Homeಕರ್ನಾಟಕಸೌಜನ್ಯ ಪರ ಸಭೆ, ಪ್ರತಿಭಟನೆಯನ್ನು ಪೊಲೀಸರು ತಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಸೌಜನ್ಯ ಪರ ಸಭೆ, ಪ್ರತಿಭಟನೆಯನ್ನು ಪೊಲೀಸರು ತಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

- Advertisement -
- Advertisement -

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ. ಮಾರ್ಚ್ 18, 2025 ಸಂಜೆ 5.30 ಕ್ಕೆ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸೌಜನ್ಯ ನ್ಯಾಯಕ್ಕಾಗಿ ಸಮಾಲೋಚನಾ ಸಭೆಯನ್ನು ನಿಲ್ಲಿಸುವಂತೆ ಶೇಷಾದ್ರಿಪುರ ಪೊಲೀಸರು ನೀಡಿದ್ದ ನೋಟಿಸ್ ಬಗೆಗಿನ ರಿಟ್ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಈ ಆದೇಶ ನೀಡಿದ್ದಾರೆ. ಸೌಜನ್ಯ ಪರ ಸಭೆ

ನಾಡಿನ ಪ್ರಮುಖ ಸಾಹಿತಿ-ಚಿಂತಕ- ಹೋರಾಟಗಾರರ ಸಮಾಲೋಚನಾ ಸಭೆಯ ಸಂಚಾಲಕರಲ್ಲೊಬ್ಬರಾದ ವಿನಯ್ ಶ್ರೀನಿವಾಸ್ ಮತ್ತು ವಿಜಯ ಭಾಸ್ಕರ್ ಪರವಾಗಿ ಹಿರಿಯ ನ್ಯಾಯವಾದಿ ಶ್ರುತಿ ಚಗಂತಿ ರಿಟ್ ಅರ್ಜಿ ಸಲ್ಲಿಸಿದ್ದರು. ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು “ಪೊಲೀಸರು ಮತ್ತು ಸರ್ಕಾರ ಸಭೆಯನ್ನು, ಪ್ರತಿಭಟನೆಯನ್ನು ತಡೆಯುವಂತಿಲ್ಲ. ಒಂದು ವೇಳೆ ಅಲ್ಲಿ ಕಾನೂನು ಉಲ್ಲಂಘನೆಯಾದರೆ ಮಾತ್ರ ಪೊಲೀಸರು ಕ್ರಮ ತೆಗೆದುಕೊಳ್ಳಬಹುದು. ಪ್ರತಿಭಟನೆಗಳನ್ನು ಊಹೆಯ ಆಧಾರದಲ್ಲಿ ತಡೆಯುವಂತಿಲ್ಲ” ಎಂದು ಆದೇಶ ನೀಡಿದ್ದಾರೆ.

ಸೌಜನ್ಯ ಪರ ನ್ಯಾಯಕ್ಕಾಗಿ ಮತ್ತು ಊಳಿಗಮಾನ್ಯ ದರ್ಪ ವಿರೋಧಿಸಿ ಸಾಹಿತಿಗಳು-ಚಿಂತಕರು-ಹೋರಾಟಗಾರರ ಸಮಾಲೋಚನಾ ಸಭೆಯ ಆಯೋಜಕರಿಗೆ ಶೇಷಾದ್ರಿಪುರ ಪೊಲೀಸರು 17.03.2025 ರಂದು ರಾತ್ರಿ 10:22 ಕ್ಕೆ ವಾಟ್ಸಾಪ್ ಮೂಲಕ ನೋಟಿಸ್ ನೀಡಿದ್ದರು. ಈ ನೋಟೀಸ್‌ನಲ್ಲಿ, “ಹೈಕೋರ್ಟ್ ರಿಟ್ ಅರ್ಜಿ ಆದೇಶದ ಪ್ರಕಾರ ಜಸ್ಟಿಸ್ ಫಾರ್ ಸೌಜನ್ಯ ಹೆಸರಿನಲ್ಲಿ ಯಾರೂ ಯಾವುದೇ ಸಭೆ, ಪ್ರತಿಭಟನೆ ನಡೆಸುವಂತಿಲ್ಲ. ಒಂದು ವೇಳೆ ಸಭೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದು ಪೊಲೀಸರು ಉಲ್ಲೇಖಿಸಿದ್ದರು.

ಶೇಷಾದ್ರಿಪುರ ಪೊಲೀಸ್ ಠಾಣೆಯ ನೋಟಿಸನ್ನು ಮೀರಿ ಸಭೆ ನಡೆಸಿದರೆ, ಅಥವಾ ಸಭೆ ನಡೆಸಲು ಸಭಾಂಗಣ ನೀಡಿದರೆ ಬಂಧಿಸುವುದಾಗಿ ಪೊಲೀಸರು ದೂರವಾಣಿಯಲ್ಲಿ ಸಂಘಟಕರಿಗೆ ಹೇಳಿದ್ದರು ಎಂದು ಹೋರಾಟಗಾರರ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ದೂರಿದ್ದಾರೆ. ಸೌಜನ್ಯ ಪರ ಸಭೆ

ಪೊಲೀಸರು ಕಾನೂನು ಬಾಹಿರವಾಗಿ ನೀಡಲಾದ ವಾಟ್ಸಪ್ ನೋಟಿಸ್ ಹೋರಾಟಗಾರರ ಮೂಲಭೂತ ಹಕ್ಕುಗಳನ್ನು ಕಸಿದಿದೆ. ಪೊಲೀಸರ ಈ ಕ್ರಮ ವಿಕೃತ ಮತ್ತು ದುರುದ್ದೇಶಪೂರಿತವಾಗಿದೆ ಎಂದು ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಲಾಗಿದೆ.

ಸೌಜನ್ಯ ನ್ಯಾಯಕ್ಕಾಗಿ ನಡೆಸುತ್ತಿರುವ ಸಮಾಲೋಚನಾ ಸಭೆಯು ಕಚೇರಿಯೊಳಗೆ ನಡೆಯುತ್ತಿರುವ ಸಭೆಯಾಗಿದೆ. ಪ್ರತಿಭಟನೆಯಲ್ಲದೇ ಇದ್ದರೂ ದುರುದ್ದೇಶಪೂರ್ವಕವಾಗಿ ನೋಟಿಸ್‌ನಲ್ಲಿ ಪ್ರತಿಭಟನೆ ಎಂದು ಉಲ್ಲೇಖಿಸಲಾಗಿದೆ. ಪೊಲೀಸರು ಒಳಾಂಗಣ ಚಟುವಟಿಕೆಯನ್ನು ನಿಯಂತ್ರಿಸುವಂತಿಲ್ಲ. ಸಮಾಲೋಚನಾ ಸಭೆಯು ಪ್ರತಿಭಟನೆ ಅಲ್ಲದೇ ಇರುವುದರಿಂದ ಪೊಲೀಸರು ತಮ್ಮ ವ್ಯಾಪ್ತಿ ಮೀರಿ ನೋಟಿಸ್ ನೀಡಿದ್ದಾರೆ ಎನ್ನುವುದು ಸ್ಪಷ್ಟವಿದೆ ಎಂದು ರಿಟ್ ಅರ್ಜಿಯಲ್ಲಿ ಹೇಳಲಾಗಿದೆ.

ಹೈಕೋರ್ಟ್ ರಿಟ್ ಅದೇಶವು (WP No : 19382/2023) ಕೇವಲ ಆ ಸದ್ರಿ ರಿಟ್‌ನ ವಾದಿ- ಪ್ರತಿವಾದಿಗಳಿಗೆ ಮಾತ್ರ ಅನ್ವಯಿಸುತ್ತದೆ. ಹೈಕೋರ್ಟ್ ರಿಟ್‌ನ ಅಂತಿಮ ತೀರ್ಪು ಬರದೇ ಇರುವುದರಿಂದ ಹೈಕೋರ್ಟ್ ಆದೇಶವು ಪ್ರತಿವಾದಿಗಳಿಗಲ್ಲದೇ ಬೇರೆಯವರಿಗೆ ಅನ್ವಯಿಸುವುದಿಲ್ಲ. ಆದರೆ ಪೊಲೀಸರು ಹೈಕೋರ್ಟ್ ರಿಟ್ ಅದೇಶದ ಪ್ರತಿವಾದಿಯಲ್ಲದ ಹೋರಾಟಗಾರರನ್ನು ಸಭೆ ನಡೆಸದಂತೆ ತಡೆಯುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಹೈಕೋರ್ಟ್‌ನ ರಿಟ್ ಆದೇಶದಲ್ಲಿ “9 ನೇ ಪ್ರತಿವಾದಿ ಅಥವಾ ಅವನ ಅನುಯಾಯಿಗಳು ಅಥವಾ ಯಾವುದೇ ವ್ಯಕ್ತಿ ಬಹಿರಂಗವಾಗಿ ಯಾವುದೇ ಹೇಳಿಕೆ ನೀಡಿದರೆ ಅಥವಾ ಯಾವುದೇ ಅವಹೇಳನಕಾರಿ ಹೇಳಿಕೆಯನ್ನು ಪ್ರಕಟಿಸಿದರೆ, ಅದು ಕಾನೂನಿಗೆ ಅನುಸಾರವಾಗಿ ಅಪರಾಧವಾಗಿದೆ. ಮತ್ತು ಆ ನಿಟ್ಟಿನಲ್ಲಿ 9 ನೇ ಪ್ರತಿವಾದಿ ಅಥವಾ ಅವನ ಅನುಯಾಯಿಗಳು ಮಾಡಿದ ಯಾವುದೇ ಕ್ರಮದಿಂದ ಬಾಧಿತರಾದ ಯಾವುದೇ ವ್ಯಕ್ತಿ ಆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಕಾನೂನಿನ ಪ್ರಕಾರ ತಕ್ಷಣವೇ ಕ್ರಮ ಕೈಗೊಳ್ಳುವುದು ಪೊಲೀಸರ ಬದ್ಧ ಕರ್ತವ್ಯವಾಗಿದೆ.” ಎಂದು ಹೇಳಲಾಗಿದೆ.

ಆದರೆ ಹೈಕೋರ್ಟ್ ರಿಟ್‌ನಲ್ಲಿರುವ ಪ್ರತಿವಾದಿಗಳಲ್ಲದ ವ್ಯಕ್ತಿಗಳು ಶೇಷಾದ್ರಿಪುರಂ ಎಐಟಿಯುಸಿ ಸಭಾಂಗಣದಲ್ಲಿ ಸಭೆ ನಡೆಯುವುದಕ್ಕೂ ಮೊದಲೇ, ಯಾರೂ ದೂರು ನೀಡದೆಯೇ ಪೊಲೀಸರು ಕಾರ್ಯಕ್ರಮ ನಿಲ್ಲಿಸುವಂತೆ ನೋಟಿಸ್ ನೀಡಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿತ್ತು.

ಶೇಷಾದ್ರಿಪುರ ಪೊಲೀಸರ ನೋಟಿಸ್ ಮತ್ತು ಬಂಧನದ ಬೆದರಿಕೆಯು ಸಂವಿಧಾನದ ಆರ್ಟಿಕಲ್ 19(1)(a) ಮತ್ತು 19(1)(b) ಅಡಿಯಲ್ಲಿ ಸಾಹಿತಿ-ಚಿಂತಕ- ಹೋರಾಟಗಾರರ ಮೂಲಭೂತ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಹೋರಾಟಗಾರರ ಪರವಾಗಿ ಹೈಕೋರ್ಟ್ ಗೆ ಹಿರಿಯ ನ್ಯಾಯವಾದಿ ಶ್ರುತಿ ಚಗಂತಿಯವರು ಸಲ್ಲಿಸಿರುವ ರಿಟ್ ನಲ್ಲಿ ಹೇಳಲಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಲಭೆ ನಡೆದಾಗ ಈ ಹಿಂದಿನ ಪ್ರಧಾನಿಗಳೂ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ: ನಿರ್ಮಲಾ ಸೀತಾರಾಮನ್

ಗಲಭೆ ನಡೆದಾಗ ಈ ಹಿಂದಿನ ಪ್ರಧಾನಿಗಳೂ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ: ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...