Homeಕರ್ನಾಟಕಸೌಜನ್ಯ ಪರ ಸಭೆ, ಪ್ರತಿಭಟನೆಯನ್ನು ಪೊಲೀಸರು ತಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಸೌಜನ್ಯ ಪರ ಸಭೆ, ಪ್ರತಿಭಟನೆಯನ್ನು ಪೊಲೀಸರು ತಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

- Advertisement -
- Advertisement -

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ. ಮಾರ್ಚ್ 18, 2025 ಸಂಜೆ 5.30 ಕ್ಕೆ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸೌಜನ್ಯ ನ್ಯಾಯಕ್ಕಾಗಿ ಸಮಾಲೋಚನಾ ಸಭೆಯನ್ನು ನಿಲ್ಲಿಸುವಂತೆ ಶೇಷಾದ್ರಿಪುರ ಪೊಲೀಸರು ನೀಡಿದ್ದ ನೋಟಿಸ್ ಬಗೆಗಿನ ರಿಟ್ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಈ ಆದೇಶ ನೀಡಿದ್ದಾರೆ. ಸೌಜನ್ಯ ಪರ ಸಭೆ

ನಾಡಿನ ಪ್ರಮುಖ ಸಾಹಿತಿ-ಚಿಂತಕ- ಹೋರಾಟಗಾರರ ಸಮಾಲೋಚನಾ ಸಭೆಯ ಸಂಚಾಲಕರಲ್ಲೊಬ್ಬರಾದ ವಿನಯ್ ಶ್ರೀನಿವಾಸ್ ಮತ್ತು ವಿಜಯ ಭಾಸ್ಕರ್ ಪರವಾಗಿ ಹಿರಿಯ ನ್ಯಾಯವಾದಿ ಶ್ರುತಿ ಚಗಂತಿ ರಿಟ್ ಅರ್ಜಿ ಸಲ್ಲಿಸಿದ್ದರು. ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು “ಪೊಲೀಸರು ಮತ್ತು ಸರ್ಕಾರ ಸಭೆಯನ್ನು, ಪ್ರತಿಭಟನೆಯನ್ನು ತಡೆಯುವಂತಿಲ್ಲ. ಒಂದು ವೇಳೆ ಅಲ್ಲಿ ಕಾನೂನು ಉಲ್ಲಂಘನೆಯಾದರೆ ಮಾತ್ರ ಪೊಲೀಸರು ಕ್ರಮ ತೆಗೆದುಕೊಳ್ಳಬಹುದು. ಪ್ರತಿಭಟನೆಗಳನ್ನು ಊಹೆಯ ಆಧಾರದಲ್ಲಿ ತಡೆಯುವಂತಿಲ್ಲ” ಎಂದು ಆದೇಶ ನೀಡಿದ್ದಾರೆ.

ಸೌಜನ್ಯ ಪರ ನ್ಯಾಯಕ್ಕಾಗಿ ಮತ್ತು ಊಳಿಗಮಾನ್ಯ ದರ್ಪ ವಿರೋಧಿಸಿ ಸಾಹಿತಿಗಳು-ಚಿಂತಕರು-ಹೋರಾಟಗಾರರ ಸಮಾಲೋಚನಾ ಸಭೆಯ ಆಯೋಜಕರಿಗೆ ಶೇಷಾದ್ರಿಪುರ ಪೊಲೀಸರು 17.03.2025 ರಂದು ರಾತ್ರಿ 10:22 ಕ್ಕೆ ವಾಟ್ಸಾಪ್ ಮೂಲಕ ನೋಟಿಸ್ ನೀಡಿದ್ದರು. ಈ ನೋಟೀಸ್‌ನಲ್ಲಿ, “ಹೈಕೋರ್ಟ್ ರಿಟ್ ಅರ್ಜಿ ಆದೇಶದ ಪ್ರಕಾರ ಜಸ್ಟಿಸ್ ಫಾರ್ ಸೌಜನ್ಯ ಹೆಸರಿನಲ್ಲಿ ಯಾರೂ ಯಾವುದೇ ಸಭೆ, ಪ್ರತಿಭಟನೆ ನಡೆಸುವಂತಿಲ್ಲ. ಒಂದು ವೇಳೆ ಸಭೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದು ಪೊಲೀಸರು ಉಲ್ಲೇಖಿಸಿದ್ದರು.

ಶೇಷಾದ್ರಿಪುರ ಪೊಲೀಸ್ ಠಾಣೆಯ ನೋಟಿಸನ್ನು ಮೀರಿ ಸಭೆ ನಡೆಸಿದರೆ, ಅಥವಾ ಸಭೆ ನಡೆಸಲು ಸಭಾಂಗಣ ನೀಡಿದರೆ ಬಂಧಿಸುವುದಾಗಿ ಪೊಲೀಸರು ದೂರವಾಣಿಯಲ್ಲಿ ಸಂಘಟಕರಿಗೆ ಹೇಳಿದ್ದರು ಎಂದು ಹೋರಾಟಗಾರರ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ದೂರಿದ್ದಾರೆ. ಸೌಜನ್ಯ ಪರ ಸಭೆ

ಪೊಲೀಸರು ಕಾನೂನು ಬಾಹಿರವಾಗಿ ನೀಡಲಾದ ವಾಟ್ಸಪ್ ನೋಟಿಸ್ ಹೋರಾಟಗಾರರ ಮೂಲಭೂತ ಹಕ್ಕುಗಳನ್ನು ಕಸಿದಿದೆ. ಪೊಲೀಸರ ಈ ಕ್ರಮ ವಿಕೃತ ಮತ್ತು ದುರುದ್ದೇಶಪೂರಿತವಾಗಿದೆ ಎಂದು ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಲಾಗಿದೆ.

ಸೌಜನ್ಯ ನ್ಯಾಯಕ್ಕಾಗಿ ನಡೆಸುತ್ತಿರುವ ಸಮಾಲೋಚನಾ ಸಭೆಯು ಕಚೇರಿಯೊಳಗೆ ನಡೆಯುತ್ತಿರುವ ಸಭೆಯಾಗಿದೆ. ಪ್ರತಿಭಟನೆಯಲ್ಲದೇ ಇದ್ದರೂ ದುರುದ್ದೇಶಪೂರ್ವಕವಾಗಿ ನೋಟಿಸ್‌ನಲ್ಲಿ ಪ್ರತಿಭಟನೆ ಎಂದು ಉಲ್ಲೇಖಿಸಲಾಗಿದೆ. ಪೊಲೀಸರು ಒಳಾಂಗಣ ಚಟುವಟಿಕೆಯನ್ನು ನಿಯಂತ್ರಿಸುವಂತಿಲ್ಲ. ಸಮಾಲೋಚನಾ ಸಭೆಯು ಪ್ರತಿಭಟನೆ ಅಲ್ಲದೇ ಇರುವುದರಿಂದ ಪೊಲೀಸರು ತಮ್ಮ ವ್ಯಾಪ್ತಿ ಮೀರಿ ನೋಟಿಸ್ ನೀಡಿದ್ದಾರೆ ಎನ್ನುವುದು ಸ್ಪಷ್ಟವಿದೆ ಎಂದು ರಿಟ್ ಅರ್ಜಿಯಲ್ಲಿ ಹೇಳಲಾಗಿದೆ.

ಹೈಕೋರ್ಟ್ ರಿಟ್ ಅದೇಶವು (WP No : 19382/2023) ಕೇವಲ ಆ ಸದ್ರಿ ರಿಟ್‌ನ ವಾದಿ- ಪ್ರತಿವಾದಿಗಳಿಗೆ ಮಾತ್ರ ಅನ್ವಯಿಸುತ್ತದೆ. ಹೈಕೋರ್ಟ್ ರಿಟ್‌ನ ಅಂತಿಮ ತೀರ್ಪು ಬರದೇ ಇರುವುದರಿಂದ ಹೈಕೋರ್ಟ್ ಆದೇಶವು ಪ್ರತಿವಾದಿಗಳಿಗಲ್ಲದೇ ಬೇರೆಯವರಿಗೆ ಅನ್ವಯಿಸುವುದಿಲ್ಲ. ಆದರೆ ಪೊಲೀಸರು ಹೈಕೋರ್ಟ್ ರಿಟ್ ಅದೇಶದ ಪ್ರತಿವಾದಿಯಲ್ಲದ ಹೋರಾಟಗಾರರನ್ನು ಸಭೆ ನಡೆಸದಂತೆ ತಡೆಯುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಹೈಕೋರ್ಟ್‌ನ ರಿಟ್ ಆದೇಶದಲ್ಲಿ “9 ನೇ ಪ್ರತಿವಾದಿ ಅಥವಾ ಅವನ ಅನುಯಾಯಿಗಳು ಅಥವಾ ಯಾವುದೇ ವ್ಯಕ್ತಿ ಬಹಿರಂಗವಾಗಿ ಯಾವುದೇ ಹೇಳಿಕೆ ನೀಡಿದರೆ ಅಥವಾ ಯಾವುದೇ ಅವಹೇಳನಕಾರಿ ಹೇಳಿಕೆಯನ್ನು ಪ್ರಕಟಿಸಿದರೆ, ಅದು ಕಾನೂನಿಗೆ ಅನುಸಾರವಾಗಿ ಅಪರಾಧವಾಗಿದೆ. ಮತ್ತು ಆ ನಿಟ್ಟಿನಲ್ಲಿ 9 ನೇ ಪ್ರತಿವಾದಿ ಅಥವಾ ಅವನ ಅನುಯಾಯಿಗಳು ಮಾಡಿದ ಯಾವುದೇ ಕ್ರಮದಿಂದ ಬಾಧಿತರಾದ ಯಾವುದೇ ವ್ಯಕ್ತಿ ಆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಕಾನೂನಿನ ಪ್ರಕಾರ ತಕ್ಷಣವೇ ಕ್ರಮ ಕೈಗೊಳ್ಳುವುದು ಪೊಲೀಸರ ಬದ್ಧ ಕರ್ತವ್ಯವಾಗಿದೆ.” ಎಂದು ಹೇಳಲಾಗಿದೆ.

ಆದರೆ ಹೈಕೋರ್ಟ್ ರಿಟ್‌ನಲ್ಲಿರುವ ಪ್ರತಿವಾದಿಗಳಲ್ಲದ ವ್ಯಕ್ತಿಗಳು ಶೇಷಾದ್ರಿಪುರಂ ಎಐಟಿಯುಸಿ ಸಭಾಂಗಣದಲ್ಲಿ ಸಭೆ ನಡೆಯುವುದಕ್ಕೂ ಮೊದಲೇ, ಯಾರೂ ದೂರು ನೀಡದೆಯೇ ಪೊಲೀಸರು ಕಾರ್ಯಕ್ರಮ ನಿಲ್ಲಿಸುವಂತೆ ನೋಟಿಸ್ ನೀಡಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿತ್ತು.

ಶೇಷಾದ್ರಿಪುರ ಪೊಲೀಸರ ನೋಟಿಸ್ ಮತ್ತು ಬಂಧನದ ಬೆದರಿಕೆಯು ಸಂವಿಧಾನದ ಆರ್ಟಿಕಲ್ 19(1)(a) ಮತ್ತು 19(1)(b) ಅಡಿಯಲ್ಲಿ ಸಾಹಿತಿ-ಚಿಂತಕ- ಹೋರಾಟಗಾರರ ಮೂಲಭೂತ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಹೋರಾಟಗಾರರ ಪರವಾಗಿ ಹೈಕೋರ್ಟ್ ಗೆ ಹಿರಿಯ ನ್ಯಾಯವಾದಿ ಶ್ರುತಿ ಚಗಂತಿಯವರು ಸಲ್ಲಿಸಿರುವ ರಿಟ್ ನಲ್ಲಿ ಹೇಳಲಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಲಭೆ ನಡೆದಾಗ ಈ ಹಿಂದಿನ ಪ್ರಧಾನಿಗಳೂ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ: ನಿರ್ಮಲಾ ಸೀತಾರಾಮನ್

ಗಲಭೆ ನಡೆದಾಗ ಈ ಹಿಂದಿನ ಪ್ರಧಾನಿಗಳೂ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ: ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...