Homeಕರ್ನಾಟಕಸೌಜನ್ಯ ಪರ ಸಭೆ, ಪ್ರತಿಭಟನೆಯನ್ನು ಪೊಲೀಸರು ತಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಸೌಜನ್ಯ ಪರ ಸಭೆ, ಪ್ರತಿಭಟನೆಯನ್ನು ಪೊಲೀಸರು ತಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

- Advertisement -
- Advertisement -

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ. ಮಾರ್ಚ್ 18, 2025 ಸಂಜೆ 5.30 ಕ್ಕೆ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸೌಜನ್ಯ ನ್ಯಾಯಕ್ಕಾಗಿ ಸಮಾಲೋಚನಾ ಸಭೆಯನ್ನು ನಿಲ್ಲಿಸುವಂತೆ ಶೇಷಾದ್ರಿಪುರ ಪೊಲೀಸರು ನೀಡಿದ್ದ ನೋಟಿಸ್ ಬಗೆಗಿನ ರಿಟ್ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಈ ಆದೇಶ ನೀಡಿದ್ದಾರೆ. ಸೌಜನ್ಯ ಪರ ಸಭೆ

ನಾಡಿನ ಪ್ರಮುಖ ಸಾಹಿತಿ-ಚಿಂತಕ- ಹೋರಾಟಗಾರರ ಸಮಾಲೋಚನಾ ಸಭೆಯ ಸಂಚಾಲಕರಲ್ಲೊಬ್ಬರಾದ ವಿನಯ್ ಶ್ರೀನಿವಾಸ್ ಮತ್ತು ವಿಜಯ ಭಾಸ್ಕರ್ ಪರವಾಗಿ ಹಿರಿಯ ನ್ಯಾಯವಾದಿ ಶ್ರುತಿ ಚಗಂತಿ ರಿಟ್ ಅರ್ಜಿ ಸಲ್ಲಿಸಿದ್ದರು. ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು “ಪೊಲೀಸರು ಮತ್ತು ಸರ್ಕಾರ ಸಭೆಯನ್ನು, ಪ್ರತಿಭಟನೆಯನ್ನು ತಡೆಯುವಂತಿಲ್ಲ. ಒಂದು ವೇಳೆ ಅಲ್ಲಿ ಕಾನೂನು ಉಲ್ಲಂಘನೆಯಾದರೆ ಮಾತ್ರ ಪೊಲೀಸರು ಕ್ರಮ ತೆಗೆದುಕೊಳ್ಳಬಹುದು. ಪ್ರತಿಭಟನೆಗಳನ್ನು ಊಹೆಯ ಆಧಾರದಲ್ಲಿ ತಡೆಯುವಂತಿಲ್ಲ” ಎಂದು ಆದೇಶ ನೀಡಿದ್ದಾರೆ.

ಸೌಜನ್ಯ ಪರ ನ್ಯಾಯಕ್ಕಾಗಿ ಮತ್ತು ಊಳಿಗಮಾನ್ಯ ದರ್ಪ ವಿರೋಧಿಸಿ ಸಾಹಿತಿಗಳು-ಚಿಂತಕರು-ಹೋರಾಟಗಾರರ ಸಮಾಲೋಚನಾ ಸಭೆಯ ಆಯೋಜಕರಿಗೆ ಶೇಷಾದ್ರಿಪುರ ಪೊಲೀಸರು 17.03.2025 ರಂದು ರಾತ್ರಿ 10:22 ಕ್ಕೆ ವಾಟ್ಸಾಪ್ ಮೂಲಕ ನೋಟಿಸ್ ನೀಡಿದ್ದರು. ಈ ನೋಟೀಸ್‌ನಲ್ಲಿ, “ಹೈಕೋರ್ಟ್ ರಿಟ್ ಅರ್ಜಿ ಆದೇಶದ ಪ್ರಕಾರ ಜಸ್ಟಿಸ್ ಫಾರ್ ಸೌಜನ್ಯ ಹೆಸರಿನಲ್ಲಿ ಯಾರೂ ಯಾವುದೇ ಸಭೆ, ಪ್ರತಿಭಟನೆ ನಡೆಸುವಂತಿಲ್ಲ. ಒಂದು ವೇಳೆ ಸಭೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದು ಪೊಲೀಸರು ಉಲ್ಲೇಖಿಸಿದ್ದರು.

ಶೇಷಾದ್ರಿಪುರ ಪೊಲೀಸ್ ಠಾಣೆಯ ನೋಟಿಸನ್ನು ಮೀರಿ ಸಭೆ ನಡೆಸಿದರೆ, ಅಥವಾ ಸಭೆ ನಡೆಸಲು ಸಭಾಂಗಣ ನೀಡಿದರೆ ಬಂಧಿಸುವುದಾಗಿ ಪೊಲೀಸರು ದೂರವಾಣಿಯಲ್ಲಿ ಸಂಘಟಕರಿಗೆ ಹೇಳಿದ್ದರು ಎಂದು ಹೋರಾಟಗಾರರ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ದೂರಿದ್ದಾರೆ. ಸೌಜನ್ಯ ಪರ ಸಭೆ

ಪೊಲೀಸರು ಕಾನೂನು ಬಾಹಿರವಾಗಿ ನೀಡಲಾದ ವಾಟ್ಸಪ್ ನೋಟಿಸ್ ಹೋರಾಟಗಾರರ ಮೂಲಭೂತ ಹಕ್ಕುಗಳನ್ನು ಕಸಿದಿದೆ. ಪೊಲೀಸರ ಈ ಕ್ರಮ ವಿಕೃತ ಮತ್ತು ದುರುದ್ದೇಶಪೂರಿತವಾಗಿದೆ ಎಂದು ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಲಾಗಿದೆ.

ಸೌಜನ್ಯ ನ್ಯಾಯಕ್ಕಾಗಿ ನಡೆಸುತ್ತಿರುವ ಸಮಾಲೋಚನಾ ಸಭೆಯು ಕಚೇರಿಯೊಳಗೆ ನಡೆಯುತ್ತಿರುವ ಸಭೆಯಾಗಿದೆ. ಪ್ರತಿಭಟನೆಯಲ್ಲದೇ ಇದ್ದರೂ ದುರುದ್ದೇಶಪೂರ್ವಕವಾಗಿ ನೋಟಿಸ್‌ನಲ್ಲಿ ಪ್ರತಿಭಟನೆ ಎಂದು ಉಲ್ಲೇಖಿಸಲಾಗಿದೆ. ಪೊಲೀಸರು ಒಳಾಂಗಣ ಚಟುವಟಿಕೆಯನ್ನು ನಿಯಂತ್ರಿಸುವಂತಿಲ್ಲ. ಸಮಾಲೋಚನಾ ಸಭೆಯು ಪ್ರತಿಭಟನೆ ಅಲ್ಲದೇ ಇರುವುದರಿಂದ ಪೊಲೀಸರು ತಮ್ಮ ವ್ಯಾಪ್ತಿ ಮೀರಿ ನೋಟಿಸ್ ನೀಡಿದ್ದಾರೆ ಎನ್ನುವುದು ಸ್ಪಷ್ಟವಿದೆ ಎಂದು ರಿಟ್ ಅರ್ಜಿಯಲ್ಲಿ ಹೇಳಲಾಗಿದೆ.

ಹೈಕೋರ್ಟ್ ರಿಟ್ ಅದೇಶವು (WP No : 19382/2023) ಕೇವಲ ಆ ಸದ್ರಿ ರಿಟ್‌ನ ವಾದಿ- ಪ್ರತಿವಾದಿಗಳಿಗೆ ಮಾತ್ರ ಅನ್ವಯಿಸುತ್ತದೆ. ಹೈಕೋರ್ಟ್ ರಿಟ್‌ನ ಅಂತಿಮ ತೀರ್ಪು ಬರದೇ ಇರುವುದರಿಂದ ಹೈಕೋರ್ಟ್ ಆದೇಶವು ಪ್ರತಿವಾದಿಗಳಿಗಲ್ಲದೇ ಬೇರೆಯವರಿಗೆ ಅನ್ವಯಿಸುವುದಿಲ್ಲ. ಆದರೆ ಪೊಲೀಸರು ಹೈಕೋರ್ಟ್ ರಿಟ್ ಅದೇಶದ ಪ್ರತಿವಾದಿಯಲ್ಲದ ಹೋರಾಟಗಾರರನ್ನು ಸಭೆ ನಡೆಸದಂತೆ ತಡೆಯುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಹೈಕೋರ್ಟ್‌ನ ರಿಟ್ ಆದೇಶದಲ್ಲಿ “9 ನೇ ಪ್ರತಿವಾದಿ ಅಥವಾ ಅವನ ಅನುಯಾಯಿಗಳು ಅಥವಾ ಯಾವುದೇ ವ್ಯಕ್ತಿ ಬಹಿರಂಗವಾಗಿ ಯಾವುದೇ ಹೇಳಿಕೆ ನೀಡಿದರೆ ಅಥವಾ ಯಾವುದೇ ಅವಹೇಳನಕಾರಿ ಹೇಳಿಕೆಯನ್ನು ಪ್ರಕಟಿಸಿದರೆ, ಅದು ಕಾನೂನಿಗೆ ಅನುಸಾರವಾಗಿ ಅಪರಾಧವಾಗಿದೆ. ಮತ್ತು ಆ ನಿಟ್ಟಿನಲ್ಲಿ 9 ನೇ ಪ್ರತಿವಾದಿ ಅಥವಾ ಅವನ ಅನುಯಾಯಿಗಳು ಮಾಡಿದ ಯಾವುದೇ ಕ್ರಮದಿಂದ ಬಾಧಿತರಾದ ಯಾವುದೇ ವ್ಯಕ್ತಿ ಆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಕಾನೂನಿನ ಪ್ರಕಾರ ತಕ್ಷಣವೇ ಕ್ರಮ ಕೈಗೊಳ್ಳುವುದು ಪೊಲೀಸರ ಬದ್ಧ ಕರ್ತವ್ಯವಾಗಿದೆ.” ಎಂದು ಹೇಳಲಾಗಿದೆ.

ಆದರೆ ಹೈಕೋರ್ಟ್ ರಿಟ್‌ನಲ್ಲಿರುವ ಪ್ರತಿವಾದಿಗಳಲ್ಲದ ವ್ಯಕ್ತಿಗಳು ಶೇಷಾದ್ರಿಪುರಂ ಎಐಟಿಯುಸಿ ಸಭಾಂಗಣದಲ್ಲಿ ಸಭೆ ನಡೆಯುವುದಕ್ಕೂ ಮೊದಲೇ, ಯಾರೂ ದೂರು ನೀಡದೆಯೇ ಪೊಲೀಸರು ಕಾರ್ಯಕ್ರಮ ನಿಲ್ಲಿಸುವಂತೆ ನೋಟಿಸ್ ನೀಡಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿತ್ತು.

ಶೇಷಾದ್ರಿಪುರ ಪೊಲೀಸರ ನೋಟಿಸ್ ಮತ್ತು ಬಂಧನದ ಬೆದರಿಕೆಯು ಸಂವಿಧಾನದ ಆರ್ಟಿಕಲ್ 19(1)(a) ಮತ್ತು 19(1)(b) ಅಡಿಯಲ್ಲಿ ಸಾಹಿತಿ-ಚಿಂತಕ- ಹೋರಾಟಗಾರರ ಮೂಲಭೂತ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಹೋರಾಟಗಾರರ ಪರವಾಗಿ ಹೈಕೋರ್ಟ್ ಗೆ ಹಿರಿಯ ನ್ಯಾಯವಾದಿ ಶ್ರುತಿ ಚಗಂತಿಯವರು ಸಲ್ಲಿಸಿರುವ ರಿಟ್ ನಲ್ಲಿ ಹೇಳಲಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಲಭೆ ನಡೆದಾಗ ಈ ಹಿಂದಿನ ಪ್ರಧಾನಿಗಳೂ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ: ನಿರ್ಮಲಾ ಸೀತಾರಾಮನ್

ಗಲಭೆ ನಡೆದಾಗ ಈ ಹಿಂದಿನ ಪ್ರಧಾನಿಗಳೂ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ: ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...