕುರಿತು ಕ್ಲಬ್ ಹೌಸ್ ನಲ್ಲಾದರು ಸರಿ, ಚರ್ಚೆ ಮಾಡಲು ಸಿದ್ದರಿದ್ದೀರಾ?” ಎಂದು ಶರಣ್ ಪಂಪ್‌ವೆಲ್‌ ಅವರಿಗೆ ಮುನೀರ್‌ ಕಾಟಿಪಳ್ಳ ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಮಂಗಳೂರು: ಬಿಜೆಪಿ ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ಸಾಮಾಜಿಕ ಕಾರ್ಯಕರ್ತೆಗೆ ಗ್ಯಾಂಗ್‌ರೇಪ್‌ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...