Homeಕರ್ನಾಟಕಸೌಜನ್ಯ ಪರ ಸಭೆ, ಪ್ರತಿಭಟನೆಯನ್ನು ಪೊಲೀಸರು ತಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಸೌಜನ್ಯ ಪರ ಸಭೆ, ಪ್ರತಿಭಟನೆಯನ್ನು ಪೊಲೀಸರು ತಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

- Advertisement -
- Advertisement -

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ. ಮಾರ್ಚ್ 18, 2025 ಸಂಜೆ 5.30 ಕ್ಕೆ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸೌಜನ್ಯ ನ್ಯಾಯಕ್ಕಾಗಿ ಸಮಾಲೋಚನಾ ಸಭೆಯನ್ನು ನಿಲ್ಲಿಸುವಂತೆ ಶೇಷಾದ್ರಿಪುರ ಪೊಲೀಸರು ನೀಡಿದ್ದ ನೋಟಿಸ್ ಬಗೆಗಿನ ರಿಟ್ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಈ ಆದೇಶ ನೀಡಿದ್ದಾರೆ. ಸೌಜನ್ಯ ಪರ ಸಭೆ

ನಾಡಿನ ಪ್ರಮುಖ ಸಾಹಿತಿ-ಚಿಂತಕ- ಹೋರಾಟಗಾರರ ಸಮಾಲೋಚನಾ ಸಭೆಯ ಸಂಚಾಲಕರಲ್ಲೊಬ್ಬರಾದ ವಿನಯ್ ಶ್ರೀನಿವಾಸ್ ಮತ್ತು ವಿಜಯ ಭಾಸ್ಕರ್ ಪರವಾಗಿ ಹಿರಿಯ ನ್ಯಾಯವಾದಿ ಶ್ರುತಿ ಚಗಂತಿ ರಿಟ್ ಅರ್ಜಿ ಸಲ್ಲಿಸಿದ್ದರು. ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು “ಪೊಲೀಸರು ಮತ್ತು ಸರ್ಕಾರ ಸಭೆಯನ್ನು, ಪ್ರತಿಭಟನೆಯನ್ನು ತಡೆಯುವಂತಿಲ್ಲ. ಒಂದು ವೇಳೆ ಅಲ್ಲಿ ಕಾನೂನು ಉಲ್ಲಂಘನೆಯಾದರೆ ಮಾತ್ರ ಪೊಲೀಸರು ಕ್ರಮ ತೆಗೆದುಕೊಳ್ಳಬಹುದು. ಪ್ರತಿಭಟನೆಗಳನ್ನು ಊಹೆಯ ಆಧಾರದಲ್ಲಿ ತಡೆಯುವಂತಿಲ್ಲ” ಎಂದು ಆದೇಶ ನೀಡಿದ್ದಾರೆ.

ಸೌಜನ್ಯ ಪರ ನ್ಯಾಯಕ್ಕಾಗಿ ಮತ್ತು ಊಳಿಗಮಾನ್ಯ ದರ್ಪ ವಿರೋಧಿಸಿ ಸಾಹಿತಿಗಳು-ಚಿಂತಕರು-ಹೋರಾಟಗಾರರ ಸಮಾಲೋಚನಾ ಸಭೆಯ ಆಯೋಜಕರಿಗೆ ಶೇಷಾದ್ರಿಪುರ ಪೊಲೀಸರು 17.03.2025 ರಂದು ರಾತ್ರಿ 10:22 ಕ್ಕೆ ವಾಟ್ಸಾಪ್ ಮೂಲಕ ನೋಟಿಸ್ ನೀಡಿದ್ದರು. ಈ ನೋಟೀಸ್‌ನಲ್ಲಿ, “ಹೈಕೋರ್ಟ್ ರಿಟ್ ಅರ್ಜಿ ಆದೇಶದ ಪ್ರಕಾರ ಜಸ್ಟಿಸ್ ಫಾರ್ ಸೌಜನ್ಯ ಹೆಸರಿನಲ್ಲಿ ಯಾರೂ ಯಾವುದೇ ಸಭೆ, ಪ್ರತಿಭಟನೆ ನಡೆಸುವಂತಿಲ್ಲ. ಒಂದು ವೇಳೆ ಸಭೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದು ಪೊಲೀಸರು ಉಲ್ಲೇಖಿಸಿದ್ದರು.

ಶೇಷಾದ್ರಿಪುರ ಪೊಲೀಸ್ ಠಾಣೆಯ ನೋಟಿಸನ್ನು ಮೀರಿ ಸಭೆ ನಡೆಸಿದರೆ, ಅಥವಾ ಸಭೆ ನಡೆಸಲು ಸಭಾಂಗಣ ನೀಡಿದರೆ ಬಂಧಿಸುವುದಾಗಿ ಪೊಲೀಸರು ದೂರವಾಣಿಯಲ್ಲಿ ಸಂಘಟಕರಿಗೆ ಹೇಳಿದ್ದರು ಎಂದು ಹೋರಾಟಗಾರರ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ದೂರಿದ್ದಾರೆ. ಸೌಜನ್ಯ ಪರ ಸಭೆ

ಪೊಲೀಸರು ಕಾನೂನು ಬಾಹಿರವಾಗಿ ನೀಡಲಾದ ವಾಟ್ಸಪ್ ನೋಟಿಸ್ ಹೋರಾಟಗಾರರ ಮೂಲಭೂತ ಹಕ್ಕುಗಳನ್ನು ಕಸಿದಿದೆ. ಪೊಲೀಸರ ಈ ಕ್ರಮ ವಿಕೃತ ಮತ್ತು ದುರುದ್ದೇಶಪೂರಿತವಾಗಿದೆ ಎಂದು ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಲಾಗಿದೆ.

ಸೌಜನ್ಯ ನ್ಯಾಯಕ್ಕಾಗಿ ನಡೆಸುತ್ತಿರುವ ಸಮಾಲೋಚನಾ ಸಭೆಯು ಕಚೇರಿಯೊಳಗೆ ನಡೆಯುತ್ತಿರುವ ಸಭೆಯಾಗಿದೆ. ಪ್ರತಿಭಟನೆಯಲ್ಲದೇ ಇದ್ದರೂ ದುರುದ್ದೇಶಪೂರ್ವಕವಾಗಿ ನೋಟಿಸ್‌ನಲ್ಲಿ ಪ್ರತಿಭಟನೆ ಎಂದು ಉಲ್ಲೇಖಿಸಲಾಗಿದೆ. ಪೊಲೀಸರು ಒಳಾಂಗಣ ಚಟುವಟಿಕೆಯನ್ನು ನಿಯಂತ್ರಿಸುವಂತಿಲ್ಲ. ಸಮಾಲೋಚನಾ ಸಭೆಯು ಪ್ರತಿಭಟನೆ ಅಲ್ಲದೇ ಇರುವುದರಿಂದ ಪೊಲೀಸರು ತಮ್ಮ ವ್ಯಾಪ್ತಿ ಮೀರಿ ನೋಟಿಸ್ ನೀಡಿದ್ದಾರೆ ಎನ್ನುವುದು ಸ್ಪಷ್ಟವಿದೆ ಎಂದು ರಿಟ್ ಅರ್ಜಿಯಲ್ಲಿ ಹೇಳಲಾಗಿದೆ.

ಹೈಕೋರ್ಟ್ ರಿಟ್ ಅದೇಶವು (WP No : 19382/2023) ಕೇವಲ ಆ ಸದ್ರಿ ರಿಟ್‌ನ ವಾದಿ- ಪ್ರತಿವಾದಿಗಳಿಗೆ ಮಾತ್ರ ಅನ್ವಯಿಸುತ್ತದೆ. ಹೈಕೋರ್ಟ್ ರಿಟ್‌ನ ಅಂತಿಮ ತೀರ್ಪು ಬರದೇ ಇರುವುದರಿಂದ ಹೈಕೋರ್ಟ್ ಆದೇಶವು ಪ್ರತಿವಾದಿಗಳಿಗಲ್ಲದೇ ಬೇರೆಯವರಿಗೆ ಅನ್ವಯಿಸುವುದಿಲ್ಲ. ಆದರೆ ಪೊಲೀಸರು ಹೈಕೋರ್ಟ್ ರಿಟ್ ಅದೇಶದ ಪ್ರತಿವಾದಿಯಲ್ಲದ ಹೋರಾಟಗಾರರನ್ನು ಸಭೆ ನಡೆಸದಂತೆ ತಡೆಯುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಹೈಕೋರ್ಟ್‌ನ ರಿಟ್ ಆದೇಶದಲ್ಲಿ “9 ನೇ ಪ್ರತಿವಾದಿ ಅಥವಾ ಅವನ ಅನುಯಾಯಿಗಳು ಅಥವಾ ಯಾವುದೇ ವ್ಯಕ್ತಿ ಬಹಿರಂಗವಾಗಿ ಯಾವುದೇ ಹೇಳಿಕೆ ನೀಡಿದರೆ ಅಥವಾ ಯಾವುದೇ ಅವಹೇಳನಕಾರಿ ಹೇಳಿಕೆಯನ್ನು ಪ್ರಕಟಿಸಿದರೆ, ಅದು ಕಾನೂನಿಗೆ ಅನುಸಾರವಾಗಿ ಅಪರಾಧವಾಗಿದೆ. ಮತ್ತು ಆ ನಿಟ್ಟಿನಲ್ಲಿ 9 ನೇ ಪ್ರತಿವಾದಿ ಅಥವಾ ಅವನ ಅನುಯಾಯಿಗಳು ಮಾಡಿದ ಯಾವುದೇ ಕ್ರಮದಿಂದ ಬಾಧಿತರಾದ ಯಾವುದೇ ವ್ಯಕ್ತಿ ಆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಕಾನೂನಿನ ಪ್ರಕಾರ ತಕ್ಷಣವೇ ಕ್ರಮ ಕೈಗೊಳ್ಳುವುದು ಪೊಲೀಸರ ಬದ್ಧ ಕರ್ತವ್ಯವಾಗಿದೆ.” ಎಂದು ಹೇಳಲಾಗಿದೆ.

ಆದರೆ ಹೈಕೋರ್ಟ್ ರಿಟ್‌ನಲ್ಲಿರುವ ಪ್ರತಿವಾದಿಗಳಲ್ಲದ ವ್ಯಕ್ತಿಗಳು ಶೇಷಾದ್ರಿಪುರಂ ಎಐಟಿಯುಸಿ ಸಭಾಂಗಣದಲ್ಲಿ ಸಭೆ ನಡೆಯುವುದಕ್ಕೂ ಮೊದಲೇ, ಯಾರೂ ದೂರು ನೀಡದೆಯೇ ಪೊಲೀಸರು ಕಾರ್ಯಕ್ರಮ ನಿಲ್ಲಿಸುವಂತೆ ನೋಟಿಸ್ ನೀಡಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿತ್ತು.

ಶೇಷಾದ್ರಿಪುರ ಪೊಲೀಸರ ನೋಟಿಸ್ ಮತ್ತು ಬಂಧನದ ಬೆದರಿಕೆಯು ಸಂವಿಧಾನದ ಆರ್ಟಿಕಲ್ 19(1)(a) ಮತ್ತು 19(1)(b) ಅಡಿಯಲ್ಲಿ ಸಾಹಿತಿ-ಚಿಂತಕ- ಹೋರಾಟಗಾರರ ಮೂಲಭೂತ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಹೋರಾಟಗಾರರ ಪರವಾಗಿ ಹೈಕೋರ್ಟ್ ಗೆ ಹಿರಿಯ ನ್ಯಾಯವಾದಿ ಶ್ರುತಿ ಚಗಂತಿಯವರು ಸಲ್ಲಿಸಿರುವ ರಿಟ್ ನಲ್ಲಿ ಹೇಳಲಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಲಭೆ ನಡೆದಾಗ ಈ ಹಿಂದಿನ ಪ್ರಧಾನಿಗಳೂ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ: ನಿರ್ಮಲಾ ಸೀತಾರಾಮನ್

ಗಲಭೆ ನಡೆದಾಗ ಈ ಹಿಂದಿನ ಪ್ರಧಾನಿಗಳೂ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ: ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...