Homeಕರ್ನಾಟಕಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು...

ಸಹೋದರ ಸಂಬಂಧಿಗಳ ಪ್ರೇಮ ಪ್ರಕರಣಕ್ಕೆ ‘ಲವ್‌ ಜಿಹಾದ್’ ಪಟ್ಟ ಕಟ್ಟಿದ ಬಿಜೆಪಿ ಪರ ಸಂಘಟನೆ ಮತ್ತು ಮಾಧ್ಯಮಗಳು

- Advertisement -
- Advertisement -

ತನ್ನ ಅಣ್ಣನ ಮಗನೊಂದಿಗೆ ಪರಾರಿಯಾಗಿ ಗದಗದಲ್ಲಿ ರಿಜಿಸ್ಟರ್‌ ಮದುವೆಯಾಗಿದ್ದ ಯುವತಿಯ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಬಿಜೆಪಿ ಬೆಂಬಲಿತ ಸಂಘಟನೆಯ ನಾಯಕ ಶರಣ್‌ ಪಂಪ್‌ವೆಲ್‌ ಸೇರಿದಂತೆ ಬಿಜೆಪಿ ಪರ ಮಾಧ್ಯಮಗಳು ಇದನ್ನು ಲವ್‌ ಜಿಹಾದ್‌ ಪ್ರಕರಣ ಎಂದು ಆರೋಪಿಸಿದ್ದವು.

ಮೂಲತಃ ಗದಗಿನವರಾದ ರೇಷ್ಮಾ ಎಂಬ ಯುವತಿ ತನ್ನ ನಿಶ್ಚಿತಾರ್ಥ ನಡೆದ ನಂತರ ಚಿನ್ನಾಭರಣ ಮತ್ತು ನಗದಿನೊಂದಿಗೆ ನಾಪತ್ತೆಯಾಗಿದ್ದರು. ಈ ಬಗ್ಗೆ ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಬಿಜೆಪಿ ಬೆಂಬಲಿತ ಸಂಘಟನೆಯಾದ ವಿಶ್ವ ಹಿಂದೂ ಪರಿಷತ್‌ ನಾಯಕ ಶರಣ್‌ ಪಂ‌ಪ್‌ವೆಲ್‌ ಅವರು ಇದು ಲವ್‌ ಜಿಹಾದ್‌ ಎಂದು ಆರೋಪಿಸಿ, ಯುವಕನನ್ನು ಬಂಧಿಸುಂತೆ ಒತ್ತಾಯಿಸಿದ್ದರು.

ಇದನ್ನೂ ಓದಿ: ಮುಸ್ಲಿಮರ ವಿರುದ್ದ ಹಿಂಸಾಚಾರಕ್ಕೆ ಕರೆ ನೀಡಿದ ಸಂಘಪರಿವಾರದ ನಾಯಕ ಶರಣ್ ಪಂಪ್‌ವೆಲ್

ಇದೀಗ ಪೊಲೀಸರು ಯುವತಿಯನ್ನು ಪತ್ತೆಹಚ್ಚಿದ್ದು, ಪ್ರಕರಣವನ್ನು ಭೇದಿಸಿದ್ದಾರೆ. ಯುವತಿಯ ತಾಯಿ ಮೂಲತಃ ಮುಸ್ಲಿಂ ಧರ್ಮೀಯರಾಗಿದ್ದರು. ಅವರು ಸುಮಾರು 22 ವರ್ಷಗಳ ಹಿಂದೆ ವೀರೇಶ್‌ ಎಂಬವರನ್ನು ಪ್ರೀತಿಸಿ ಮದುವೆಯಾಗಿ ‘ಯಶೋಧ’ ಎಂದು ಹೆಸರು ಬದಲಾಯಿಸಿದ್ದರು. ಆದರೆ ಅವರು ತನ್ನ ಸಂಬಂಧಿಕರೊಂದಿಗೆ ಒಡನಾಟ ಮುಂದುವರೆಸಿದ್ದರು. ಈ ವೇಳೆ ಅವರ ಮಗಳಾದ ರೇಷ್ಮಾ ಮತ್ತು ಅವರ ಸಹೋದರಿಯ ಮಗ ಅಕ್ಬರ್‌ ಪರಸ್ಪರ ಪ್ರೀತಿಸುತ್ತಿದ್ದರು.

ಆದರೆ, ರೇಷ್ಮಾ ಅವರ ಹೆತ್ತವರು ಬೇರೆ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿದ್ದರಿಂದ ಅವರು ತನ್ನ ಮನೆಯಿಂದ ನಾಪತ್ತೆಯಾಗಿದ್ದಾರೆ. ಮಂಗಳೂರಿನಿಂದ ತೆರಳಿದ ರೇಷ್ಮಾ ಗದಗಿನಲ್ಲಿ ಅಕ್ಬರ್‌ ಅವರನ್ನು ರಿಜಿಸ್ಟರ್‌ ಮದುವೆಯಾಗಿದ್ದಾರೆ.

ಈ ಮಧ್ಯೆ ಕೆಲವು ಮಾಧ್ಯಮಗಳು ಪ್ರಕರಣವನ್ನು ಬಳಸಿಕೊಂಡು ದ್ವೇಷ ಅಭಿಯಾನದಲ್ಲಿ ತೊಡಗಿದೆ. ಮುಸ್ಲಿಂ ಕುಟುಂಬ 22 ವರ್ಷದ ಹಿಂದೆ ನಡೆದ ಘಟನೆಗೆ ಸೇಡು ತೀರಿಸಿಕೊಂಡಿದೆ ಎಂದು ವರದಿ ಮಾಡಿದೆ. ಅಷ್ಟೇ ಅಲ್ಲದೆ ಯಾವುದೆ ದಾಖಲೆ ಇಲ್ಲದೆ ಲವ್‌ ಜಿಹಾದ್ ಎಂಬುವುದು ನಡೆಯುತ್ತಿದೆ ಎಂದು ಬರೆದುಕೊಂಡಿದೆ.

ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವರು!

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಹಾಜಿರಾ, ವೀರೇಶ್‌ನನ್ನು ಪ್ರೀತಿಸಿ ಓಡಿಹೋಗಿ ಮದುವೆಯಾಗಿ ಯಶೋಧ ಆದಳು. ಯಶೋಧ (ಹಾಜಿರಾ) ಮಗಳು ರೇಷ್ಮಾ ತನ್ನ ತಾಯಿಯ ಅಕ್ಕನ ಮಗ ಅಕ್ಬರ್ ನನ್ನು ಪ್ರೀತಿಸಿ (ಓಡಿ ಹೋಗಿ) ಮದುವೆಯಾಗಿ ಮುಸ್ಲಿಂ ಕುಟುಂಬವನ್ನು ಸೇರಿಕೊಂಡಲು. ವೀರಾವೇಶದಿಂದ ಪತ್ರಿಕಾಗೋಷ್ಟಿ ನಡೆಸಿದ ಶರಣ್ ಪಂಪ್ ವೆಲ್ ಇದು ಲವ್ ಜಿಹಾದ್ ಎಂದು ಆರ್ಭಟಿಸಿ ನಗೆ ಪಾಟಲಾದರು” ಎಂದು ಹೇಳಿದ್ದಾರೆ.

“ರೇಷ್ಮಾ ತನ್ನ ತಾಯಿಯ ಅಕ್ಕನ ಮಗ ಅಕ್ಬರ್‌ನನ್ನು ಪ್ರೀತಿಸಿ ಮದುವೆಯಾಗುವುದು ಲವ್ ಜಿಹಾದ್ ಆಗುವುದಾದರೆ, ರೇಷ್ಮಾಳ ತಾಯಿ ಹಾಜಿರಾ ಅಂದು ವಿರೇಶ್‌ನನ್ನು ಪ್ರೀತಿಸಿ ಮದುವೆಯಾದನ್ನು ಏನಂತ ಕರೆಯುತ್ತೀರಿ ? ನಿಮ್ಮದೆ ಮಾದರಿಯ ಕೆಲವು ಮುಸ್ಲಿಮ್ ರಕ್ಷಣೆಯ ಸೋಗಿನ ಸಂಘಟನೆಗಳು ಆರೋಪಿಸುವಂತೆ ಅದು ಲವ್ ಕೇಸರಿಯಾ ?” ಎಂದು ಮುನೀರ್‌ ಪ್ರಶ್ನಿಸಿದ್ದಾರೆ.

“ಪದೇ ಪದೆ ಈ ರೀತಿ ಮಾತಾಡಿ ಹಾಸ್ಯಾಸ್ಪದರಾಗಲು ನಾಚಿಕೆಯಾಗುವುದಿಲ್ಲವೆ ಶರಣ್ ಪಂಪ್ ವೆಲ್? ನಿಮ್ಮ ಇಂತಹ ಬಾಲಿಶ ನಡೆಗಳು ಸಾಮಾಜದ ಮೇಲೆ ಬೀರುವ ಪರಿಣಾಮದ ಅರಿವಿದೆಯೆ ನಿಮಗೆ ? ನಿಮ್ಮದೇ ಲಾಜಿಕ್ ಪ್ರಕಾರ ಹಿಂದು ಹೆಣ್ಣುಮಕ್ಕಳು ಮುಸ್ಲಿಂ ಯುವಕರ ಗೆಳೆತನ, ಮದುವೆ ಆಗುವುದು ಅಪರಾಧ ಅಂತಾದರೆ, ಮುಸ್ಲಿಂ ಹೆಣ್ಣು ಮಕ್ಕಳು ಹಿಂದು ಯುವಕರ ಗೆಳೆತನ ಹೊಂದುವುದು ಮದುವೆಯಾಗುವುದನ್ನು ನೀವು ಯಾವ ರೀತಿ ನೋಡುತ್ತೀರಿ? ಎರಡನ್ನೂ ವಿರೋಧಿಸುತ್ತೀರ ? ಅಕ್ಬರ್ ರೇಷ್ಮಾಳನ್ನು ಮುದುವೆಯಾಗುವುದು ಅಪರಾಧ ಆದರೆ, ಆಕೆಯ ತಾಯಿ ಹಾಜಿರಾ ವಿರೇಶ್‌ನನ್ನು ಮದುವೆಯಾಗಿದ್ದೂ ಅಪರಾಧ ಆಗಬೇಕಲ್ಲವೆ? ಈ ಕುರಿತು ಕ್ಲಬ್ ಹೌಸ್ ನಲ್ಲಾದರು ಸರಿ, ಚರ್ಚೆ ಮಾಡಲು ಸಿದ್ದರಿದ್ದೀರಾ?” ಎಂದು ಶರಣ್ ಪಂಪ್‌ವೆಲ್‌ ಅವರಿಗೆ ಮುನೀರ್‌ ಕಾಟಿಪಳ್ಳ ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಮಂಗಳೂರು: ಬಿಜೆಪಿ ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ಸಾಮಾಜಿಕ ಕಾರ್ಯಕರ್ತೆಗೆ ಗ್ಯಾಂಗ್‌ರೇಪ್‌ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...