Homeಕರ್ನಾಟಕಸೌಜನ್ಯ ಪರ ಸಭೆ, ಪ್ರತಿಭಟನೆಯನ್ನು ಪೊಲೀಸರು ತಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಸೌಜನ್ಯ ಪರ ಸಭೆ, ಪ್ರತಿಭಟನೆಯನ್ನು ಪೊಲೀಸರು ತಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

- Advertisement -
- Advertisement -

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ. ಮಾರ್ಚ್ 18, 2025 ಸಂಜೆ 5.30 ಕ್ಕೆ ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸೌಜನ್ಯ ನ್ಯಾಯಕ್ಕಾಗಿ ಸಮಾಲೋಚನಾ ಸಭೆಯನ್ನು ನಿಲ್ಲಿಸುವಂತೆ ಶೇಷಾದ್ರಿಪುರ ಪೊಲೀಸರು ನೀಡಿದ್ದ ನೋಟಿಸ್ ಬಗೆಗಿನ ರಿಟ್ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಈ ಆದೇಶ ನೀಡಿದ್ದಾರೆ. ಸೌಜನ್ಯ ಪರ ಸಭೆ

ನಾಡಿನ ಪ್ರಮುಖ ಸಾಹಿತಿ-ಚಿಂತಕ- ಹೋರಾಟಗಾರರ ಸಮಾಲೋಚನಾ ಸಭೆಯ ಸಂಚಾಲಕರಲ್ಲೊಬ್ಬರಾದ ವಿನಯ್ ಶ್ರೀನಿವಾಸ್ ಮತ್ತು ವಿಜಯ ಭಾಸ್ಕರ್ ಪರವಾಗಿ ಹಿರಿಯ ನ್ಯಾಯವಾದಿ ಶ್ರುತಿ ಚಗಂತಿ ರಿಟ್ ಅರ್ಜಿ ಸಲ್ಲಿಸಿದ್ದರು. ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು “ಪೊಲೀಸರು ಮತ್ತು ಸರ್ಕಾರ ಸಭೆಯನ್ನು, ಪ್ರತಿಭಟನೆಯನ್ನು ತಡೆಯುವಂತಿಲ್ಲ. ಒಂದು ವೇಳೆ ಅಲ್ಲಿ ಕಾನೂನು ಉಲ್ಲಂಘನೆಯಾದರೆ ಮಾತ್ರ ಪೊಲೀಸರು ಕ್ರಮ ತೆಗೆದುಕೊಳ್ಳಬಹುದು. ಪ್ರತಿಭಟನೆಗಳನ್ನು ಊಹೆಯ ಆಧಾರದಲ್ಲಿ ತಡೆಯುವಂತಿಲ್ಲ” ಎಂದು ಆದೇಶ ನೀಡಿದ್ದಾರೆ.

ಸೌಜನ್ಯ ಪರ ನ್ಯಾಯಕ್ಕಾಗಿ ಮತ್ತು ಊಳಿಗಮಾನ್ಯ ದರ್ಪ ವಿರೋಧಿಸಿ ಸಾಹಿತಿಗಳು-ಚಿಂತಕರು-ಹೋರಾಟಗಾರರ ಸಮಾಲೋಚನಾ ಸಭೆಯ ಆಯೋಜಕರಿಗೆ ಶೇಷಾದ್ರಿಪುರ ಪೊಲೀಸರು 17.03.2025 ರಂದು ರಾತ್ರಿ 10:22 ಕ್ಕೆ ವಾಟ್ಸಾಪ್ ಮೂಲಕ ನೋಟಿಸ್ ನೀಡಿದ್ದರು. ಈ ನೋಟೀಸ್‌ನಲ್ಲಿ, “ಹೈಕೋರ್ಟ್ ರಿಟ್ ಅರ್ಜಿ ಆದೇಶದ ಪ್ರಕಾರ ಜಸ್ಟಿಸ್ ಫಾರ್ ಸೌಜನ್ಯ ಹೆಸರಿನಲ್ಲಿ ಯಾರೂ ಯಾವುದೇ ಸಭೆ, ಪ್ರತಿಭಟನೆ ನಡೆಸುವಂತಿಲ್ಲ. ಒಂದು ವೇಳೆ ಸಭೆ ನಡೆಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದು ಪೊಲೀಸರು ಉಲ್ಲೇಖಿಸಿದ್ದರು.

ಶೇಷಾದ್ರಿಪುರ ಪೊಲೀಸ್ ಠಾಣೆಯ ನೋಟಿಸನ್ನು ಮೀರಿ ಸಭೆ ನಡೆಸಿದರೆ, ಅಥವಾ ಸಭೆ ನಡೆಸಲು ಸಭಾಂಗಣ ನೀಡಿದರೆ ಬಂಧಿಸುವುದಾಗಿ ಪೊಲೀಸರು ದೂರವಾಣಿಯಲ್ಲಿ ಸಂಘಟಕರಿಗೆ ಹೇಳಿದ್ದರು ಎಂದು ಹೋರಾಟಗಾರರ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ದೂರಿದ್ದಾರೆ. ಸೌಜನ್ಯ ಪರ ಸಭೆ

ಪೊಲೀಸರು ಕಾನೂನು ಬಾಹಿರವಾಗಿ ನೀಡಲಾದ ವಾಟ್ಸಪ್ ನೋಟಿಸ್ ಹೋರಾಟಗಾರರ ಮೂಲಭೂತ ಹಕ್ಕುಗಳನ್ನು ಕಸಿದಿದೆ. ಪೊಲೀಸರ ಈ ಕ್ರಮ ವಿಕೃತ ಮತ್ತು ದುರುದ್ದೇಶಪೂರಿತವಾಗಿದೆ ಎಂದು ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಲಾಗಿದೆ.

ಸೌಜನ್ಯ ನ್ಯಾಯಕ್ಕಾಗಿ ನಡೆಸುತ್ತಿರುವ ಸಮಾಲೋಚನಾ ಸಭೆಯು ಕಚೇರಿಯೊಳಗೆ ನಡೆಯುತ್ತಿರುವ ಸಭೆಯಾಗಿದೆ. ಪ್ರತಿಭಟನೆಯಲ್ಲದೇ ಇದ್ದರೂ ದುರುದ್ದೇಶಪೂರ್ವಕವಾಗಿ ನೋಟಿಸ್‌ನಲ್ಲಿ ಪ್ರತಿಭಟನೆ ಎಂದು ಉಲ್ಲೇಖಿಸಲಾಗಿದೆ. ಪೊಲೀಸರು ಒಳಾಂಗಣ ಚಟುವಟಿಕೆಯನ್ನು ನಿಯಂತ್ರಿಸುವಂತಿಲ್ಲ. ಸಮಾಲೋಚನಾ ಸಭೆಯು ಪ್ರತಿಭಟನೆ ಅಲ್ಲದೇ ಇರುವುದರಿಂದ ಪೊಲೀಸರು ತಮ್ಮ ವ್ಯಾಪ್ತಿ ಮೀರಿ ನೋಟಿಸ್ ನೀಡಿದ್ದಾರೆ ಎನ್ನುವುದು ಸ್ಪಷ್ಟವಿದೆ ಎಂದು ರಿಟ್ ಅರ್ಜಿಯಲ್ಲಿ ಹೇಳಲಾಗಿದೆ.

ಹೈಕೋರ್ಟ್ ರಿಟ್ ಅದೇಶವು (WP No : 19382/2023) ಕೇವಲ ಆ ಸದ್ರಿ ರಿಟ್‌ನ ವಾದಿ- ಪ್ರತಿವಾದಿಗಳಿಗೆ ಮಾತ್ರ ಅನ್ವಯಿಸುತ್ತದೆ. ಹೈಕೋರ್ಟ್ ರಿಟ್‌ನ ಅಂತಿಮ ತೀರ್ಪು ಬರದೇ ಇರುವುದರಿಂದ ಹೈಕೋರ್ಟ್ ಆದೇಶವು ಪ್ರತಿವಾದಿಗಳಿಗಲ್ಲದೇ ಬೇರೆಯವರಿಗೆ ಅನ್ವಯಿಸುವುದಿಲ್ಲ. ಆದರೆ ಪೊಲೀಸರು ಹೈಕೋರ್ಟ್ ರಿಟ್ ಅದೇಶದ ಪ್ರತಿವಾದಿಯಲ್ಲದ ಹೋರಾಟಗಾರರನ್ನು ಸಭೆ ನಡೆಸದಂತೆ ತಡೆಯುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಹೈಕೋರ್ಟ್‌ನ ರಿಟ್ ಆದೇಶದಲ್ಲಿ “9 ನೇ ಪ್ರತಿವಾದಿ ಅಥವಾ ಅವನ ಅನುಯಾಯಿಗಳು ಅಥವಾ ಯಾವುದೇ ವ್ಯಕ್ತಿ ಬಹಿರಂಗವಾಗಿ ಯಾವುದೇ ಹೇಳಿಕೆ ನೀಡಿದರೆ ಅಥವಾ ಯಾವುದೇ ಅವಹೇಳನಕಾರಿ ಹೇಳಿಕೆಯನ್ನು ಪ್ರಕಟಿಸಿದರೆ, ಅದು ಕಾನೂನಿಗೆ ಅನುಸಾರವಾಗಿ ಅಪರಾಧವಾಗಿದೆ. ಮತ್ತು ಆ ನಿಟ್ಟಿನಲ್ಲಿ 9 ನೇ ಪ್ರತಿವಾದಿ ಅಥವಾ ಅವನ ಅನುಯಾಯಿಗಳು ಮಾಡಿದ ಯಾವುದೇ ಕ್ರಮದಿಂದ ಬಾಧಿತರಾದ ಯಾವುದೇ ವ್ಯಕ್ತಿ ಆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಕಾನೂನಿನ ಪ್ರಕಾರ ತಕ್ಷಣವೇ ಕ್ರಮ ಕೈಗೊಳ್ಳುವುದು ಪೊಲೀಸರ ಬದ್ಧ ಕರ್ತವ್ಯವಾಗಿದೆ.” ಎಂದು ಹೇಳಲಾಗಿದೆ.

ಆದರೆ ಹೈಕೋರ್ಟ್ ರಿಟ್‌ನಲ್ಲಿರುವ ಪ್ರತಿವಾದಿಗಳಲ್ಲದ ವ್ಯಕ್ತಿಗಳು ಶೇಷಾದ್ರಿಪುರಂ ಎಐಟಿಯುಸಿ ಸಭಾಂಗಣದಲ್ಲಿ ಸಭೆ ನಡೆಯುವುದಕ್ಕೂ ಮೊದಲೇ, ಯಾರೂ ದೂರು ನೀಡದೆಯೇ ಪೊಲೀಸರು ಕಾರ್ಯಕ್ರಮ ನಿಲ್ಲಿಸುವಂತೆ ನೋಟಿಸ್ ನೀಡಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿತ್ತು.

ಶೇಷಾದ್ರಿಪುರ ಪೊಲೀಸರ ನೋಟಿಸ್ ಮತ್ತು ಬಂಧನದ ಬೆದರಿಕೆಯು ಸಂವಿಧಾನದ ಆರ್ಟಿಕಲ್ 19(1)(a) ಮತ್ತು 19(1)(b) ಅಡಿಯಲ್ಲಿ ಸಾಹಿತಿ-ಚಿಂತಕ- ಹೋರಾಟಗಾರರ ಮೂಲಭೂತ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಹೋರಾಟಗಾರರ ಪರವಾಗಿ ಹೈಕೋರ್ಟ್ ಗೆ ಹಿರಿಯ ನ್ಯಾಯವಾದಿ ಶ್ರುತಿ ಚಗಂತಿಯವರು ಸಲ್ಲಿಸಿರುವ ರಿಟ್ ನಲ್ಲಿ ಹೇಳಲಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಲಭೆ ನಡೆದಾಗ ಈ ಹಿಂದಿನ ಪ್ರಧಾನಿಗಳೂ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ: ನಿರ್ಮಲಾ ಸೀತಾರಾಮನ್

ಗಲಭೆ ನಡೆದಾಗ ಈ ಹಿಂದಿನ ಪ್ರಧಾನಿಗಳೂ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ: ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...